Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ 10 ಮಂದಿ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ

12/10/2025 1:02 PM

BREAKING: ಭಾರತದಲ್ಲಿ ನಡೆದ 2ನೇ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರನ್ನು ಸೇರಿಸಿದ ಅಫ್ಘಾನಿಸ್ತಾನದ ವಿದೇಶಾಂಗ ಸಚಿವೆ

12/10/2025 12:58 PM

ನಾಳೆ ಗಾಜಾ ಶಾಂತಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಗೆ ಟ್ರಂಪ್ ಆಹ್ವಾನ | Gaza peace summit

12/10/2025 12:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರನ್ನು ಪದೇ, ಪದೆ ಕಚೇರಿಗೆ ಅಲೆಸಬೇಡಿ: ಸರ್ಕಾರಿ ನೌಕರರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿವಿಮಾತು
KARNATAKA

ಸಾರ್ವಜನಿಕರನ್ನು ಪದೇ, ಪದೆ ಕಚೇರಿಗೆ ಅಲೆಸಬೇಡಿ: ಸರ್ಕಾರಿ ನೌಕರರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿವಿಮಾತು

By kannadanewsnow0921/04/2025 4:24 PM

ಬೆಂಗಳೂರು : “ದೇವರು ಹಾಗೂ ನಮ್ಮ ಮಧ್ಯೆ ಅರ್ಚಕ ಇರುತ್ತಾನೆ. ಅದೇ ರೀತಿ ಸರ್ಕಾರ ಹಾಗೂ ಜನರ ನಡುವೆ ಸರ್ಕಾರಿ ನೌಕರರು ಇರುತ್ತಾರೆ. ನೀವು ಕೆಲಸಕ್ಕಾಗಿ ಜನರನ್ನು ಪದೇ, ಪದೇ ಕಚೇರಿಗೆ ತಿರುಗಿಸುವ ಕೆಲಸ ಮಾಡಬಾರದು. ಧನಾತ್ಮಕವಾಗಿ ಕೆಲಸ ಮಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ನೌಕರರಿಗೆ ಕಿವಿಮಾತು ಹೇಳಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ರಾಜ್ಯ ಸರಕಾರಿ ನೌಕರರ ದಿನಾಚರಣೆ- 2025 ಮತ್ತು ರಾಜ್ಯ ಮಟ್ಟದ ʼಸರ್ವೋತ್ತಮ ಸೇವಾʼ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.

“ಸರ್ಕಾರಿ ನೌಕರನಿಗೆ ಕೆಲಸವಾಗುವ ಬಗ್ಗೆ ತಿಳಿದಿರುತ್ತದೆ. ಆದರೂ ಸಾರ್ವಜನಿಕರನ್ನು ತಿರುಗಿಸುತ್ತಾರೆ. ಕೆಲವರಿಗೆ ಬರೀ ಕೊಕ್ಕೆ ಹಾಕುವುದೇ ಕೆಲಸ. ಕೆಲಸ ಆಗುವಂತಿದ್ದರೂ ಆ ದಾಖಲೆ, ಈ ದಾಖಲೆ ತೆಗೆದುಕೊಂಡು ಬಾ ಎಂದು ತಿರುಗಿಸುತ್ತಾರೆ. ಸಾರ್ವಜನಿಕರು ಸಲಾಂ ಹೊಡೆಯಬೇಕು, ಕಡಲೆ ಕಾಯಿ, ಹಣ್ಣು, ಕೋಳಿ ತಂದುಕೊಡಬೇಕು ಎನ್ನುವ ಧೋರಣೆ ಹೊಂದಿರುತ್ತಾರೆ. ಇಂತಹ ಸನ್ನಿವೇಶಗಳನ್ನು ಈ ಹಿಂದೆ ಗ್ರಾಮೀಣ ಭಾಗದಲ್ಲಿ ನೋಡಿದ್ದೇನೆ. ಇದರ ಬಗ್ಗೆ ರಾಜಕಾರಣದ ಜೀವನದಲ್ಲಿರುವ ನನಗೂ ಅನುಭವಕ್ಕೆ ಬಂದಿದೆ. ನೀವು ಈ ರೀತಿ ಕೆಲಸ ಮಾಡಬಾರದು” ಎಂದರು.

