Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನವೆಂಬರ್.4ರಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

19/09/2025 7:07 PM

ಜಾತಿ ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿವೈ ವಿಜಯೇಂದ್ರ

19/09/2025 7:02 PM

SHOCKING: ರಾಜ್ಯದಲ್ಲೊಂದು ಅಪರೂಪದ ಆಪರೇಷನ್: ಕಣ್ಣಿನಲ್ಲಿದ್ದ 10 ಸೆ.ಮೀ ಜೀವಂತ ಹುಳು ತೆಗೆದ ವೈದ್ಯರು

19/09/2025 6:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿವೈ ವಿಜಯೇಂದ್ರ
KARNATAKA

ಜಾತಿ ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿವೈ ವಿಜಯೇಂದ್ರ

By kannadanewsnow0919/09/2025 7:02 PM

ಬೆಂಗಳೂರು: ಧರ್ಮ ಒಡೆಯುವ ಕೆಲಸಕ್ಕೆ ರಾಜ್ಯ ಸರಕಾರ ಕೈ ಹಾಕಿದೆ. ಇದೊಂದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಯಾವುದೇ ಜಾತಿ, ಸಮಾಜದವರು ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಬೇಕು ಎಂದು ಬಿಜೆಪಿಯ ರಾಜಕೀಯ ಚಿಂತನಾ ಶಿಬಿರದಲ್ಲಿ ನಿರ್ಣಯಿಸಿದ್ದೇವೆ ಎಂದು ತಿಳಿಸಿದರು.

ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್‍ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ರಾಜಕೀಯ ಚಿಂತನಾ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದು ವಿವರಿಸಿದರು. ಜಾತಿ, ಉಪ ಜಾತಿಯನ್ನು ಆಯಾ ಸಮುದಾಯಕ್ಕೆ ಬಿಟ್ಟ ವಿಚಾರ; ಅದನ್ನು ಅವರು ತೀರ್ಮಾನಿಸಬೇಕು ಎಂದರು. ದೇಶ, ರಾಜ್ಯದ ಹಿತದೃಷ್ಟಿಯಿಂದ ಧರ್ಮದ ಕಾಲಂನಡಿ ಹಿಂದೂ ಎಂದು ಬರೆಸಲು ವಿನಂತಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾತಿ ಜನಗಣತಿ ಮಾಡಲು ಮುಂದಾಗಿದೆ. ರಾಜ್ಯಗಳಿಗೆ ಜಾತಿ ಜನಗಣತಿ ಅಧಿಕಾರ ಇಲ್ಲದೇ ಇದ್ದರೂ 47 ಹೊಸ ಜಾತಿಗಳನ್ನು ಸೃಷ್ಟಿಸಿದೆ. ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ, ಕ್ರಿಶ್ಚಿಯನ್ ನೇಕಾರ, ಕ್ರಿಶ್ಚಿಯನ್ ಪರಿಶಿಷ್ಟ ಜಾತಿ, ಪಂಗಡ ಎಂದು ಗೊಂದಲ ಸೃಷ್ಟಿ ಮಾಡಿದ್ದಾಗಿ ಆರೋಪಿಸಿದರು.

ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂತರಾಜು ವರದಿ ಬಗ್ಗೆ ಸಾಕಷ್ಟು ಚರ್ಚೆಗಳಾಗಿವೆ. ಈ ವರದಿ ಅವೈಜ್ಞಾನಿಕ ಎಂದು ನಾವು ವಿರೋಧಿಸಿದ್ದೆವು. ರಾಹುಲ್ ಗಾಂಧಿಯವರು ಹೇಳಿದ್ದಾರೆಂಬ ಕಾರಣಕ್ಕೆ ಕಾಂತರಾಜು ವರದಿಯನ್ನು ಸಿದ್ದರಾಮಯ್ಯನವರ ಸರಕಾರ ಕಸದ ಬುಟ್ಟಿಗೆ ಹಾಕಿತ್ತು ಎಂದು ಆಕ್ಷೇಪಿಸಿದರು. ಹಿಂದೆಯೂ ಸಿದ್ದರಾಮಯ್ಯರ ಸರಕಾರವು ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಗೊಂದಲ ಸೃಷ್ಟಿಸಿ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದರು ಎಂದು ಟೀಕಿಸಿದರು.

