ಬಳ್ಳಾರಿ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಅರುಣ್ಕುಮಾರ್ ತಿಳಿಸಿದ್ದಾರೆ.
ಯೋಜನೆಗಳು: ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಇ.ವಿ (ದ್ವಿ-ಚಕ್ರ, ತ್ರಿ-ಚಕ್ರ ಮತ್ತು ಸರಕು ವಾಹನ) ಖರೀದಿಸಲು ಸಹಾಯಧನ ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ (ಮಹಿಳಾ ಸ್ವಸಹಾಯ ಗುಂಪುಗಳಿಗೆ) ಅನುಷ್ಟಾನ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಅರ್ಜಿಯನ್ನು ವೆಬ್ಸೈಟ್ https://sevasindhu.karnataka.gov.in ನಲ್ಲಿ ಮತ್ತು ಸೇವಾಸಿಂಧು, ಗ್ರಾಮಒನ್, ಕರ್ನಾಟಕ ಒನ್ನಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಬೆಳಗಲ್ಲು ಕ್ರಾಸ್ನ ಆದರ್ಶ ಕಾಲೋನಿಯ ಸೆಂಟ್ ಜೋಸೆಫ್ ಬಾಲಕ ಶಾಲೆ ಎದುರುಗಡೆಯ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