ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣೆ, ಪರಿಷತ್ ಚುನಾವಣಾ ನೀತಿ ಸಂಹಿತೆಯ ನಡುವೆಯೂ ಅಧಿಕಾರಿಗಳು ವಿವಿಧ ಸಭೆ ಮತ್ತು ವೀಡಿಯೋ ಕಾನ್ಫೆರೆನ್ಸ್ ನಡೆಸುತ್ತಿದ್ದರು. ಇದರಿಂದ ಚುನಾವಣಾ ಕರ್ತವ್ಯಕ್ಕೆ ಅಡ್ಡಿ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಯಾವುದೇ ಸಭೆ, ವೀಡಿಯೋ ಸಂವಾದ ನಡೆಸುವಂತಿಲ್ಲ ಅಂತ ರಾಜ್ಯ ಸರ್ಕಾರಕ್ಕೆ ಚುನಾವಣಆ ಆಯೋಗ ಖಡಕ್ ಸೂಚನೆ ನೀಡಿದೆ.
ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಮನೋಜ್ ಕುಮಾರ್ ಮೀನಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸಾರ್ವತ್ರಿಕ ಲೋಕ ಸಭಾ ಚುನಾವಣೆಗಳು-2024 ರ ಮತ ಎಣಿಕೆ ಕಾರ್ಯವು ದಿನಾಂಕ: 04.06.2024 ರಂದು ನಿಗದಿಯಾಗಿರುತ್ತದೆ. ಸದರಿ ಮತ ಎಣಿಕೆ ಕಾರ್ಯದ ಪೂರ್ವ ಸಿದ್ಧತಾ ಕಾರ್ಯಗಳು ಹಾಗೂ ಕರ್ನಾಟಕ ವಿಧಾನ ಪರಿಷತ್ತಿಗೆ ದೈವಾರ್ಷಿಕ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಸದರಿ ಚುನಾವಣಾ ಕಾರ್ಯಗಳು ಪ್ರಗತಿಯಲ್ಲಿರುತ್ತವೆ. ಈ ಸಂಬಂಧ ಮಾದರಿ ನೀತಿ ಸಂಹಿತೆಯು ದಿನಾಂಕ: 06.06.2024 ರವರೆಗೆ ಜಾರಿಯಲ್ಲಿರುತ್ತದೆ. ಈ ಹಂತದಲ್ಲಿ ಕೆಲವು ಇಲಾಖೆಗಳಲ್ಲ. ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರುಗಳು, ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಮತ್ತು ವೀಡಿಯೋ ಸಂವಾದಗಳನ್ನು ಏರ್ಪಡಿಸುತ್ತಿದ್ದು, ಇದರಿಂದಾಗಿ ಲೋಕ ಸಭಾ ಚುನಾವಣೆಯ ಮತಎಣಿಕೆ ಕಾರ್ಯವನ್ನು ನಿರ್ವಹಿಸಲು ಹಾಗೂ ಕರ್ನಾಟಕ ವಿಧಾನ ಪರಿಷತ್ತಿಗೆ ಧೈವಾರ್ಷಿಕ ಚುನಾವಣಾ ಕಾರ್ಯಗಳಿಗೆ ಅಡಚಣೆಯುಂಟಾಗುತ್ತಿದೆ ಎಂದಿದ್ದಾರೆ.
ಆದ್ದರಿಂದ, ಸಾರ್ವತ್ರಿಕ ಲೋಕಸಭಾ ಚುನಾವಣಿ-2024 ರ ಮತ ಎಣಿಕ ಕಾರ್ಯ ಹಾಗೂ ಕರ್ನಾಟಕ ವಿಧಾನ ಪರಿಷತ್ತಿಗೆ ದೈವಾರ್ಷಿಕ ಚುನಾವಣಾ ಕಾರ್ಯ ಮುಕ್ತಾಯಗೊಳ್ಳುವವರೆಗೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಮತ್ತು ವೀಡಿಯೋ ಸಂವಾದಗಳನ್ನು ನಡೆಸಬಾರದೆಂದು ಹಾಗೂ ಈಗಾಗಲೇ ಸಭೆ ಮತ್ತು ವೀಡಿಯೋ ಸಂವಾದಗಳು ನಿಗದಿಯಾಗಿದ್ದಲ್ಲ ಮುಂದೂಡಲು ಅಗತ್ಯ ಕ್ರಮಕೈಗೊಳ್ಳುವಂತೆ ಮತ್ತು ಸಭೆ/ವೀಡಿಯೋ ಸಂವಾದವನ್ನು ನಡೆಸಬೇಕಾದ ತುರ್ತು ಅಗತ್ಯವಿದ್ದ. ಈ ಕಚೇರಿಯೊಂದಿಗೆ ಸಮಾಲೋಚಿಸುವಂತೆ ಎಲ್ಲಾ ಇಲಾಖೆಗಳಿಗೆ ನಿರ್ದೇಶಿಸುವಂತೆ ತಮ್ಮನ್ನು ಕೋರಿದ್ದಾರೆ.
BREAKING : ಮಹಿಳೆ ಕಿಡ್ನಾಪ್ ಕೇಸ್ : ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