Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಅರಣ್ಯದಲ್ಲಿ ಜಾನುವಾರು ಮೇಯಿಸಲು ನಿಷೇಧ ಆದೇಶಕ್ಕೆ ಖಂಡನೆ: ವಿನೂತನ ರೀತಿಯಲ್ಲಿ ಪ್ರತಿಭಟನೆ

28/07/2025 10:02 PM

ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

28/07/2025 9:55 PM

ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

28/07/2025 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು
KARNATAKA

ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

By kannadanewsnow0928/07/2025 9:55 PM

ಶಿವಮೊಗ್ಗ : ಯಾವುದೋ ವ್ಯಾಮೋಹದಿಂದ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ. ಆರ್ಥಿಕವಾಗಿ ಸ್ವಲ್ಪ ಕಷ್ಟ ಎನಿಸಿದರೂ ಮಳೆಗಾಲದಲ್ಲಿ ಬೀಳುವ ಸ್ಥಿತಿಯಲ್ಲಿರುವ ಮನೆಯಲ್ಲಿ ವಾಸ ಮಾಡದೆ ಬಾಡಿಗೆ ಮನೆಯಾದರೂ ಗಟ್ಟಿಮುಟ್ಟಾದ ಮನೆಗಳಲ್ಲಿ ವಾಸ ಮಾಡಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ರಂಗಮಂದಿರದಲ್ಲಿ ಸೋಮವಾರ ಮಳೆಯಿಂದ ಮನೆಹಾನಿಗೊಳಗಾದ ಕುಟುಂಬಗಳಿಗೆ ನಗರಸಭೆ ವತಿಯಿಂದ ಆರ್ಥಿಕ ಸಹಕಾರದ ಚೆಕ್ ವಿತರಣೆ ಮಾಡಿ ಮಾತನಾಡಿದಂತ ಅವರು, ಜೂನ್ 15ರಿಂದ ಪ್ರಾರಂಭವಾಗಬೇಕಾಗಿದ್ದ ಮಳೆ ಈ ಬಾರಿ ಮೇ ಮೊದಲ ವಾರದಿಂದಲೇ ಪ್ರಾರಂಭವಾಗಿ ದೊಡ್ಡಮಟ್ಟದ ಅನಾಹುತ ಸೃಷ್ಟಿಸಿದೆ. ನಗರವ್ಯಾಪ್ತಿಯಲ್ಲಿ ಸಾಕಷ್ಟು ಮನೆಗಳು ಬಿದ್ದಿದ್ದು ನಗರಸಭೆ ಅಧ್ಯಕ್ಷರು ಸದಸ್ಯರ ಜೊತೆಗೆ ಮನೆಗಳಿಗೆ ಭೇಟಿ ನೀಡಿ ತಾತ್ಕಾಲಿಕ ಪರಿಹಾರ ನೀಡಲಾಗಿತ್ತು. ಇದೀಗ ನಗರಸಭೆಯಿಂದ ಹೆಚ್ಚಿನ ನೆರವು ನೀಡಿದ್ದು, ಸರ್ಕಾರದಿಂದ ಸಹ ಸಹಕಾರ ಕಲ್ಪಿಸಲಾಗುತ್ತದೆ. ಸರ್ಕಾರದಿಂದ ಮನೆ ಬಿದ್ದಿದ್ದಕ್ಕೆ, ಕಾಂಪೌಂಡ್ ಗೋಡೆ ಕುಸಿತಕ್ಕೆ ಪರಿಹಾರ ನೀಡಲು ಹೊಸ ಗೈಡ್‌ಲೈನ್ ಬಂದಿದೆ. ಅಧಿಕಾರಿಗಳು ಬಡವರಿಗೆ ನೆರವಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಮಾತನಾಡಿ, ಸುಮಾರು 27 ಮನೆಗಳಿಗೆ ಪರಿಹಾರಧನದ ಚೆಕ್ಕನ್ನು ನಗರಸಭೆಯಿಂದ ನೀಡಲಾಗಿದೆ. ವಿಪರೀತ ಮಳೆಯಿಂದಾಗಿ ನಗರವ್ಯಾಪ್ತಿಯಲ್ಲಿ ದೊಡ್ಡಮಟ್ಟದ ಅನಾಹುತ ಸಂಭವಿಸಿದೆ. ಮನೆ ಹಾನಿಗೊಳಗಾದವರು ಆತಂಕ ಪಡುವ ಅಗತ್ಯವಿಲ್ಲ. ನಗರಸಭೆ ನಿಮ್ಮ ಜೊತೆ ಇರುತ್ತದೆ ಎಂದು ತಿಳಿಸಿದರು.

