Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಠಾಣ್ ಕೋಟ್ ನಲ್ಲಿ ಭಾರತದ ಆಕಾಶ್ ಮಿಸೈಲ್ ನಿಂದ ಪಾಕಿಸ್ತಾನದ JF-17 ಜೆಟ್ ವಿಮಾನ ಧ್ವಂಸ

09/05/2025 11:14 AM

ಭಾರತ-ಪಾಕ್ ಯುದ್ಧ: ಅಂತರರಾಷ್ಟ್ರೀಯ ಪಾಲುದಾರರಲ್ಲಿ ‘ಹೆಚ್ಚಿನ ಸಾಲ’ ಕೇಳಿದ ಪಾಕಿಸ್ತಾನ | India-Pak war

09/05/2025 11:09 AM

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ಟ್ಯಾನ್ ಪೋರ್ಡ್ ವಿಶ್ವ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಧಾನ ಪಡೆದ ದಾವಣಗೆರೆ ವಿವಿಯ ಸಂಶೋಧನಾರ್ಥಿ ಡಾ.ಆರ್.ಎಸ್ ವರುಣ್ ಕುಮಾರ್
KARNATAKA

ಸ್ಟ್ಯಾನ್ ಪೋರ್ಡ್ ವಿಶ್ವ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಧಾನ ಪಡೆದ ದಾವಣಗೆರೆ ವಿವಿಯ ಸಂಶೋಧನಾರ್ಥಿ ಡಾ.ಆರ್.ಎಸ್ ವರುಣ್ ಕುಮಾರ್

By kannadanewsnow0919/09/2024 2:50 PM

ದಾವಣಗೆರೆ: ಸ್ಟ್ಯಾನ್ ಪೋರ್ಟ್ ವಿಶ್ವ ವಿಜ್ಞಾನಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ದಾವಣಗೆರೆ ವಿಶ್ವ ವಿದ್ಯಾಲಯದಲ್ಲಿ ಗಣಿತ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿಸಿ ಪ್ರಸನ್ನಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾರ್ಥಿಯಾಗಿರುವ ಡಾ.ಆರ್.ಎಸ್ ವರುಣ್ ಕುಮಾರ್ ಅವರು ಸತತ 2ನೇ ಬಾರಿಗೆ ಸ್ಥಾನ ಪಡೆದಿದ್ದಾರೆ.

ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೇರಿಕಾದ ಪ್ರತಿಷ್ಠಿತ ಸ್ಟಾನ್ ಫೋರ್ಡ್ ವಿಶ್ವವಿದ್ಯಾನಿಲಯವು ಹೊರತಂದಿರುವ ವಿಶ್ವದ ಟಾಪ್ ಶೇ.2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ.ಸಿ.ಪ್ರಸನ್ನಕುಮಾರ್ (ಕ್ಯಾಲೆಂಡರ್ ವರ್ಷ 2023- 10866) ಸ್ಥಾನ ಪಡೆದಿದ್ದು, ಇದರ ಜತೆಗೆ ಅವರ ಮಾರ್ಗದರ್ಶನದಲ್ಲಿನ ನಾಲ್ಕು ಸಂಶೋಧನಾರ್ಥಿಗಳಾದ ಡಾ. ಆರ್ .ಜೆ.ಪುನೀತ್‌ ಗೌಡ (36192), ಡಾ.ಆರ್‌.ನವೀನ್ ಕುಮಾರ್ (52478), ಡಾ. ಜೆ.ಕೆ.ಮಧುಕೇಶ್ (151615) ಮತ್ತು ಡಾ. ಆರ್.ಎಸ್‌.ವರುಣ್ ಕುಮಾರ್ (197048) ಇವರುಗಳು ಕೂಡ ಸೇರ್ಪಡೆಯಾಗಿದ್ದಾರೆ.

ಸ್ಟ್ಯಾನ್ ಫೋರ್ಡ್ ವಿವಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ ಹೆಚ್-ಇಂಡೆಕ್ಸ್, ಐಟೆನ್ ಇಂಡೆಕ್ಸ್ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಈ ಮಾನದಂಡಗಳ ಪ್ರಕಾರ ವಿಜ್ಞಾನಿಗಳನ್ನು 22 ವೈಜ್ಞಾನಿಕ ಕ್ಷೇತ್ರಗಳು ಮತ್ತು 174 ಉಪ-ಕ್ಷೇತ್ರಗಳಾಗಿ ವರ್ಗೀಕರಿಸಲಾಗಿದೆ.

