Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲಬುರ್ಗಿ : ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ : ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಶಾಕ್!

22/10/2025 2:48 PM

BIG NEWS: ಶಾಲೆಗೆ ಬಾರದಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು ದಾಖಲು

22/10/2025 2:48 PM

ಬಾಗಲಕೋಟೆಯಲ್ಲಿ ಘೋರ ದುರಂತ : ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

22/10/2025 2:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ‘ಇ-ಸ್ವತ್ತು’ ಸೌಲಭ್ಯ: ಪಾರದರ್ಶಕ ಆಡಳಿತದತ್ತ ಸರ್ಕಾರ ಮಹತ್ವದ ಹೆಜ್ಜೆ
KARNATAKA

ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ‘ಇ-ಸ್ವತ್ತು’ ಸೌಲಭ್ಯ: ಪಾರದರ್ಶಕ ಆಡಳಿತದತ್ತ ಸರ್ಕಾರ ಮಹತ್ವದ ಹೆಜ್ಜೆ

By kannadanewsnow0922/10/2025 2:37 PM

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೇ ಇ-ಸ್ವತ್ತು ಸೌಲಭ್ಯಕ್ಕೆ ಸರ್ಕಾರ ಚಾಲನೆ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಪಾರದರ್ಶಕ ಆಡಳಿತದತ್ತ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ.

ಗ್ರಾಮೀಣ ಆಡಳಿತವನ್ನು ಡಿಜಿಟಲ್‌ಗೊಳಿಸುವ ಮಹತ್ತರ ಹೆಜ್ಜೆಯಾಗಿ ರಾಜ್ಯ ಸರ್ಕಾರ “ಇ-ಸ್ವತ್ತು” ಯೋಜನೆಗೆ ಅಧಿಕೃತ ಚಾಲನೆ ನೀಡಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತಂದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿಗಳಿಗೆ ಡಿಜಿಟಲ್ ಪ್ರಮಾಣಪತ್ರ ವಿತರಿಸುವ ವ್ಯವಸ್ಥೆ ಜಾರಿಯಾಗಿದೆ.

ಹೊಸ ನಿಯಮಾವಳಿಗಳ ಪ್ರಕಾರ, ನಿರಾಕ್ಷೇಪಣ ಪತ್ರ (No Objection Letter-NOC), ಪರವಾನಗಿ, ತೆರಿಗೆ ಹಾಗೂ ಶುಲ್ಕಗಳ ನಿಗದಿಯನ್ನು ವೈಜ್ಞಾನಿಕ ರೀತಿಯಲ್ಲಿ ನಿಗದಿಪಡಿಸಲಾಗಿದ್ದು, ರಾಜ್ಯದ 95.75 ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ “ಇ-ಸ್ವತ್ತು” ಪ್ರಮಾಣಪತ್ರ ನೀಡುವ ದಾರಿಯನ್ನು ಸರ್ಕಾರ ತೆರೆದಿದೆ. ಹೊಸ ತಂತ್ರಾಂಶದ ಅಭಿವೃದ್ಧಿಯು ಹದಿನೈದು ದಿನಗಳೊಳಗೆ ಪೂರ್ಣಗೊಳ್ಳಲಿದ್ದು, ಗ್ರಾಮೀಣ ನಾಗರಿಕರು ನೇರವಾಗಿ ಆನ್‌ಲೈನ್ ಮೂಲಕ ಈ ಸೇವೆಯನ್ನು ಪಡೆಯಲು ಸಾಧ್ಯವಾಗಲಿದೆ.

