Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೆಹಲಿಯಲ್ಲಿ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಭೇಟಿಯಾದ CM ಸಿದ್ದರಾಮಯ್ಯ : 7 ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ

24/06/2025 11:44 AM

BREAKING : ಡ್ರಗ್ಸ್ ಕೇಸ್ ನಲ್ಲಿ ಖ್ಯಾತ ನಟ ಶ್ರೀಕಾಂತ್ ಅರೆಸ್ಟ್ | Actor Srikanth arrested

24/06/2025 11:28 AM

BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ಕೊನೆಯ ದಿನ

24/06/2025 11:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೆಟ್ರೋಲ್, ಡೀಸೆಲ್ ತೆರಿಗೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ ಸಮರ್ಥನೆ
KARNATAKA

ಪೆಟ್ರೋಲ್, ಡೀಸೆಲ್ ತೆರಿಗೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ ಸಮರ್ಥನೆ

By kannadanewsnow0916/06/2024 6:23 PM

ವಿಜಯಪುರ: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಸೇಡಿಗಾಗಿ ದರ ಏರಿಕೆ ಮಾಡಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ , ಈ ಬಾರಿ ಒಂಭತ್ತು ಸ್ಥಾನಗಳನ್ನು ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದನ್ನು ಈ ಬಾರಿ 19 ಕ್ಕೆ ಇಳಿದಿದ್ದಾರೆ. ನಮಗೆ 13% ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ ಎಂದು ಪ್ರಶ್ನಿಸಿದರು. ನಮ್ಮ ಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ ಎಂದರು.

ಸೋತಿರುವುದು ಬಿಜೆಪಿ

ಚುನಾವಣೆಯಲ್ಲಿ ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ ಎಂದರು. ಕಳೆದ ಬಾರಿ 31% ಈ ಬಾರಿ 41% ಮತ ಹಂಚಿಕೆಯಾಗಿದೆ. 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ನಾವು ಸೋತಿದ್ದೇವೆಯೇ ಎಂದರು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಕಡಿಮೆ ಮತ ಬಂದಿದೆ, ಮೋದಿ ಅಲೆ ಕಡಿಮೆಯಾಗಿದೆ ಎಂದರು.

ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ

ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 11.4.2021ರಂದು ಪೆಟ್ರೋಲ್ ಮೇಲೆ 35% ತೆರಿಗೆ ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು. ಡೀಸಲ್ ಮೇಲೆ 14.34ಕ್ಕೆ ಇಳಿಸಿದರು. ಶೇ7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ. ಈಗ ಕರ್ನಾಟಕದಲ್ಲಿ 99.85 ರೂ ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. 102 ರೂ ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.ಗಳಿದೆ. ಆಂಧ್ರದ ಅನಂತಪುರದಲ್ಲಿ 109.44 , ತೆಲಂಗಾಣದ ಹೈದರಾಬಾದ್ ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ.ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ ಕಡಿಮೆ ಇದೆ ಎಂದರು.

ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕರ್ನಾಟಕದ ಇತಿಹಾಸದಲ್ಲಿ ಪೆಟ್ರೋಲ್ ಬೆಲೆ ಇಷ್ಟು ದುಬಾರಿಯಾಗಿರಲಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಹಿಂದೆ ಇದ್ದಾಗ ಶೇ 35% ಇತ್ತು. ಬಿಜೆಪಿ ಸರ್ಕಾರ ಇರುವ ರಾಜಸ್ಥಾನದಲ್ಲಿ 104.86 ರೂ.ಗಳಿದೆ ಹಾಗೂ ಮಧ್ಯಪ್ರದೇಶದಲ್ಲಿ 106.47 ರೂ ಗಳಿದೆ. ಕರ್ನಾಟದಲ್ಲಿ ಈ ರಾಜ್ಯಗಳಿಗಿಂತ ಕಡಿಮೆ ಇದೆ. ಪಕ್ಕದ ರಾಜ್ಯಗಳಿಗೆ ಸಮವಾಹಿರಲಿ ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡಿರಲಿಲ್ಲ. ಚುನಾವಣೆಯ ನಂತರ ತಲೆಬದ್ಧಗೊಳಿಸಲು ಏರಿಕೆ ಮಾಡಿದ್ದೇವೆ. ಇತರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಿದೆ ಎಂದರು.

