Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ವಿಯೆಟ್ನಾಂ ಆಹಾರ ಹಗರಣ: ಪಶು ಆಹಾರದ ಎಣ್ಣೆಯನ್ನು ಅಡುಗೆ ಎಣ್ಣೆಯಾಗಿ ಮಾರಾಟ | Vietnam Food Scam

29/06/2025 9:32 PM

F1 ಆಸ್ಟ್ರಿಯನ್ ಗ್ರ್ಯಾಂಡ್ ಪ್ರಿಕ್ಸ್-2025 ಗೆದ್ದ ಲ್ಯಾಂಡೊ ನಾರ್ರಿಸ್ | F1 Austrian Grand Prix 2025

29/06/2025 9:25 PM

ಕ್ಯಾಬಿನ್ ಒಳಗೆ ತಾಪಮಾನ ಹೆಚ್ಚಾಗಿದ್ದರಿಂದ ಏರ್ ಇಂಡಿಯಾ ವಿಮಾನ ಕೋಲ್ಕತ್ತದಲ್ಲಿ ಸೇಫ್ ಲ್ಯಾಂಡಿಂಗ್

29/06/2025 9:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ‘ಡಿಸಿಎಂ ಡಿ.ಕೆ ಶಿವಕುಮಾರ್’ ಭೇಟಿಯಾಗಿದ್ದು ಏಕೆ ಗೊತ್ತೇ?
KARNATAKA

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ‘ಡಿಸಿಎಂ ಡಿ.ಕೆ ಶಿವಕುಮಾರ್’ ಭೇಟಿಯಾಗಿದ್ದು ಏಕೆ ಗೊತ್ತೇ?

By kannadanewsnow0924/07/2024 3:31 PM

ಬೆಂಗಳೂರು : “ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಸಂಬಂಧ ನನ್ನನ್ನು ಭೇಟಿ ಮಾಡಿದ್ದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸಕ್ಕೆ ವಿಜಯಲಕ್ಷ್ಮಿ ಅವರು ಬಂದ ಕಾರಣ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಶಿವಕುಮಾರ್ ಅವರು “ದರ್ಶನ್, ವಿಜಯಲಕ್ಷ್ಮೀ ಪುತ್ರ ಈ ಮೊದಲು ನಮ್ಮ ಶಾಲೆಯಲ್ಲಿ ಓದುತ್ತಿದ್ದರು. ಕಾರಣಾಂತರಗಳಿಂದ ನಮ್ಮ ಶಾಲೆ ತೊರೆದು ಬೇರೆ ಶಾಲೆ ಸೇರಿದ್ದರು. ಈಗ ಮತ್ತೆ ಮರಳಿ ನಮ್ಮ ಶಾಲೆಗೆ ಸೇರಿಸಿಕೊಳ್ಳುವಂತೆ ಮನವಿ ಮಾಡಲು ಬಂದಿದ್ದರು. ನಮ್ಮ ಶಾಲೆಯ ಪ್ರಾಂಶುಪಾಲರು ಪ್ರವೇಶ ಅವಕಾಶ ನಿರಾಕರಿಸಿದ್ದರಿಂದ ನನ್ನ ಬಳಿ ಸೀಟು ಕೇಳಲು ಬಂದಿದ್ದರು” ಎಂದು ಹೇಳಿದರು.

“ಶಾಲೆಯ ದಾಖಲಾತಿಗೆ ಒಂದಷ್ಟು ನಿಯಮಾವಳಿಗಳಿವೆ. ನಾನು ಶಾಲೆಗೆ ಅಷ್ಟಾಗಿ ಭೇಟಿ ನೀಡುತ್ತಿಲ್ಲ. ಶಾಲೆಯ ಆಡಳಿತ ಜವಾಬ್ದಾರಿಯನ್ನು ಸಂಪೂರ್ಣವಾಗಿ ಮಕ್ಕಳಿಗೆ ವಹಿಸಿದ್ದೇನೆ. ವಿಜಯಲಕ್ಷ್ಮಿ ಅವರು ಮಗನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು ಆ ಮಗುವಿಗೆ ಒಳ್ಳೆಯದಾಗಲಿ ಎಂದು ಪ್ರಾಂಶುಪಾರನ್ನು ಭೇಟಿ ಮಾಡಲು ಹೇಳಿದ್ದೇನೆ”ಎಂದರು.

