Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ
KARNATAKA

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು :“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು. ಇದು ನಾನು ನಿಮಗೆ ನೀಡುತ್ತಿರುವ ಸಲಹೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ನಾನು ಬಂಗಾರಪ್ಪನವರ ಸರ್ಕಾರದಲ್ಲಿ ಸಚಿವನಾಗಿದ್ದಾಗಿನಿಂದ. ಅಂದರೆ 40 ವರ್ಷಗಳಿಂದ ಈ ಸಂಘವನ್ನು ಗಮನಿಸಿಕೊಂಡು ಬಂದಿದ್ದೇನೆ. ನಿಮ್ಮ ಒಗ್ಗಟ್ಟು ಬಿಡಬೇಡಿ. ಲಿಂಗಾಯತರ, ಹಿಂದುಳಿದ ವರ್ಗಗಳ, ಒಕ್ಕಲಿಗರ, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಸಂಘ ಎಂದು ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ. ಈ ಆಲೋಚನೆಯನ್ನು ನಿಮ್ಮ ತಲೆಯಿಂದ ತೆಗೆದುಹಾಕಿ” ಎಂದು ಕಿವಿಮಾತು ಹೇಳಿದರು.

ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು

“ಸಂಘಟನೆ ಬಹಳ ಮುಖ್ಯ. ಶಿಕ್ಷಣ ಇಲಾಖೆಯಲ್ಲಿ 50%ಗೂ ಹೆಚ್ಚು ಜನ ಇದ್ದೀರಿ. ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು. ನಾನಾಗಲಿ, ಸಿದ್ದರಾಮಯ್ಯ ಅವರಾಗಲಿ, ಯಾವುದೇ ವ್ಯಕ್ತಿಯಾಗಲಿ ಮಹಿಳೆಯರ ಕೊಡುಗೆ ಇಲ್ಲದೆ ಯಾವುದೇ ಪುರುಷ ಯಶಸ್ವಿಯಾಗಲಾರ. ನಾವೆಲ್ಲರೂ ರಾಜಕಾರಣ ಮಾಡಿಕೊಂಡು ಮನೆಗೆ ಸಮಯ ನೀಡುವುದಿಲ್ಲ. ನಮ್ಮ ಮನೆ ನಡೆಸಿ ನಿಭಾಯಿಸುತ್ತಿರುವವರು ಮಹಿಳೆಯರು. ನನಗೂ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ನನಗಿಂತ ಹೆಚ್ಚು ದಕ್ಷತೆಯಿಂದ ಕೆಲಸ ಮಾಡುತ್ತಾರೆ. ಅವರು ಈಗ ಮಾಡಿರುವ ಸಾಧನೆ ನಾನು ಆ ವಯಸ್ಸಿನಲ್ಲಿ ಮಾಡಿರಲಿಲ್ಲ” ಎಂದು ಬಣ್ಣಿಸಿದರು.

“ಮಹಿಳೆಯರು ಪುರುಷರಿಗಿಂತ ಹೆಚ್ಚು ಸಮರ್ಥರಿದ್ದೀರಿ. ಡಿಜಿಯಾಗಿ, ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ಆಡಳಿತದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ನೀವು ಯಾರಿಗೂ ಕಮ್ಮಿ ಇಲ್ಲ ಎಂದು ಸಾಬೀತುಪಡಿಸಿದ್ದೀರಿ. ನೀವುಗಳು ದೂರಿನ ಪೆಟ್ಟಿಗೆಯಂತೆ ಆಗಬಾರದು. ನಿಮ್ಮ ಹಕ್ಕನ್ನು ಚಲಾಯಿಸಬೇಕು. ಹೆಣ್ಣು ಕುಟುಂಬದ ಕಣ್ಣು ಎಂದು ನಾವು ನಂಬಿದ್ದೇವೆ. ನಾವು ಎಲ್ಲೇ ಹೋದರು, ಗ್ರಾಮ ದೇವತೆ ಯಾವುದು ಎಂದು ಕೇಳುತ್ತೇವೆ. ಬೆಂಗಳೂರಿನ ಗ್ರಾಮ ದೇವತೆ ಅಣ್ಣಮ್ಮ. ಭೂಮಿಯನ್ನು ಭೂತಾಯಿ ಎಂದು ಕರೆಯುತ್ತೇವೆ. ನಾಡ ದೇವತೆ ಚಾಮುಂಡೇಶ್ವರಿ ಎಂದು ಪರಿಗಣಿಸಿದ್ದೇವೆ. ಹೀಗೆ ಮಹಿಳೆಯರಿಗೆ ಉನ್ನತ ಸ್ಥಾನ ನೀಡಲಾಗಿದೆ” ಎಂದು ತಿಳಿಸಿದರು.

ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಿ

“ನೀವು ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್. ಪಂಚಾಯ್ತಿಯಲ್ಲಿ ನಾವು 50% ಮೀಸಲಾತಿ ನೀಡಿದ್ದು, ಸಂಸತ್ ಚುನಾವಣೆಯಲ್ಲಿ 33% ಜಾರಿಯಾಗುವ ಹಂತದಲ್ಲಿದೆ. ಇದರಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 70 ಕ್ಷೇತ್ರಗಳಲ್ಲಿ ಮಹಿಳಾ ಶಾಸಕಿಯರು ಆಯ್ಕೆಯಾಗಲಿದ್ದಾರೆ. ನಾಯಕತ್ವ ಗುಣ ಇರುವ ಸರ್ಕಾರಿ ಮಹಿಳಾ ನೌಕರರಿಗೆ ನಾವು ಟಿಕೆಟ್ ನೀಡಿ ಗೆಲ್ಲಿಸಿದ್ದೇವೆ. ಹಲವರು ಶಾಸಕಿಯರಾಗಿದ್ದಾರೆ. ಮೀಸಲಾತಿ ಬಂದ ನಂತರ ಯಾರು ನಾಯಕಿಯರಾಗುತ್ತೀರೋ ಗೊತ್ತಿಲ್ಲ” ಎಂದು ಹೇಳಿದರು.

ನಿಮ್ಮ ಬೇಡಿಕೆಯಂತೆ ಸಂಘಕ್ಕೆ ಅಗತ್ಯವಾದ ಭೂಮಿ ನೀಡಲಾಗುವುದು

“ಮಹಿಳಾ ನೌಕಕರ ಸಂಘಕ್ಕೆ ಜಾಗದ ಮನವಿ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಎಂ ಹಾಗೂ ನನ್ನ ಬಳಿ ಪ್ರಸ್ತಾಪ ಮಾಡಿದರು. ಸಿಎಂ ಅವರು ಜಾಗ ನೀಡಿ ಎಂದು ಮುಕ್ತವಾಗಿ ಹೇಳಿದ್ದಾರೆ. ನಿಮಗೆ ಅಗತ್ಯವಾಗಿರುವ ಜಾಗವನ್ನು ನೀಡುತ್ತೇವೆ. ಹೆಣ್ಣು ಮಗು ಕಲಿತರೆ ಒಂದು ಕುಟುಂಬ ಹಾಗೂ ಸಮಾಜವೇ ಕಲಿತಂತೆ ಎಂದು ನೆಹರೂ ಅವರು ನಮಗೆ ಸಂದೇಶ ನೀಡಿದ್ದಾರೆ. ಮಹಿಳೆಯರು ಸಹಕಾರ ನೀಡದಿದ್ದರೆ ನಮಗೆ ರಾಜಕಾರಣ ಮಾಡಲು ಸಾಧ್ಯವಾಗುವುದಿಲ್ಲ” ಎಂದು ತಿಳಿಸಿದರು.

