ನವದೆಹಲಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಲಿದೆ.
ಸೋರೆನ್ ಅವರು ಗುರುವಾರ ಇಡಿ ಮುಂದೆ ಹಾಜರಾಗುವುದನ್ನು ಬಿಟ್ಟು ಛತ್ತೀಸ್ಗಢದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ನಂತರ ಇಡಿ ಈ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ.
ತನ್ನ ಗೈರುಹಾಜರಿಯನ್ನು ಸಮರ್ಥಿಸಿಕೊಂಡ ಸೋರೆನ್, ಇಡಿಗೆ ಪತ್ರ ಬರೆದು, ಕೊನೆಯ ಸಮನ್ಸ್ನಲ್ಲಿ ಹಾಜರಾಗಲು ಕೇವಲ ಒಂದು ದಿನದ ಸಮಯವನ್ನು ನೀಡಲಾಗಿತ್ತು. ಇದರಿಂದಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿಯಾಗಿ ಕೆಲವು ಪೂರ್ವ ಬದ್ಧತೆಗಳನ್ನು ಹೊಂದಿರುವುದಾಗಿ ಹೇಳಿದ್ದರು.
#WATCH | I've been summoned by ED today when I already have a program in Chhattisgarh today. If I've committed a crime that big, come & arrest me. Why the questioning?… Security near ED office has increased. Why, are you scared of Jharkhandis?, says Jharkhand CM Hemant Soren pic.twitter.com/41cR92FCHM
— ANI (@ANI) November 3, 2022
ವಿಚಾರಣೆಗೆ ಹಾಜರಾಗಲು ಮೂರು ವಾರಗಳ ಕಾಲಾವಕಾಶ ನೀಡುವಂತೆ ಸೋರೆನ್ ಇಡಿಗೆ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಇಡಿ ಹೊಸದಾಗಿ ಸಮನ್ಸ್ ನೀಡಲು ನಿರ್ಧರಿಸಿದೆ.
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ತನಿಖಾ ಸಂಸ್ಥೆ ಹೇಮಂತ್ ಸೊರೆನ್ ಅವರನ್ನು ರಾಂಚಿ ಕಚೇರಿಗೆ ವಿಚಾರಣೆಗೆ ಕರೆಸಿತ್ತು.
ಗುರುವಾರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸೋರೆನ್, ವಿಚಾರಣೆಗೆ ಕರೆಸುವ ಬದಲು ಇಡಿ, ಅಂತಹ ದೊಡ್ಡ ಅಪರಾಧ ಮಾಡಿದ್ದರೆ ಬಂಧಿಸಲಿ ಎಂದು ಸವಾಲು ಹಾಕಿದ್ದರು.
BIG NEWS: ಕಾನ್ಸ್ ಟೇಬಲ್ ವಯೋಮಿತಿ ‘2 ವರ್ಷ’ ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಆದೇಶ | AGE LIMIT INCRESS