Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೆತನ್ಯಾಹು ಕಾಫಿ ಕುಡಿಯುವ ವಿಡಿಯೋ ‘ಡಿಪ್ ಫೇಕ್’ ಎಂದ ಎಕ್ಸ್ Grok; ಸಾಕ್ಷಿಯಾಗಿ ಅಸಲಿ ಫೋಟೋ ಬಿಡುಗಡೆ ಮಾಡಿದ ಕೆಫೆ!

16/03/2026 11:35 AM

SHOCKING : ರಾಜ್ಯದಲ್ಲಿ ಅರ್ಧ ಲಕ್ಷ ಜನರಲ್ಲಿ ಕ್ಯಾನ್ಸರ್ ಪತ್ತೆ : ಬೆಚ್ಚಿ ಬೀಳಿಸಿದ ವೈದ್ಯಕೀಯ ವರದಿ!

16/03/2026 11:32 AM

ಕೆಟ್ಟ ಕೊಲೆಸ್ಟ್ರಾಲ್ ಗೆ ಶತ್ರು, ಆರೋಗ್ಯಕ್ಕೆ ಮಿತ್ರ: ಒಣ ಕೊಬ್ಬರಿಯಲ್ಲಿದೆ ಅದ್ಭುತ ಶಕ್ತಿ!

16/03/2026 11:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ ಗಣತಿ ಸಮೀಕ್ಷೆ ವೇಳೆ ಜಾತಿ, ಉಪಜಾತಿಯಲ್ಲಿ ‘ಕಾಡುಗೊಲ್ಲ’ ನಮೂದಿಸಿ: ಮುಖಂಡರ ಮನವಿ
KARNATAKA

ಜಾತಿ ಗಣತಿ ಸಮೀಕ್ಷೆ ವೇಳೆ ಜಾತಿ, ಉಪಜಾತಿಯಲ್ಲಿ ‘ಕಾಡುಗೊಲ್ಲ’ ನಮೂದಿಸಿ: ಮುಖಂಡರ ಮನವಿ

By kannadanewsnow0919/09/2025 4:10 PM

ಚಿತ್ರದುರ್ಗ : ಸೆಪ್ಟೆಂಬರ್ 22 ರಂದು ಆರಂಭವಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆ ವೇಳೆಯಲ್ಲಿ ಜಾತಿ ಮತ್ತು ಉಪಜಾತಿ ಎರಡು ಕಾಲಂಗಳಲ್ಲೂ “ಕಾಡುಗೊಲ್ಲ” ಎಂದು ನಮೂದಿಸಬೇಕೆಂದು ಸಮುದಾಯ ಮುಖಂಡರು ಮನವಿ ಮಾಡಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಪುಷ್ಪಾಂಜಲಿ ಟಾಕೀಸ್ ರಸ್ತೆಯಲ್ಲಿರುವ ವಿಲಾಸ್ ಹಾಲ್ ನಲ್ಲಿ ಗುರುವಾರ ಪಕ್ಷತಿತವಾಗಿ ಸಮುದಾಯದ ಮುಖಂಡರು ಪೂರ್ವಭಾವಿ ಸಭೆ ನಡೆಸಿ ಮಾಹಿತಿ ನೀಡಿದರು.