ವಿಜಯಲಕ್ಷ್ಮಿ ಅವರು ನೆರವು ಕೇಳಿದರೆ ಸಹಾಯ ಮಾಡುವಿರಾ ಎಂದಾಗ “ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ. ನನ್ನ ಭೇಟಿ ಮಾಡಲು ಬಂದವರನ್ನು ಬೇಡ ಎಂದು ಹೇಗೆ ನಿರಾಕರಣೆ ಮಾಡಲಿ? ಅಲ್ಲದೇ ನಮ್ಮ ಶಾಲೆಯ ಪಕ್ಕದಲ್ಲೇ ಅವರ ಮನೆಯಿದೆ. ನಮ್ಮ ಲೋಕಸಭಾ ಕ್ಷೇತ್ರದಲ್ಲೇ ಅವರ ಮನೆಯಿದೆ. ನನ್ನನ್ನು ಭೇಟಿ ಮಾಡಲು ನೂರಾರು ಜನ ಬಂದಿದ್ದಾರೆ. ನೀವು (ಮಾಧ್ಯಮದವರು) ಕೂಡ ಬಂದಿದ್ದೀರಿ. ನಿಮ್ಮ ಭೇಟಿಗೆ ನಿರಾಕರಿಸಿದರೆ ಡಿ.ಕೆ. ಶಿವಕುಮಾರ್ ದುರಹಂಕಾರಿ, ಭೇಟಿ ಮಾಡದೆ ತೆರಳಿದರು ಎನ್ನುತ್ತೀರಿ. ಸಾರ್ವಜನಿಕ ಜೀವನದಲ್ಲಿ ಇದ್ದಾಗ ಸಹಾಯ ಕೇಳಿಕೊಂಡು ನನ್ನನ್ನು ಭೇಟಿ ಮಾಡಲು ಬಂದರೆ ಅವರನ್ನು ಭೇಟಿ ಮಾಡಬೇಕಾಗುತ್ತದೆ. ಅದು ನನ್ನ ಕರ್ತವ್ಯ ಕೂಡ” ಎಂದು ಹೇಳಿದರು.

“ಆ ಹೆಣ್ಣುಮಗಳಿಗೆ ತನ್ನ ಮಗನ ಶಿಕ್ಷಣದ ಬಗ್ಗೆ ಕಾಳಜಿಯಿದೆ. ಎಲ್ಲಾ ಮಕ್ಕಳು ಒಂದೇ ಅಲ್ಲವೇ? ಅವರಿಗೆ ಮಗನ ಶಿಕ್ಷಣದ ಬಗ್ಗೆ ಇರುವ ಕಾಳಜಿ ನೋಡಿ ಬಹಳ ಸಂತೋಷವಾಯಿತು. ಬೇರೆ ಶಾಲೆಗೆ ಸೇರಿಸಿದರೆ ಮಾನಸಿಕವಾಗಿ ತೊಂದರೆಯಾಗಬಹುದು. ನಮ್ಮ ಶಾಲೆಗೆ ಸೇರಿಸಿದರೆ ಹತ್ತಿರದಲ್ಲೇ ಇರುವುದರಿಂದ ಹೋಗಿ ಬರಲು ಅನುಕೂಲ ಆಗುತ್ತದೆ. ಈ ಹಿಂದೆ ಪೋಷಕರ ಸಭೆಗೆ ಅವರನ್ನು ಕರೆಸಲಾಗಿತ್ತು. ಆ ವೇಳೆ ದರ್ಶನ್ ಕೂಡ ಬಂದಿದ್ದರು” ಎಂದರು.

