Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಉಗ್ರರ ಬಗ್ಗೆ ಮೃದು ಧೋರಣೆ, 26/11 ಮುಂಬೈ ದಾಳಿ ಬಳಿಕ ಕಾಂಗ್ರೆಸ್ ಶರಣಾಯ್ತು” ; ಪ್ರಧಾನಿ ಮೋದಿ

08/10/2025 6:23 PM

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಇಲ್ಲಿದೆ ರಾಶಿ – ದಿಕ್ಕು – ಗ್ರಹ ಬಗ್ಗೆ ಸಂಪೂರ್ಣ ಡೀಟೆಲ್ಸ್

08/10/2025 6:13 PM

ಶಾಲಾ-ಕಾಲೇಜು ವಿದ್ಯಾರ್ಥಿಗಳ ಗಮನಕ್ಕೆ: ಜಿಯೋದಿಂದ ‘ಎಐ ಕ್ಲಾಸ್ ರೂಮ್ ಫೌಂಡೇಷನ್ ಕೋರ್ಸ್’ ಆರಂಭ, ಪುಲ್ ಫ್ರೀ

08/10/2025 6:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?: HDK ಪ್ರಶ್ನೆ
KARNATAKA

ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?: HDK ಪ್ರಶ್ನೆ

By kannadanewsnow0923/06/2025 7:49 PM

ನವದೆಹಲಿ: ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ; ರಾಜ್ಯ ಕಾಂಗ್ರೆಸ್‌ ಸರಕಾರದ ದರ್ಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಶಾಸಕರು ಅನುದಾನಕ್ಕಾಗಿ, ಸರಕಾರದ ಯೋಜನೆಗಳಿಗಾಗಿ ಕಚೇರಿಗಳ ಸುತ್ತ, ಮಂತ್ರಿಮಹೋದಯರ ಸುತ್ತ ತಬರನಂತೆ ಸುತ್ತುತ್ತಿದ್ದಾರೆ. ಆಡಳಿತ ಪಕ್ಷದ ಸದಸ್ಯರಿಗೇ ಇಂಥ ದುರ್ಗತಿ ಬಂದರೆ ಇತರೆ ಪಕ್ಷಗಳ ಶಾಸಕರ ಪರಿಸ್ಥಿತಿ ಏನು? ಎಂದು ಪ್ರಶ್ನಿಸಿದರು.

ಹಿಂದೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರು ಬರೆದಿದ್ದ ʼತಬರನ ಕಥೆʼ ಎಂಬ ಕಥೆಯನ್ನು ಗಿರೀಶ್‌ ಕಾಸರವಳ್ಳಿ ಅವರು ಸಿನಿಮಾ ಮಾಡಿದ್ದರು. ವಾಚ್‌ ಮನ್‌ ಒಬ್ಬ ತನ್ನ ಪಿಂಚಣಿಗಾಗಿ ಸರಕಾರಿ ಕಚೇರಿಗಳಿಗೆ ಅಲೆ ಅಲೆದು ಬಸವಳಿಯುವ ಕಥೆ ಅದು. ಅಂಥದ್ದೇ ಪರಿಸ್ಥಿತಿ ರಾಜ್ಯದ ಶಾಸಕರಿಗೂ ಬಂದಿರುವುದು ದುರದೃಷ್ಟಕರ. ಶಾಸಕರು ಯೋಜನೆಗಳಾಗಿ ಮಂತ್ರಿಗಳು, ಎಂಜಿಯರ್‌ ಗಳ ಕಚೇರಿಗಳ ಸುತ್ತ ತಬರನಂತೆ ಸುತ್ತುತ್ತಿದ್ದಾರೆ. ರಾಜ್ಯದಲ್ಲಿ ಇಂಥ ದುಸ್ಥಿತಿ ಹಿಂದೆಂದೂ ಇರಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಪರಿಸ್ಥಿತಿ ಹೇಗಾಗಿದೆ ಎಂದರೆ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥ ರೀತಿ ಆಗಿದೆ. ಮುಖ್ಯಮಂತ್ರಿ, ಮಂತ್ರಿಗಳು ಕಮೀಷನ್‌ ಉಡಾಯಿಸಿ ಮೋಜು ಮಾಡುತ್ತಿದ್ದರೆ ಶಾಸಕರು ತಮ್ಮ ಕ್ಷೇತ್ರಗಳಿಗೆ ಮುಖ ಹಾಕಲಾರದ ದುಸ್ಥಿತಿಯಲ್ಲಿ ಇದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ವಿಷಯ ಬೇರೆನಿದೆ? ಇದನ್ನು ಪ್ರತಿಪಕ್ಷ ನಾಯಕರು ಹೇಳುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರು, ಅದರಲ್ಲಿಯೂ ಯೋಜನಾ ಆಯೋಗಬ ಉಪಾಧ್ಯಕ್ಷ ಬಿ.ಆರ್.‌ಪಾಟೀಲ್‌, ರಾಜು ಕಾಗೆ, ಬೇಳೂರು ಗೋಪಾಲಕೃಷ್ಣ ಅಂಥವರೇ ಹೇಳುತ್ತಿದ್ದಾರೆ. ಅವರೇ ಈ ಸರಕಾರಕ್ಕೆ ಸರ್ಟಿಫಿಕೇಟ್‌ ನೀಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ವಸತಿ ಇಲಾಖೆಯದ್ದೇ ಪುರಾಣ. ಜನತೆ ಕಣ್ಣಿಗೆ ಮಂಕುಬೂದಿ ಎರಚುವ ಕೆಲಸ ಮಾಡಲಾಗುತ್ತಿದೆ. ಸರಕಾರಕ್ಕೆ ಜನರ ಭಯ ಭಕ್ತಿ ಇಲ್ಲದಾಗಿದೆ.