ತೆರಿಗೆ ಲೆಕ್ಕಾಚಾರ ವಿಧಾನವನ್ನು ಸರಳಗೊಳಿಸಿರುವ ಸರ್ಕಾರ, ಇ-ಸ್ವತ್ತು ನಮೂನೆ ವಿತರಣೆ ಅವಧಿಯನ್ನು ಹಿಂದಿನ 45 ದಿನಗಳಿಂದ ಕೇವಲ 15 ದಿನಗಳಿಗೆ ಇಳಿಸಿದೆ. ನಿರ್ದಿಷ್ಟ ಅವಧಿಯಲ್ಲಿ ಅಧಿಕಾರಿಗಳಿಂದ ಅನುಮೋದನೆ ಲಭಿಸದಿದ್ದರೆ, ಸಿಸ್ಟಂ ಸ್ವಯಂಚಾಲಿತವಾಗಿ ಅನುಮೋದನೆ ನೀಡುವ ವ್ಯವಸ್ಥೆ ಅಳವಡಿಸಲಾಗಿದೆ.

2025-26 ನೇ ಸಾಲಿನ ಬಜೆಟ್‌ನ 272ನೇ ಕಂಡಿಕೆಯಲ್ಲಿ ಘೋಷಿಸಲಾದಂತೆ, ಗ್ರಾಮ ಪಂಚಾಯತ್ ವ್ಯವಸ್ಥೆಯನ್ನು ಬಲಪಡಿಸಿ, ಗ್ರಾಮೀಣ ಜನತೆಗೆ ಪಾರದರ್ಶಕ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆ ಕೈಗೊಳ್ಳಲಾಗಿದೆ. ತಿದ್ದುಪಡಿಗಳ ಪ್ರಕಾರ 199(ಬಿ) ಹಾಗೂ 199(ಸಿ) ಪ್ರಕ್ರಿಯೆಗಳನ್ನು ಸೇರಿಸಲಾಗಿದ್ದು, ಇವು ಸ್ವತ್ತುಗಳಿಗೆ ಖಾತಾ (PID) ವಿತರಣೆಯ ಜೊತೆಗೆ, ಪರಿವರ್ತಿತ ಹಾಗೂ ಅಪರೂಪದ ಬಡಾವಣೆಗಳ ತೆರಿಗೆ ನಿಯಮಗಳಿಗೂ ಸ್ಪಷ್ಟತೆ ನೀಡುತ್ತವೆ.

ಹೊಸ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು – 2025 ಅಧಿಸೂಚನೆಯಿಂದ ಹಳೆಯ 2021ರ ನಿಯಮಗಳನ್ನು ಹಿಂತೆಗೆದುಕೊಳ್ಳಲಾಗಿದೆ. ಇದರಡಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲ ಆಸ್ತಿಗಳ ಕರಡು ದಾಖಲೆಗಳನ್ನು ಸಾರ್ವಜನಿಕರ ಪರಿಶೀಲನೆಗೆ ತಂತ್ರಾಂಶದ ಮೂಲಕ ಲಭ್ಯ ಮಾಡಿಸಲಾಗುತ್ತದೆ. ನಾಗರಿಕರು ತಮ್ಮ ಆಸ್ತಿ ಮಾಹಿತಿಯನ್ನು ತಿದ್ದುಪಡಿಸಿಕೊಳ್ಳಲು ಹಾಗೂ ತೆರಿಗೆ ಪಾವತಿಸಿ ನವೀಕೃತ ದಾಖಲೆ ಪಡೆಯಲು ಅವಕಾಶ ಸಿಕ್ಕಿದೆ.

