Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಸೀಟಿಗೆ ಆಪ್ಷನ್ಸ್ ಮರುಕ್ರಮಕ್ಕೆ ಸಮಯ ವಿಸ್ತರಣೆ

18/09/2025 7:47 PM

BREAKING : ಹೈದರಾಬಾದ್-ಬೈಕಿಂಗ್ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ; ವೈಜಾಗ್’ನಲ್ಲಿ ತುರ್ತು ಭೂಸ್ಪರ್ಶ

18/09/2025 7:33 PM
high court

ಧರ್ಮಸ್ಥಳದಲ್ಲಿ ಗುರುತಿಸಿದ ಸ್ಥಳ ಅಗೆಯಲು ಸೂಚನೆ ಕೋರಿ ರಿಟ್ ಅರ್ಜಿ : ವಿಚಾರಣೆ ಸೆ.25ಕ್ಕೆ ಮುಂದೂಡಿದ ಹೈಕೋರ್ಟ್

18/09/2025 7:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ : ನಾಳೆಯಿಂದ `ಸ್ಥಿರಾಸ್ತಿ’ ನೋಂದಣಿಗೆ `ಇ- ಸ್ವತ್ತು’ ಕಡ್ಡಾಯ!
KARNATAKA

ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ : ನಾಳೆಯಿಂದ `ಸ್ಥಿರಾಸ್ತಿ’ ನೋಂದಣಿಗೆ `ಇ- ಸ್ವತ್ತು’ ಕಡ್ಡಾಯ!

By kannadanewsnow5706/10/2024 7:27 AM

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೊಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ.

ಈ ಕುರಿತು ಪ್ರಕಟಣೆ ನೀಡಿದ್ದು, ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೇ ನಕ್ಷೆ (ಸ್ಕೆಚ್) ನಮೂನೆ 11 ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 05, 2016 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯತ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ 2014 ರಿಂದ ಸಂಯೋಜನೆಗೊಳಿಸಲಾಗಿದೆ ಎಂದಿದೆ.

ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ- ಆಸ್ತಿ ತಂತ್ರಾಂಶ ವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ ದಿನಾಂಕ:29-01-2020 ರಿಂದ ನೊಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.

ಇ-ಖಾತಾ ಸಂಯೋಜನೆ ಪ್ರಯೋಜನಗಳು ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೊಸಹೋಗುವುದನ್ನು ತಡೆಯುವುದು. ಮತ್ತು ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.

ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ಆಗುವುದನ್ನು ತಪ್ಪಿಸಬಹುದಾಗಿದೆ. ಹಾಗೂ ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶವನ್ನು ಈ ತಂತ್ರಾಂಶ ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದೆ.

E-property mandatory for registration of 'immovable property' from tomorrow ಆಸ್ತಿ ಖರೀದಿ ಮಾರಾಟಗಾರರೇ ಗಮನಿಸಿ : ನಾಳೆಯಿಂದ `ಸ್ಥಿರಾಸ್ತಿ' ನೋಂದಣಿಗೆ `ಇ- ಸ್ವತ್ತು' ಕಡ್ಡಾಯ!
Share. Facebook Twitter LinkedIn WhatsApp Email

Related Posts

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಸೀಟಿಗೆ ಆಪ್ಷನ್ಸ್ ಮರುಕ್ರಮಕ್ಕೆ ಸಮಯ ವಿಸ್ತರಣೆ

18/09/2025 7:47 PM1 Min Read
high court

ಧರ್ಮಸ್ಥಳದಲ್ಲಿ ಗುರುತಿಸಿದ ಸ್ಥಳ ಅಗೆಯಲು ಸೂಚನೆ ಕೋರಿ ರಿಟ್ ಅರ್ಜಿ : ವಿಚಾರಣೆ ಸೆ.25ಕ್ಕೆ ಮುಂದೂಡಿದ ಹೈಕೋರ್ಟ್

18/09/2025 7:30 PM2 Mins Read

BREAKING : ಉತ್ತರಕನ್ನಡ : ಬೈಕ್ ಓವರ್ ಟೇಕ್ ವಿಚಾರಕ್ಕೆ ಹಿಂದೂ ಯುವಕನಿಗೆ, ಚಾಕು ಇರಿದ ಮುಸ್ಲಿಂ ಯುವಕ

18/09/2025 7:26 PM1 Min Read
Recent News

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಸೀಟಿಗೆ ಆಪ್ಷನ್ಸ್ ಮರುಕ್ರಮಕ್ಕೆ ಸಮಯ ವಿಸ್ತರಣೆ

18/09/2025 7:47 PM

BREAKING : ಹೈದರಾಬಾದ್-ಬೈಕಿಂಗ್ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ; ವೈಜಾಗ್’ನಲ್ಲಿ ತುರ್ತು ಭೂಸ್ಪರ್ಶ

18/09/2025 7:33 PM
high court

ಧರ್ಮಸ್ಥಳದಲ್ಲಿ ಗುರುತಿಸಿದ ಸ್ಥಳ ಅಗೆಯಲು ಸೂಚನೆ ಕೋರಿ ರಿಟ್ ಅರ್ಜಿ : ವಿಚಾರಣೆ ಸೆ.25ಕ್ಕೆ ಮುಂದೂಡಿದ ಹೈಕೋರ್ಟ್

18/09/2025 7:30 PM

BREAKING : ಉತ್ತರಕನ್ನಡ : ಬೈಕ್ ಓವರ್ ಟೇಕ್ ವಿಚಾರಕ್ಕೆ ಹಿಂದೂ ಯುವಕನಿಗೆ, ಚಾಕು ಇರಿದ ಮುಸ್ಲಿಂ ಯುವಕ

18/09/2025 7:26 PM
State News
KARNATAKA

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಸೀಟಿಗೆ ಆಪ್ಷನ್ಸ್ ಮರುಕ್ರಮಕ್ಕೆ ಸಮಯ ವಿಸ್ತರಣೆ

By kannadanewsnow0918/09/2025 7:47 PM KARNATAKA 1 Min Read

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ಮರುಕ್ರಮಗೊಳಿಸಲು ಸೆ.19ರಂದು ಬೆಳಿಗ್ಗೆ 7 ಗಂಟೆವರೆಗೆ…

high court

ಧರ್ಮಸ್ಥಳದಲ್ಲಿ ಗುರುತಿಸಿದ ಸ್ಥಳ ಅಗೆಯಲು ಸೂಚನೆ ಕೋರಿ ರಿಟ್ ಅರ್ಜಿ : ವಿಚಾರಣೆ ಸೆ.25ಕ್ಕೆ ಮುಂದೂಡಿದ ಹೈಕೋರ್ಟ್

18/09/2025 7:30 PM

BREAKING : ಉತ್ತರಕನ್ನಡ : ಬೈಕ್ ಓವರ್ ಟೇಕ್ ವಿಚಾರಕ್ಕೆ ಹಿಂದೂ ಯುವಕನಿಗೆ, ಚಾಕು ಇರಿದ ಮುಸ್ಲಿಂ ಯುವಕ

18/09/2025 7:26 PM

ಬಿಜೆಪಿ ಅಧಿಕೃತ ಮತಗಳ್ಳತನ ಮಾಡುತ್ತಿರುವ ದಾಖಲೆಗಳಿವೆ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

18/09/2025 7:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.