Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ: ಛಲವಾದಿ ನಾರಾಯಣಸ್ವಾಮಿ ಆರೋಪ

26/08/2025 8:25 PM

ಅದು ದೇವರ ಹಾಡು ಅದನ್ನ ನೀವು ಹೇಂಗೆ RSS ಗೀತೆ ಅಂತೀರಾ?: ಶಾಸಕ ಕೆ.ಎಂ ಉದಯ್ ಪ್ರಶ್ನೆ

26/08/2025 8:16 PM

ಕೊಕ್ಕರೆ ಬೆಳ್ಳೂರು ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

26/08/2025 8:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹದಾಯಿ ಯೋಜನೆ ಜಾರಿಗೆ ಪಕ್ಷ ಭೇದ ಮರೆತು ಪ್ರಯತ್ನ: ಸಂಸದ ಬಸವರಾಜ ಬೊಮ್ಮಾಯಿ
KARNATAKA

ಮಹದಾಯಿ ಯೋಜನೆ ಜಾರಿಗೆ ಪಕ್ಷ ಭೇದ ಮರೆತು ಪ್ರಯತ್ನ: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0913/07/2024 6:48 PM

ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿ ಮಾಡಲು ಪಕ್ಷ ಭೇದ ಮರೆತು ಕೆಲಸ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನವಲಗುಂದ ವಿದಾನಸಭಾ ಕ್ಷೇತ್ರದ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮಕ್ಕೆ ಶೀಮತಿ ಫಕ್ಕೀರಮ್ಮ ಭ.ದೊಡ್ಡಗಾಣಿಗೇರ ಸರಕಾರಿ ಪದವಿ ಪೂರ್ವ ಕಾಲೇಜನ್ನು ಮಂಜೂರು ಮಾಡಿಸಿದ ಮಾಜಿ ಮುಖ್ಯಮಂತ್ರಿ ದಿ. ಎಸ್​.ಆರ್​. ಬೊಮ್ಮಾಯಿ ಅವರ ಪುತ್ಥಳಿ ಅನಾವರಣ ಹಾಗೂ ಸರ್ಕಾರದ ವಿವೇಕ ಯೋಜನೆ ಹಾಗೂ ಸಿ.ಎಸ್​.ಆರ್​. ಯೋಜನೆ ಅಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಕೇಂದ್ರ ಆಹಾರ ಮತ್ತು ನಾಗರೀಕ ಸೇವೆ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಧಾರವಾಡದಿಂದ ನವಲಗುಂದ, ರೋಣ, ಗದಗ ಹಾಗೂ ನರಗುಂದ ವರೆಗೆ ಪಾದಯಾತ್ರೆ ಮಾಡಿ ಈ ಯೋಜನೆ ಜಾರಿ ಮಾಡಲು ಸಾಕಷ್ಟು ಹೋರಾಟ ಮಾಡಿದ ಸಂದರ್ಭದಲ್ಲಿ ಎಲ್ಲರೂ ಬೆಂಬಲಿಸಿದ್ದಾರೆ. ಯೋಜನೆ ಬಗ್ಗೆ ನಮಗೂ ಕೂಡ ಬದ್ಧತೆ ಇದ್ದು ಆದಷ್ಟು ಬೇಗ ಯೋಜನೆ ಜಾರಿಗೆ ಕೇಂದ್ರದಿಂದ ಬೇಕಾಗುವ ಅನುಮತಿ ಕೊಡಿಸುವುದಾಗಿ ಭರವಸೆ ನೀಡಿದರು.

