Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಎಲ್‌ಒಸಿಯಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ವರದಿಗಳನ್ನು ನಿರಾಕರಿಸಿದ ಭಾರತೀಯ ಸೇನೆ

05/08/2025 10:25 PM

Good News ; ಭಾರತೀಯ ಪ್ರವಾಸಿಗರಿಗೆ ‘ವೀಸಾ ಮುಕ್ತ’ ಪ್ರವೇಶಕ್ಕೆ ‘ಫಿಲಿಫೈನ್ಸ್’ ಅನುಮೋದನೆ

05/08/2025 10:10 PM

67,000 ಕೋಟಿ ರೂ.ಗಳ ರಕ್ಷಣಾ ಯೋಜನೆಗೆ ಮೋದಿ ಸರ್ಕಾರ ಅನುಮೋದನೆ

05/08/2025 10:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎತ್ತಿನಹೊಳೆ ನೀರು ಹರಿಸುವ ಏತ ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಎತ್ತಿನಹೊಳೆ ನೀರು ಹರಿಸುವ ಏತ ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0928/08/2024 8:05 PM

ಹಾಸನ : “ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ (Lift) ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಈ ಯೋಜನೆ ಉದ್ಘಾಟನಾ ದಿನಾಂಕವನ್ನು ಪ್ರಕಟಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆ ಸಕಲೇಶಪುರದ ಕೆಸವನಹಳ್ಳಿ ಗ್ರಾಮದ ಕುಂಬರಡಿ ಕಾಫಿ ಎಸ್ಟೇಟ್ ಬಳಿ ಎತ್ತಿನಹೊಳೆ ಯೋಜನೆಯ ಪರೀಕ್ಷಾರ್ಥ ನೀರು ಹರಿಸುವ ಕಾರ್ಯಚರಣೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಪರಿಶೀಲನೆ ಮಾಡಿದರು.

ನಂತರ ಸಕಲೇಶಪುರದ ದೊಡ್ಡನಗರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, “ಎತ್ತಿಹೊಳೆ ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ತಾಯಿ ಗಂಗೆ ಪೂಜೆ ಮಾಡಿ ಖುದ್ದಾಗಿ ನಾನೇ ಪ್ರಾಯೋಗಿಕ ಪರೀಕ್ಷೆಗೆ ಚಾಲನೆ ನೀಡಿದ್ದೇನೆ. ನಮ್ಮ ಅಧಿಕಾರಿಗಳು ಈ ಯೋಜನೆಯ ವಿವರ ಮತ್ತು ವಿಡಿಯೋಗಳನ್ನು ತೋರಿಸಿದರು. ನಾನು ಕಣ್ಣಾರೆ ನೋಡಬೇಕು ಎಂದು ಬಂದಿದ್ದೇನೆ. ಈ ಹಿಂದೆ ಭೇಟಿ ನೀಡಿದಾಗ ಶೀಘ್ರವಾಗಿ ಕೆಲಸ ಮುಗಿಸಬೇಕು ಎಂದು ತಿಳಿಸಿದ್ದೇ, ಅದರಂತೆ ಒಂದೆರಡು ತಿಂಗಳು ತಡವಾಗಿಯಾದರೂ ಕೆಲಸ ಮುಗಿದಿದೆ” ಎಂದು ತಿಳಿಸಿದರು.