ಈ ಶಿಬಿರದಲ್ಲಿ ಎರಡು ಮಹತ್ವದ ನಿರ್ಣಯ ಮಾಡಲಾಗಿದೆ. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಎನ್‍ಡಿಎ ಸರಕಾರವು ಸರಳೀಕೃತ ಜಿಎಸ್‍ಟಿ ಮೂಲಕ ಒಂದು ಐತಿಹಾಸಿಕ ನಿರ್ಧಾರವನ್ನು ಘೋಷಿಸಿದೆ. ಇದರಿಂದ ರಾಜ್ಯ, ದೇಶದ ಜನರು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಅವರು ತಿಳಿಸಿದರು. ಜಾಗತಿಕ ಮಟ್ಟದಲ್ಲಿ ಅನೇಕ ಸವಾಲುಗಳು ಭಾರತದ ಮುಂದಿವೆ. ಇಂಥ ಸಂದರ್ಭದಲ್ಲಿ ಇಂಥ ಜಿಎಸ್‍ಟಿ ಸುಧಾರಣೆ ಘೋಷಿಸಿದ್ದು, ಇದಕ್ಕಾಗಿ ಈ ಶಿಬಿರದಲ್ಲಿ ಮೋದಿಜೀ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಒಕ್ಕೊರಲ ಅಭಿನಂದನೆ ಸಲ್ಲಿಸಿದ್ದಾಗಿ ವಿವರಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಉಪಮುಖ್ಯಮಂತ್ರಿ ಮತ್ತು ಸಂಸದರಾದ ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್, ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಭೈರತಿ ಬಸವರಾಜ್, ಶಾಸಕ ಅರವಿಂದ್ ಬೆಲ್ಲದ್, ಮಾಜಿ ಸಚಿವೆ ಮತ್ತು ಶಾಸಕಿ ಶ್ರೀಮತಿ ಶಶಿಕಲಾ ಜೊಲ್ಲೆ, ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಶಾಸಕ ರಾಜು ಗೌಡ ನಾಯಕ್ ಅವರು ಉಪಸ್ಥಿತರಿದ್ದರು.

SHOCKING: ರಾಜ್ಯದಲ್ಲೊಂದು ಅಪರೂಪದ ಆಪರೇಷನ್: ಕಣ್ಣಿನಲ್ಲಿದ್ದ 10 ಸೆ.ಮೀ ಜೀವಂತ ಹುಳು ತೆಗೆದ ವೈದ್ಯರು

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

Share. Facebook Twitter LinkedIn WhatsApp Email

Related Posts

ನವೆಂಬರ್.4ರಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

19/09/2025 7:07 PM2 Mins Read

SHOCKING: ರಾಜ್ಯದಲ್ಲೊಂದು ಅಪರೂಪದ ಆಪರೇಷನ್: ಕಣ್ಣಿನಲ್ಲಿದ್ದ 10 ಸೆ.ಮೀ ಜೀವಂತ ಹುಳು ತೆಗೆದ ವೈದ್ಯರು

19/09/2025 6:55 PM1 Min Read

ಹಿಂದುತ್ವದ ಪರ ಹೋರಾಟ ಮಾಡಿದ್ರೆ ನನ್ನ ಮೇಲೆ ಕೇಸ್ ಹಾಕ್ತಾರೆ: ಪ್ರಮೋದ್ ಮುತಾಲಿಕ್ ವಾಗ್ಧಾಳಿ

19/09/2025 6:35 PM2 Mins Read
Recent News

ನವೆಂಬರ್.4ರಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

19/09/2025 7:07 PM

ಜಾತಿ ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿವೈ ವಿಜಯೇಂದ್ರ

19/09/2025 7:02 PM

SHOCKING: ರಾಜ್ಯದಲ್ಲೊಂದು ಅಪರೂಪದ ಆಪರೇಷನ್: ಕಣ್ಣಿನಲ್ಲಿದ್ದ 10 ಸೆ.ಮೀ ಜೀವಂತ ಹುಳು ತೆಗೆದ ವೈದ್ಯರು

19/09/2025 6:55 PM

BREAKING : ಚೀನಾ ಅಧ್ಯಕ್ಷ ಜಿನ್ಪಿಂಗ್’ಗೆ ‘ಟ್ರಂಪ್’ ದೂರವಾಣಿ ಕರೆ ; ‘ಟಿಕ್ಟಾಕ್, ವ್ಯಾಪಾರ ಒಪ್ಪಂದ’ದ ಕುರಿತು ಮಾತುಕತೆ

19/09/2025 6:48 PM
State News
KARNATAKA

ನವೆಂಬರ್.4ರಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

By kannadanewsnow0919/09/2025 7:07 PM KARNATAKA 2 Mins Read

ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ,…

ಜಾತಿ ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿವೈ ವಿಜಯೇಂದ್ರ

19/09/2025 7:02 PM

SHOCKING: ರಾಜ್ಯದಲ್ಲೊಂದು ಅಪರೂಪದ ಆಪರೇಷನ್: ಕಣ್ಣಿನಲ್ಲಿದ್ದ 10 ಸೆ.ಮೀ ಜೀವಂತ ಹುಳು ತೆಗೆದ ವೈದ್ಯರು

19/09/2025 6:55 PM

ಹಿಂದುತ್ವದ ಪರ ಹೋರಾಟ ಮಾಡಿದ್ರೆ ನನ್ನ ಮೇಲೆ ಕೇಸ್ ಹಾಕ್ತಾರೆ: ಪ್ರಮೋದ್ ಮುತಾಲಿಕ್ ವಾಗ್ಧಾಳಿ

19/09/2025 6:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.