Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಒಂದೇ ಕುಟುಂಬದ ಐವರು ನೀಟ್ ಪಾಸ್; ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮೂವರು ಅರೆಸ್ಟ್!

BREAKING : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.6ರಂದು ಸಾಗರದಲ್ಲಿ ‘DSS’ನಿಂದ ‘ಮಹಾಪರಿನಿರ್ವಾಣ ದಿನ’ ಆಚರಣೆ: ತಾಲ್ಲೂಕು ಸಂಚಾಲಕ ನಾಗರಾಜ್
KARNATAKA

ಡಿ.6ರಂದು ಸಾಗರದಲ್ಲಿ ‘DSS’ನಿಂದ ‘ಮಹಾಪರಿನಿರ್ವಾಣ ದಿನ’ ಆಚರಣೆ: ತಾಲ್ಲೂಕು ಸಂಚಾಲಕ ನಾಗರಾಜ್

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಡಾ.ಬಾಬಾ ಸಾಹೇಬ್ ಬಿಆರ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್.6ರಂದು ಸಾಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಆಚರಿಸಲಾಗುತ್ತಿದೆ.

ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ತಾಲ್ಲೂಕು ಸಂಚಾಲಕ ನಾಗರಾಜ್ ಅವರು, ಡಾ.ಬಾಬಾ ಸಾಹೇಬ್ ಬಿಆರ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಕರ್ನಾಟಕ ದಲತಿ ಸಂಘರ್ಷ ಸಮಿತಿಯಿಂದ ಡಿಸೆಂಬರ್.6ರಂದು ಆಚರಿಸಲಾಗುತ್ತಿದೆ. ಅಲ್ಲದೇ ಅಂಬೇಡ್ಕರ್ ವಿಚಾರಧಾರೆಗಳನ್ನು ಜನರಿಗೆ ತಿಳಿಸಿಕೊಡುವಂತ ಕೆಲಸ ಮಾಡಲಾಗುತ್ತದೆ ಎಂದರು.

ಅಂಬೇಡ್ಕರ್ ರೂಪಿಸಿದಂತ ಕಾನೂನಿನಡಿ ಹಲವರು ಪ್ರಯೋಜನ ಪಡೆದಿದ್ದಾರೆ. ದಲಿತ ಸಮುದಾಯದ ಜೀವನವೇ ಬದಲಾವಣೆಯಾಗಿದೆ. ಇನ್ನೂ ಆಗಬೇಕಿದೆ. ಇಂತಹ ಮಹಾನ್ ನಾಯಕನ 68ನೇ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್.6ರಂದು ಸಾಗರ ನಗರದ ಸರ್ಕಾರಿ ನೌಕರರ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಆಚರಿಸಲಾಗುತ್ತಿದೆ. ಸಾಗರದ ಸಮಸ್ತ ಜನರು ಭಾಗಿಯಾಗುವಂತೆ ಮನವಿ ಮಾಡಿದರು.

ಸಾಗರ ಉಪ ವಿಭಾಗಾಧಿಕಾರಿ ಯತೀಶ್ ಅವರು ಡಾ.ಬಿಆರ್ ಅಂಬೇಡ್ಕರ್ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಮಹಾಪರಿ ನಿರ್ವಾಣ ಕಾರ್ಯಕ್ರಮವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿಎಸ್ಎಸ್ ಹಿರಿಯ ಮುಖಂಡ ನಾರಾಯಣ ಮಂಡಗಳಲೆ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ಜಿಲ್ಲಾ ಸಂಚಾಲಕ ಎಂ.ಏಳುಕೋಟೆ, ಸಾಗರ ತಾಲ್ಲೂಕು ಕಸಪ ಅಧ್ಯಕ್ಷ ವಿ.ಟಿ ಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್, ಬುಡಕಟ್ಟು ಸಮುದಾಯದ ಅಧ್ಯಕ್ಷ ರಾಮಣ್ಣ ಹಲಸರು, ನಗರಸಭಾ ಸದಸ್ಯೆ ಲಲಿತಮ್ಮ, ವಕೀಲರಾದಂತ ಸತೀಶ್.ಡಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.

ನಗರಸಭಾ ಸದಸ್ಯೆ ಲಲಿತಮ್ಮ ಮಾತನಾಡಿ ಡಿ.6ರಂದು ಡಿಎಸ್ಎಸ್ ನಿಂದ ಮಹಾಪರಿನಿರ್ವಾಣ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲಾ ಸಮುದಾಯದವರು ಅಂಬೇಡ್ಕರ್ ಸಂವಿಧಾನದಿಂದ ಸವಲತ್ತುಗಳನ್ನು ಪಡೆದ ಫಲಾನುಭವಿಗಳೇ ಆಗಿದ್ದಾರೆ. ಮಹಿಳೆಯರಿಗೆ ನ್ಯಾಯ ಒದಗಿಸಿಕೊಡದ ಕಾರಣಕ್ಕೆ ಅಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದಂತ ಮಹಾನ್ ನಾಯಕ ಡಾ.ಬಿಆರ್ ಅಂಬೇಡ್ಕರ್ ಆಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾಗರ ತಾಲ್ಲೂಕಿನ ಎಲ್ಲಾ ಮಹಿಳೆಯರು ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸುರೇಶ್ ಕುಮಾರ್, ಶಿವಪ್ಪ, ಗಣಪತಿ ತಾಳಗುಪ್ಪ, ವೀರೇಶ್, ಚಂದ್ರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

1 Min Read

BREAKING : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ!

1 Min Read

BREAKING : ರಾಜ್ಯಾದ್ಯಂತ 3 ದಿನ ಭಾರಿ ಮಳೆ : ಬೆಂಗಳೂರಲ್ಲಿ ಯಲ್ಲೋ ಅಲರ್ಟ್ ಘೋಷಣೆ, ಹವಾಮಾನ ಇಲಾಖೆ ಮುನ್ಸೂಚನೆ

2 Mins Read
Recent News

ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಒಂದೇ ಕುಟುಂಬದ ಐವರು ನೀಟ್ ಪಾಸ್; ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮೂವರು ಅರೆಸ್ಟ್!

BREAKING : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ!

BREAKING : ರಾಜ್ಯಾದ್ಯಂತ 3 ದಿನ ಭಾರಿ ಮಳೆ : ಬೆಂಗಳೂರಲ್ಲಿ ಯಲ್ಲೋ ಅಲರ್ಟ್ ಘೋಷಣೆ, ಹವಾಮಾನ ಇಲಾಖೆ ಮುನ್ಸೂಚನೆ

State News
KARNATAKA

ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮೇ…

BREAKING : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ!

BREAKING : ರಾಜ್ಯಾದ್ಯಂತ 3 ದಿನ ಭಾರಿ ಮಳೆ : ಬೆಂಗಳೂರಲ್ಲಿ ಯಲ್ಲೋ ಅಲರ್ಟ್ ಘೋಷಣೆ, ಹವಾಮಾನ ಇಲಾಖೆ ಮುನ್ಸೂಚನೆ

BIG NEWS : ಹಿಜಾಬ್ ಹಿಂದಿನಿಂದಲೂ ಹಾಕುತ್ತಿದ್ದರು ಹೊಸದಾಗಿ ಏನೂ ಹಾಕುತ್ತಿಲ್ಲ : ಗೃಹ ಸಚಿವ ಪರಮೇಶ್ವರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.