ಬಿ.ಆರ್.ಪಾಟೀಲ್ ಅವರು ಶಾಸಕರಷ್ಟೇ ಅಲ್ಲ, ಅವರ ಶಾಸಕರಾದಾಗ ನಾವು ಯಾರೂ ಇನ್ನೂ ರಾಜಕರಣಕ್ಕೇ ಬಂದಿರಲಿಲ್ಲ. ಹಿರಿಯ ವ್ಯಕ್ತಿ. ಅವರ ಹಿನ್ನೆಲೆಯನ್ನು ನೋಡಿದ್ದೇವೆ. ದೊಡ್ಡ ಅನುಭವುಳ್ಳ ನಾಯಕರು. ಅಂಥವರ ಕ್ಷೇತ್ರದಲ್ಲಿ 950 ಮನೆಗಳನ್ನು ಶಾಸಕರ ಗಮನಕ್ಕೆ ಬಾರದಂತೆ ವಸತಿ ಇಲಾಖೆಯಿಂದ ನೀಡಿದ್ದಾರೆ! ಪಾಟೀಲ್‌ ಅವರು ಸಚಿವರ ಆಪ್ತ ಕಾರ್ಯದರ್ಶಿಗೆ ಮೊಬೈಲ್‌ ಕರೆ ಮೂಲಕ ಪ್ರಶ್ನೆ ಮಾಡಿದರೆ, ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಆಡಿಯೋ ಮೂಲಕ ವೈರಲ್‌ ಆಗಿದೆ. ನಿಖರವಾದ ಪ್ರಕರಣ ಇದ್ದರೆ ದೂರು ಕೊಡಿ, ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಸಕರಿಗೆ ಉತ್ತರ ಕೊಡುತ್ತಾರೆ. ಆ ವ್ಯಕ್ತಿಗೆ ಕ್ರಮ ತೆಗೆದುಕೊಳ್ಳುವ ಅಧಿಕಾರ ಕೊಟ್ಟಿದ್ದಾರಾ ಸಚಿವರು? ವಸೂಲಿ ಮಾಡುವ ಪವರ್ ಕೊಟ್ಟಿದ್ದಾರಷ್ಟೇ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಎನ್ನುವವರು ಇದ್ದಾರಾ? ಸರಕಾರ ಎನ್ನುವುದು ಇದೆಯಾ? ಡಿಸಿಎಂ ನೋಡಿದರೆ ವಿಷಯ ತಿಳಿದುಕೊಂಡು ಹೇಳುತ್ತೇನೆ ಎಂದು ಕದ್ದು ಓಡುತ್ತಾರೆ. ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಕೊಟ್ಟಿರುವ ಭರವಸೆ ಈಡೇರಿಲ್ಲ. ವಿರೋಧ ಪಕ್ಷಗಳು ಅಸೂಯೆಯಿಂದ ಮಾತಾಡುತ್ತಿಲ್ಲ. ಸಿಎಂ ಅವರೇ, ನಿಮ್ಮ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ನಿಮ್ಮ ಶಾಸಕರಿಗೆ ತಬರನ ಪರಿಸ್ಥಿತಿ ಬಂದಿದೆ. ಶಾಸಕರು ತಮ್ಮ ಕ್ಷೇತ್ರಗಳಿಗೆ ಅನುದಾನ ಕೇಳುತ್ತಿದ್ದಾರೆ. ಆದರೆ, ಕಮೀಷನ್ ಕೊಟ್ಟವರಿಗೆ ಮಾತ್ರ ಅನುದಾನ ಸಿಗುತ್ತಿದೆ ಎಂದು ಕೇಂದ್ರ ಸಚಿವರು ನೇರವಾಗಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಒಂದು ಇಲಾಖೆಯಲ್ಲಿ ಈ‌ ಮಟ್ಟಕ್ಕೆ ಅವ್ಯವಹಾರ ಆಗಿದೆ ಎಂದರೆ ರಾಜ್ಯದಲ್ಲಿ ಸಿಎಂ ಎನ್ನುವವರು ಇದ್ದಾರೆಯೇ ಎನ್ನುವ ಅನುಮಾನ ಬರುತ್ತಿದೆ. ಡಿಸಿಎಂ ಅವರು ಬಿ.ಆರ್. ಪಾಟೀಲ್ ಹೇಳಿದ್ದು ಸುಳ್ಳು ಎನ್ನುತ್ತಿದ್ದಾರೆ. ನಾವು ಮಾತ್ರ ಹರಿಶ್ಚಂದ್ರರು ಎಂದು ತಮಗೆ ತಾವೇ ಸರ್ಪಿಫಿಕೇಟ್‌ ಕೊಟ್ಟುಕೊಳ್ಳುತ್ತಿದ್ದಾರೆ. ಕಾಗವಾಡ ಶಾಸಕ ರಾಜುಕಾಗೆ ಕೂಡ ಇದೇ ಆರೋಪ ಮಾಡಿದ್ದಾರೆ. ವಿಶೇಷ ಅನುದಾನ ನೀಡಿ ಕೇಳಿ ಎರಡು ವರ್ಷವಾಯಿತು. ಟೆಂಡರ್ ಮಾಡಲು ಬಿಟ್ಟಿಲ್ಲ, ಹಣವೂ ಬಂದಿಲ್ಲ ಎನ್ನುತ್ತಿದ್ದಾರೆ. ಮುಖ್ಯಮಂತ್ರಿ ಉದ್ದೇಶ ಏನು? ಶಾಸಕಾಂಗ ಪಕ್ಷದಲ್ಲಿ ಅನುದಾನ ಕೊಡುತ್ತೇವೆ, ಅಭಿವೃದ್ಧಿ ಮಾಡುತ್ತೇವೆ ಎಂದವರು ಈಗ ಶಾಸಕರಿಗೆ ಕಮೀಷನ್‌ ಕಿರುಕುಳ ಕೊಡುತ್ತಿದ್ದಾರೆ. ಶಾಸಕರು ಕ್ಷೇತ್ರಗಳಿಗೆ ಹೋಗದ ರೀತಿಯಲ್ಲಿ ಒತ್ತಡಕ್ಕೆ ಸಿಲುಕಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವರು ರಾಜಿನಾಮೆ ನೀಡಲಿ, ಅಕ್ರಮಗಳ ತನಿಖೆ ಆಗಲಿ ಎಂದು ಒತ್ತಾಯಿಸಿದ್ದಾರೆ. ನಿಮ್ಮ ಪಕ್ಷದ ಶಾಸಕರೇ ನಿಮ್ಮ ಮುಖಕ್ಕೆ ಮಂಗಳಾರತಿ ಎತ್ತುತ್ತಿದ್ದಾರೆ. ನಿಮ್ಮ ಶಾಸಕರ ಪರಿಸ್ಥಿತಿಯೇ ಹೀಗಾದರೆ ಜೆಡಿಎಸ್‌, ಬಿಜೆಪಿ ಶಾಸಕರ ಪರಿಸ್ಥಿತಿ ಏನು? ಅನುದಾನಕ್ಕಾಗಿ ಶಾಸಕರು ಅಲೆಯುತ್ತಿದ್ದಾರೆ. ಯಾರೋ‌ ಮಧ್ಯದಲ್ಲಿ ನಿಂತಿದ್ದಾರೋ ಅವರು ಕಲೆಕ್ಷನ್ ಮಾಡುತ್ತಿದ್ದಾರೆ. ಶಾಸಕರು ಹಣ ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.