ಇದರಲ್ಲಿ ದಾವಣಗೆರೆ ವಿವಿಯ ಗಣಿತಶಾಸ್ತ್ರ ವಿಭಾಗದ ಪ್ರೊ. ಬಿ.ಸಿ.ಪ್ರಸನ್ನಕುಮಾರ್ ರವರು ಸತತ ನಾಲ್ಕನೇ ಬಾರಿಗೆ ಸ್ಥಾನ ಪಡೆದಿದ್ದು, ಇದರ ಜತೆಗೆ ವೃತ್ತಿ ಜೀವನದ ಸಾಧನೆಯಲ್ಲಿ ಶ್ರೇಯಾಂಕವನ್ನು ಪಡೆದಿರುವುದು ಗಮನರ್ಹವಾಗಿದೆ. ಪ್ರೊ. ಬಿ.ಸಿ.ಪ್ರಸನ್ನ ಕುಮಾರ್ ಮಾತ್ರವಲ್ಲದೆ ಅವರ ಮಾರ್ಗದರ್ಶದಲ್ಲಿ ಸಂಶೋಧನೆಯನ್ನು ನಡೆಸುತ್ತಿರುವ ಡಾ. ಆರ್.ಜೆ, ಪುನೀತ್ ಗೌಡ, ಡಾ. ಆರ್. ನವೀನ್ ಕುಮಾರ್, ಡಾ. ಜೆ.ಕೆ. ಮಧುಕೇಶ್ ಮತ್ತು ಡಾ. ಆರ್.ಎಸ್. ವರುಣ್ ಕುಮಾರ್ ಇವರುಗಳು ಗಣಿತಶಾಸ್ತ್ರದ ಶಾಖ ಮತ್ತು ಸಮೂಹ ವರ್ಗಾವಣೆ, ದ್ರವಚನ ಶಾಸ್ತ್ರ ವಿಷಯಗಳ ಸಂಶೋಧನೆಯಲ್ಲಿ ತೊಡಗಿದ್ದು, ಮಾರ್ಗದರ್ಶರೊಡನೆಯೇ ವಿಜ್ಞಾನಿಗಳ ಪಟ್ಟಿಗೆ ಸೇರಿರುವುದು ಸ್ಪೂರ್ತಿದಾಯಕವಾಗಿದೆ.

ಅಮೇರಿಕಾದ ಪ್ರತಿಷ್ಠಿತ ಸ್ಟಾನ್ ಫೋರ್ಡ್ ವಿಶ್ವವಿಜ್ಞಾನಿಗಳ ಪಟ್ಟಿಯಲ್ಲಿರುವ 04 ವಿಜ್ಞಾನಿಗಳು ಪ್ರಸುತ್ತ ರಾಜ್ಯದ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ದಾವಣಗೆರೆಯ ಬಾಪೂಜಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ಡಾ. ಆರ್.ಜೆ.ಮುನೀತ್ ಗೌಡ, ಬೆಂಗಳೂರಿನ ಅಮೃತ ವಿಶ್ವವಿದ್ಯಾಪೀಠಂನ ಗಣಿತಶಾಸ್ತ್ರ ವಿಭಾಗದಲ್ಲಿ ಡಾ. ಆರ್. ನವೀನ್ ಕುಮಾರ್, ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಡಾ. ಜೆ.ಕೆ. ಮಧುಕೇಶ್ ಹಾಗೂ ಮಲೇಷಿಯಾದ ಸನ್-ವೇ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಡಾ. ಆರ್.ಎಸ್. ವರುಣ್ ಕುಮಾರ್ ಇವರುಗಳು ಸಹಾಯಕ ಪ್ರಾಧ್ಯಾಪಕರುಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ಹಿಂದೆಯೂ ಕೂಡ 2020, 2021 ಮತ್ತು  2022ನೇ ಸಾಲಿನಲ್ಲಿ ಬಿಡುಗಡೆಯಾದ ಪಟ್ಟಿಯಲ್ಲಿ ಡಾ.ಆರ್.ಜೆ. ಪುನೀತ್ ಗೌಡ ಹಾಗೂ ಡಾ. ಆರ್.ನವೀನ್ ಕುಮಾರ್ ರವರುಗಳು ಸ್ಥಾನ ಪಡೆದಿದ್ದರು ಹಾಗೂ 2021 ಮತ್ತು  2022ನೇ ಸಾಲಿನಲ್ಲಿ ಬಿಡುಗಡೆಯಾದ ಪಟ್ಟಿಯಲ್ಲಿ ಡಾ. ಜೆ.ಕೆ. ಮಧುಕೇಶ್ ಮತ್ತು ಡಾ. ಆರ್.ಎಸ್. ವರುಣ್ ಕುಮಾರ್ ಸ್ಥಾನ ಪಡೆದಿದ್ದರು.

