Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗೊಂದಲದ ಬರಹ ಸಾಕು, ಸ್ಪಷ್ಟವಾಗಿ ಬರೆಯಿರಿ’ : ಕೋರ್ಟ್‌ನಿಂದ ವೈದ್ಯರಿಗೆ ಖಡಕ್ ಆದೇಶ

03/10/2025 12:01 PM

ಜಪಾನಿನ ಜನರು 100 ವರ್ಷ ಬದುಕಲು ಇದೇ ಕಾರಣ.! ಆಹಾರದ ರಹಸ್ಯ

03/10/2025 11:49 AM

ರಷ್ಯಾದ ತೈಲಕ್ಕೆ ಮತ್ತೊಂದು ಹೊಡೆತ? ಯುರೋಪಿಗೆ ಕಚ್ಚಾ ತೈಲವನ್ನು ಪೂರೈಸಲು US ಪಾಲುದಾರಿಕೆಯನ್ನು ಬಯಸಿದ ಉಕ್ರೇನ್

03/10/2025 11:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಿನ 5 ಹೊಸ ನಗರ ಪಾಲಿಕೆ ವಾರ್ಡ್ ಗಳ ಮರು ವಿಂಗಡಣೆ ಕರಡು ಅಧಿಸೂಚನೆ ಪ್ರಕಟ
KARNATAKA

BREAKING: ಬೆಂಗಳೂರಿನ 5 ಹೊಸ ನಗರ ಪಾಲಿಕೆ ವಾರ್ಡ್ ಗಳ ಮರು ವಿಂಗಡಣೆ ಕರಡು ಅಧಿಸೂಚನೆ ಪ್ರಕಟ

By kannadanewsnow0930/09/2025 5:01 PM

ಬೆಂಗಳೂರು: ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳನ್ನು ಮರು ವಿಂಗಡಣೆ ಮಾಡಿ ಕರಡು ವಾಡ್೯ ವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆಯನ್ನು ಇಂದು ಹೊರಡಿಸಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯಪತ್ರ ಹೊರಡಿಸಲಾಗಿದ್ದು, ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 183 ಬಿಬಿಎಸ್ 2025, ದಿನಾಂಕ:02-09-2025ರಲ್ಲಿ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ 1) ಬೆಂಗಳೂರು ಕೇಂದ್ರ ನಗರ ಪಾಲಿಕೆ, 2) ಬೆಂಗಳೂರು ಪೂರ್ವ ನಗರ ಪಾಲಿಕೆ, 3) ಬೆಂಗಳೂರು ಪಶ್ಚಿಮ ನಗರ ಪಾಲಿಕೆ, 4) ಬೆಂಗಳೂರು ಉತ್ತರ ನಗರ ಪಾಲಿಕೆ, 5) ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳಿಗೆ ಸಂಬಂಧಿಸಿದಂತೆ, ಸದರಿ ಕಾಯ್ದೆಯ ಪ್ರಕರಣ 29ರ ಉಪ ಪ್ರಕರಣ (1) ಮತ್ತು (3) ಗಳನ್ವಯ ವಾರ್ಡ್‌ಗಳ ಪುನರ್ ವಿಂಗಡಣೆಗಾಗಿ 03 ತಿಂಗಳ ಅವಧಿಗೆ ಸೀಮಿತವಾಗಿ, ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ವಾರ್ಡ್‌ಗಳ ಪುನರ್ ವಿಂಗಡಣಾ ಆಯೋಗವನ್ನು ರಚಿಸಲಾಗಿತ್ತು.

ಹಾಗೂ ಸರ್ಕಾರದ ಆದೇಶ ಸಂಖ್ಯೆ: ನಅಇ 189 ಬಿಬಿಎಸ್ 2025, ದಿನಾಂಕ: 02-09-2025ರಲ್ಲಿ ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಬೆಂಗಳೂರು ನಗರ ಪಾಲಿಕೆಗಳಿಗೆ ಸಂಬಂಧಿಸಿದಂತೆ ವಾರ್ಡುಗಳ ಪುನರ್‌ವಿಂಗಡಣೆಯನ್ನು ಮಾಡಲು ಮಾರ್ಗಸೂಚಿಗಳನ್ನು ರಚಿಸಲಾಗಿತ್ತು. ಅದರಂತೆ, ವಾರ್ಡ್‌ಗಳ ಪುನರ್ ವಿಂಗಡಣಾ ಆಯೋಗವು ದಿನಾಂಕ:30-09-2025ರಂದು ಸರ್ಕಾರಕ್ಕೆ ವಾರ್ಡ್‌ಗಳ ಪುನರ್ ವಿಂಗಡಣಾ ವರದಿಯನ್ನು ಸಲ್ಲಿಸಿರುತ್ತದೆ.

