Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವಕ್ಫ್ ಕಾಯಿದೆ’ ಹೆಸರಿನಲ್ಲಿ ರೈತರನ್ನು ಬೀದಿಪಾಲು ಮಾಡಬೇಡಿ: ಬಿ.ವೈ.ವಿಜಯೇಂದ್ರ ಆಗ್ರಹ
KARNATAKA

‘ವಕ್ಫ್ ಕಾಯಿದೆ’ ಹೆಸರಿನಲ್ಲಿ ರೈತರನ್ನು ಬೀದಿಪಾಲು ಮಾಡಬೇಡಿ: ಬಿ.ವೈ.ವಿಜಯೇಂದ್ರ ಆಗ್ರಹ

By kannadanewsnow0926/10/2024 5:12 PM

ಬೆಂಗಳೂರು: ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಬಿಜೆಪಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದೆ ಎಂದು ಪ್ರಕಟಿಸಿದÀರು. ನಾವು ಹೋರಾಟಕ್ಕೂ ಇಳಿಯುತ್ತೇವೆ; ಆದರೆ, ರೈತರಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು.

ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರ ಜಮೀನನ್ನು ಹೊಡೆದುಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಮೊನ್ನೆ ವಿಜಾಪುರದಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ. ರೈತರು ಹಲವಾರು ದಶಕಗಳಿಂದ ಕೃಷಿ ಮಾಡುತ್ತಿದ್ದ ಜಮೀನು ಕೂಡ ವಕ್ಫ್ ಆಸ್ತಿ ಎಂದು ಅಧಿಕಾರಿಗಳ ಮೂಲಕ ನೋಟಿಸ್ ನೀಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಸದಾ ತುಷ್ಟೀಕರಣ ಮಾಡುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದ ಬೆಂಬಲ ವಕ್ಫ್ ಬೋರ್ಡ್‍ಗೆ ಇರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಟೀಕಿಸಿದರು.

ಈಗಾಗಲೇ ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದ ಎನ್‍ಡಿಎ ಸರಕಾರವು ವಕ್ಫ್ ಕಾಯಿದೆಯಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಇನ್ನೊಂದೆಡೆ ಹೈಕೋರ್ಟ್, ಸುಪ್ರೀಂ ಕೋರ್ಟ್ ಇದ್ಯಾವುದೂ ಇಲ್ಲ; ವಕ್ಫ್ ಹೆಸರು ಹೇಳಿಕೊಂಡು ಯಾರೇನು ಬೇಕಾದರೂ ಲೂಟಿ ಮಾಡಬಹುದು ಎಂಬಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಯಾರಿಗೂ ಅನ್ಯಾಯ ಆಗಬಾರದು. ವಕ್ಫ್ ಕಾಯಿದೆಗೆ ಸುಧಾರಣೆ ತರಬೇಕು ಎಂದು ಕೇಂದ್ರ ಸರಕಾರ ಸಮಿತಿಯನ್ನು ರಚಿಸಿ ನಿನ್ನೆ- ಮೊನ್ನೆ ಚರ್ಚೆಯೂ ಆಗಿದೆ. ಆದರೆ, ಕರ್ನಾಟಕದ ವಿಜಾಪುರದಲ್ಲಿ ನಿನ್ನೆ ರೈತರು ಕಮಿಟಿ ಸದಸ್ಯರಾದ ಸಂಸದ ತೇಜಸ್ವಿ ಸೂರ್ಯ ಅವರನ್ನು ಭೇಟಿ ಮಾಡಿದ್ದಾರೆ ಎಂದು ವಿವರಿಸಿದರು.

ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಷ್ಟವಾಗಲಿದೆ…

3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಘೋಷಣೆ ಆಗಿದ್ದು, ನಾಮಪತ್ರ ಸಲ್ಲಿಕೆಯೂ ಆಗಿದೆ. ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರಿನಲ್ಲಿ ಯಾವ ರೀತಿ ಆಡಳಿತ ವಿರೋಧಿ ಅಲೆ ಇದೆ; ರಾಜ್ಯ ಸರಕಾರದ ವಿರುದ್ಧ ಜನರು ಯಾವ ರೀತಿ ಹಿಡಿಶಾಪ ಹಾಕುತ್ತಿದ್ದಾರೆ ಎಂಬುದು ಫಲಿತಾಂಶದ ಬಳಿಕ ಗೊತ್ತಾಗಲಿದೆ ಎಂದು ವಿಶ್ಲೇಷಣೆ ಮಾಡಿದರು.