ಹ್ಹಾ.. ಹ್ಹಾ.. ಮುಖ್ಯಮಂತ್ರಿ:

ರಾಯಚೂರಿನಲ್ಲಿ ಮುಖ್ಯಮಂತ್ರಿಗೆ ಶಾಸಕರ ಅನುದಾನದ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳಿದರೆ, ಮುಖ್ಯಮಂತ್ರಿಗೆ ಅನುದಾನ ಇರುತ್ತದಾ? ಹ್ಹಾ.. ಹ್ಹಾ.. ಎಂದು ಉದ್ಘಾರ ತೆಗೆದರು.

ಎಲ್ಲಿದೆ ವಿಶೇಷ ಅನುದಾನ ಎಂದು ಮಾಧ್ಯಮದವರಿಗೇ ಅವರು ಪ್ರಶ್ನೆ ಕೇಳಿದರು. ಅನುದಾನ ಎಲ್ಲಿಗೆ ಎಂದು ಕೇಳಿದರು. ಅವರನ್ನು ಸಿಎಂ ಅನ್ನಬೇಕಾ? ಈ ಭಾಗ್ಯಕ್ಕೆ ಅವರು ದೇವರಾಜ ಅರಸು ದಾಖಲೆ ಮುರಿಯಲು ಹೊರಟಿದ್ದಾರೆಯೇ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವರು ಟಾಂಗ್‌ ನೀಡಿದರು.

ಮುಖ್ಯಮಂತ್ರಿ ಕಚೇರಿಯಿಂದ ನಿವೃತ್ತ ಐಎಎಸ್‌ ಅಧಿಕಾರಿ ಅತೀಕ್ ಅವರನ್ನು ಯಾಕೆ ತೆಗೆದರು? ಮುಂದಿನ ಮೂರು ವರ್ಷಕ್ಕೆ ₹1000 ಕೋಟಿ ಅನುದಾನದ ಕ್ರಿಯಾ ಯೋಜನೆ ಮಂಜೂರಾತಿ ನೀಡಿದ್ದರು. ಈ ಹಣದಲ್ಲಿ ಅಲ್ಪಸಂಖ್ಯಾತರ ಹೆಸರು ಹೇಳಿಕೊಂಡು ಎಷ್ಟು ಹಣ ತಿಂದಿದ್ದೀರಿ? ಈ ಅತೀಕ್‌ ಎನ್ನುವ ವ್ಯಕ್ತಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲು ಏನೆಲ್ಲಾ ಮಾಡಿದ್ದರು ಎನ್ನುವುದು ನನಗೆ ಗೊತ್ತಿದೆ. ಅವರಿಂದ ಏನೇನು ಮಾಡಿಸಿದರು ಎನ್ನುವುದೂ ಗೊತ್ತಿದೆ. ಈ ಸರಕಾರದಲ್ಲಿ ಸರಕಾರಕ್ಕಿಂತಲೂ ದೊಡ್ಡವರು ಇದ್ದಾರೆ ಸಿಎಂ ಅವರ ಬಳಿ. ಸರಕಾರದ ಒಪ್ಪಿಗೆಯೇ ಇಲ್ಲದೆ ಹಾಗೂ ಹಣಕಾಸು ಇಲಾಖೆಯ ಒಪ್ಪಿಗೆಯನ್ನೂ ಪಡೆಯದೇ 625ಕ್ಕೂ ಹೆಚ್ಚು ಕೋಟಿ ಹಣ ಬಿಡುಗಡೆ ಆಗಿದೆ ಎಂದು ಕೇಂದ್ರ ಸಚಿವರು ನೇರ ಆರೋಪ ಮಾಡಿದರು.

