ಶ್ರೀರಂಗಪಟ್ಟಣ: ತಾಲೂಕಿನ ಗೌರಿಪುರ ಗ್ರಾಮದ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ತಮಿಳುನಾಡು ಮೂಲದ ಎಲುಮಲೈ (60) ಎಂದು ಗುರುತಿಸಲಾಗಿದೆ. ಬಿಯರ್ ಬಾಟಲಿಗಳನ್ನು ತುಂಬಿದ್ದ ಟ್ರಕ್ ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟಿತ್ತು. ಬಿಯರ್ ತುಂಬಿದ ಲಾರಿ ಎಂದು ತಿಳಿದ ತಕ್ಷಣ ಸ್ಥಳೀಯರು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಬಾಟಲಿಗಳನ್ನು ತೆಗೆದುಕೊಂಡು ಓಡಿ ಹೋದರು. ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share.
Exit mobile version