ಉಪ ಚುನಾವಣೆ ಫಲಿತಾಂಶ ಬಂದ ನಂತರ ಕಾಂಗ್ರೆಸ್ ಪಕ್ಷದವರು ಅವರ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಷ್ಟವಾಗಲಿದೆ. ಅಂಥ ವಾತಾವರಣ ನಿರ್ಮಾಣ ಆಗಲಿದೆ. ಕಾಂಗ್ರೆಸ್ ಪಕ್ಷದ ಶಾಸಕರು ಈಗಾಗಲೇ ಬೊಬ್ಬೆ ಹೊಡೆಯುತ್ತಿದ್ದಾರೆ. ಅಭಿವೃದ್ಧಿಗೆ ಹಣ ಕೊಡದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುವಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜು ಕಾಗೆಯವರು ಹೇಳಿದ್ದಾರೆ. 8 ಬಾರಿ ಶಾಸಕರಾದ ಆರ್.ವಿ.ದೇಶಪಾಂಡೆಯವರು ಕೂಡ ಅನುದಾನ ಸಿಗುತ್ತಿಲ್ಲ ಎಂಬ ಮಾತು ಹೇಳಿದ್ದಾರೆ. ಮತ್ತೊಂದೆಡೆ ಬಿ.ಆರ್.ಪಾಟೀಲ್ ಅವರು ಅಧಿಕಾರಿಗಳು ಮಾತು ಕೇಳುತ್ತಿಲ್ಲ ಎಂದಿದ್ದಾರೆ ಎಂದು ವಿವರಿಸಿದರು.

ರಾಜ್ಯದಲ್ಲಿ ಮಳೆ ಹೆಚ್ಚಾಗಿ ನೆರೆ ಪರಿಸ್ಥಿತಿ ತೀವ್ರವಾಗಿದೆ. ರೈತರ ಬೆಳೆ ಸಂಪೂರ್ಣ ನಾಶವಾಗಿದೆ. ಭತ್ತ, ಜೋಳ, ಹತ್ತಿ, ಶೇಂಗಾ, ಈರುಳ್ಳಿ ಬೆಳೆ ನಷ್ಟದಿಂದ ರೈತರು ಸಂಕಷ್ಟದಲ್ಲಿದ್ದಾರೆ. 3 ಉಪ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಿಗೆ ಸರಕಾರವು ಸಂಡೂರಿಗೆ 10 ಸಚಿವರು, ಶಿಗ್ಗಾವಿಗೆ 10 ಸಚಿವರು ಮತ್ತು ಚನ್ನಪಟ್ಟಣದಲ್ಲಿ 10 ಸಚಿವರನ್ನು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 20-30 ಜನ ಶಾಸಕರನ್ನು ನೇಮಿಸಿದೆ. ಹಣದ ಮೂಟೆ ಇಟ್ಟುಕೊಂಡು ಉಪ ಚುನಾವಣೆ ಎದುರಿಸಲು ಸಜ್ಜಾಗುತ್ತಿದ್ದಾರೆಯೇ ಹೊರತು ರಾಜ್ಯದ ಮುಖ್ಯಮಂತ್ರಿಗಳಿಗೆ, ರಾಜ್ಯ ಸರಕಾರಕ್ಕೆ ರೈತರ ಸಂಕಷ್ಟ ಕಣ್ಣಿಗೆ ಕಾಣುತ್ತಿಲ್ಲ ಎಂದು ಆಕ್ಷೇಪಿಸಿದರು.

ರೈತರ ಪರದಾಟಕ್ಕೆ ಸ್ಪಂದನೆ ಇಲ್ಲ..

ರೈತರು ಪರದಾಡುತ್ತಿದ್ದು, ಅವರ ಸಮಸ್ಯೆಗೆ ಸ್ಪಂದಿಸಬೇಕೆಂದು ರಾಜ್ಯ ಸರಕಾರಕ್ಕೆ ಅನಿಸುತ್ತಿಲ್ಲ; ಉಪ ಚುನಾವಣೆ ಬಗ್ಗೆ ಕಾಳಜಿ ಇದೆಯೇ ಹೊರತು ನಾಡಿನ ರೈತರ ಬಗ್ಗೆ ಚಿಂತನೆ ಮಾಡದೆ ಇರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು. ಈ ಸರಕಾರದ ವಿಷಯ ಬಂದಾಗ ಅಭಿವೃದ್ಧಿ ಎಂಬುದನ್ನು ಚರ್ಚೆ ಮಾಡಿಯೂ ಉಪಯೋಗ ಇಲ್ಲ. ಬೆಂಗಳೂರಿನಲ್ಲಿ ಕಾರಿನ ಬದಲು ದೋಣಿ ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಒಂದು ಚುನಾಯಿತ ಸರಕಾರ ಇದೆ; ಅಭಿವೃದ್ಧಿ ಆಗಲಿದೆ ಎಂಬ ನಿರೀಕ್ಷೆ ಜನರಲ್ಲೂ ಇಲ್ಲವಾಗಿದೆ. ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಕರ್ನಾಟಕ ಇದೆ ಎಂದು ವಿವರಿಸಿದರು.