ಈ ಕ್ರಮದಿಂದ ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ವೃದ್ಧಿಯಾಗುವುದರೊಂದಿಗೆ, ಗ್ರಾಮೀಣ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಹಣ ಲಭ್ಯವಾಗಲಿದೆ. ತೆರಿಗೆ ಅಥವಾ ಶುಲ್ಕ ನಿಗದಿ ಕುರಿತ ವಿವಾದಗಳ ಕುರಿತು ಉಪ ಕಾರ್ಯದರ್ಶಿ (ಅಭಿವೃದ್ಧಿ) ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಿಗೆ ಕ್ರಮವಾಗಿ ಮೇಲ್ಮನವಿಯ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರವು ಡಿಜಿಟಲ್ ವ್ಯವಸ್ಥೆಯ ಮೂಲಕ ಪಾರದರ್ಶಕತೆ, ವೇಗ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಈ ಕ್ರಮವು “ಗ್ರಾಮದಿಂದಲೇ ಶಕ್ತಿ – ಗ್ರಾಮದಿಂದಲೇ ಅಭಿವೃದ್ಧಿ” ಎಂಬ ಧ್ಯೇಯವಾಕ್ಯವನ್ನು ಅರ್ಥಪೂರ್ಣಗೊಳಿಸುವತ್ತದ ನೂತನ ಪ್ರಯತ್ನವಾಗಿದೆ.

ಕರ್ನಾಟಕದಲ್ಲಿ ವೈದ್ಯಕೀಯ ವ್ಯಾಸಂಗದ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್: ಅರ್ಧಕ್ಕೆ ಕೋರ್ಸ್ ಕೈಬಿಡ್ರೆ 10 ಲಕ್ಷ ದಂಡ ಫಿಕ್ಸ್!

‘ಪ್ಯಾನ್ ಕಾರ್ಡ್’ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ ‘10,000 ದಂಡ’ ಕಟ್ಟಬೇಕಾಗುತ್ತೆ ಹುಷಾರ್! | PAN Card Alert

Share. Facebook Twitter LinkedIn WhatsApp Email

Related Posts

ಕಲಬುರ್ಗಿ : ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ : ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಶಾಕ್!

22/10/2025 2:48 PM1 Min Read

BIG NEWS: ಶಾಲೆಗೆ ಬಾರದಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು ದಾಖಲು

22/10/2025 2:48 PM1 Min Read

ಬಾಗಲಕೋಟೆಯಲ್ಲಿ ಘೋರ ದುರಂತ : ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

22/10/2025 2:43 PM1 Min Read
Recent News

ಕಲಬುರ್ಗಿ : ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ : ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಶಾಕ್!

22/10/2025 2:48 PM

BIG NEWS: ಶಾಲೆಗೆ ಬಾರದಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು ದಾಖಲು

22/10/2025 2:48 PM

ಬಾಗಲಕೋಟೆಯಲ್ಲಿ ಘೋರ ದುರಂತ : ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

22/10/2025 2:43 PM

ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ‘ಇ-ಸ್ವತ್ತು’ ಸೌಲಭ್ಯ: ಪಾರದರ್ಶಕ ಆಡಳಿತದತ್ತ ಸರ್ಕಾರ ಮಹತ್ವದ ಹೆಜ್ಜೆ

22/10/2025 2:37 PM
State News
KARNATAKA

ಕಲಬುರ್ಗಿ : ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ : ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಶಾಕ್!

By kannadanewsnow0522/10/2025 2:48 PM KARNATAKA 1 Min Read

ಕಲಬುರ್ಗಿ : ಕಲಬುರ್ಗಿಯಲ್ಲಿ ಎಲ್‍ಪಿಜಿ ಸಿಲಿಂಡರ್ ಸ್ಫೋಟದಿಂದ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಚಿಂಚೋಳಿ ತಾಲೂಕಿನ ಮೋತಕಪಲ್ಲಿ…

BIG NEWS: ಶಾಲೆಗೆ ಬಾರದಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು ದಾಖಲು

22/10/2025 2:48 PM

ಬಾಗಲಕೋಟೆಯಲ್ಲಿ ಘೋರ ದುರಂತ : ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

22/10/2025 2:43 PM

ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ‘ಇ-ಸ್ವತ್ತು’ ಸೌಲಭ್ಯ: ಪಾರದರ್ಶಕ ಆಡಳಿತದತ್ತ ಸರ್ಕಾರ ಮಹತ್ವದ ಹೆಜ್ಜೆ

22/10/2025 2:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.