ಮಂಡ್ಯ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಪ್ರಚಾರದ ವೇಳೆ ಮಾತನಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಗ್ಯಾರಂಟಿ ಯೋಜನೆಯ ಕುರಿತು ಟೀಕೆಸಿದ್ದಾರೆ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮೋಸ ಹೋಗಿಬೇಡಿ ಮೋದಿ ಸಾಕಷ್ಟು ಗ್ಯಾರಂಟಿಗಳನ್ನು ಕೊಟ್ಟಿದ್ದಾರೆ ಎಂದರು.
ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊಡುವ ಗ್ಯಾರಂಟಿ ಯೋಜನೆಗಳಿಗೆ ಮೋಸ ಹೋಗಬೇಡಿ. ಮೋದಿ ಬಹಳ ಗ್ಯಾರಂಟಿ ಕೊಟ್ಟಿದ್ದಾರೆ ಎಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಮಾತನಾಡಿದ ಅವರು ನೀರಾವರಿ ಸಚಿವರು ಇಡೀ ಬೆಂಗಳೂರನ್ನೇ ಬಾಚಿಕೊಳ್ಳುತ್ತಿದ್ದಾರೆ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ನೀರಾವರಿ ಇಲಾಖೆ ಅಷ್ಟೇ ಬೆಂಗಳೂರಿನ ಬಾಚಿಕೊಳ್ಳುತ್ತಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢಕ್ಕೆ ಹಣವನ್ನು ಕಳುಹಿಸಿದ್ದರು. ಯಾರ ಹಣ ಇದೆಲ್ಲ? ಅದೆಲ್ಲವೂ ನಮ್ಮ ಹಣ ಎಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿಯಲ್ಲಿ ಮಾಜಿ ಪ್ರಧಾನಿ ಸಿಡಿ ದೇವೇಗೌಡ ಹೇಳಿಕೆ ನೀಡಿದರು.