ಬೆಂಗಳೂರಿನ ತೀವ್ರ ಮಳೆ, ಸಮಸ್ಯೆ ಸಂದರ್ಭದಲ್ಲಿ ವಿಪಕ್ಷ ನಾಯಕರು, ಇತರ ಪ್ರಮುಖರು ಸ್ಥಳಕ್ಕೆ ಭೇಟಿ ಮಾಡಿದ್ದಾರೆ. ರೈತರ ಸಮಸ್ಯೆ ಇರುವಲ್ಲಿಗೆ ಕೂಡ ಭೇಟಿ ಮಾಡುತ್ತೇವೆ. ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ಮಾಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಒಂದು ಲಕ್ಷ ನೀಡಲು ಮೀನಾಮೇಷ..

ಸರಕಾರ ದನ ಕಾಯುತ್ತ ಇದೆಯೇ? ಕತ್ತೆ ಕಾಯಲು ಇವರನ್ನು ಆಯ್ಕೆ ಮಾಡಿದ್ದಾರಾ? ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ನಡೆದುಕೊಳ್ಳುವ ರೀತಿ ಇದುವೇ? ಹಿಂದೆ ಬಿಜೆಪಿ ಸರಕಾರ ಇದ್ದಾಗ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬಡವರು ಮನೆ ಕಳೆದುಕೊಂಡರೆ 5 ಲಕ್ಷ ರೂ. ಕೊಡುತ್ತಿದ್ದರು. ಇವರೇನು ಮಾಡಿದ್ದಾರೆ? ಇವರು ಒಂದು ಲಕ್ಷ ಕೊಡಲೂ ಮೀನಾಮೇಷ ನೋಡುತ್ತಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

ಇವರು ಬಡವರ ಪರ ಇರುವ ಸರಕಾರ ಎನ್ನುತ್ತಾರೆ. ಒಂದು ಲಕ್ಷ ಕೊಡಲೂ ಯೋಚನೆ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಮನೆ ಕಳಕೊಂಡ ಬಡವರು ಪರದಾಡುತ್ತಿದ್ದಾರೆ. ರೈತರ ಸಮಸ್ಯೆ ಹೇಳಿದರೆ ಕೇಂದ್ರ ಸರಕಾರದ ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ. ಇವರನ್ನು ಜನರು ಗೆಲ್ಲಿಸಿದ್ದು ಯಾತಕ್ಕೆ ಎಂದು ಪ್ರಶ್ನಿಸಿದರು.
ಎಲ್ಲವನ್ನೂ ಕೇಂದ್ರ ಸರಕಾರ ಮಾಡಬೇಕಿದ್ದರೆ ರಾಜ್ಯ ಸರಕಾರದ ಜವಾಬ್ದಾರಿ ಏನು? ಮುಖ್ಯಮಂತ್ರಿ, ಸಚಿವರು, ಆಡಳಿತ ಪಕ್ಷದವರಿಗೆ ಜವಾಬ್ದಾರಿ ಇಲ್ಲವೇ ಎಂದು ಕೇಳಿದರು. ವಿಪಕ್ಷದವರು ಪ್ರಶ್ನಿಸಿದರೆ ಕೇಂದ್ರ ಸರಕಾರದ ಕಡೆ ತೋರಿಸುತ್ತಾರೆ. ಹಾಗಿದ್ದರೆ ರಾಜ್ಯ ಸರಕಾರ ಯಾಕೆ ಇದೆ? ಎಂದರು.

ಬೆಂಗಳೂರಿನ ‘ಅಕ್ರಮ ಕಟ್ಟಡ ಮಾಲೀಕ’ರಿಗೆ ಬಿಗ್ ಶಾಕ್: ತೆರವುಗೊಳಿಸುವುದಾಗಿ ‘ಡಿಸಿಎಂ ಡಿಕೆಶಿ’ ಘೋಷಣೆ

ಬೆಂಗಳೂರು ಜನತೆ ಗಮನಕ್ಕೆ: ಅ.28ರಂದು ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

Share. Facebook Twitter LinkedIn WhatsApp Email

Related Posts

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM1 Min Read

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM1 Min Read

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM1 Min Read
Recent News

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM

ಪತ್ನಿ ಇಶಾನಿ ಜೋಹರ್ ಅವರಿಂದ ಬೇರ್ಪಡುವುದಾಗಿ ಭಾರತೀಯ ಕ್ರಿಕೆಟಿಗ ರಾಹುಲ್ ಚಾಹರ್ ಘೋಷಣೆ | Rahul Chahar

20/02/2026 8:51 PM
State News
KARNATAKA

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

By kannadanewsnow0920/02/2026 8:43 PM KARNATAKA 1 Min Read

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ನಲ್ಲಿ ಮಡಿವಾಳ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ…

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

20/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.