Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ ಗಣತಿ ಸಮೀಕ್ಷೆ ವೇಳೆ ಜಾತಿ, ಉಪಜಾತಿಯಲ್ಲಿ ‘ಕಾಡುಗೊಲ್ಲ’ ನಮೂದಿಸಿ: ಮುಖಂಡರ ಮನವಿ
KARNATAKA

ಜಾತಿ ಗಣತಿ ಸಮೀಕ್ಷೆ ವೇಳೆ ಜಾತಿ, ಉಪಜಾತಿಯಲ್ಲಿ ‘ಕಾಡುಗೊಲ್ಲ’ ನಮೂದಿಸಿ: ಮುಖಂಡರ ಮನವಿ

By ವಸಂತ ಬಿ ಈಶ್ವರಗೆರೆ

ಚಿತ್ರದುರ್ಗ : ಸೆಪ್ಟೆಂಬರ್ 22 ರಂದು ಆರಂಭವಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆ ವೇಳೆಯಲ್ಲಿ ಜಾತಿ ಮತ್ತು ಉಪಜಾತಿ ಎರಡು ಕಾಲಂಗಳಲ್ಲೂ “ಕಾಡುಗೊಲ್ಲ” ಎಂದು ನಮೂದಿಸಬೇಕೆಂದು ಸಮುದಾಯ ಮುಖಂಡರು ಮನವಿ ಮಾಡಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಪುಷ್ಪಾಂಜಲಿ ಟಾಕೀಸ್ ರಸ್ತೆಯಲ್ಲಿರುವ ವಿಲಾಸ್ ಹಾಲ್ ನಲ್ಲಿ ಗುರುವಾರ ಪಕ್ಷತಿತವಾಗಿ ಸಮುದಾಯದ ಮುಖಂಡರು ಪೂರ್ವಭಾವಿ ಸಭೆ ನಡೆಸಿ ಮಾಹಿತಿ ನೀಡಿದರು.

ಈ ಸಮೀಕ್ಷೆಯು ನಮ್ಮ ಸಮಾಜ ಜನಸಂಖ್ಯೆ ಎಷ್ಟಿದೆ ಎಂಬುದನ್ನು ತಿಳಿಯಲು ಜಾತಿ ಗಣತಿ ಕಾರ್ಯ ಸರ್ಕಾರ ನಡೆಸುತ್ತಿದೆ. ಸಮುದಾಯದ ವಿಚಾರ ಬಂದಾಗ ನಮ್ಮ ತನವನ್ನು ಬಿಟ್ಟುಕೊಡಬಾರದು. ಕಾಡುಗೊಲ್ಲರ ಅಸ್ಮಿತೆಯನ್ನು ಕಾಪಾಡಬೇಕಿದೆ. ಈಗಿರುವಾಗ ನಾವು ಜಾತಿ ಕಾಲಂ ನಲ್ಲಿ ಕಾಡುಗೊಲ್ಲ ಎಂದೇ ನಮೂದಿಸಬೇಕು. ಜಾತಿ ಹಾಗೂ ಉಪಜಾತಿ ಕಾಲಂನಲ್ಲಿ ಕಾಡುಗೊಲ್ಲ ಎಂದೇ ಬರೆಸಿದಾಗ ಮಾತ್ರ ಸಮುದಾಯದ ಸ್ಥಿತಿಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ ಅನುಕೂಲಗಳು ಸಿಗುತ್ತವೆ ಎಂದು ಮುಖಂಡರು ಒತ್ತಿ ಒತ್ತಿ ಹೇಳಿದರು.

