ಬೆಂಗಳೂರು: ನಗರದ ಕುಂಬಾರಪೇಟೆ ಹರಿ ಮಾರ್ಕೆಟಿಂಗ್ ಒಳಗೆ ಡಬ್ಬಲ್ ಮರ್ಡರ್ ಮಾಡಿರೋ ಘಟನೆ ನಡೆದಿದೆ.
ಬೆಂಗಳೂರಿನ ಹಲಸೂರುಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಹರಿ ಮಾರ್ಕೆಟಿಂಗ್ ಒಳಗಡೆ ಸುರೇಶ್ (55) ಹಾಗೂ ಮಹೇಂದ್ರ (68) ಎಂಬ ಇಬ್ಬರನ್ನು ಹತ್ಯೆಗೈಯ್ಯಲಾಗಿದೆ.
ಆಸ್ತಿಯ ವಿಚಾರಕ್ಕಾಗಿ ಈ ಮರ್ಡರ್ ನಡೆಸಿದೆ ಎನ್ನಲಾಗುತ್ತಿದೆ. ಸುರೇಶ್, ಮಹೇಂದ್ರ ಅವರ ಸಂಬಂಧಿ ಭದ್ರ ಎಂಬಾತನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದಾನೆ ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೇ ಹತ್ಯೆಯ ಬಳಿಕ ಪೊಲೀಸರಿಗೆ ಶರಣಾಗಿರೋದಾಗಿ ತಿಳಿದು ಬಂದಿದೆ.
ಸದ್ಯ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರೋ ಹಲಸೂರು ಗೇಟ್ ಠಾಣೆಯ ಪೊಲೀಸರು, ಡಿಸಿಪಿ ಶೇಖರ್, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಬಂಧಿತ ಆರೋಪಿ ಭದ್ರ ಎಂಬಾತನನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಡಿಸಿಪಿ ಶೇಖರ್ ಅವರು, ಡಬ್ಬಲ್ ಮರ್ಡರ್ ಮಾಡಿರೋ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಲಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಸದ್ಯ ಓರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
BREAKING : ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು ಘೋಷಿಸಿದ ಚುನಾವಣಾ ಆಯೋಗ
BREAKING : ಇಂಗ್ಲೆಂಡ್ ವಿರುದ್ಧದ ‘3ನೇ ಮತ್ತು 4ನೇ ಟೆಸ್ಟ್’ನಿಂದ ‘ವಿರಾಟ್ ಕೊಹ್ಲಿ’ ಹೊರಗಿಳಿಯುವ ಸಾಧ್ಯತೆ : ವರದಿ