ಈ ಸಮೀಕ್ಷೆಯು ನಮ್ಮ ಸಮಾಜ ಜನಸಂಖ್ಯೆ ಎಷ್ಟಿದೆ ಎಂಬುದನ್ನು ತಿಳಿಯಲು ಜಾತಿ ಗಣತಿ ಕಾರ್ಯ ಸರ್ಕಾರ ನಡೆಸುತ್ತಿದೆ. ಸಮುದಾಯದ ವಿಚಾರ ಬಂದಾಗ ನಮ್ಮ ತನವನ್ನು ಬಿಟ್ಟುಕೊಡಬಾರದು. ಕಾಡುಗೊಲ್ಲರ ಅಸ್ಮಿತೆಯನ್ನು ಕಾಪಾಡಬೇಕಿದೆ. ಈಗಿರುವಾಗ ನಾವು ಜಾತಿ ಕಾಲಂ ನಲ್ಲಿ ಕಾಡುಗೊಲ್ಲ ಎಂದೇ ನಮೂದಿಸಬೇಕು. ಜಾತಿ ಹಾಗೂ ಉಪಜಾತಿ ಕಾಲಂನಲ್ಲಿ ಕಾಡುಗೊಲ್ಲ ಎಂದೇ ಬರೆಸಿದಾಗ ಮಾತ್ರ ಸಮುದಾಯದ ಸ್ಥಿತಿಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ ಅನುಕೂಲಗಳು ಸಿಗುತ್ತವೆ ಎಂದು ಮುಖಂಡರು ಒತ್ತಿ ಒತ್ತಿ ಹೇಳಿದರು.