ಅನುದಾನ ನೀಡಲಾಗಿದೆ

ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ನಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅನುದಾನವನ್ನು ನೀಡಲಾಗಿದೆ ಎಂದರು.

ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ

ಸಾರ್ವಜನಿಕರಲ್ಲಿ ಗ್ಯಾರಂಟಿ ಗಳನ್ನು ನಿಲ್ಲಿಸುತ್ತಾರೆ ಎಂಬ ಗಾಳಿಸುದ್ದಿ ಎದ್ದಿರುವ ಬಗ್ಗೆ ಮಾತನಾಡಿ ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ ಎಂದರು.

ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆ ಕೇಸ್: ಇದು ನಟ ಸುದೀಪ್ ಮೊದಲ ರಿಯಾಕ್ಷನ್

‘ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್’ಗೆ ಸೇರ್ಪಡೆಯಾದ ‘ಭಾರತೀಯ ರೈಲ್ವೆ’: ಏಕೆ ಗೊತ್ತಾ? ಈ ಸುದ್ದಿ ಓದಿ | Indian Railways

Share. Facebook Twitter LinkedIn WhatsApp Email

Related Posts

BREAKING : ದೆಹಲಿಯಲ್ಲಿ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಭೇಟಿಯಾದ CM ಸಿದ್ದರಾಮಯ್ಯ : 7 ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ

24/06/2025 11:44 AM1 Min Read

BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ಕೊನೆಯ ದಿನ

24/06/2025 11:23 AM1 Min Read

ALERT : ಹೆಚ್ಚಾಗಿ `ಕ್ರೋಕ್ಸ್ ಶೂ’ಗಳನ್ನು ಧರಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

24/06/2025 11:10 AM1 Min Read
Recent News

BREAKING : ದೆಹಲಿಯಲ್ಲಿ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಭೇಟಿಯಾದ CM ಸಿದ್ದರಾಮಯ್ಯ : 7 ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ

24/06/2025 11:44 AM

BREAKING : ಡ್ರಗ್ಸ್ ಕೇಸ್ ನಲ್ಲಿ ಖ್ಯಾತ ನಟ ಶ್ರೀಕಾಂತ್ ಅರೆಸ್ಟ್ | Actor Srikanth arrested

24/06/2025 11:28 AM

BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ಕೊನೆಯ ದಿನ

24/06/2025 11:23 AM

ಇರಾನ್-ಇಸ್ರೇಲ್ ಯುದ್ಧ: ಮಧ್ಯಪ್ರಾಚ್ಯ, ಉತ್ತರ ಅಮೇರಿಕಾ, ಯುರೋಪ್ಗೆ ವಿಮಾನಗಳನ್ನು ಸ್ಥಗಿತಗೊಳಿಸಿದ ಏರ್ ಇಂಡಿಯಾ

24/06/2025 11:10 AM
State News
KARNATAKA

BREAKING : ದೆಹಲಿಯಲ್ಲಿ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಭೇಟಿಯಾದ CM ಸಿದ್ದರಾಮಯ್ಯ : 7 ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ

By kannadanewsnow5724/06/2025 11:44 AM KARNATAKA 1 Min Read

ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ…

BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ಕೊನೆಯ ದಿನ

24/06/2025 11:23 AM

ALERT : ಹೆಚ್ಚಾಗಿ `ಕ್ರೋಕ್ಸ್ ಶೂ’ಗಳನ್ನು ಧರಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

24/06/2025 11:10 AM

BREAKING :ಬೆಂಗಳೂರಲ್ಲಿ ಗಾಂಜಾ ನಶೆಯಲ್ಲಿ ನಡು ರಸ್ತೆಯಲ್ಲೇ ಯುವತಿಗೆ ‘ಲೈಂಗಿಕ ದೌರ್ಜನ್ಯ’: ಐವರು ಪುಂಡರು ಅರೆಸ್ಟ್.!

24/06/2025 10:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.