ವಿಜ್ಞಾನಿಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಡಾ.ಬಿ.ಸಿ.ಪ್ರಸನ್ನಕುಮಾರ್, ಡಾ.ಆರ್.ಜೆ.ಪುನೀತ್ ಗೌಡ, ಡಾ. ಆರ್. ನವೀನ್ ಕುಮಾರ್, ಡಾ.ಜೆ.ಕೆ.ಮಧುಕೇಶ್ ಮತ್ತು ಡಾ.ಆರ್.ಎಸ್. ವರುಣ್ ಕುಮಾರ್ ಇವರುಗಳಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ ಬಿ.ಡಿ. ಕುಂಬಾರ, ದಾವಣಗೆರೆ ಬಿಐಇಟಿ ನಿರ್ದೇಶಕರಾದ ಪ್ರೊವೈ. ವೃಷಭೇಂದ್ರಪ್ಪ ಮತ್ತು ಪ್ರಾಂಶುಪಾಲರಾದ ಡಾ.ಎಚ್.ಬಿ. ಅರವಿಂದ ಹಾಗೂ ಅಮೃತ ವಿಶ್ವವಿದ್ಯಾಪೀಠಂನ ಕುಲಪತಿಗಳಾದ ಮಾತಾ ಅಮೃತಾನಂದಮಯಿ ದೇವಿ ಮತ್ತು ಆಡಳಿತ ವರ್ಗ ಅಭಿನಂದಿಸಿದ್ದಾರೆ.

BREAKING: ಬೆಂಗಳೂರಿನ MS ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅಪಘಡ: ನರ್ಸ್ ಸಮಯ ಪ್ರಜ್ಞೆಯಿಂದ 7 ರೋಗಿಗಳು ಪ್ರಾಣಾಪಾಯದಿಂದ ಪಾರು

ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs

‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್

Share. Facebook Twitter LinkedIn WhatsApp Email

Related Posts

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM4 Mins Read

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM1 Min Read

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM1 Min Read
Recent News

BREAKING : ಪಠಾಣ್ ಕೋಟ್ ನಲ್ಲಿ ಭಾರತದ ಆಕಾಶ್ ಮಿಸೈಲ್ ನಿಂದ ಪಾಕಿಸ್ತಾನದ JF-17 ಜೆಟ್ ವಿಮಾನ ಧ್ವಂಸ

09/05/2025 11:14 AM

ಭಾರತ-ಪಾಕ್ ಯುದ್ಧ: ಅಂತರರಾಷ್ಟ್ರೀಯ ಪಾಲುದಾರರಲ್ಲಿ ‘ಹೆಚ್ಚಿನ ಸಾಲ’ ಕೇಳಿದ ಪಾಕಿಸ್ತಾನ | India-Pak war

09/05/2025 11:09 AM

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM
State News
KARNATAKA

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

By kannadanewsnow0509/05/2025 11:00 AM KARNATAKA 4 Mins Read

ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ…

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM

BREAKING : ಯುದ್ಧ ಯಾರಿಗೂ ಬೇಡ, ಯುದ್ಧ ಆಗಬೇಕು ಅಂತ ಬಯಸೋದು ಸರಿಯಲ್ಲ : ಸಚಿವ ದಿನೇಶ್ ಗುಂಡೂರಾವ್

09/05/2025 10:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.