“ಒಟ್ಟು 8 ವಿಯರ್‌ ಗಳಲ್ಲಿ 5 ವಿಯರ್ ಗಳಿಗೆ ಚಾಲನೆ ನೀಡಲಾಗಿದೆ. 1,500 ಕ್ಯೂಸೆಕ್ಸ್ ನೀರನ್ನು ಮೇಲಕ್ಕೆ ಎತ್ತಲಾಗಿದೆ. ನೀರು ಕಡಿಮೆ ಆಗುವ ಮೊದಲು ಶುಭದಿನ, ಶುಭ ಘಳಿಗೆ ನೋಡಿ ಮುಖ್ಯಮಂತ್ರಿಗಳಿಂದ ಚಾಲನೆ ಮಾಡಿಸಲಾಗುವುದು. ಈ ದೊಡ್ಡ ಯೋಜನೆಯನ್ನು ಕಣ್ಣಾರೆ ನೋಡಬೇಕು ಎಂದು ಭೇಟಿ ನೀಡಿದೆ. ನಮ್ಮ ಎಲ್ಲಾ ಮಂತ್ರಿಗಳಿಗೂ ತಿಳಿಸಿ ಎಲ್ಲರೂ ಸೇರಿ ಉದ್ಘಾಟನೆಯಲ್ಲಿ ಭಾಗವಹಿಸುತ್ತೇವೆ” ಎಂದು ತಿಳಿಸಿದರು.

7 ಜಿಲ್ಲೆ, 75 ಲಕ್ಷ ಜನರಿಗೆ ಅನುಕೂಲ

ನಂತರ ಯೋಜನೆ ಕುರಿತು ವಿವರಣೆ ನೀಡಿದ ಅವರು, “ಈ ಯೋಜನೆಯಿಂದ 24.01 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಕುಡಿಯಲು ನೀರು ಪೂರೈಸಲಾಗುವುದು. ಬರಪೀಡಿತ 29 ತಾಲೂಕಿನ 38 ಪಟ್ಟಣ ಹಾಗೂ 6,657 ಗ್ರಾಮಗಳ ಸುಮಾರು 75.59 ಲಕ್ಷ ಜನರು ಮತ್ತು ಜಾನುವಾರುಗಳಿಗೆ 14.056 ಟಿಎಂಸಿ ನೀರನ್ನು ಒದಗಿಸಲಾಗುವುದು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ತುಮಕೂರು ವ್ಯಾಪ್ತಿಯ 527 ಕೆರೆಗಳಿಗೆ 9.953 ಟಿಎಂಸಿ ನೀರನ್ನು ಹರಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ” ಎಂದು ತಿಳಿಸಿದರು.

“23,251 ಕೋಟಿ ಮೊತ್ತದ ಈ ಮಹತ್ವಾಕಾಂಕ್ಷಿ ಯೋಜನೆಯು ಹಲವು ವರ್ಷಗಳಿಂದ ಮೊದಲನೇ ಹಂತದಲ್ಲಿ ಏತ (Lift) ಮತ್ತು ವಿದ್ಯುತ್ ಪೂರೈಕೆ ಕಾಮಗಾರಿಗಳಲ್ಲಿ ಅಚಡಣೆ ಉದ್ಭವಿಸಿದ್ದ ಕಾರಣ ಈ ಯೋಜನೆ ಪೂರ್ಣಗೊಳಿಸುವುದು ವಿಳಂಬವಾಗಿತ್ತು. ಈ ಅಡಚಣೆಗಳನ್ನು ನಿವಾರಣೆ ಮಾಡಿಕೊಂಡು ಈಗ ಯೋಜನೆಯು ನಿರ್ಣಾಯಕ ಘಟ್ಟ ತಲುಪಿದೆ” ಎಂದರು.

