ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಬೆನ್ನಿನಲ್ಲಿ ಊತ ಹಾಗೂ ವಿಪರೀತ ನೋವು ಕಾಣಿಸಿಕೊಂಡಿದೆ. ಇದೀಗ ವಿಮ್ಸ್ ಆಸ್ಪತ್ರೆಯ ವೈದ್ಯರು ನಟ ದರ್ಶನ್ ಅವರಿಗೆ ಫಿಜಿಯೋ ಥೆರಪಿ, ಚಿಕಿತ್ಸೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರ ಅಭಿಮಾನಿಗಳಿಗೆ ಫುಲ್ ಖುಷಿಯಾಗಿದೆ.
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಬೆನ್ನಿನ ಹಿಂಭಾಗ ಊತ ಹಾಗೂ ವಿಪರೀತವಾದಂತ ನೋವು ಕಾಡುತ್ತಿತ್ತು.ಈ ಹಿನ್ನೆಲೆಯಲ್ಲಿ ಹಲವಾರು ಬಾರಿ ವೈದ್ಯರು ಹಾಗೂ ಜೈಲಿನ ಮೇಲಾಧಿಕಾರಿಗಳು ದರ್ಶನ್ ಅವರಿಗೆ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಸೂಚಿಸಿದ್ದರೂ ಕೂಡ ಇಲ್ಲ ಬೆಂಗಳೂರಿಗೆ ಹೋಗಿ ಚಿಕಿತ್ಸೆ ಪಡೆಯುತ್ತೇನೆ ಎಂದು ಹಠ ಮಾಡಿದ್ದರು. ಇದೀಗ ಅವರ ಪತ್ನಿ ವಿಜಯಲಕ್ಷ್ಮಿ ಅವರು ಜೈಲಿಗೆ ಭೇಟಿ ನೀಡಿದ್ದ ವೇಳೆ ಅವರ ಮಾತಿಗೆ ಸ್ಪಂದಿಸಿ ಚಿಕಿತ್ಸೆಗೆ ಒಪ್ಪಿದ್ದಾರೆ.
ಹೌದು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಿನ್ನೆ ಜೈಲಿಗೆ ಭೇಟಿ ನೀಡಿದ್ದಾಗ, ಚಿಕಿತ್ಸೆ ಪಡೆದುಕೊಳ್ಳಿ ಎಂದು ಕಣ್ಣೀರು ಹಾಕಿದ್ದರು. ಇದೀಗ ಪತ್ನಿಯ ಕಣ್ಣೀರಿಗೆ ಸ್ಪಂದಿಸಿ, ಇಂದು ಸಂಜೆಯಿಂದಲೇ ವಿಮ್ಸ್ ಆಸ್ಪತ್ರೆ ವೈದ್ಯರಿಂದ ಫಿಜಿಯೋಥೆರೆಪಿ ಚಿಕಿತ್ಸೆ ಕೊಡಲಾಗುತ್ತಿದೆ. ಜೈಲಿನ ಹೈ ಸೆಕ್ಯೂರಿಟಿ ಸೆಲ್ನಲ್ಲೇ ವಿಮ್ಸ್ ವೈದ್ಯರು ಒಂದು ಗಂಟೆ ಫಿಜಿಯೋಥೆರೆಪಿ ಮಾಡಿದ್ದಾರೆ. ಇದರಿಂದ ದರ್ಶನ್ ಕೊಂಚ ರಿಲೀಫ್ ಆಗಿದ್ದಾರೆ. ದರ್ಶನ್ ಬೆನ್ನಿನ ಭಾಗದಲ್ಲಿ ಊತ ಕಾಣಿಸಿಕೊಂಡಿದೆ.
ದರ್ಶನ್ಗೆ ಬುಧವಾರವೇ ಫಿಜಿಯೋಥೆರೆಪಿ ಆರಂಭ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಫಿಜಿಯೋಥೆರಪಿ ಮಾಡಿಸಲು ಸಾಧ್ಯವಾಗಿರಲಿಲ್ಲ. ಈಗ ಅವರು ಫಿಜಿಯೋಥೆರೆಪಿ ಮಾಡಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ಮೆಡಿಕಲ್ ಬೆಡ್, ದಿಂಬು ಹಾಗೂ ಚೇರ್ಗಳನ್ನು ಕೊಡಲಾಗಿದೆ.