Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2ನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಆಪ್ಷನ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

09/07/2025 9:05 PM

ಜುಲೈ.11ರಂದು ಹಾಸನದಲ್ಲಿ ಬಾನುಮುಷ್ತಾಕ್‌ ಅವರ ಎದೆಯ ಹಣತೆ, ತೇಜಸ್ವಿ ಮಾಯಾಮೃಗ ನಾಟಕ ಪ್ರದರ್ಶನ

09/07/2025 9:01 PM

‘ಹಾವು’ ಕಚ್ಚಿದಾಗ ಅಪ್ಪಿತಪ್ಪಿಯೂ ಹೀಗೆ ಮಾಡ್ಬೇಡಿ.! ಇದು ಮಾರಕವಾಗ್ಬೋದು

09/07/2025 9:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ, ನೈರುತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮೇ, 09 ರಂದು ಅಧಿಸೂಚನೆ ಪ್ರಕಟ
Uncategorized

ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ, ನೈರುತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮೇ, 09 ರಂದು ಅಧಿಸೂಚನೆ ಪ್ರಕಟ

By kannadanewsnow0703/05/2024 6:23 PM

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರದ, ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಚುನಾವಣಾ ಕಾರ್ಯಸೂಚಿಯನ್ನು ಹೊರಡಿಸಿದೆ.

ಮೇ, 09 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ, 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ, 17 ರಂದು ನಾಮಪತ್ರಗಳ ಪರಿಶೀಲನೆ, ಮೇ, 20 ರಂದು ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜೂನ್, 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್, 06 ರಂದು ಮತ ಎಣಿಕೆ ನಡೆಯಲಿದೆ.

ಈ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು 30 ವರ್ಷಗಳಿಗೆ ಕಡಿಮೆ ಇರಕೂಡದು. ಮತ್ತು ಅವರು ಕರ್ನಾಟಕದ ಯಾವುದಾದರು ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ/ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು.

ನೈರುತ್ಯ ಪದವೀಧರರ ಕ್ಷೇತ್ರದ, ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ.ಈ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳು ಹಾಗೂ ಕ್ಷೇತ್ರ ವ್ಯಾಪ್ತಿಯು ಇಂತಿದೆ. ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು (ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳು ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕು ಕ್ಷೇತ್ರ ವ್ಯಾಪ್ತಿಗೆ).ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು(ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಗೆ).

ಚುನಾವಣೆಗೆ ಸ್ಪರ್ಧಿಸಲಿಚ್ಛಿಸುವ ಅಭ್ಯರ್ಥಿಗಳು ಮೇ, 9 ರಿಂದ ಮೇ, 16 ರವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಮೈಸೂರು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಮೇ, 10 ರಿಂದ ಮೇ, 12 ರವರೆಗೆ ನೆಗೋಷಿಯೇಬಲ್ ಇನ್ಸ್‍ಟ್ಟುಮೆಂಟ್ ಆಕ್ಟ್ ಮೇರೆಗೆ ಸಾರ್ವತ್ರಿಕ ರಜಾ ದಿನವಾಗಿರುವುದರಿಂದ ಆ ದಿನಗಳಂದು ನಾಮಪತ್ರ ಸ್ವೀಕರಿಸಲಾಗುವುದಿಲ್ಲ.

ನಾಮಪತ್ರಗಳ ನಮೂನೆಗಳನ್ನು ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರ ಕಚೇರಿಯಿಂದ ಪಡೆಯಬಹುದು. ಈ ಚುನಾವಣೆಯ ಸಂಬಂಧದಲ್ಲಿ ಸ್ಪರ್ಧಿಸಲಿಚ್ಛಿಸುವವರು 1951 ರ ಪ್ರಜಾ ಪ್ರಾತಿನಿಧ್ಯ ಅಧಿನಿಯಮದ 33 ನೇ ನಿಯಮದ ಪ್ರಕಾರ ಪ್ರತಿ ಅಭ್ಯರ್ಥಿಯ ನಾಮಪತ್ರದಲ್ಲಿ ಸಂಬಂಧಿಸಿದ ಕ್ಷೇತ್ರದ ಮತದಾರರ ಪಟ್ಟಿಯಲ್ಲಿರುವ ಕನಿಷ್ಠ 10 ಮತದಾರರು ಪ್ರಸ್ತಾಪಕರಾಗಿ (ಪ್ರೊಪೋಸರ್) ಸಹಿ ಮಾಡಿರಬೇಕು. ಪ್ರತಿ ಅಭ್ಯರ್ಥಿ ರೂ.10 ಸಾವಿರ ಠೇವಣಿ ಮಾಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು ರೂ. 5 ಸಾವಿರ ಠೇವಣಿ ಮಾಡಬೇಕು. ಅಭ್ಯರ್ಥಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ದೃಢೀಕರಣ ಪತ್ರ ಲಗತ್ತಿಸಬೇಕು.

ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರದ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜಿಲ್ಲಾಧಿಕಾರಿಗಳು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಅವರುಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಜಿಲ್ಲಾಧಿಕಾರಿಗಳು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಅವರುಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.

ನಾಮಾಂಕನ ಪತ್ರಗಳನ್ನು ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ರವರಿಗೆ ಮಾತ್ರ ಸಲ್ಲಿಸಬೇಕು. ಅಭ್ಯರ್ಥಿಗಳು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿರುವ ನಮೂನೆಯಲ್ಲಿ ನಾಮಪತ್ರ ಮತ್ತು ನಿಗಧಿಪಡಿಸಿದ ನಮೂನೆಗಳಲ್ಲಿ ನೋಟರಿಯವರಿಂದ ಪ್ರಮಾಣೀಕರಿಸಿದ ಪ್ರಮಾಣ ಪತ್ರವನ್ನು ನಾಮಪತ್ರದೊಂದಿಗೆ ಲಗತ್ತಿಸಿ ಸಲ್ಲಿಸಬೇಕು.

ನಾಮಪತ್ರಗಳನ್ನು ಸಲ್ಲಿಸುವ ಅಭ್ಯರ್ಥಿಗಳು ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಲು ಇಚ್ಛಿಸುವ ಸಂಬಂಧದಲ್ಲಿ ಆಯೋಗ ನಿಗಧಿಪಡಿಸಿರುವ ಪತ್ರ ಎಎ, ಬಿಬಿ ಗಳನ್ನು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾದ ಮೇ, 16 ರ ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು. ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಅಭ್ಯರ್ಥಿ ಹಾಗೂ ಇತರೆ 4 ಜನ, ಅಂದರೆ ಅವರ ಸೂಚಕರು ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

Elections to the South-West Graduates South-West Teachers and South Teachers' constituencies of the Legislative Council will be notified on May 09.
Share. Facebook Twitter LinkedIn WhatsApp Email

Related Posts

ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

04/07/2025 3:41 PM1 Min Read

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read
Recent News

2ನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಆಪ್ಷನ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

09/07/2025 9:05 PM

ಜುಲೈ.11ರಂದು ಹಾಸನದಲ್ಲಿ ಬಾನುಮುಷ್ತಾಕ್‌ ಅವರ ಎದೆಯ ಹಣತೆ, ತೇಜಸ್ವಿ ಮಾಯಾಮೃಗ ನಾಟಕ ಪ್ರದರ್ಶನ

09/07/2025 9:01 PM

‘ಹಾವು’ ಕಚ್ಚಿದಾಗ ಅಪ್ಪಿತಪ್ಪಿಯೂ ಹೀಗೆ ಮಾಡ್ಬೇಡಿ.! ಇದು ಮಾರಕವಾಗ್ಬೋದು

09/07/2025 9:00 PM

ಪ್ರಧಾನಿ ಮೋದಿ ಭೇಟಿಯ ಸಂದರ್ಭದಲ್ಲಿ ‘UPI’ಗೆ ನಮೀಬಿಯಾ ಚಾಲನೆ

09/07/2025 8:53 PM
State News
KARNATAKA

2ನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಆಪ್ಷನ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

By kannadanewsnow0909/07/2025 9:05 PM KARNATAKA 2 Mins Read

ಬೆಂಗಳೂರು: ಎರಡನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ Options ದಾಖಲಿಸಲು ಮತ್ತೆ ದಿನಾಂಕ ವಿಸ್ತರಿಸಲಾಗಿದೆ. ಜುಲೈ 10ರಂದು ಮಧ್ಯಾಹ್ನ 12…

ಜುಲೈ.11ರಂದು ಹಾಸನದಲ್ಲಿ ಬಾನುಮುಷ್ತಾಕ್‌ ಅವರ ಎದೆಯ ಹಣತೆ, ತೇಜಸ್ವಿ ಮಾಯಾಮೃಗ ನಾಟಕ ಪ್ರದರ್ಶನ

09/07/2025 9:01 PM

ಮದ್ಯಪ್ರಿಯರ ಗಮನಕ್ಕೆ: ಬಳ್ಳಾರಿಯಲ್ಲಿ ಈ ದಿನದಂದು ಎಣ್ಣೆ ಸಿಗಲ್ಲ

09/07/2025 8:52 PM

CRIME NEWS: ಪ್ರಿಯಕರನ ಜೊತೆ ಸೇರಿ ಪತಿ ಕೊಂದಿದ್ದ ಪತ್ನಿ ಸೇರಿ ಮೂವರು ಅರೆಸ್ಟ್

09/07/2025 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.