Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆ ಪಾಕಿಸ್ತಾನ-ಇರಾಕ್ ‘ಇಂಧನ ಒಪ್ಪಂದ’: ಹಾರ್ಮುಜ್ ಜಲಸಂಧಿಯಲ್ಲಿ ಇನ್ನು ‘ಡ್ರ್ಯಾಗನ್’ ಹದ್ದಿನ ಕಣ್ಣು; ತೈಲ ಪೂರೈಕೆಗೆ ಇರಾನ್ ಸಮ್ಮತಿ!

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಶೈಕ್ಷಣಿಕ ಮತ್ತು ಶ್ರೀಸಾಮಾನ್ಯರ ಪ್ರವಾಸೋದ್ಯಮಕ್ಕೆ ಆದ್ಯತೆ: ಸಚಿವ ಎಚ್.ಕೆ ಪಾಟೀಲ ಪ್ರತಿಪಾದನೆ
KARNATAKA

ರಾಜ್ಯದಲ್ಲಿ ಶೈಕ್ಷಣಿಕ ಮತ್ತು ಶ್ರೀಸಾಮಾನ್ಯರ ಪ್ರವಾಸೋದ್ಯಮಕ್ಕೆ ಆದ್ಯತೆ: ಸಚಿವ ಎಚ್.ಕೆ ಪಾಟೀಲ ಪ್ರತಿಪಾದನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ವಿಲಾಶಿ ಮತ್ತು ಮೇಲ್ಮದ್ಯಮ ವರ್ಗದವರ ಮತ್ತು ಶ್ರೀಮಂತರ ಪ್ರವಾಸೋದ್ಯಮ ಅವಶ್ಯಕತೆಗಳನ್ನು ಪೂರೈಸುವ ಜೊತೆಜೊತೆಗೆ ಶ್ರೀಸಾಮಾನ್ಯರ, ಬಡವರ, ವಿದ್ಯಾರ್ಥಿಗಳ, ಮಕ್ಕಳ ಮತ್ತು ಇತರ ಅವಕಾಶ ವಂಚಿತ ಸಮುದಾಯಗಳ ಪ್ರವಾಸೋದ್ಯಮದ ಅವಶ್ಯಕತೆಗಳಿಗೆ ಪೂರಕವಾದ ನೀತಿಗಳನ್ನು ಸರ್ಕಾರಗಳು ರೂಪಿಸಬೇಕೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಅವರು ಇಂದಿಲ್ಲಿ ಬಲವಾಗಿ ಪ್ರತಿಪಾದಿಸಿದರು.

ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ನಡೆದ ದಕ್ಷಿಣದ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರವಾಸೋದ್ಯಮ ಸಚಿವರುಗಳ ಸಮ್ಮೇಳನದಲ್ಲಿ ಅವರು ಕರ್ನಾಟಕದ ನಿಲುವನ್ನು ಪ್ರತಿಪಾದಿಸಿದರು.

ಕರ್ನಾಟಕ ಪ್ರವಾಸೋದ್ಯಮ ಅತ್ಯಂತ ಉಚ್ಚಾಯ ಸ್ಥಿತಿಯಲ್ಲಿದ್ದು ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಈ ಪ್ರಯತ್ನಿಗಳಿಗೆ ಬೆಂಬಲಿಸಬೇಕಾದ ಕೇಂದ್ರ ಸರ್ಕಾರವು ಮೈಸೂರಿನ ಚಾಮುಂಡೇಶ್ವರಿ ದೇವಿ ಬೆಟ್ಟವನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದ ಪ್ರಸಾದ್‌ ಯೋಜನೆಯಡಿ ಬಿಡುಗಡೆಯಾಗಬೇಕಾದ 45.17 ಕೋಟಿ ರೂಪಾಯಿಗಳ ಮೊದಲ ಕಂತು ಇನ್ನು ಬಿಡುಗಡೆಯಾಗಿಲ್ಲ. ಮೈಸೂರು ಮತ್ತು ಹಂಪಿ ಯೋಜನೆಗಳನ್ನು ಸ್ವದೇಶಿ ದರ್ಶನ 2.0 ಕಾರ್ಯಕ್ರಮಗಳ ಅಡಿಯಲ್ಲಿ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು 46.17 ಕೋಟಿ ರೂಪಾಯಿಗಳು ಇನ್ನು ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು.

