Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮ್ಯಾಗ್ ಜೀನ್ ನಲ್ಲಿತ್ತು 40 ಕೋಟಿ ಮೌಲ್ಯದ ಕೊಕೇನ್ : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಆರೋಪಿ ಅರೆಸ್ಟ್, 4 ಕೆಜಿ ಕೊಕೇನ್ ಜಪ್ತಿ!

20/07/2025 11:19 AM

ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ : ಪ್ರಭು ಚೌವ್ಹಾಣ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

20/07/2025 11:11 AM

BREAKING : ಮತ್ತೊಂದು ಹೃದಯವಿದ್ರಾವಕ ಘಟನೆ : ಆರ್ಥಿಕ ಸಂಕಷ್ಟದಿಂದ ಒಂದೇ ಕುಟುಂಬದ ಐವರು ಆತ್ಮಹತ್ಯೆ!

20/07/2025 11:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲತಾಂಶ ಸುಧಾರಿಸಲು ‘ಶಿಕ್ಷಣ ಕೋಪೈಲಟ್ ಯೋಜನೆ’ ಜಾರಿ: ಸಚಿವ ಮಧು ಬಂಗಾರಪ್ಪ
KARNATAKA

ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲತಾಂಶ ಸುಧಾರಿಸಲು ‘ಶಿಕ್ಷಣ ಕೋಪೈಲಟ್ ಯೋಜನೆ’ ಜಾರಿ: ಸಚಿವ ಮಧು ಬಂಗಾರಪ್ಪ

By kannadanewsnow0918/10/2024 4:45 PM

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ʼಶಿಕ್ಷಣ ಕೋಪೈಲಟ್ʼ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮೈಕ್ರೋಸಾಫ್ಟ್ ಮತ್ತು ಶಿಕ್ಷಣ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಿದ್ದ “ಶಿಕ್ಷಣ ಕೋಪೈಲೆಟ್” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ನಿಟ್ಟಿನಲ್ಲಿ “ಶಿಕ್ಷಣ ಕೋಪೈಲಟ್” ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಚಾಲಿತ ಡಿಜಿಟಲ್ ಸಂಶೋಧನಾ ಯೋಜನೆ ಜಾರಿಮಾಡಲಾಗಿದೆ. ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ “ಶಿಕ್ಷಣ ಫೌಂಡೇಶನ್” ಮತ್ತು “ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ” ನಡುವಿನ ಸಹಯೋಗದೊಂದಿಗೆ ಈ ಕಾರ್ಯಕ್ರಮ ತರಲಾಗಿದೆ.

ಶಿಕ್ಷಕರು ಮಕ್ಕಳ ಶಕ್ತಿ ಮತ್ತು ದೌರ್ಬಲ್ಯವನ್ನು ಗುರುತಿಸಿ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ಚಿಂತನೆಯ ಕಾರ್ಯಕ್ರಮ ಇದಾಗಿದೆ. ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು ಸ್ಥಳೀಯ ಪಠ್ಯಕ್ರಮ, ಭಾಷೆ, ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷಕರನ್ನು ಸಶಕ್ತಗೊಳಿಸಿ ತಯಾರಿಸುತ್ತದೆ.

ಈ ಕಾರ್ಯಕ್ರಮವು ಕರ್ನಾಟಕದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ ಸುಮಾರು 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ತರಬೇತಿ ನೀಡಲಾಗುವುದು.

ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೋಗಳು ಮತ್ತು ಬೋಧನಾ ಸಂಪನ್ಮೂಲಗಳನ್ನು ರಚಿಸಲು “ಶಿಕ್ಷಣ ಕೋಪೈಲಟ್” ಸಹಾಯ ಮಾಡುತ್ತದೆ.

ಈ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿ ಶ್ರೀ ರಿತೇಶ್ ಕುಮಾರ್ ಸಿಂಗ್‌, ಆಯುಕ್ತರಾದ ಶ್ರೀ ತ್ರಿಲೋಕ ಚಂದ್ರ, ರಾಜ್ಯ ಯೋಜನಾ ನಿರ್ದೇಶಕರಾದ ಶ್ರೀ ಕೂರ್ಮರಾವ್, ಶಿಕ್ಷಣ ಫೌಂಡೇಷನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಶ್ರೀ ಪ್ರಸನ್ನ ವಡೆಯರ್, ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವೆಂಕಟ್ ಪದ್ಮನಾಭನ್ ಸೇರಿದಂತೆ ಸಂಬಂಧಪಟ್ಟ ಅನೇಕ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಮೈಸೂರು ಮುಡಾ ಹಗರಣದ ‘CBI ತನಿಖೆ’ಗೆ ಕೊಡಲು ನೀಡುವಂತೆ ‘ಛಲವಾದಿ ನಾರಾಯಣಸ್ವಾಮಿ’ ಆಗ್ರಹ

