ತುಮಕೂರು: ಇಲ್ಲಿನ ಸಿದ್ದಗಂಗಾ ಮಠಕ್ಕೆ ಎಕ್ಕ ಚಿತ್ರತಂಡ ಭೇಟಿ ನೀಡಿದ್ದ ವೇಳೆಯಲ್ಲಿ ಮಹಾ ಯಡವಟ್ಟು ಉಂಟಾಗಿದೆ. ಬೌನ್ಸರ್ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಯಾದ ಪರಿಣಾಮ ಆಕೆಯ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಹೀಗಿದ್ದರೂ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸದೇ ಅಮಾನುಷರಂತೆ ತೆರಳಿರೋ ಆರೋಪ ಕೇಳಿ ಬಂದಿದೆ.
ನಟ ಯುವರಾಜ್ ಕುಮಾರ್ ಅವರ ಎಕ್ಕ ಚಿತ್ರತಂಡವು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಈ ವೇಳೆಯಲ್ಲಿ ಬೌನ್ಸರ್ ಕಾರು ಅಲ್ಲಿಯೇ ಇದ್ದಂತ ದಾರಿಯಲ್ಲಿನ ಮಹಿಳೆಯೊಬ್ಬರಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಪೆಟ್ಟಾಗಿದೆ. ಆ ಮಳಿಗೆ ಗಾಯವಾಗಿ ನರಳಾಡುತ್ತ ತಮ್ಮನ್ನು ಆಸ್ಪತ್ರೆಗೆ ಸೇರಿಸುವಂತೆ ಕೋರಿಕೊಂಡರೂ ಗಮನಸಿದೇ ಎಕ್ಕ ಚಿತ್ರತಂಡ ಸ್ಥಳದಿಂದ ತೆರಳಿದ್ದಾಗಿ ಹೇಳಲಾಗುತ್ತಿದೆ.
ಅಂದಹಾಗೇ ಸಿದ್ದಗಂಗಾ ಮಠಕ್ಕೆ ಶಾಲೆಗೆ ಬಿಟ್ಟು ಹೋಗೋದಕ್ಕೆ ಮಹಿಳೆ ಬಂದಿದ್ದರು. ತಮ್ಮ ಮಗುವನ್ನು ಶಾಲೆಗೆ ಬಿಟ್ಟು ವಾಪಾಸ್ ಆಗುತ್ತಿದಂತ ವೇಳೆಯಲ್ಲಿ ಎಕ್ಕ ಚಿತ್ರತಂಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲೇ ಬೌನ್ಸರ್ ಕಾರು ಮಹಿಳೆಗೆ ಡಿಕ್ಕಿಯಾಗಿದೆ. ಈ ಡಿಕ್ಕಿಯಲ್ಲಿ ಬಳ್ಳಾರಿ ಮೂಲದ ಲಿಂಗಮ್ಮ ಎಂಬುವರ ಕಾಲಿಗೆ ಪೆಟ್ಟು ಬಿದ್ದಿದ್ದು, ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರೋದಾಗಿ ತಿಳಿದು ಬಂದಿದೆ.