ಅಧಿಕಾರಿಗಳು ಮನೆ ಮನೆಗೆ ಸರ್ವೆಗೆ ಬಂದಾಗ ಯಾವುದೇ ಗೊಂದಲ, ಯಾವುದೇ ಅನುಮಾನವಿಲ್ಲದೇ ಜಾತಿ – ಕಾಡುಗೊಲ್ಲ, ಉಪಜಾತಿ- ಕಾಡುಗೊಲ್ಲ, ಧರ್ಮ- ಹಿಂದೂ ಹಾಗೂ ವೃತ್ತಿಯಲ್ಲಿ – ಕುರಿ ಮೇಕೆ ಮತ್ತು ಪಶುಸಂಗೋಪನೆ ಎಂದು ನಮೂದಿಸಬೇಕು. ಸಮುದಾಯದ ಯುವ ಚಿಂತಕರು, ವಿದ್ಯಾರ್ಥಿಗಳು, ಹೋರಾಟಗಾರರು, ಮುಖಂಡರು ಮತ್ತು ರಾಜಕೀಯ ನಾಯಕರು, ವಿದ್ಯಾವಂತ ಯುವಕರು ಹಟ್ಟಿಗಳಲ್ಲಿ ಮುಂದೆ ನಿಂತು ಕೆಲಸ ಮಾಡಬೇಕು. ನಮ್ಮಲ್ಲಿ ಯಾವುದೇ ವೈಷಮ್ಯವಿಲ್ಲದೇ, ಪಕ್ಷತಿತವಾಗಿ ನಾವೆಲ್ಲರೂ ಸಾಮೂಹಿಕ ನಾಯಕತ್ವದಲ್ಲಿ ಅಣ್ಣತಮ್ಮಂದಿರು ಹಾಗೂ ನೆಂಟರು ಜವಾಬ್ದಾರಿಯಿಂದ ಕೆಲಸ ಮಾಡೋಣ. ಹಿರಿಯರ ಮಾರ್ಗದರ್ಶನದಲ್ಲಿ ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ವಿದ್ಯಾವಂತ ಹಾಗೂ ಸಮುದಾಯದ ಬಗ್ಗೆ ಕಳಾಜಿಯಿರುವ ಯುವಕರು ತಂಡಗಳನ್ನು ರಚಿಸಿ ಸರ್ವೇ ಕಾರ್ಯವನ್ನು ಯಶಸ್ವಿಯಾಗಿಸುವ ಮೂಲಕ ಸಮಾಜದದ ಅಭಿವೃದ್ಧಿ ಎಲ್ಲರೂ ಶ್ರಮಿಸೋಣ ಈ ದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಮುಂದೆ ನಿಂತು ಕೆಲಸ ಮಾಡುವ ಮೂಲಕ ಹಿರಿಯೂರು ಕಾಡುಗೊಲ್ಲರು ಇತರರಿಗೆ ಮಾದರಿಯಾಗೋಣ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಈ ಹಿಂದೆ ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಅನ್ನಪೂರ್ಣಮ್ಮ ನೇತೃತ್ವದಲ್ಲಿ ಕಾಡುಗೊಲ್ಲ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರ ಅಧ್ಯಯನ ನಡೆಸಿದರು. ಬಳಿಕ ರಾಜ್ಯದಲ್ಲಿರುವ ಪ್ರತ್ಯೇಕ ಕಾಡುಗೊಲ್ಲ ಜಾತಿ ಇದೆಯೆಂದು ಕಾಡುಗೊಲ್ಲನ್ನು ಗುರುತಿಸಿ ಜಾತಿಪಟ್ಟಿ ನೀಡಿದರು. ಅಲ್ಲದೆ ಕಾಡುಗೊಲ್ಲರಿಗೆ ಎಸ್ಟಿ ಸದಸ್ಯತ್ವ ನೀಡಲು ಕೇಂದ್ರಕ್ಕೆ ಕಡತವನ್ನು ಶಿಫಾರಸು ಮಾಡಿದ್ದು, ಸದರಿ ಕಡತವು ಈಗಾಗಲೇ ಕೇಂದ್ರದಲ್ಲಿದೆ. ಆದರೆ ಕೆಲವು ಕಾಣದ ಕೈಗಳು ರಾಜ್ಯದಲ್ಲಿ ಕಾಡುಗೊಲ್ಲರು ಇಲ್ಲವೆಂದು ಸರ್ಕಾರಕ್ಕೆ ಪತ್ರ ಬರೆದರು. ಇನ್ನಾದರೂ ನಾವು ಎಚ್ಚೆತ್ತುಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗಾಗಿ ಹಾಗೂ ಜನಸಂಖ್ಯೆ ನಿಖರವಾಗಿ ಮಾಹಿತಿ ತಿಳಿಯಲು ಕಾಡುಗೊಲ್ಲ ಎಂದೇ ನಮೂದಿಸೋಣ, ಜಾತಿ ಗಣತಿ ಸರ್ವೇ ಕಾರ್ಯ ಮುಗಿದ ಬಳಿಕ ಮಾಜಿ ಪ್ರಧಾನಿ ಹೆಚ್. ಡಿ. ದೇವೆಗೌಡ, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಸಂಸದ ಗೋವಿಂದ ಕಾರಜೋಳ ಹಾಗೂ ರಾಜ್ಯ ನಾಯಕರುಗಳನ್ನು ಭೇಟಿ ಮಾಡಿ ಮೀಸಲಾತಿ ಹೋರಾಟ ಮಾಡೋಣ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದಂತ ಹಿರಿಯೂರು ನಗರಸಭೆ ಸದಸ್ಯ ಚಿತ್ರಜಿತ್ ಯಾದವ್, ಚಿತ್ರದುರ್ಗ ಯಾದವ ಗುರುಪೀಠದ ಶ್ರೀ ಕೃಷ್ಣಯಾದವನಂದ ಸ್ವಾಮೀಜಿ ಹಾಗೂ ಎಂಎಲ್ಸಿ ಡಿಟಿ ಶ್ರೀನಿವಾಸ್ ಅವರು ಜಾತಿ ಕಾಲಂ ನಲ್ಲಿ ಉಪಜಾತಿ ಕಾಡುಗೊಲ್ಲ ಎಂದು ಹೇಳಿಕೆ ನೀಡಿ, ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಕಾಡುಗೊಲ್ಲ ಎಂಬುದು ಒಂದು ಬುಡಕಟ್ಟು ಪ್ರತ್ಯೇಕ ಜಾತಿಯಾಗಿದೆ. ನಮಗೆ ತಮ್ಮದೇ ಆದ ಬುಡಕಟ್ಟು ಲಕ್ಷಣಗಳಿವೆ. ಗೊಲ್ಲ ಜಾತಿನೇ ಬೇರೆ, ಕಾಡುಗೊಲ್ಲ ಜಾತಿನೇ ಬೇರೆ. ಮತ್ತೊಮ್ಮೆ ಡಿಟಿ ಶ್ರೀನಿವಾಸ್ ಇದೆ ತರಹದ ಹೇಳಿಕೆ ನೀಡಿದರೇ ಕಾಡುಗೊಲ್ಲರು ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕಾಡುಗೊಲ್ಲ ಸಂಘದ ಅಧ್ಯಕ್ಷ ಪಿಆರ್. ದಾಸ್, ಗೌರವಾಧ್ಯಕ್ಷ ಆಲಮರದಹಟ್ಟಿ ರಂಗಯ್ಯ, ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ತಿಪ್ಪೇಸ್ವಾಮಿ, ಮುಖಂಡರಾದ ಬಿಕೆ ಕರಿಯಪ್ಪ, ಗೀತಾ ನಂದಿನಿಗೌಡ, ನಿವೃತ್ತ ಪ್ರಾಧ್ಯಾಪಕ ಜಿ. ರಾಜಶೇಖರ್, ಎಜಿ ತಿಮ್ಮಯ್ಯ, ಪಿಎಸ್. ಪಾತಯ್ಯ, ಎಸ್.ಆರ್. ತಿಪ್ಪೇಸ್ವಾಮಿ, ಜಿ. ಪ್ರೇಮ್ ಕುಮಾರ್, ಕೆ. ಅಭಿನಂದನ್, ಕೆಟಿ ತಿಪ್ಪೇಸ್ವಾಮಿ, ಜೆಜಿ ಹಳ್ಳಿ ಮಂಜುನಾಥ್, ಡಾಬಾ ಚಿಕ್ಕಣ್ಣ, ಮಹಾಲಿಂಗಪ್ಪ,ಎಸ್. ಶಿವರಂಜನಿ ಕಾಡುಗೊಲ್ಲ, ಬೇತೂರು ತಿಮ್ಮಣ್ಣ, ವಕೀಲ ಯತೀಶ್, ನಾಗಪ್ಪ, ತಿಮ್ಮಣ್ಣ, ಗೋಪಿ ಯಾದವ್, ಹೇಮಂತ್ ಕುಮಾರ್, ಜನಾರ್ಧನ್, ವೇದಮೂರ್ತಿ, ನಾಗೇಂದ್ರ, ನಾಗರಾಜ್, ಸೇರಿದಂತೆ ಮತ್ತಿತರರು ಹಾಜರಿದ್ದರು.

