Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ಮಾಡಿ ವೈರಲ್ : ಬೆಂಗಳೂರಿನಲ್ಲಿ ಆರೋಪಿ ಅರೆಸ್ಟ್

13/05/2025 8:49 AM

ಗ್ರಾಹಕರೇ ಗಮನಿಸಿ : ಮೇ.31ರೊಳಗೆ ಈ ಖಾತೆಗಳಲ್ಲಿ 436 ರೂ. ಇರಬೇಕು, ಇಲ್ಲದಿದ್ದರೆ ಖಾತೆಯೇ ಬಂದ್.!

13/05/2025 8:45 AM

BIG NEWS: ಜಲಂಧರ್ನಲ್ಲಿ ಡ್ರೋನ್ಗಳು ಪತ್ತೆ, ಅಮೃತಸರದಲ್ಲಿ ಬ್ಲ್ಯಾಕೌಟ್, ವಿಮಾನ ನಿಲ್ದಾಣ ಬಂದ್

13/05/2025 8:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ
KARNATAKA

ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

By kannadanewsnow0929/12/2024 3:32 PM

ಬೆಂಗಳೂರು:  ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ. ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪನವರ ರಾಜೀನಾಮೆ ಕೇಳಲಾಗಿತ್ತು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಪಾಂಚಾಳ ಅವರು ಡೆತ್ನೋಟ್ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡು, ಕೂಡಲೇ ಹುಡುಕಿ‌ ಕೊಡುವಂತೆ ಬೀದರ್ ನ ಗಾಂಧಿಗಂಜ್ ಪೊಲೀಸ್ ಠಾಣೆಗೆ ಮನವಿ ಮಾಡಿದ್ದರು. ಆದರೆ ದೂರು ದಾಖಲಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಗೂಂಡಾಗಿರಿ

ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್‌ ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ 1 ಕೋಟಿ ಹಣ ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಡೆತ್ನೋಟ್ನಲ್ಲಿ ಉಲ್ಲೇಖವಾಗಿದೆ. ಡೆತ್ ನೋಟ್ನಲ್ಲಿ ಕಲಬುರಗಿಯ ಮಾಜಿ ಕಾರ್ಪೊರೇಟ್ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ. ಇಂತಹ ಗೂಂಡಾಗಳನ್ನು ಆಪ್ತರಾಗಿ ಇಟ್ಟುಕೊಂಡ ಸಚಿವರು ಕೂಡ ಇಲ್ಲಿ ಹೊಣೆಗಾರರು ಎಂದು ಅವರು ಹೇಳಿದ್ದಾರೆ.

ರಾಜು ಕಪನೂರ್, ಖರ್ಗೆ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾನೆ. ಕಲಬುರಗಿ ಮಹಾನಗರ ಪಾಲಿಕೆ ಸದಸ್ಯನೂ ಆಗಿದ್ದ ರಾಜು ಕಪನೂರ್, ಈ ಹಿಂದೆ ಅಕ್ರಮ ಪಿಸ್ತೂಲ್ ಹೊಂದಿರುವ ಆರೋಪದಲ್ಲಿ ಬಂಧಿತನಾಗಿದ್ದ. ಇವೆಲ್ಲ ಗೊತ್ತಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಆಪ್ತರಿಂದ ದೂರವಾಗಿಲ್ಲ. ಇಂತಹ ಗೂಂಡಾ, ಸಚಿವರ ಆಪ್ತ ಎಂದರೆ ನಮ್ಮ ರಾಜ್ಯದಲ್ಲಿ ಗೂಂಡಾಗಳ, ರೌಡಿಗಳ ಸರ್ಕಾರ ನಡೆಯುತ್ತಿದೆ ಎಂದರ್ಥ ಎಂದು ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಸಿಸಿ ವರ್ಷದ ಟಿ20 ಆಟಗಾರ ಪ್ರಶಸ್ತಿಗೆ ಬಾಬರ್, ಅರ್ಷ್ದೀಪ್ ನಾಮನಿರ್ದೇಶನ | ICC Awards

ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ

Share. Facebook Twitter LinkedIn WhatsApp Email

Related Posts

BREAKING : ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ಮಾಡಿ ವೈರಲ್ : ಬೆಂಗಳೂರಿನಲ್ಲಿ ಆರೋಪಿ ಅರೆಸ್ಟ್

13/05/2025 8:49 AM1 Min Read

ಗ್ರಾಹಕರೇ ಗಮನಿಸಿ : ಮೇ.31ರೊಳಗೆ ಈ ಖಾತೆಗಳಲ್ಲಿ 436 ರೂ. ಇರಬೇಕು, ಇಲ್ಲದಿದ್ದರೆ ಖಾತೆಯೇ ಬಂದ್.!

13/05/2025 8:45 AM2 Mins Read

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ವಾಟ್ಸಪ್ ಗೆ ಬರುವ ಈ ಫೋಟೋ ಕ್ಲಿಕ್ ಮಾಡಿದ್ರೆ ಖಾತೆಯೇ ಖಾಲಿ.!

13/05/2025 8:33 AM2 Mins Read
Recent News

BREAKING : ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ಮಾಡಿ ವೈರಲ್ : ಬೆಂಗಳೂರಿನಲ್ಲಿ ಆರೋಪಿ ಅರೆಸ್ಟ್

13/05/2025 8:49 AM

ಗ್ರಾಹಕರೇ ಗಮನಿಸಿ : ಮೇ.31ರೊಳಗೆ ಈ ಖಾತೆಗಳಲ್ಲಿ 436 ರೂ. ಇರಬೇಕು, ಇಲ್ಲದಿದ್ದರೆ ಖಾತೆಯೇ ಬಂದ್.!

13/05/2025 8:45 AM

BIG NEWS: ಜಲಂಧರ್ನಲ್ಲಿ ಡ್ರೋನ್ಗಳು ಪತ್ತೆ, ಅಮೃತಸರದಲ್ಲಿ ಬ್ಲ್ಯಾಕೌಟ್, ವಿಮಾನ ನಿಲ್ದಾಣ ಬಂದ್

13/05/2025 8:35 AM

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ವಾಟ್ಸಪ್ ಗೆ ಬರುವ ಈ ಫೋಟೋ ಕ್ಲಿಕ್ ಮಾಡಿದ್ರೆ ಖಾತೆಯೇ ಖಾಲಿ.!

13/05/2025 8:33 AM
State News
KARNATAKA

BREAKING : ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ಮಾಡಿ ವೈರಲ್ : ಬೆಂಗಳೂರಿನಲ್ಲಿ ಆರೋಪಿ ಅರೆಸ್ಟ್

By kannadanewsnow5713/05/2025 8:49 AM KARNATAKA 1 Min Read

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ಮಾಡಿ ವೈರಲ್ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.…

ಗ್ರಾಹಕರೇ ಗಮನಿಸಿ : ಮೇ.31ರೊಳಗೆ ಈ ಖಾತೆಗಳಲ್ಲಿ 436 ರೂ. ಇರಬೇಕು, ಇಲ್ಲದಿದ್ದರೆ ಖಾತೆಯೇ ಬಂದ್.!

13/05/2025 8:45 AM

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ವಾಟ್ಸಪ್ ಗೆ ಬರುವ ಈ ಫೋಟೋ ಕ್ಲಿಕ್ ಮಾಡಿದ್ರೆ ಖಾತೆಯೇ ಖಾಲಿ.!

13/05/2025 8:33 AM

ಒಂದು ಹೆಣ್ಣು ತನ್ನ ಗಂಡನ ಬಳಿ ಬಯಸುವುದು ಏನು ಗೊತ್ತಾ?

13/05/2025 8:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.