“ಹಣ ಇದ್ದರೆ ಕುಟುಂಬವನ್ನು ಮಾತ್ರ ಪೋಷಿಸುತ್ತೇವೆ. ಅಧಿಕಾರ ಇದ್ದರೆ ಜನಸಾಮಾನ್ಯರಿಗೂ ಸಹಾಯ ಮಾಡುವ ಅವಕಾಶ ದೊರೆಯತ್ತದೆ. ಇಂತಹ ಸದಾವಕಾಶ ಸರ್ಕಾರಿ ನೌಕರರಿಗೆ ದೊರೆತಿದೆ. ರಾಜ್ಯದಲ್ಲಿ ಸುಮಾರು 12.5 ಲಕ್ಷ ಸರ್ಕಾರಿ ನೌಕರರು ಇದ್ದೀರಿ. ಯಾರಿಗೂ ಸಿಗದಂತಹ ಅವಕಾಶ ನಿಮಗೆ ಸಿಕ್ಕಿದೆ. 50- 100 ಹುದ್ದೆಗಳಿಗೆ ಲಕ್ಷಾಂತರ ಜನರು ಅರ್ಜಿ ಹಾಕುತ್ತಾರೆ. ಇಂತಹ ಸ್ಪರ್ಧೆಯ ನಡುವೆ ನಿಮಗೆ ಸಿಕ್ಕಿರುವ ಅವಕಾಶ ಸರಿಯಾಗಿ ಬಳಸಿಕೊಳ್ಳಿ” ಎಂದು ಹೇಳಿದರು.

ತಪ್ಪು ತಿದ್ದಿದರೆ ಒಪ್ಪಿಕೊಳ್ಳಿ

“ನಮ್ಮೆಲ್ಲರ ಬದುಕಿಗೆ ಪೋಷಕರು, ಶಿಕ್ಷಕರು ಸೇರಿದಂತೆ ಅನೇಕರು ಅವಕಾಶಗಳನ್ನು ಮಾಡಿಕೊಡುತ್ತಾರೆ. ಪ್ರಜಾಪ್ರಭುತ್ವದ ಅಡಿ ನಾವು ಕೆಲಸ ಮಾಡುತ್ತಿದ್ದೇವೆ. ಶಾಸಕಾಂಗ ತೀರ್ಮಾನ ಮಾಡಿದ್ದನ್ನು ಜಾರಿಗೆ ತರುವ ಕಾರ್ಯಾಂಗ ಸರ್ಕಾರಿ ನೌಕರರು. ನೀವು, ನಾವು ತಪ್ಪು ಮಾಡಿದರೆ ನಮ್ಮನ್ನು ತಿದ್ದುವುದು ನ್ಯಾಯಾಂಗ. ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಈ ಮೂರು ಕೂಡ ಒಂದೇ ಕಡೆ ಇರುವುದು ಪ್ರಪಂಚದಲ್ಲಿ ಬೇರೆ ಎಲ್ಲಿಯೂ ಇಲ್ಲ. ಜೊತೆಗೆ ಪತ್ರಿಕಾಂಗ ಕೂಡ ತಪ್ಪು ಮಾಡಿದಾಗ ತಿದ್ದುತ್ತದೆ. ನಮ್ಮ ತಪ್ಪು ಹೇಳಿದಾಗ ಕೋಪ ಮಾಡಿಕೊಳ್ಳಬಾರದು. ಬದಲಾಗಿ ನಮ್ಮ ತಪ್ಪನ್ನು ತಿದ್ದಿಕೊಳ್ಳಬೇಕು. ನಾವು ತಪ್ಪು ಮಾಡಿದರೆ ತಾನೇ ಅವರು ಬರೆಯವುದು. ನಾವು ತಪ್ಪೇ ಮಾಡದೇ ಇದ್ದರೆ ಯಾರು ನಮ್ಮ ಬಗ್ಗೆ ಬರೆಯುವುದಿಲ್ಲ” ಎಂದರು.

“ನಾವು ದೇವಸ್ಥಾನಕ್ಕೆ ಹೋಗಿ ದೇವರ ಬಳಿ ನಮ್ಮ ಕುಟುಂಬ, ಮಕ್ಕಳಿಗೆ ಒಳ್ಳೆಯದಾಗಬೇಕು ಎಂದು ಬೇಡಿಕೊಳ್ಳುತ್ತೇವೆ. ಜನರಿಗೆ ಏನಾದರೂ ತೊಂದರೆ ಉಂಟಾದಾಗ ಮಾತ್ರ ನಿಮ್ಮ ಬಳಿ ಬರುತ್ತಾರೆ. ತೊಂದರೆ ಇಲ್ಲದೇ ಹೋದರೆ ಕೆಲಸ ಸರಾಗವಾಗಿ ಹೋಗುತ್ತದೆ” ಎಂದು ಹೇಳಿದರು.