ವಸಂತ ಬಿ ಈಶ್ವರಗೆರೆ.., ಸಂಪಾದಕರು

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ಜನತೆಗೆ ಗುಡ್ ನ್ಯೂಸ್: 10 ತಾಲ್ಲೂಕಲ್ಲಿ ಯೋಗ, ಪ್ರಕೃತಿ ಚಿಕಿತ್ಸಾ ಕೇಂದ್ರ ತೆರೆಯಲು ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಅರ್ಧ ಲಕ್ಷ ಜನರಲ್ಲಿ ಕ್ಯಾನ್ಸರ್ ಪತ್ತೆ : ಬೆಚ್ಚಿ ಬೀಳಿಸಿದ ವೈದ್ಯಕೀಯ ವರದಿ!

16/03/2026 11:32 AM2 Mins Read

ಕೆಟ್ಟ ಕೊಲೆಸ್ಟ್ರಾಲ್ ಗೆ ಶತ್ರು, ಆರೋಗ್ಯಕ್ಕೆ ಮಿತ್ರ: ಒಣ ಕೊಬ್ಬರಿಯಲ್ಲಿದೆ ಅದ್ಭುತ ಶಕ್ತಿ!

16/03/2026 11:30 AM2 Mins Read

ಗಂಡ ತೀರಿಕೊಂಡ ನಂತರ `ಮಾಂಗಲ್ಯ’ ಏನು ಮಾಡಬೇಕು? ಶೇ. 99 ರಷ್ಟು ಪತ್ನಿಯರು ಮಾಡುತ್ತಾರೆ ಈ ತಪ್ಪು !

16/03/2026 11:28 AM1 Min Read
Recent News

ನೆತನ್ಯಾಹು ಕಾಫಿ ಕುಡಿಯುವ ವಿಡಿಯೋ ‘ಡಿಪ್ ಫೇಕ್’ ಎಂದ ಎಕ್ಸ್ Grok; ಸಾಕ್ಷಿಯಾಗಿ ಅಸಲಿ ಫೋಟೋ ಬಿಡುಗಡೆ ಮಾಡಿದ ಕೆಫೆ!

16/03/2026 11:35 AM

SHOCKING : ರಾಜ್ಯದಲ್ಲಿ ಅರ್ಧ ಲಕ್ಷ ಜನರಲ್ಲಿ ಕ್ಯಾನ್ಸರ್ ಪತ್ತೆ : ಬೆಚ್ಚಿ ಬೀಳಿಸಿದ ವೈದ್ಯಕೀಯ ವರದಿ!

16/03/2026 11:32 AM

ಕೆಟ್ಟ ಕೊಲೆಸ್ಟ್ರಾಲ್ ಗೆ ಶತ್ರು, ಆರೋಗ್ಯಕ್ಕೆ ಮಿತ್ರ: ಒಣ ಕೊಬ್ಬರಿಯಲ್ಲಿದೆ ಅದ್ಭುತ ಶಕ್ತಿ!

16/03/2026 11:30 AM

ಗಂಡ ತೀರಿಕೊಂಡ ನಂತರ `ಮಾಂಗಲ್ಯ’ ಏನು ಮಾಡಬೇಕು? ಶೇ. 99 ರಷ್ಟು ಪತ್ನಿಯರು ಮಾಡುತ್ತಾರೆ ಈ ತಪ್ಪು !

16/03/2026 11:28 AM
State News
KARNATAKA

SHOCKING : ರಾಜ್ಯದಲ್ಲಿ ಅರ್ಧ ಲಕ್ಷ ಜನರಲ್ಲಿ ಕ್ಯಾನ್ಸರ್ ಪತ್ತೆ : ಬೆಚ್ಚಿ ಬೀಳಿಸಿದ ವೈದ್ಯಕೀಯ ವರದಿ!

By kannadanewsnow0516/03/2026 11:32 AM KARNATAKA 2 Mins Read

ಬೆಂಗಳೂರು : ಆರೋಗ್ಯ ಇಲಾಖೆಯ ಇತ್ತೀಚಿನ ದತ್ತಾಂಶಗಳ ಪ್ರಕಾರ, ರಾಜ್ಯದಲ್ಲಿ ಪ್ರತಿವರ್ಷ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕಳೆದ…

ಕೆಟ್ಟ ಕೊಲೆಸ್ಟ್ರಾಲ್ ಗೆ ಶತ್ರು, ಆರೋಗ್ಯಕ್ಕೆ ಮಿತ್ರ: ಒಣ ಕೊಬ್ಬರಿಯಲ್ಲಿದೆ ಅದ್ಭುತ ಶಕ್ತಿ!

16/03/2026 11:30 AM

ಗಂಡ ತೀರಿಕೊಂಡ ನಂತರ `ಮಾಂಗಲ್ಯ’ ಏನು ಮಾಡಬೇಕು? ಶೇ. 99 ರಷ್ಟು ಪತ್ನಿಯರು ಮಾಡುತ್ತಾರೆ ಈ ತಪ್ಪು !

16/03/2026 11:28 AM

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಗುವ `ಗೌರವಧನ’ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

16/03/2026 11:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.