ಸಂಪುಟದ ಒಪ್ಪಿಗೆ ಪಡೆಯದೇ ಹಣ ವೆಚ್ಚ ಮಾಡಲಾಗಿದೆ. ಅಲ್ಪಸಂಖ್ಯಾತರಿಗೆ ಸೇರಿದ ಕೋಟಿ ಕೋಟಿ ಹಣ ಲೂಟಿ ಆಗಿದೆ. ಈ ಮುಖ್ಯಮಂತ್ರಿಗೆ ಅಧಿಕಾರದಲ್ಲಿ ಮುಂದುವರೆಯಲು ಯೋಗ್ಯತೆ ಇದೆಯಾ? ಎಂದು ಕಿಡಿಕಾರಿದ ಸಚಿವರು; ಕಾನೂನಾತ್ಮಕವಾಗಿ ಅಲ್ಪಸಂಖ್ಯಾತರಿಗೆ ಎಷ್ಟು ಬೇಕಾದರೂ ನೆರವು ಕೊಡಿ. ಆದರೆ, ಕೊಳ್ಳೆ ಹೊಡೆಯಲು ಹಣಕಾಸು ಇಲಾಖೆ ಒಪ್ಪಿಗೆಯೇ ಇಲ್ಲದೆ ಹಣ ಬಿಡುಗಡೆ ಹೇಗಾಯಿತು? ಇದಕ್ಕೆ ಹೊಣೆ ಯಾರು? ಎಲ್ಲರೂ ಕಾನೂನಿನ ಕಟಕಟೆಯಲ್ಲಿ ನಿಲ್ಲಲೇಬೇಕು ಎಂದು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ವಸತಿ ಇಲಾಖೆಯಲ್ಲಿ ಸಾಲು ಸಾಲು ಹರಗಣಗಳು ನಡೆಯುತ್ತಿವೆ. ಈ ಮುಖ್ಯಮಂತ್ರಿ ವಸತಿ ಸಚಿವರ ರಾಜೀನಾಮೆ ಪಡೆಯುತ್ತಾರಾ? ಈ ಸಿಎಂಗೆ ಅಷ್ಟು ನೈತಿಕತೆ, ಯೋಗ್ಯತೆ, ಧೈರ್ಯ ಇದೆಯಾ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ನೀವು ‘ಮಲೆನಾಡಿನ ದೃಶ್ಯ ವೈಭವ’ವನ್ನು ಕಣ್ ತುಂಬಿಕೊಳ್ಳಬೇಕೇ? ತಪ್ಪದೇ ಈ ವೀಡಿಯೋ ಸಾಂಗ್ ನೋಡಿ | Malnad Yana

ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್, ರಾಹುಲ್ ದ್ರಾವಿಡ್ ದಾಖಲೆ ಮುರಿದ ಕನ್ನಡಿಗ ಕೆ.ಎಲ್ ರಾಹುಲ್ | KL Rahul

BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?