ಹಣ ಬಿಡುಗಡೆಯಲ್ಲಿ ಇಂಥ ವಿಳಂಬಗಳು ಅತ್ಯಂತ ಮಹತ್ವದ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಲ್ಲಿ ಅಡ್ಡಿಯುಂಟುಮಾಡುತ್ತಿದ್ದು ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡುವಲ್ಲಿ ರಾಜ್ಯ ಸರ್ಕಾರವನ್ನು ಪೇಚಿಗೆ ಸಿಲುಕಿಸುತ್ತಿವೆ ಎಂದು ಹೇಳಿದರು. ಆದ್ದರಿಂದ ಮುಂದಿನ ಅನಾನುಕೂಲಗಳನ್ನು ತಪ್ಪಿಸಲು ಹಾಗೂ ಕಾಲಮಿತಿಗೊಳಪಟ್ಟು ಯೋಜನೆಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರದ ಹಣ ಬಿಡುಗಡೆಯನ್ನು ತ್ವರಿತಗೊಳಿಸಬೇಕೆಂದು ಒತ್ತಾಯಿಸಿದರು.

ಗೋಲ್ಡನ್‌ ಚಾರಿಯೆಟ್‌ ರೈಲು ಯೋಜನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದರೆ ಭಾರತ್‌ ಗೌರವ ರೈಲ್ವೆ ನೀತಿಯಂತೆ ಗೋಲ್ಡನ್‌ ಚಾರಿಯೆಟ್‌ ಪ್ರವಾಸದ ನೀತಿಯನ್ನು ಬದಲಾವಣೆ ಮಾಡಿ ಪ್ರವಾಸದ ಶುಲ್ಕವನ್ನು ಕಡಿತಗೊಳಿಸುವ ಮೂಲಕ ಅತ್ಯಂತ ಮಹತ್ವದ ವೈಭವದ ಈ ಪ್ರವಾಸ ಯೋಜನೆಗೆ ಸಾರ್ವಜನಿಕರು ಉಪಯೋಗಿಸಲು ಅನುಕೂಲವಾಗಬೇಕೆಂದು ಒತ್ತಾಯಿಸಿದರು. ಬೇರೆ ಬೇರೆ ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಪಾರಂಪರಿಕ ತಾಣಗಳು ಮತ್ತು ಇಕೋ ಟೂರಿಸಂ ತಾಣಗಳನ್ನು ಅಂದರೆ ಪರಿಸರ ಪ್ರವಾಸೋದ್ಯಮ ತಾಣಗಳನ್ನು ಗೋಲ್ಡನ್‌ ಚಾರಿಯೆಟ್‌ ಯೋಜನೆಗೆ ಜೋಡಿಸಬೇಕೆಂದು ಎಲ್ಲ ವರ್ಗದ ಜನರು ಈ ಯೋಜನೆಯನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ನೀತಿ ಬದಲಾವಣೆ ಮತ್ತು ಪ್ರವೃತ್ತಿ ಬದಲಾವಣೆ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದರು.

ಕರ್ನಾಟಕದ ಪ್ರಸ್ತುತ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಮಾರ್ಗದತ್ತು ಯೋಜನೆ, ನಮ್ಮ ಸ್ಮಾರಕ ಯೋಜನೆಯನ್ನು ವಿವರಿಸಿದ ಸಚಿವರು ದತ್ತು ನೀಡಲು 800 ಸ್ಮಾರಕಗಳನ್ನು ಗುರುತಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 25000 ಅಲಕ್ಷಿತ ಸ್ಮಾರಕಗಳಿವೆ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಸ್ಮಾರಕಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಪುನರುಜ್ಜೀವನಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಅತ್ಯಂತ ಜನಪ್ರಿಯ ಯೋಜನೆಯಾದ ಶಕ್ತಿ ಯೋಜನೆಯಡಿ 285 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು ಪಾರಂಪರಿಕ ಮತ್ತು ಶ್ರದ್ಧಾ ಪ್ರವಾಸೋದ್ಯಮದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ ಎಂದು ಮಾನ್ಯ ಸಚಿವರು ವಿವರಿಸಿದರು.

ಕರ್ನಾಟಕದ 5 ಪಾರಂಪರಿಕ ತಾಣಗಳನ್ನು ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರ್ಪಡೆಯಾಗಿದ್ದು ಡೆಕ್ಕನ್‌ ಸುಲ್ತನೇಟ್‌ನ ಕೋಟೆಗಳು, ಶ್ರೀರಂಗಪಟ್ಟಣದ ಸ್ಮಾರಕಗಳು, ಐಹೊಳೆ-ಬಾದಾಮಿಯ ಮಂದಿರಗಳ ಶಿಲ್ಪಕಲೆ, ಹಿರೆಬೆಣಕಲ್‌ನ ಮೆಗಾಲಿಟಿಕ್‌ ಸೈಟ್‌ ಮತ್ತು ಬೀದರ್‌ನ ಕರೇಜ್‌ ವ್ಯವಸ್ಥೆ ಹಾಗೂ ಲಕ್ಕುಂಡಿಯ ಪಾರಂಪರಿಕ ಶಿಲ್ಪಕಲಾ ವೈಭವಗಳು ಯುನೆಸ್ಕೋದ ವಿಶ್ವಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರಬೇಕೆಂದು ಕರ್ನಾಟಕದ ಉತ್ಕಟವಾದ ಬಯಕೆಯಾಗಿದೆ. ಇಂಥ ತಾಣಗಳನ್ನು ಯುನೆಸ್ಕೋ ತಾಣಗಳಿಗೆ ಸೇರಿಸಬೇಕೆಂದು ಕೇಂದ್ರ ಸರ್ಕಾರ ಅಗತ್ಯದ ಬೆಂಬಲ ನೀಡಬೇಕೆಂದು ವಿನಂತಿಸಿದರು.