ಪುಟ್ಟರಂಗಪ್ಪ ಅವರನ್ನು ಸದಾ ನೆನೆಯುವೆ

“ಈ ಹಿಂದೆ ಬೆಂಗಳೂರು ಗ್ರಾಮಾಂತರದ ಜಿಲ್ಲಾಧಿಕಾರಿಯಾಗಿ ಚಿತ್ರದುರ್ಗ ಜಿಲ್ಲೆಯ ಪುಟ್ಟರಂಗಪ್ಪ ಇದ್ದರು. ಒಮ್ಮೆ ನಾನು ಚಿತ್ರಮಂದಿರದ ಪರವಾನಗಿ ಪಡೆಯಲು ಹೋಗಿದ್ದೆ. ಇಂದಿರಾಗಾಂಧಿಯವರ ಹತ್ಯೆ ನಡೆದಿತ್ತು. ಆಗ ಅವರು ರಜೆ ಘೋಷಣೆ ಮಾಡಬಹುದು ನಿನಗೆ ತೊಂದರೆಯಾಗುತ್ತದೆ ಎಂದು ಅಂದೇ ಪರವಾನಗಿ ನೀಡಿದರು. ಇಂದೂ ಸಹ ಅವರನ್ನು ನಾನು ನೆನಪಿಸಿಕೊಳ್ಳುತ್ತೇನೆ. ನೀವು ಸಹಾಯ ಮಾಡಿದರೆ ಸಮಾಜ ಸ್ಮರಣೆ ಮಾಡುತ್ತದೆ. ನೀವು ಇದೇ ರೀತಿ ಕೆಲಸ ಮಾಡಬೇಕು” ಎಂದು ಹೇಳಿದರು.

“ಸರ್ಕಾರಿ ನೌಕರರು ಕೇವಲ ಸೇವಕರಲ್ಲ, ಸಮಾಜ ಸೇವೆ ಮಾಡಲು ಸಿಕ್ಕಿರುವ ಅವಕಾಶ ಎಂದು ನೀವು ತಿಳಿಯಬೇಕು. ಮರಕ್ಕೆ ಬೇರಿನ ಮೇಲೆ, ಮಕ್ಕಳಿಗೆ ತಾಯಿಯ ಮೇಲೆ, ಭಕ್ತನಿಗೆ ದೇವರ ಮೇಲೆ ನಂಬಿಕೆ, ಅದೇ ರೀತಿ ನಾವು ನಿಮ್ಮ ಮೇಲೆಯೇ ನಂಬಿಕೆ ಇಟ್ಟಿರುತ್ತೇವೆ. ನಾವು ಏನೇ ತೀರ್ಮಾನ ಮಾಡಬಹುದು ಆದರೆ ಅದನ್ನು ಜಾರಿಗೆ ತರುವವರು, ನಾವು ಮಾಡಿರುವ ತೀರ್ಮಾನದಲ್ಲಿರುವ ಲೋಪಗಳನ್ನು ತಿಳಿಸುವವರು ನೀವು” ಎಂದರು.

“ಕೆಂಗಲ್ ಹನುಮಂತಯ್ಯ ಅವರು ದೂರಾಲೋಚನೆ ಇಟ್ಟುಕೊಂಡು ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಿದ್ದಾರೆ. ನಮ್ಮನ್ನು ಜನರು ಐದು ವರ್ಷಗಳಿಗೊಮ್ಮೆ ಮನೆಗೆ ಕಳಿಸುತ್ತಾರೆ. ಆದರೆ ಸರ್ಕಾರಿ ನೌಕರರು 60 ವರ್ಷದ ತನಕ ಜನಸೇವೆ ಮಾಡಬಹುದು. ಜನರ ಬದುಕಿನಲ್ಲಿ ಬದಲಾವಣೆ ತರುವ ತೀರ್ಮಾನ ಮಾಡಿದ್ದೇನೆ ಎಂದು ನಿಮಗೆ ಅನ್ನಿಸಬೇಕು. ಕಾನೂನಿನ ವಿರುದ್ದ ನೀವು ಕೆಲಸ ಮಾಡಿ ಎಂದು ಹೇಳುವುದಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಜನಪರವಾಗಿ ಆಲೋಚಿಸಿ” ಎಂದರು.