ಉಪಾಧ್ಯಕ್ಷೆ ಸವಿತಾ ವಾಸು ಮಾತನಾಡಿ, ಪ್ರಧಾನ ಮಂತ್ರಿ ಆವಾಜ್ ಯೋಜನೆಯಲ್ಲಿ ಮನೆ ನಿರ್ಮಿಸಿ ಕೊಳ್ಳಲು ಕೇಂದ್ರ ಸರ್ಕಾರದ ಯೋಜನೆಯಲ್ಲಿ ಅವಕಾಶವಿದ್ದು, ಸೂರು ಇಲ್ಲದವರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದರು.

ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಸದಸ್ಯರಾದ ವಿ.ಮಹೇಶ್, ಮಧುಮಾಲತಿ, ಸೈಯದ್ ಜಾಕೀರ್, ಎಲ್.ಚಂದ್ರಪ್ಪ, ರವಿಕುಮಾರ್, ಸಬೀನಾ ತನ್ವೀರ್, ಸಬಾನಾ, ಕುಸುಮ ಸುಬ್ಬಣ್ಣ, ಅರವಿಂದ ರಾಯ್ಕರ್, ನಗರಸಭೆಯ ಬಾಲಚಂದ್ರ, ಮದನ್ ಇನ್ನಿತರರು ಹಾಜರಿದ್ದರು.

ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

‘ಹೋಂ ಸ್ಟೇ ನಿರ್ಮಾಣ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸಹಾಯಧನಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಅರಣ್ಯದಲ್ಲಿ ಜಾನುವಾರು ಮೇಯಿಸಲು ನಿಷೇಧ ಆದೇಶಕ್ಕೆ ಖಂಡನೆ: ವಿನೂತನ ರೀತಿಯಲ್ಲಿ ಪ್ರತಿಭಟನೆ

28/07/2025 10:02 PM2 Mins Read

ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

28/07/2025 9:51 PM2 Mins Read

BIG NEWS: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ‘ಕುಟುಂಬ ಪಿಂಚಣಿ ಮಂಜೂರಿ’ನ ಬಗ್ಗೆ ಮಹತ್ವದ ಆದೇಶ

28/07/2025 9:35 PM1 Min Read
Recent News

ಸಾಗರದಲ್ಲಿ ಅರಣ್ಯದಲ್ಲಿ ಜಾನುವಾರು ಮೇಯಿಸಲು ನಿಷೇಧ ಆದೇಶಕ್ಕೆ ಖಂಡನೆ: ವಿನೂತನ ರೀತಿಯಲ್ಲಿ ಪ್ರತಿಭಟನೆ

28/07/2025 10:02 PM

ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

28/07/2025 9:55 PM

ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

28/07/2025 9:51 PM

ಕೋವಿಡ್-19 ‘ಸೋಂಕು’ ಉಂಟು ಮಾಡದಿದ್ರೂ ‘ಮೆದುಳಿನ ವಯಸ್ಸಾಗುವಿಕೆ’ ಪ್ರಮಾಣ ಹೆಚ್ಚಿಸಿದೆ ; ಅಧ್ಯಯನ

28/07/2025 9:42 PM
State News
KARNATAKA

ಸಾಗರದಲ್ಲಿ ಅರಣ್ಯದಲ್ಲಿ ಜಾನುವಾರು ಮೇಯಿಸಲು ನಿಷೇಧ ಆದೇಶಕ್ಕೆ ಖಂಡನೆ: ವಿನೂತನ ರೀತಿಯಲ್ಲಿ ಪ್ರತಿಭಟನೆ

By kannadanewsnow0928/07/2025 10:02 PM KARNATAKA 2 Mins Read

ಶಿವಮೊಗ್ಗ : ಸಾಕುಪ್ರಾಣಿಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಲು ಬಿಡದಂತೆ ಅರಣ್ಯ ಸಚಿವರು ಹೊರಡಿಸಿರುವ ಆದೇಶವನ್ನು ಖಂಡಿಸಿ ಸೋಮವಾರ ಜಿಲ್ಲಾ ರೈತ…

ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

28/07/2025 9:55 PM

ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

28/07/2025 9:51 PM

BIG NEWS: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ‘ಕುಟುಂಬ ಪಿಂಚಣಿ ಮಂಜೂರಿ’ನ ಬಗ್ಗೆ ಮಹತ್ವದ ಆದೇಶ

28/07/2025 9:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.