Share. Facebook Twitter LinkedIn WhatsApp Email

Related Posts

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಇಲ್ಲಿದೆ ರಾಶಿ – ದಿಕ್ಕು – ಗ್ರಹ ಬಗ್ಗೆ ಸಂಪೂರ್ಣ ಡೀಟೆಲ್ಸ್

08/10/2025 6:13 PM3 Mins Read

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ, ಬೆಂಗಳೂರು, ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

08/10/2025 6:04 PM2 Mins Read

ಸಾಗರ ತಾಲ್ಲೂಕು ಕರವೇ ನಾರಾಯಣಗೌಡ ಬಣದ ‘ಮಹಿಳಾ ಘಟಕದ ಅಧ್ಯಕ್ಷರಾಗಿ ಸುಗುಣ ಹೋತನಹಳ್ಳಿ’ ಆಯ್ಕೆ

08/10/2025 6:01 PM1 Min Read
Recent News

“ಉಗ್ರರ ಬಗ್ಗೆ ಮೃದು ಧೋರಣೆ, 26/11 ಮುಂಬೈ ದಾಳಿ ಬಳಿಕ ಕಾಂಗ್ರೆಸ್ ಶರಣಾಯ್ತು” ; ಪ್ರಧಾನಿ ಮೋದಿ

08/10/2025 6:23 PM

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಇಲ್ಲಿದೆ ರಾಶಿ – ದಿಕ್ಕು – ಗ್ರಹ ಬಗ್ಗೆ ಸಂಪೂರ್ಣ ಡೀಟೆಲ್ಸ್

08/10/2025 6:13 PM

ಶಾಲಾ-ಕಾಲೇಜು ವಿದ್ಯಾರ್ಥಿಗಳ ಗಮನಕ್ಕೆ: ಜಿಯೋದಿಂದ ‘ಎಐ ಕ್ಲಾಸ್ ರೂಮ್ ಫೌಂಡೇಷನ್ ಕೋರ್ಸ್’ ಆರಂಭ, ಪುಲ್ ಫ್ರೀ

08/10/2025 6:08 PM

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ, ಬೆಂಗಳೂರು, ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

08/10/2025 6:04 PM
State News
KARNATAKA

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಇಲ್ಲಿದೆ ರಾಶಿ – ದಿಕ್ಕು – ಗ್ರಹ ಬಗ್ಗೆ ಸಂಪೂರ್ಣ ಡೀಟೆಲ್ಸ್

By kannadanewsnow0908/10/2025 6:13 PM KARNATAKA 3 Mins Read

ರಾಶಿ – ದಿಕ್ಕು – ಗ್ರಹ 1.ಮೇಷ-ಪೂರ್ವ-ಮಂಗಳ. 2.ವೃಷಭ-ಪೂರ್ವ-ಶುಕ್ರ. 3.ಮಿಥುನ-ಆಗ್ನೇಯ-ಬುಧ. 4.ಕರ್ಕಾಟಕ-ದಕ್ಷಿಣ-ಚಂದ್ರ . 5.ಸಿಂಹ-ದಕ್ಷಿಣ-ಸೂರ್ಯ. 6.ಕನ್ಯಾ-ನ್ಯೆರುತ್ಯ-ಬುಧ. 7.ತುಲಾ-ಪಶ್ಚಿಮ-ಶುಕ್ರ. 8.ವೃಶ್ಚಿಕ-ಪಶ್ಚಿಮ-ಮಂಗಳ. 9.ಧನಸ್ಸು-ವಾಯುವ್ಯ-ಗುರು.…

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ, ಬೆಂಗಳೂರು, ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

08/10/2025 6:04 PM

ಸಾಗರ ತಾಲ್ಲೂಕು ಕರವೇ ನಾರಾಯಣಗೌಡ ಬಣದ ‘ಮಹಿಳಾ ಘಟಕದ ಅಧ್ಯಕ್ಷರಾಗಿ ಸುಗುಣ ಹೋತನಹಳ್ಳಿ’ ಆಯ್ಕೆ

08/10/2025 6:01 PM

ಪ್ರಧಾನಿ ಮೋದಿಗೆ ನ್ಯಾಯಾಂಗದ ಮೇಲಿನ ಪ್ರಹಾರವನ್ನು ಖಂಡಿಸಲು ಇಡೀ ದಿನವೇ ಬೇಕಾಯಿತೇ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

08/10/2025 5:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.