ಪಂಚಮಸಾಲಿ ಲಿಂಗಾಯತರ 2A ಮೀಸಲಾತಿ ವಿಚಾರ: ಈ ಮಾತು ಕೊಟ್ಟ ಡಿಸಿಎಂ ಡಿಕೆಶಿ

Share. Facebook Twitter LinkedIn WhatsApp Email

Related Posts

ಮ್ಯಾಗ್ ಜೀನ್ ನಲ್ಲಿತ್ತು 40 ಕೋಟಿ ಮೌಲ್ಯದ ಕೊಕೇನ್ : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಆರೋಪಿ ಅರೆಸ್ಟ್, 4 ಕೆಜಿ ಕೊಕೇನ್ ಜಪ್ತಿ!

20/07/2025 11:19 AM1 Min Read

ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ : ಪ್ರಭು ಚೌವ್ಹಾಣ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

20/07/2025 11:11 AM1 Min Read

BREAKING : ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಯುವತಿ ಸಾವು ಪ್ರಕರಣ : ಚಾಲಕನ ವಿರುದ್ಧ ‘FIR’ ದಾಖಲು

20/07/2025 10:27 AM1 Min Read
Recent News

ಮ್ಯಾಗ್ ಜೀನ್ ನಲ್ಲಿತ್ತು 40 ಕೋಟಿ ಮೌಲ್ಯದ ಕೊಕೇನ್ : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಆರೋಪಿ ಅರೆಸ್ಟ್, 4 ಕೆಜಿ ಕೊಕೇನ್ ಜಪ್ತಿ!

20/07/2025 11:19 AM

ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ : ಪ್ರಭು ಚೌವ್ಹಾಣ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

20/07/2025 11:11 AM

BREAKING : ಮತ್ತೊಂದು ಹೃದಯವಿದ್ರಾವಕ ಘಟನೆ : ಆರ್ಥಿಕ ಸಂಕಷ್ಟದಿಂದ ಒಂದೇ ಕುಟುಂಬದ ಐವರು ಆತ್ಮಹತ್ಯೆ!

20/07/2025 11:05 AM

ಬಹುಪತ್ನಿತ್ವ ಸಂಪ್ರದಾಯ ಉಳಿಸಲು ಒಂದೇ ಹುಡುಗಿಯನ್ನು ಮದುವೆಯಾದ ಸಹೋದರರು !

20/07/2025 10:34 AM
State News
KARNATAKA

ಮ್ಯಾಗ್ ಜೀನ್ ನಲ್ಲಿತ್ತು 40 ಕೋಟಿ ಮೌಲ್ಯದ ಕೊಕೇನ್ : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಆರೋಪಿ ಅರೆಸ್ಟ್, 4 ಕೆಜಿ ಕೊಕೇನ್ ಜಪ್ತಿ!

By kannadanewsnow0520/07/2025 11:19 AM KARNATAKA 1 Min Read

ಬೆಂಗಳೂರು : ಕಳೆದ ಎರಡು ತಿಂಗಳ ಹಿಂದೆ ದುಬೈ ನಿಂದ 14 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಸಾಗಾಣಿ ಪ್ರಕರಣದಲ್ಲಿ…

ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ : ಪ್ರಭು ಚೌವ್ಹಾಣ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

20/07/2025 11:11 AM

BREAKING : ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಯುವತಿ ಸಾವು ಪ್ರಕರಣ : ಚಾಲಕನ ವಿರುದ್ಧ ‘FIR’ ದಾಖಲು

20/07/2025 10:27 AM

ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಮಹಿಳೆ ಜೊತೆ ಒನ್ ಸೈಡ್ ಲವ್ : ಮಾತುಕತೆ ಕರೆಸಿದ ವೇಳೆ ಕತ್ತು ಕೊಯ್ದ ಪಾಗಲ್ ಪ್ರೇಮಿ!

20/07/2025 10:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.