“ಈ ಯೋಜನೆಯಲ್ಲಿ ವಿಯರ್ 1,2,4,5 ಮತ್ತು 8ರಿಂದ 1571 ಕ್ಯೂಸೆಕ್ಸ್ ನೀರನ್ನು ಎತ್ತಿ ವಿತರಣಾ ತೊಟ್ಟಿ-3ಕ್ಕೆ ಪೂರೈಸಲಾಗುವುದು. ನಂತರ ಇಲ್ಲಿಂದ ವಿತರಣಾ ತೊಟ್ಟಿ-4ರ ಮೂಲಕ ಗುರುತ್ವ ಕಾಲುವೆಗಳಿಂದ ಈ ನೀರನ್ನು ಹರಿಸಲಾಗುವುದು. ಈ ನೀರು ಒಟ್ಟು 252.87 ಕಿ.ಮೀ ಉದ್ದವಿದ್ದು, ಈ ಪೈಕಿ 164 ಕಿ.ಮೀ ಕಾಮಗಾರಿ ಪೂರ್ಣಗೊಂಡಿದೆ. ಇನ್ನು 25.87 ಕಿ.ಮೀ ಗುರುತ್ವ ಕಾಲುವೆ ಕಾಮಗಾರಿ ಪ್ರಗತಿಯಲ್ಲಿದೆ. ಈ ಮಧ್ಯೆ 42 ಕಿ.ಮೀ ನಂತರ ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಕಾಮಗಾರಿ ಪೂರ್ಣಗೊಂಡಿಲ್ಲ. ಹೀಗಾಗಿ 32.50 ಕಿ.ಮೀ ನಂತರ ನೀರನ್ನು ನಾಲಾ ಎಸ್ಕೇಪ್ ಮೂಲಕ 132.50 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ವೇದಾ ವ್ಯಾಲಿ ಮೂಲಕ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಒಂದಷ್ಟು ಕಡೆ ಅರಣ್ಯ ಇಲಾಖೆಗೆ ಸೇರಿದ ಭೂಮಿಯ ತೊಂದರೆಯಿದೆ. ಅದನ್ನು ಬಗೆಹರಿಸಲಾಗುವುದು. ಇದರ ಬಗ್ಗೆ ಅರಣ್ಯ ಇಲಾಖೆಯವರ ಬಳಿ ನಾನು ಮತ್ತು ಸಿಎಂ ಅವರು ಮಾತನಾಡಲಾಗುವುದು” ಎಂದರು.

“ಈ ಯೋಜನೆಗಾಗಿ 2024ರ ಜುಲೈ ಅಂತ್ಯದರೆಗೆ 16,152 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದ್ದು, 31-03-2027ರ ವೇಳೆಗೆ ಈ ಯೋಜನೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಇನ್ನು ಈ ಯೋಜನೆಯಲ್ಲಿ ಜಲಾನಯನ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ 8 ವಿಯರ್ ಗಳ ಬಳಿ ನೀರಿನ ಹರಿವನ್ನು ನಿಖರವಾಗಿ ಅಳೆಯುವ ಉದ್ದೇಶದಿಂದ ಜರ್ಮನಿ ಮೂಲದ ತಂತ್ರಜ್ಞಾನ (Real Time Discharge Measurement) ಅಳವಡಿಸಲಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಆಗಸ್ಟ್ 20ರವರೆಗೆ ಒಟ್ಟು 13.34 ಟಿಎಂಸಿ ನೀರಿನ ಹರಿವು ದಾಖಲಾಗಿದೆ” ಎಂದು ತಿಳಿಸಿದರು.

ಅರಣ್ಯ ಇಲಾಖೆಯಿಂದ ಒಂದಷ್ಟು ಕಡೆ ಅಡ್ಡಿ ಉಂಟಾಗಿದೆ ಎಂದಾಗ “ಹೌದು ಅಡ್ಡಿ ಉಂಟಾಗಿದೆ. ಅವರ ಬಳಿ ಮಾತನಾಡಿ ನಮ್ಮ ಕೆಲಸ ಮುಂದುವರೆಸುತ್ತೇವೆ. ಜೊತೆಗೆ ಬದಲಿ ಭೂಮಿಯನ್ನು ಈಗಾಗಲೇ ಅವರಿಗೆ ನೀಡಲಾಗಿದೆ” ಎಂದರು.

ಸಾಕಷ್ಟು ಕಡೆ ಲೀಕೇಜ್ ಸಮಸ್ಯೆಯಾಗಿದೆ ಎಂದು ಕೇಳಿದಾಗ “ಅದನ್ನೆಲ್ಲಾ ದುರಸ್ತಿ ಮಾಡಲಾಗುವುದು” ಎಂದರು.