ಸರ್ಕಾರವು, ವಾರ್ಡ್‌ಗಳ ಪುನರ್ ವಿಂಗಡಣಾ ಆಯೋಗದ ವರದಿಯನ್ನು ಒಪ್ಪಿ, ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಪ್ರಕರಣ 29ರಲ್ಲಿ ಪದತ್ತವಾದ ಅಧಿಕಾರದನ್ವಯ, 2011ರ ಜನಗಣತಿಯ ಆಧಾರದ ಮೇರೆಗೆ, ಗ್ರೇಟರ್‌ ಬೆಂಗಳೂರು ಪ್ರದೇಶದ ಬೆಂಗಳೂರು ಪೂರ್ವ ನಗರ ಪಾಲಿಕೆಗೆ ಸಂಬಂಧಿಸಿದಂತೆ ಕರಡು ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಈ ಕೆಳಕಂಡಂತೆ ನಿಗದಿಪಡಿಸಿ, ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಪಕಟಿಸಿರುತ್ತದೆ ಎಂದಿದೆ.

ಈ ಬಗ್ಗೆ ಯಾವುದೇ ಆಕ್ಷೇಪಣೆ / ಸಲಹೆಗಳನ್ನು ಸಲ್ಲಿಸಲು ಇಚ್ಚಿಸುವ ಬಶದೊತರಾಗಬಹುದಾದ ಎಲ್ಲಾ ವ್ಯಕ್ತಿಗಳು ತಮ್ಮ ಪೂರ್ಣ ವಿಳಾಸ ಸಹಿಯೊಂದಿಗೆ ಸೂಕ್ತ ಕಾರಣ-ವಿವರಗಳೂಂದಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ / ಸಲಹೆ ಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ : 436, 4ನೇ ಮಹಡಿ, ವಿಕಾಸ ಸೌಧ, ಡಾ: ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001 ಇವರಿಗೆ ದಿನಾಂಕ: 15-10-2025 ರಂದು ಅಪರಾಹ್ನ 5-00 ಗಂಟೆಯ ಒಳಗಾಗಿ ಸಲ್ಲಿಸಲು ಈ ಮೂಲಕ ತಿಳಿಯಪಡಿಸಿದೆ.

ನಿಗದಿತ ಅವಧಿಯಲ್ಲಿ ಸ್ವೀಕೃತಗೊಂಡ ಆಕ್ಷೇಪಣೆ / ಸಲಹೆಗಳನ್ನು ಪರಿಶೀಲಿಸಿ ನಗರಪಾಲಿಕೆಗಳ ವಾಡ್೯ ವಾರು ಕ್ಷೇತ್ರ ಪುನರ್ ವಿಂಗಡನೆಯನ್ನು ಅಂತಿಮಗೊಳಿಸಿ ಕ್ರಮವಹಿಸಲಾಗುವುದೆಂದು ಅಧಿಸೂಚನೆಯಲ್ಲಿ ತಿಳಿಯಪಡಿಸಿದೆ.

‘ವಿಆರ್‌ಕೆ ಹೆರಿಟೇಜ್’ನಿಂದ ಭಾರತದ ನಾನಾ ಭಾಗದ ಸಾಂಪ್ರದಾಯಿಕ ಸೀರೆಗಳ ಪ್ರದರ್ಶನ- ಮಾರಾಟ

BREAKING: ರಾಜ್ಯ ಸರ್ಕಾರದಿಂದ ‘ಅತಿಥಿ ಉಪನ್ಯಾಸಕ’ರನ್ನು ತಾತ್ಕಾಲಿಕವಾಗಿ ಆಯ್ಕೆಗೆ ಗ್ರೀನ್ ಸಿಗ್ನಲ್: ಈ ಕಂಡೀಷನ್ ಅಪ್ಲೈ