ಮಹಾದಾಯಿ ನದಿಗೆ ಗೋಡೆ ಕಟ್ಟಲಾಗಿದ್ದು ಅದನ್ನು ತೆರವುಗೊಳಿಸುವ ಕೆಲಸವಾಗಬೇಕು. ಯೋಜನೆಗೆ ಅರಣ್ಯ ಇಲಾಖೆಯ ಅನುಮತಿ ಬೇಕಿದ್ದು, ಅದನ್ನು ದೊರಕಿಸಿ ಕೊಡುವ ಕೆಲಸ ಮಾಡೋಣ. ನವಲಗುಂದ ಶಾಸಕರಾದ ಎನ್ ಎಚ್. ಕೋನರೆಡ್ಡಿ ಹಾಗೂ ನಾವು ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೇಂದ್ರದ ಪರಿಸರ ಇಲಾಖೆ ಅನುಮತಿ ಪಡೆಯಲು ಅಗತ್ಯ ಕ್ರಮ ವಹಿಸಲು ಮನವಿ ಮಾಡೋಣ ಎಂದರು.

ಮಹಾದಾಯಿ ನಮ್ಮ ಯೋಜನೆಯಾಗಿದ್ದು, ಇದು ರೈತರ ಅನುಕೂಲಕ್ಕಾಗಿದ್ದು, ರೈತರ ವಿಚಾರದಲ್ಲಿ ಯಾರೂ ರಾಜಕಾರಣ ಮಾಡುವುದಿಲ್ಲ. ರೈತ ಯಾವುದೇ ರಾಜಕೀಯ ಪಕ್ಷಕ್ಕೆ ಸಂಬಂಧ ಪಟ್ಟಿಲ್ಲ. ಆದರೆ, ಎಲ್ಲ ರಾಜಕೀಯ ಪಕ್ಷಗಳೂ ರೈತನಿಗೆ ಸಂಬಂಧಿಸಿವೆ. ಹೀಗಾಗಿ ರಾಜ್ಯದ ಹಾಗೂ ರೈತರ ಹಿತ ದೃಷ್ಟಿಯಿಂದ ಮಹಾದಾಯಿ ಯೋಜನೆ ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಇದೇ ವೇಳೆ ಹೆಬಸೂರ ಗ್ರಾಮದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಸ್​.ಆರ್​. ಬೊಮ್ಮಾಯಿ ಅವರು ಹಾಗೂ ನನಗೆ ವ್ಯಯಕ್ತಿವಾಗಿ ಅವಿನಾಭಾವ ಸಂಬಂಧ ಹೊಂದಿದ್ದು ಕಾರಣ ನನ್ನ ತಂದೆ ಎಸ್​.ಆರ್​. ಬೊಮ್ಮಾಯಿ ಅವರ ಪುತ್ಥಳಿ ಸ್ಥಾಪಿಸಿ ಅನಾವರಣ ಗೊಳಿಸಿದ್ದಕ್ಕೆ ಈ ಬಾಗದ ಹಿರೀಯರಿಗೆ ಹಾಗೂ ಯುವ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಸಭೆಯ ಸಾನಿಧ್ಯವನ್ನು ಹೆಬಸೂರ ಗ್ರಾಮದ ಸಿದ್ದಯ್ಯ ಸ್ವಾಮಿಗಳು ವಹಿಸಿದ್ದರು. ಈ ಕಾರ್ಯಕ್ರಮದ ಅಧ್ಯತೆಯನ್ನು ನವಲಗುಂದ ಶಾಸಕ ಎನ್​. ಹೆಚ್​. ಕೋನರಡ್ಡಿ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಶಾಸಕ ಡಾ: ಆರ್​.ಬಿ. ಶಿರಿಯಣ್ಣವರ, ಕೆ.ಎಂ.ಎಸ್​. ಸದಸ್ಯ ಸುರೇಶ ಬಣವಿ, ಮುಖಂಡರುಗಳಾದ ಗೋಪಣ್ಣ ನಲವಡಿ, ಶಿವಪ್ಪ ಭೂಮಣ್ಣವರ, ವೀರನಗೌಡ ಮರಿಗೌಡ್ರ, ಮೋನಪ್ಪ ಗಡ್ಡಿ, ಸುರೇಶ ಮುದರಡ್ಡಿ, ಚಾಂದುಸಾಬ ನದಾ, ರಾಜು ಸಂಕರಡ್ಡಿ, ಮೌಲಾಸಾಬ ಬಳಗಲಿ, ರಾಮಣ್ಣ ಅಮಡ್ಲ, ಗ್ರಾಮ ಪಂಚಾಯತ ಅಧ್ಯಕ್ಷ ಪ್ರವಿಣ ಹಲಗತ್ತಿ, ಕಿರೆಸೂರ ಗ್ರಾ.ಪಂ. ಅಧ್ಯಕ್ಷ ಬಿ.ಕೆ. ಪಾಟೀಲ, ಗ್ರಾ.ಪಂ. ಸದಸ್ಯರುಗಳು, ಕಾಲೇಜು ಸಮಿತಿ ಅಧ್ಯಕ್ಷ ನಾರಾಯಣ ನಲವಡಿ, ಹಾಗೂ ಕಾಲೇಜು ಸಮಿತಿಯ ಸದಸ್ಯರುಗಳು, ಗ್ರಾಮದ ಮುಖಂಡರುಗಳು, ಶಾಲಾ ಕಾಲೇಜು ವಿದ್ಯಾಥಿರ್ಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವೇದಿಕೆಯಲ್ಲೇ ‘ಸಿಎಂ ಸಿದ್ಧರಾಮಯ್ಯ’ ಹಾಡಿ ಹೊಗಳಿದ ‘BJP ಶಾಸಕ ಮುನಿರತ್ನ’