ಅವೈಜ್ಞಾನಿಕವಾಗಿ ಗುಡ್ಡ ಅಗೆಯಲಾಗಿದೆ, ಪರಿಹಾರ ಸರಿಯಾಗಿ ಬಂದಿಲ್ಲ ಎನ್ನುವ ಆರೋಪದ ಬಗ್ಗೆ ಕೇಳಿದಾಗ “ಅವರೆಲ್ಲರ ಬಳಿ ನಾನು ಮಾತನಾಡುತ್ತೇನೆ” ಎಂದು ಹೇಳಿದರು.

ಮತ್ತೆ ‘ತಿರುಪತಿ ತಿರುಮಲ’ಕ್ಕೆ ‘ನಂದಿನಿ ತುಪ್ಪ’ ಸರಬರಾಜು: ಟ್ಯಾಂಕರ್ ಮೂಲಕ ಸಾಗಾಟಕ್ಕೆ ‘ಸಿಎಂ ಚಾಲನೆ’

BREAKING : ನಟ ದರ್ಶನ್ ಗೆ ಜೈಲೇ ಗತಿ : ಸೆ.9ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Actor Darshan

ಬಿಜೆಪಿ ಕೇಂದ್ರ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿವರ್ತನೆ ಪರ್ವ ಆರಂಭ…!

Share. Facebook Twitter LinkedIn WhatsApp Email

Related Posts

ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

05/08/2025 9:43 PM1 Min Read

ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್

05/08/2025 8:46 PM2 Mins Read

ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಅಶೋಕ್ ವಿರುದ್ಧ ಸಿಎಂ ಕಿಡಿ

05/08/2025 8:15 PM2 Mins Read
Recent News

BREAKING: ಎಲ್‌ಒಸಿಯಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ವರದಿಗಳನ್ನು ನಿರಾಕರಿಸಿದ ಭಾರತೀಯ ಸೇನೆ

05/08/2025 10:25 PM

Good News ; ಭಾರತೀಯ ಪ್ರವಾಸಿಗರಿಗೆ ‘ವೀಸಾ ಮುಕ್ತ’ ಪ್ರವೇಶಕ್ಕೆ ‘ಫಿಲಿಫೈನ್ಸ್’ ಅನುಮೋದನೆ

05/08/2025 10:10 PM

67,000 ಕೋಟಿ ರೂ.ಗಳ ರಕ್ಷಣಾ ಯೋಜನೆಗೆ ಮೋದಿ ಸರ್ಕಾರ ಅನುಮೋದನೆ

05/08/2025 10:00 PM

ಪ್ರಾಣಿ ಹಿಂಸೆ ತಡೆಗೆ ಮಹತ್ವದ ಕ್ರಮ ; ಮೊದಲ ಅಪರಾಧಕ್ಕೆ ಕನಿಷ್ಠ ₹10 ದಂಡ : ಕೇಂದ್ರ ಸರ್ಕಾರ

05/08/2025 9:53 PM
State News
KARNATAKA

ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

By kannadanewsnow0905/08/2025 9:43 PM KARNATAKA 1 Min Read

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ, 2025, ದಿನಾಂಕ 07.04.2025ರ ಪ್ರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್

05/08/2025 8:46 PM

ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಅಶೋಕ್ ವಿರುದ್ಧ ಸಿಎಂ ಕಿಡಿ

05/08/2025 8:15 PM

ಬೆಂಗಳೂರಿನ ಯಲಹಂಕದಲ್ಲಿ ನಿರ್ಮಿಸಿರುವ ‘ನೂತನ ಕ್ವಾಟ್ರಾಸ್’ ಉದ್ಘಾಟಿಸಿದ CRPF ಮಹಾನಿರ್ದೇಶಕರು

05/08/2025 8:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.