Share. Facebook Twitter LinkedIn WhatsApp Email

Related Posts

BIG NEWS : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ : ಪಿಸಿಸಿಎಫ್ ತಂಡದ ತನಿಖೆಗೆ ಸಚಿವ ಖಂಡ್ರೆ ಆದೇಶ

03/10/2025 11:32 AM1 Min Read

BREAKING : ದೇವರಗುಡ್ಡದಲ್ಲಿ ಬಡಿಗೆ ಬಡಿದಾಟದ ಜಾತ್ರೆ : ಇಬ್ಬರು ಸಾವು, 15 ಕ್ಕೂ ಹೆಚ್ಚು ಜನರು ಗಂಭೀರ.!

03/10/2025 11:27 AM1 Min Read

BIG NEWS : ವಿಜಯನಗರ : ಇನ್ಸೂರೆನ್ಸ್ ಹಣಕ್ಕಾಗಿ ಕೊಲೆ ಮಾಡಿ, ಅಪಘಾತ ಎಂದು ಡ್ರಾಮಾ : ಮಹಿಳೆ ಸೇರಿ 6 ಜನ ಅರೆಸ್ಟ್!

03/10/2025 11:24 AM1 Min Read
Recent News

‘ಗೊಂದಲದ ಬರಹ ಸಾಕು, ಸ್ಪಷ್ಟವಾಗಿ ಬರೆಯಿರಿ’ : ಕೋರ್ಟ್‌ನಿಂದ ವೈದ್ಯರಿಗೆ ಖಡಕ್ ಆದೇಶ

03/10/2025 12:01 PM

ಜಪಾನಿನ ಜನರು 100 ವರ್ಷ ಬದುಕಲು ಇದೇ ಕಾರಣ.! ಆಹಾರದ ರಹಸ್ಯ

03/10/2025 11:49 AM

ರಷ್ಯಾದ ತೈಲಕ್ಕೆ ಮತ್ತೊಂದು ಹೊಡೆತ? ಯುರೋಪಿಗೆ ಕಚ್ಚಾ ತೈಲವನ್ನು ಪೂರೈಸಲು US ಪಾಲುದಾರಿಕೆಯನ್ನು ಬಯಸಿದ ಉಕ್ರೇನ್

03/10/2025 11:47 AM

SHOCKING : ದುರ್ಗಾ ಪಂಡಲ್ ನಲ್ಲಿ `ನಟಿ ಕಾಜೋಲ್’ ಎದೆ ಮುಟ್ಟಿದ ಕಾಮುಕ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

03/10/2025 11:37 AM
State News
KARNATAKA

BIG NEWS : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ : ಪಿಸಿಸಿಎಫ್ ತಂಡದ ತನಿಖೆಗೆ ಸಚಿವ ಖಂಡ್ರೆ ಆದೇಶ

By kannadanewsnow0503/10/2025 11:32 AM KARNATAKA 1 Min Read

ಬೆಂಗಳೂರು : ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ…

BREAKING : ದೇವರಗುಡ್ಡದಲ್ಲಿ ಬಡಿಗೆ ಬಡಿದಾಟದ ಜಾತ್ರೆ : ಇಬ್ಬರು ಸಾವು, 15 ಕ್ಕೂ ಹೆಚ್ಚು ಜನರು ಗಂಭೀರ.!

03/10/2025 11:27 AM

BIG NEWS : ವಿಜಯನಗರ : ಇನ್ಸೂರೆನ್ಸ್ ಹಣಕ್ಕಾಗಿ ಕೊಲೆ ಮಾಡಿ, ಅಪಘಾತ ಎಂದು ಡ್ರಾಮಾ : ಮಹಿಳೆ ಸೇರಿ 6 ಜನ ಅರೆಸ್ಟ್!

03/10/2025 11:24 AM

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಪುತ್ರಿಯನ್ನು ಮಚ್ಚಿನಿಂದ ಕೊಂದು ತಾಯಿ ಆತ್ಮಹತ್ಯೆಗೆ ಶರಣು!

03/10/2025 11:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.