ಉದ್ಯೋಗಾವಕಾಶ ಹೆಚ್ಚಿಸಲು GCC ನೀತಿ ನಿಯಮಾವಳಿ ಸಡಿಲಿಕೆ: ಸಿಎಂ ಸಿದ್ಧರಾಮಯ್ಯ

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ: ಛಲವಾದಿ ನಾರಾಯಣಸ್ವಾಮಿ ಆರೋಪ

26/08/2025 8:25 PM2 Mins Read

ಅದು ದೇವರ ಹಾಡು ಅದನ್ನ ನೀವು ಹೇಂಗೆ RSS ಗೀತೆ ಅಂತೀರಾ?: ಶಾಸಕ ಕೆ.ಎಂ ಉದಯ್ ಪ್ರಶ್ನೆ

26/08/2025 8:16 PM1 Min Read

ಕೊಕ್ಕರೆ ಬೆಳ್ಳೂರು ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

26/08/2025 8:11 PM2 Mins Read
Recent News

ಬೆಂಗಳೂರಿನ ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ: ಛಲವಾದಿ ನಾರಾಯಣಸ್ವಾಮಿ ಆರೋಪ

26/08/2025 8:25 PM

ಅದು ದೇವರ ಹಾಡು ಅದನ್ನ ನೀವು ಹೇಂಗೆ RSS ಗೀತೆ ಅಂತೀರಾ?: ಶಾಸಕ ಕೆ.ಎಂ ಉದಯ್ ಪ್ರಶ್ನೆ

26/08/2025 8:16 PM

ಕೊಕ್ಕರೆ ಬೆಳ್ಳೂರು ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

26/08/2025 8:11 PM

ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್

26/08/2025 8:07 PM
State News
KARNATAKA

ಬೆಂಗಳೂರಿನ ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ: ಛಲವಾದಿ ನಾರಾಯಣಸ್ವಾಮಿ ಆರೋಪ

By kannadanewsnow0926/08/2025 8:25 PM KARNATAKA 2 Mins Read

ಬೆಂಗಳೂರು: ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ ನಡೆದಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.…

ಅದು ದೇವರ ಹಾಡು ಅದನ್ನ ನೀವು ಹೇಂಗೆ RSS ಗೀತೆ ಅಂತೀರಾ?: ಶಾಸಕ ಕೆ.ಎಂ ಉದಯ್ ಪ್ರಶ್ನೆ

26/08/2025 8:16 PM

ಕೊಕ್ಕರೆ ಬೆಳ್ಳೂರು ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

26/08/2025 8:11 PM

ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್

26/08/2025 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.