Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ʻಇ-ಆಫೀಸ್ ತಂತ್ರಾಂಶʼ ಅನುಷ್ಠಾನ : ರಾಜ್ಯ ಸರ್ಕಾರ ಆದೇಶ
KARNATAKA

ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ʻಇ-ಆಫೀಸ್ ತಂತ್ರಾಂಶʼ ಅನುಷ್ಠಾನ : ರಾಜ್ಯ ಸರ್ಕಾರ ಆದೇಶ

By kannadanewsnow57
vidhana soudha
vidhana soudha

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಇ-ಆಫೀಸ್ ತಂತ್ರಾಂಶ ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ) ಯ ಉಲ್ಲೇಖ (1) & (2) ರ ಸರ್ಕಾರಿ ಆದೇಶದಲ್ಲಿ ಇ- ಆಫೀಸ್ ತಂತ್ರಾಂಶವನ್ನು ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳ ಕಛೇರಿ/ ಪ್ರಾದೇಶಿಕ ಆಯುಕ್ತರುಗಳ ಕಛೇರಿ / ಜಿಲ್ಲಾಧಿಕಾರಿಗಳ ಕಛೇರಿ/ ಜಿಲ್ಲಾ ಪಂಚಾಯತ್ ಕಛೇರಿ/ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ (ಪ್ರಾದೇಶಿಕ ಮತ್ತು ಸಾಮಾಜಿಕ) ಗಳಲ್ಲಿ ಕಡ್ಡಾಯವಾಗಿ ಇ-ಆಫೀಸ್ ಅನುಷ್ಠಾನಗೊಳಿಸಿ, ತಾಲ್ಲೂಕು ಮಟ್ಟದ ಕಛೇರಿಗಳಲ್ಲಿ ಅನುಷ್ಠಾನ ಪ್ರಕ್ರಿಯೆ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿರುತ್ತದೆ.

ಮುಂದುವರೆದು, ಎಲ್ಲಾ ಜಿಲ್ಲಾಧಿಕಾರಿಗಳ ಕಛೇರಿ ಮತ್ತು ಜಿಲ್ಲಾ ಪಂಚಾಯತ್ ಕಛೇರಿಗಳಲ್ಲಿ ಇ-ಆಫೀಸ್ ಅನುಷ್ಠಾನಗೊಂಡಿರುವ ಮೇರೆಗೆ, ಆಯಾಯ ಜಿಲ್ಲೆಗಳ ಉಪ ವಿಭಾಗಾಧಿಕಾರಿಗಳ ಕಛೇರಿ ಮತ್ತು ಎಲ್ಲಾ ತಾಲ್ಲೂಕು ಮಟ್ಟದ ತಹಶೀಲ್ದಾರ್ ಕಛೇರಿ ಹಾಗೂ ತಾಲ್ಲೂಕು ಪಂಚಾಯತ್ ಕಛೇರಿಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ದಿನಾಂಕ: 01-04-2021 ರಿಂದ ಅನುಷ್ಠಾನಗೊಳಿಸುವಂತೆ ಉಲ್ಲೇಖ (3) ರಲ್ಲಿ ಆದೇಶಿಸಲಾಗಿರುತ್ತದೆ. ಅದರಂತೆ, ತಾಲ್ಲೂಕು ಮಟ್ಟದ ಎಲ್ಲಾ ತಹಶೀಲ್ದಾರ್‌ಗಳ ಕಛೇರಿ, ತಾಲ್ಲೂಕು ಪಂಚಾಯತ್ ಕಛೇರಿ, ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗಳು ಹಾಗೂ ಉಪನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಇ-ಕಛೇರಿ ತಂತ್ರಾಂಶವನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿರುತ್ತದೆ ಹಾಗೂ ರಾಜ್ಯದ ಎಲ್ಲಾ ನಿಗಮ/ ಮಂಡಳಿ/ ಆಯೋಗ/ ನಿಯಮಿತ ಕಂಪನಿ ಮತ್ತು ಇತರ ಸ್ನಾಯುತ್ತ ಸಂಸ್ಥೆಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗಳಿಸಲು ಉಲ್ಲೇಖ (4) ರ ಸರ್ಕಾರಿ ಆದೇಶದಲ್ಲಿ ಅದೇಶಿಸಲಾಗಿರುತ್ತದೆ. ಅದಾಗ್ಯೂ ಈವರೆಗೂ ಹಲವಾರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಛೇರಿಗಳು, ನಿಗಮ/ ಮಂಡಳಿ/ ಆಯೋಗ/ ನಿಯಮಿತ ಕಂಪನಿ ಮತ್ತು ಇತರೆ ಸ್ನಾಯುತ್ತ ಸಂಸ್ಥೆಗಳಲ್ಲಿ ಇ-ಕಛೇರಿ ತಂತ್ರಾಂಶದ ಅನುಷ್ಠಾನ ಪ್ರಕ್ರಿಯೆಯನ್ನು ಪ್ರಾರಂಭಿಸಿರುವುದಿಲ್ಲ (ಸಚಿವಾಲಯವಾರು ವಿವರವನ್ನು ಅನುಬಂಧ-1 ರಲ್ಲಿ ಲಗತ್ತಿಸಿದೆ).

ಆದ್ದರಿಂದ, ತಮ್ಮ ಸಚಿವಾಲಯದ ಅಧೀನದಲ್ಲಿ ಬರುವ ಯಾವ ಇಲಾಖೆಗಳು/ ಜಿಲ್ಲಾ ಮಟ್ಟದ ಕಛೇರಿಗಳು/ ತಾಲ್ಲೂಕು ಮಟ್ಟದ ಕಛೇರಿಗಳು/ ನಿಗಮ/ ಮಂಡಳಿ/ ವಿಶ್ವವಿದ್ಯಾಲಯಗಳು/ ಇತರೆ ಸ್ನಾಯುತ್ತ ಸಂಸ್ಥೆಗಳಲ್ಲಿ ಇ-ಆಫೀಸ್ ತಂತ್ರಾಂಶವು ಅನುಷ್ಠಾನಗೊಂಡಿರುವುದಿಲ್ಲವೋ ಅಂತಹ ಕಛೇರಿಗಳಲ್ಲಿ ತುರ್ತಾಗಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಕಡ್ಡಾಯವಾಗಿ ಕಡತ ನಿರ್ವಹಣೆಯನ್ನು ಇ-ಆಫೀಸ್ ತಂತ್ರಾಂಶದ ಮೂಲಕವೇ ನಿರ್ವಹಿಸಬೇಕೆಂದು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಈ ಮೂಲಕ ಕೋರಲಾಗಿದೆ.

E-Office software to be implemented in all district and taluk headquarters of the state: State government ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ʻಇ-ಆಫೀಸ್ ತಂತ್ರಾಂಶʼ ಅನುಷ್ಠಾನ : ರಾಜ್ಯ ಸರ್ಕಾರ ಆದೇಶ
Share. Facebook Twitter LinkedIn WhatsApp Email

Related Posts

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

2 Mins Read

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

1 Min Read

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

1 Min Read
Recent News

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

BREAKING : ಕರ್ನಾಟಕದಿಂದ ರಾಜ್ಯಸಭೆಗೆ ಮೂವರು ಕಾಂಗ್ರೆಸ್, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

State News
KARNATAKA

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ನಷ್ಟದ ಕಾರಣದಿಂದಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ‘ಉಡಾನ್’ (UDAN) ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು…

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

BREAKING : ಕರ್ನಾಟಕದಿಂದ ರಾಜ್ಯಸಭೆಗೆ ಮೂವರು ಕಾಂಗ್ರೆಸ್, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.