ನಿಮಗೆ ಗೊತ್ತಾ ಈ ಯೋಜನೆಯಡಿ ಸಿಗುತ್ತೆ ‘300 ಯೂನಿಟ್’ವರೆಗೆ ಉಚಿತ ವಿದ್ಯುತ್: ಇಲ್ಲಿದೆ ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ | PM Ghar Surya Yojana

ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಗ್ರಾಮಠಾಣ’ ಒಳಗಿನ, ಹೊರಗಿನ ‘ಆಸ್ತಿ ಅಳತೆ’ಗೆ ಅವಕಾಶ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 9 ಜಿಂಕೆ, 1 ಕಾಡು ಹಂದಿ ಬೇಟೆಯಾಡಿದ್ದ ಓರ್ವ ಅರೆಸ್ಟ್

29/06/2025 8:39 PM2 Mins Read

ಬೆಂಗಳೂರಲ್ಲಿ ‘ಇ-ಖಾತಾ’ ಅರ್ಜಿ ಸಲ್ಲಿಕೆಗೆ ಭರ್ಜರಿ ರೆಸ್ಪಾನ್ಸ್: ಇಂದು ಒಂದೇ ದಿನ 677 ವಿತರಣೆ

29/06/2025 7:38 PM1 Min Read

ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ? ಏಳು ಲಂವಗದಿಂದ ಈ ರಹಸ್ಯ ಪರಿಹಾರ ಮಾಡಿ, ನಿವಾರಣೆ ಖಂಡಿತ

29/06/2025 7:32 PM2 Mins Read
Recent News

Shocking: ವಿಯೆಟ್ನಾಂ ಆಹಾರ ಹಗರಣ: ಪಶು ಆಹಾರದ ಎಣ್ಣೆಯನ್ನು ಅಡುಗೆ ಎಣ್ಣೆಯಾಗಿ ಮಾರಾಟ | Vietnam Food Scam

29/06/2025 9:32 PM

F1 ಆಸ್ಟ್ರಿಯನ್ ಗ್ರ್ಯಾಂಡ್ ಪ್ರಿಕ್ಸ್-2025 ಗೆದ್ದ ಲ್ಯಾಂಡೊ ನಾರ್ರಿಸ್ | F1 Austrian Grand Prix 2025

29/06/2025 9:25 PM

ಕ್ಯಾಬಿನ್ ಒಳಗೆ ತಾಪಮಾನ ಹೆಚ್ಚಾಗಿದ್ದರಿಂದ ಏರ್ ಇಂಡಿಯಾ ವಿಮಾನ ಕೋಲ್ಕತ್ತದಲ್ಲಿ ಸೇಫ್ ಲ್ಯಾಂಡಿಂಗ್

29/06/2025 9:14 PM

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 9 ಜಿಂಕೆ, 1 ಕಾಡು ಹಂದಿ ಬೇಟೆಯಾಡಿದ್ದ ಓರ್ವ ಅರೆಸ್ಟ್

29/06/2025 8:39 PM
State News
KARNATAKA

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 9 ಜಿಂಕೆ, 1 ಕಾಡು ಹಂದಿ ಬೇಟೆಯಾಡಿದ್ದ ಓರ್ವ ಅರೆಸ್ಟ್

By kannadanewsnow0929/06/2025 8:39 PM KARNATAKA 2 Mins Read

ಬೆಂಗಳೂರು : ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ…

ಬೆಂಗಳೂರಲ್ಲಿ ‘ಇ-ಖಾತಾ’ ಅರ್ಜಿ ಸಲ್ಲಿಕೆಗೆ ಭರ್ಜರಿ ರೆಸ್ಪಾನ್ಸ್: ಇಂದು ಒಂದೇ ದಿನ 677 ವಿತರಣೆ

29/06/2025 7:38 PM

ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ? ಏಳು ಲಂವಗದಿಂದ ಈ ರಹಸ್ಯ ಪರಿಹಾರ ಮಾಡಿ, ನಿವಾರಣೆ ಖಂಡಿತ

29/06/2025 7:32 PM

ಪ್ರಧಾನಿ ಮೋದಿ ಕಲಬುರ್ಗಿ ರೊಟ್ಟಿ ಯಶಸ್ಸನ್ನು ಪ್ರಸ್ತಾಪದ ಹಿಂದ ರಾಜ್ಯ ಸರ್ಕಾರದ ಶ್ರಮವಿದೆ: ಸಚಿವ ಪ್ರಿಯಾಂಕ್ ಖರ್ಗೆ

29/06/2025 7:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.