ಅಧಿಕಾರಿಗಳು ಮನೆ ಮನೆಗೆ ಸರ್ವೆಗೆ ಬಂದಾಗ ಯಾವುದೇ ಗೊಂದಲ, ಯಾವುದೇ ಅನುಮಾನವಿಲ್ಲದೇ ಜಾತಿ – ಕಾಡುಗೊಲ್ಲ, ಉಪಜಾತಿ- ಕಾಡುಗೊಲ್ಲ, ಧರ್ಮ- ಹಿಂದೂ ಹಾಗೂ ವೃತ್ತಿಯಲ್ಲಿ – ಕುರಿ ಮೇಕೆ ಮತ್ತು ಪಶುಸಂಗೋಪನೆ ಎಂದು ನಮೂದಿಸಬೇಕು. ಸಮುದಾಯದ ಯುವ ಚಿಂತಕರು, ವಿದ್ಯಾರ್ಥಿಗಳು, ಹೋರಾಟಗಾರರು, ಮುಖಂಡರು ಮತ್ತು ರಾಜಕೀಯ ನಾಯಕರು, ವಿದ್ಯಾವಂತ ಯುವಕರು ಹಟ್ಟಿಗಳಲ್ಲಿ ಮುಂದೆ ನಿಂತು ಕೆಲಸ ಮಾಡಬೇಕು. ನಮ್ಮಲ್ಲಿ ಯಾವುದೇ ವೈಷಮ್ಯವಿಲ್ಲದೇ, ಪಕ್ಷತಿತವಾಗಿ ನಾವೆಲ್ಲರೂ ಸಾಮೂಹಿಕ ನಾಯಕತ್ವದಲ್ಲಿ ಅಣ್ಣತಮ್ಮಂದಿರು ಹಾಗೂ ನೆಂಟರು ಜವಾಬ್ದಾರಿಯಿಂದ ಕೆಲಸ ಮಾಡೋಣ. ಹಿರಿಯರ ಮಾರ್ಗದರ್ಶನದಲ್ಲಿ ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ವಿದ್ಯಾವಂತ ಹಾಗೂ ಸಮುದಾಯದ ಬಗ್ಗೆ ಕಳಾಜಿಯಿರುವ ಯುವಕರು ತಂಡಗಳನ್ನು ರಚಿಸಿ ಸರ್ವೇ ಕಾರ್ಯವನ್ನು ಯಶಸ್ವಿಯಾಗಿಸುವ ಮೂಲಕ ಸಮಾಜದದ ಅಭಿವೃದ್ಧಿ ಎಲ್ಲರೂ ಶ್ರಮಿಸೋಣ ಈ ದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಮುಂದೆ ನಿಂತು ಕೆಲಸ ಮಾಡುವ ಮೂಲಕ ಹಿರಿಯೂರು ಕಾಡುಗೊಲ್ಲರು ಇತರರಿಗೆ ಮಾದರಿಯಾಗೋಣ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಈ ಹಿಂದೆ ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಅನ್ನಪೂರ್ಣಮ್ಮ ನೇತೃತ್ವದಲ್ಲಿ ಕಾಡುಗೊಲ್ಲ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರ ಅಧ್ಯಯನ ನಡೆಸಿದರು. ಬಳಿಕ ರಾಜ್ಯದಲ್ಲಿರುವ ಪ್ರತ್ಯೇಕ ಕಾಡುಗೊಲ್ಲ ಜಾತಿ ಇದೆಯೆಂದು ಕಾಡುಗೊಲ್ಲನ್ನು ಗುರುತಿಸಿ ಜಾತಿಪಟ್ಟಿ ನೀಡಿದರು. ಅಲ್ಲದೆ ಕಾಡುಗೊಲ್ಲರಿಗೆ ಎಸ್ಟಿ ಸದಸ್ಯತ್ವ ನೀಡಲು ಕೇಂದ್ರಕ್ಕೆ ಕಡತವನ್ನು ಶಿಫಾರಸು ಮಾಡಿದ್ದು, ಸದರಿ ಕಡತವು ಈಗಾಗಲೇ ಕೇಂದ್ರದಲ್ಲಿದೆ. ಆದರೆ ಕೆಲವು ಕಾಣದ ಕೈಗಳು ರಾಜ್ಯದಲ್ಲಿ ಕಾಡುಗೊಲ್ಲರು ಇಲ್ಲವೆಂದು ಸರ್ಕಾರಕ್ಕೆ ಪತ್ರ ಬರೆದರು. ಇನ್ನಾದರೂ ನಾವು ಎಚ್ಚೆತ್ತುಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗಾಗಿ ಹಾಗೂ ಜನಸಂಖ್ಯೆ ನಿಖರವಾಗಿ ಮಾಹಿತಿ ತಿಳಿಯಲು ಕಾಡುಗೊಲ್ಲ ಎಂದೇ ನಮೂದಿಸೋಣ, ಜಾತಿ ಗಣತಿ ಸರ್ವೇ ಕಾರ್ಯ ಮುಗಿದ ಬಳಿಕ ಮಾಜಿ ಪ್ರಧಾನಿ ಹೆಚ್. ಡಿ. ದೇವೆಗೌಡ, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಸಂಸದ ಗೋವಿಂದ ಕಾರಜೋಳ ಹಾಗೂ ರಾಜ್ಯ ನಾಯಕರುಗಳನ್ನು ಭೇಟಿ ಮಾಡಿ ಮೀಸಲಾತಿ ಹೋರಾಟ ಮಾಡೋಣ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದಂತ ಹಿರಿಯೂರು ನಗರಸಭೆ ಸದಸ್ಯ ಚಿತ್ರಜಿತ್ ಯಾದವ್, ಚಿತ್ರದುರ್ಗ ಯಾದವ ಗುರುಪೀಠದ ಶ್ರೀ ಕೃಷ್ಣಯಾದವನಂದ ಸ್ವಾಮೀಜಿ ಹಾಗೂ ಎಂಎಲ್ಸಿ ಡಿಟಿ ಶ್ರೀನಿವಾಸ್ ಅವರು ಜಾತಿ ಕಾಲಂ ನಲ್ಲಿ ಉಪಜಾತಿ ಕಾಡುಗೊಲ್ಲ ಎಂದು ಹೇಳಿಕೆ ನೀಡಿ, ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಕಾಡುಗೊಲ್ಲ ಎಂಬುದು ಒಂದು ಬುಡಕಟ್ಟು ಪ್ರತ್ಯೇಕ ಜಾತಿಯಾಗಿದೆ. ನಮಗೆ ತಮ್ಮದೇ ಆದ ಬುಡಕಟ್ಟು ಲಕ್ಷಣಗಳಿವೆ. ಗೊಲ್ಲ ಜಾತಿನೇ ಬೇರೆ, ಕಾಡುಗೊಲ್ಲ ಜಾತಿನೇ ಬೇರೆ. ಮತ್ತೊಮ್ಮೆ ಡಿಟಿ ಶ್ರೀನಿವಾಸ್ ಇದೆ ತರಹದ ಹೇಳಿಕೆ ನೀಡಿದರೇ ಕಾಡುಗೊಲ್ಲರು ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕಾಡುಗೊಲ್ಲ ಸಂಘದ ಅಧ್ಯಕ್ಷ ಪಿಆರ್. ದಾಸ್, ಗೌರವಾಧ್ಯಕ್ಷ ಆಲಮರದಹಟ್ಟಿ ರಂಗಯ್ಯ, ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ತಿಪ್ಪೇಸ್ವಾಮಿ, ಮುಖಂಡರಾದ ಬಿಕೆ ಕರಿಯಪ್ಪ, ಗೀತಾ ನಂದಿನಿಗೌಡ, ನಿವೃತ್ತ ಪ್ರಾಧ್ಯಾಪಕ ಜಿ. ರಾಜಶೇಖರ್, ಎಜಿ ತಿಮ್ಮಯ್ಯ, ಪಿಎಸ್. ಪಾತಯ್ಯ, ಎಸ್.ಆರ್. ತಿಪ್ಪೇಸ್ವಾಮಿ, ಜಿ. ಪ್ರೇಮ್ ಕುಮಾರ್, ಕೆ. ಅಭಿನಂದನ್, ಕೆಟಿ ತಿಪ್ಪೇಸ್ವಾಮಿ, ಜೆಜಿ ಹಳ್ಳಿ ಮಂಜುನಾಥ್, ಡಾಬಾ ಚಿಕ್ಕಣ್ಣ, ಮಹಾಲಿಂಗಪ್ಪ,ಎಸ್. ಶಿವರಂಜನಿ ಕಾಡುಗೊಲ್ಲ, ಬೇತೂರು ತಿಮ್ಮಣ್ಣ, ವಕೀಲ ಯತೀಶ್, ನಾಗಪ್ಪ, ತಿಮ್ಮಣ್ಣ, ಗೋಪಿ ಯಾದವ್, ಹೇಮಂತ್ ಕುಮಾರ್, ಜನಾರ್ಧನ್, ವೇದಮೂರ್ತಿ, ನಾಗೇಂದ್ರ, ನಾಗರಾಜ್, ಸೇರಿದಂತೆ ಮತ್ತಿತರರು ಹಾಜರಿದ್ದರು.

ವಸಂತ ಬಿ ಈಶ್ವರಗೆರೆ.., ಸಂಪಾದಕರು

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ಜನತೆಗೆ ಗುಡ್ ನ್ಯೂಸ್: 10 ತಾಲ್ಲೂಕಲ್ಲಿ ಯೋಗ, ಪ್ರಕೃತಿ ಚಿಕಿತ್ಸಾ ಕೇಂದ್ರ ತೆರೆಯಲು ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.