ಕರ್ನಾಟಕದ ಹೊಸ ಪ್ರವಾಸೋದ್ಯಮ ನೀತಿ 2024-29 ಎಲ್ಲ ವರ್ಗದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲು ಪರಿಷ್ಕೃತವಾದ ಮಹತ್ವವನ್ನು ಮತ್ತು ಒತ್ತು ನೀಡಲು ಪ್ರತಿಯೊಬ್ಬ ಪ್ರವಾಸಿಗನ ಸಂತಸಮಯ ಕ್ಷಣಗಳನ್ನು ಕಳೆಯಲು ಹಾಗೂ ಆರ್ಥಿಕ ವೃದ್ಧಿ ಮಾಡುವ ದಿಸೆಯಲ್ಲಿ ಮಹತ್ವದ ಹೆಜ್ಜೆಗಳನ್ನಿರಿಸುತ್ತದೆ ಎಂದು ಮಾನ್ಯ ಸಚಿವರು ಹೇಳಿದರು.

ಈ ಸಮ್ಮೇಳನದಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌, ಪ್ರವಾಸೋದ್ಯಮ ಇಲಾಖೆ ಸಹಾಯಕ ಸಚಿವ ಶ್ರೀ ಸುರೇಶ ಗೋಪಿ ಆಂದ್ರಪ್ರದೇಶ ಮತ್ತು ಪುದುಚೇರಿಗಳ ಪ್ರವಾಸೋದ್ಯಮ ಸಚಿವರು ಹಾಗೂ ದಕ್ಷಿಣದ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾರ್ಯದರ್ಶಿಗಳು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆ ಯಶವಂತಪುರದವರೆಗೆ ವಿಸ್ತರಣೆ

ಬೆಂಗಳೂರು ಜನತೆ ಗಮನಕ್ಕೆ: ‘ಯಡಿಯೂರು ಕೆರೆ’ಯ ಕಲ್ಯಾಣಿಯಲ್ಲಿ ‘ಗಣೇಶ ಮೂರ್ತಿ ವಿಸರ್ಜನೆ’ಗೆ ನಿರ್ಬಂಧ

BIG NEWS: ‘ಕರ್ನಾಟಕ ಬಿಜೆಪಿ ಕಚೇರಿ’ ಸ್ಪೋಟಿಸಲು ಪ್ಲಾನ್ ಮಾಡಿದ್ರು: NIA ರಾಮೇಶ್ವರಂ ಕೆಫೆ ಕೇಸ್ ‘ಚಾರ್ಚ್ ಶೀಟ್’ನಲ್ಲಿ ಬಯಲು

Share. Facebook Twitter LinkedIn WhatsApp Email

Related Posts

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

1 Min Read

BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away

1 Min Read

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

1 Min Read
Recent News

ಇರಾನ್ ಜೊತೆ ಪಾಕಿಸ್ತಾನ-ಇರಾಕ್ ‘ಇಂಧನ ಒಪ್ಪಂದ’: ಹಾರ್ಮುಜ್ ಜಲಸಂಧಿಯಲ್ಲಿ ಇನ್ನು ‘ಡ್ರ್ಯಾಗನ್’ ಹದ್ದಿನ ಕಣ್ಣು; ತೈಲ ಪೂರೈಕೆಗೆ ಇರಾನ್ ಸಮ್ಮತಿ!

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away

BREAKING: ಯಾದವ್ ಕುಟುಂಬಕ್ಕೆ ಮತ್ತೊಂದು ಆಘಾತ: ಮುಲಾಯಂ ಸಿಂಗ್ ಕಿರಿಯ ಪುತ್ರ ಪ್ರತೀಕ್ ಯಾದವ್ ಅಕಾಲಿಕ ನಿಧನ | Prateek Yadav Dies

State News
KARNATAKA

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

By kannadanewsnow57 KARNATAKA 1 Min Read

ಬೆಂಗಳೂರು : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಖ್ಯಾತಿಯ…

BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.