ನವದೆಹಲಿ:ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ದೇಶಾದ್ಯಂತ 292 ಕ್ಷೇತ್ರಗಳಲ್ಲಿ NDA ಮುನ್ನಡೆ ಸಾಧಿಸಿದೆ.Election breaking ನಲ್ಲಿ NDAಗೆ ಬಿಗ್ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಆಗಿದೆ.
ಇಂಡಿಯಾ ಕೂಟ 36 ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ.ಎಸ್ ಪಿ ಮತ್ತು ಕಾಂಗ್ರೆಸ್ ಭಾರೀ ಮುನ್ನಡೆ ಗಳಿಸಿವೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ.ಕಾಂಗ್ರೆಸ್ ಎರಡು ಕ್ಷೇತ್ರದಲ್ಲಿ ಮುನ್ನಡೆ ಇದೆ.ಟಿಎಂಸಿ 15 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ 6000 ಮತಗಳ ಮುನ್ನಡೆ ಗಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಡಿಕೆ ಸುರೇಶ್ ಹಿನ್ನಡೆ ಗಳಿಸಿದ್ದಾರೆ.ಇನ್ನೂ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆಯಲ್ಲಿ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಭರ್ಜರಿ ಮುನ್ನಡೆ ಇದೆ.ಅಂಚೆ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ ರಾಜ್ಯದಲ್ಲಿ 21 ಕಡೆ ಮುನ್ನಡೆ ಇದೆ.6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಇದೆ.
ಮಂಡ್ಯದಲ್ಲಿ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಮುನ್ನಡೆ ಗಳಿಸಿದ್ದಾರೆ.ದೇಶದಲ್ಲಿ ಎನ್ಡಿಎ 292 ಕ್ಷೇತ್ರದಲ್ಲಿ ಮುನ್ನಡೆ ಇದೆ.ಇಂಡಿಯಾ ಕೂಟ 206 ಕಡೆ ಮುನ್ನಡೆ ಗಳಿಸಿದೆ.
ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ ಆದ ಜಾಗದಲ್ಲಿ ಬಿಜೆಪಿಗೆ ಹಿನ್ನಡೆ ಆಗಿದೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಗಳಿಸಿದ್ದಾರೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಯನಾಡ್ ಮತ್ತು ರಾಯ್ ಬರೇಲಿ ಯಲ್ಲಿ ಮುನ್ನಡೆ ಇದೆ.ಕೊಯಮತ್ತೂರಿನಲ್ಲಿ ಬಿಜೆಪಿಯ ಅಣ್ಣಾಮಲೈಗೆ ಹಿನ್ನಡೆ ಇದೆ.