“ಮುಂದಿನ ಒಂದು ವರ್ಷದಲ್ಲಿ ಅರಮನೆ ಮೈದಾನದಲ್ಲಿ ದೊಡ್ಡ ಮಟ್ಟದ ಮಹಿಳಾ ಸಮಾವೇಶವನ್ನು ಮಾಡಲು ನೀವು ರೂಪುರೇಷೆ ಸಿದ್ಧಮಾಡಿಕೊಳ್ಳಿ. ಅದಕ್ಕೆ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುವುದು. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತಂದು ಮಹಿಳೆಯರಿಗೆ ಶಕ್ತಿ ತುಂಬಬೇಕು ಎಂದು ಹೆಚ್.ಕೆ ಪಾಟೀಲ್ ಅವರು ನನ್ನ ಬಳಿ ಹೇಳಿದ್ದಾರೆ” ಎಂದು ತಿಳಿಸಿದರು.

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ

“ನಾನು ಹಾಗೂ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಮೊದಲು ಜಾರಿಗೆ ತಂದಿದ್ದೆ, ಮಹಿಳೆಯರಿಗಾಗಿ ಘೋಷಣೆಯಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆಗಳನ್ನು ಸರ್ಕಾರಿ ನೌಕರರಾದರೂ ನಿಮಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿದೆಯಲ್ಲವೇ? ಸರ್ಕಾರಿ ಮಹಿಳಾ ನೌಕರರು ಶಕ್ತಿ ಯೋಜನೆ ಮೂಲಕ ಉಚಿತ ಪ್ರಯಾಣ ಮಾಡಬಹುದಲ್ಲವೇ? ಬಡ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ ಅಲ್ಲವೇ? ನಮ್ಮ ಯೋಜನೆ ನೋಡಿ ಇಡೀ ದೇಶದಲ್ಲಿ ಈ ಯೋಜನೆ ಜಾರಿ ಮಾಡುತ್ತಿದ್ದಾರಲ್ಲವೇ? ಹೀಗಾಗಿ ಮಹಿಳಾ ಸಬಲೀಕರಣ ವಿಚಾರದಲ್ಲಿ ನಾವು ಭದ್ರ ಅಡಿಪಾಯ ಹಾಕಿದ್ದೇವೆ. ಮಹಿಳೆಯರ ಪರವಾಗಿ ಚಿಂತನೆ ಮಾಡಿರುವ ಸರ್ಕಾರ ಇದ್ದರೆ ಅದು ನಮ್ಮ ಸರ್ಕಾರ ಮಾತ್ರ. ಮಹಿಳೆಯರು ಉಪಕಾರ ಸ್ಮರಣೆ ಇಟ್ಟುಕೊಂಡಿರುತ್ತಾರೆ. ತಾಯಿ ಹೃದಯದವರು, ಸಹಾಯ ಮಾಡಿದವರನ್ನು ಸ್ಮರಿಸುತ್ತೀರಿ ಎಂದು ನಾವು ಮಹಿಳೆಯರಿಗಾಗಿ ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

2 Mins Read

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

1 Min Read

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

2 Mins Read
Recent News

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

ಬ್ರಿಕ್ಸ್‌ ಶೃಂಗಸಭೆಗೆ ದೆಹಲಿ ಸಜ್ಜು: ಇರಾನ್‌ನ ಅರಾಗ್ಚಿ ಮತ್ತು ರಷ್ಯಾದ ಲಾವ್ರೊವ್ ಭಾರತಕ್ಕೆ ಆಗಮನ!

State News
KARNATAKA

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 2026ನೇ ಸಾಲಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳ…

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

ಸಾಗರ ಮಾರ್ಕೆಟ್ ರಸ್ತೆ ಅಗಲೀಕರಣ ಅನಿವಾರ್ಯ: ಜಾಗ ಬಿಟ್ಟುಕೊಡಲು ನಿವಾಸಿಗಳಿಗೆ ‘AC ವಿರೇಶ ಕುಮಾರ್’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.