“ಸರ್ಕಾರಿ ನೌಕರರಿಗೆ ಗ್ಯಾರಂಟಿ ಯೋಜನೆಗಳಾದ ಉಚಿತ ವಿದ್ಯುತ್, ಬಸ್ ಯೋಜನೆ ಏಕೆ ನೀಡುತ್ತೀರಿ ಎಂದು ಟೀಕೆ ಮಾಡುತ್ತಿದ್ದರು. ಆದರೂ ನಾವು ಎಲ್ಲರಿಗೂ ಸೌಲಭ್ಯ ನೀಡಿದ್ದೇವೆ. ನಮ್ಮ ಯಶಸ್ಸು ನಮ್ಮ ಕೈಯಲ್ಲಿದೆ. ನಿಮ್ಮ ಬದುಕಿಗೆ, ಯಶಸ್ಸಿಗೆ ನಮ್ಮ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕೆಲಸ ಮಾಡಲಿದೆ” ಎಂದರು.

“ನಿಮ್ಮ ಪರವಾಗಿ ತೀರ್ಮಾನ ಮಾಡಲು ಅಂಜುಮ್ ಪರ್ವೇಜ್ ಅವರ ನೇತೃತವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಷಡಕ್ಷರಿ ಅವರು ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಉತ್ತಮ ತಂಡ ನಿಮ್ಮ ಪರವಾಗಿ ಕೆಲಸ ಮಾಡುತ್ತಿದೆ” ಎಂದು ತಿಳಿಸಿದರು.

BIG NEWS: ರಾಜ್ಯದಲ್ಲಿ ರೋಹಿತ್ ವೆಮುಲಾ ಕಾಯ್ದೆ ಜಾರಿ ಬಗ್ಗೆ ಪರಿಶೀಲಿಸಿ ಕ್ರಮ: ಸಿಎಂ ಸಿದ್ಧರಾಮಯ್ಯ ಘೋಷಣೆ

ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ 10 ಮಂದಿ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ

12/10/2025 1:02 PM1 Min Read

BREAKING : `ನಮ್ಮ ಮೆಟ್ರೋ’ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ : ಸಂಚಾರದಲ್ಲಿ ವ್ಯತ್ಯಯ

12/10/2025 12:42 PM1 Min Read

BREAKING : ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಪ್ರಯತ್ನ ನಡೆದಿದೆ : ಆರ್.ಅಶೋಕ್ ಆರೋಪ

12/10/2025 12:17 PM1 Min Read
Recent News

BREAKING : ರಾಜ್ಯದ 10 ಮಂದಿ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ

12/10/2025 1:02 PM

BREAKING: ಭಾರತದಲ್ಲಿ ನಡೆದ 2ನೇ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರನ್ನು ಸೇರಿಸಿದ ಅಫ್ಘಾನಿಸ್ತಾನದ ವಿದೇಶಾಂಗ ಸಚಿವೆ

12/10/2025 12:58 PM

ನಾಳೆ ಗಾಜಾ ಶಾಂತಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಗೆ ಟ್ರಂಪ್ ಆಹ್ವಾನ | Gaza peace summit

12/10/2025 12:44 PM

BREAKING : `ನಮ್ಮ ಮೆಟ್ರೋ’ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ : ಸಂಚಾರದಲ್ಲಿ ವ್ಯತ್ಯಯ

12/10/2025 12:42 PM
State News
KARNATAKA

BREAKING : ರಾಜ್ಯದ 10 ಮಂದಿ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ

By kannadanewsnow5712/10/2025 1:02 PM KARNATAKA 1 Min Read

ಬೆಂಗಳೂರು : ಕರ್ನಾಟಕದ 10 ಮಂದಿ ಹಿರಿಯ ಸಾಹಿತಿಗಳಿಗೆ 2024 ರ ಸಾಹಿತ್ಯಶ್ರೀ ಪ್ರಶ್ತಿಯನ್ನು ಘೋಷಣೆ ಮಾಡಲಾಗಿದೆ. ಕನ್ನಡ ಸಾಹಿತ್ಯ…

BREAKING : `ನಮ್ಮ ಮೆಟ್ರೋ’ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ : ಸಂಚಾರದಲ್ಲಿ ವ್ಯತ್ಯಯ

12/10/2025 12:42 PM

BREAKING : ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಪ್ರಯತ್ನ ನಡೆದಿದೆ : ಆರ್.ಅಶೋಕ್ ಆರೋಪ

12/10/2025 12:17 PM

ALERT : ಆನ್ ಲೈನ್ ನಲ್ಲಿ ಕೆಲಸ ಹುಡುಕುವವರೇ ಎಚ್ಚರ : ನಕಲಿ `ಗೂಗಲ್ ಟಾಸ್ಕ್’ ನಲ್ಲಿ 7.8 ಲಕ್ಷ ಕಳೆದುಕೊಂಡ ವ್ಯಕ್ತಿ.!

12/10/2025 12:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.