ಚಿಕ್ಕಮಗಳೂರು : ಮೂಡಿಗೆರೆಯಲ್ಲಿ ಜನರಿಗೆ ಭಾರೀ ಉಪಟಳ ನೀಡಿದ್ದ ಮತ್ತೊಂದು ಪುಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.

ಮೂರು ಆನೆ ಕಾಡಾನೆಗಳ ಪೈಕಿ ಒಂದು ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕೆಲವು ದಿನಗಳ ಹಿಂದೆಸೆರೆ ಹಿಡಿದಿದ್ದರು. ಇದೀಗ ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಮತ್ತೊಂದು ಆನೆಯನ್ನು ಸೆರೆ ಹಿಡಿಯಲಾಗಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೂ, ಒಂದು ಆನೆ ಸೆರೆ ಹಿಡಿಯಬೇಕಾಗಿದೆ. ಮೂರು ಆನೆಗಳ ಪೈಕಿ ಎರಡು ಆನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಮೂಡಿಗೆರೆಯಲ್ಲಿ  ಆನೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಡ್ರೋನ್ ಕ್ಯಾಮೆರಾ ಬಳಕೆ ಮಾಡಿದ್ದಾರೆ

ಕೆಲವು ದಿನಗಳ ಹಿಂದೆ ಕಾಡಾನೆ ದಾಳಿಗೆ ಮೂಡಿಗೆರೆ ತಾಲೂಕು ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ (45) ಮೃತಪಟ್ಟಿದ್ದರು. ಘಟನೆ ಗ್ರಾಮದ ಜನರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ಎಚ್ಚೆತ್ತ ಸರ್ಕಾರ ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಆದೇಶ ಹೊರಡಿಸಿತ್ತು. ಇದೀಗ ಮೂರು ಆನೆ ಕಾಡಾನೆಗಳ ಪೈಕಿ ಎರಡು ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ.

ಮೂಡಿಗೆರೆಯಲ್ಲಿ ಕಾಡಾನೆ ದಾಳಿ ಉಪಟಳ ಹೆಚ್ಚಾಗಿದ್ದು, ಕಾಡಾನೆ ದಾಳಿಗೆ ಇತ್ತೀಚೆಗೆ ಶೋಭಾ ಎಂಬ ಮಹಿಳೆ ಮೃತಪಟ್ಟ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು, ಈ ಹಿನ್ನಲೆ ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ ಸರ್ಕಾರ ಮಹತ್ವದ ಆದೇಶ ಹೊರಡಿಸಿ, ತೊಂದರೆ ನೀಡುತ್ತಿರುವ 3 ಕಾಡಾನೆ ಸೆರೆ ಹಿಡಿಯಲು ಸೂಚನೆ ನೀಡಿತ್ತು. ಮೂರು ಆನೆಗಳನ್ನು ಹಿಡಿಯಲು ಸರ್ಕಾರ ಆದೇಶಿಸಿದ್ದು, ನಂತರ ಅದನ್ನು ಸುರಕ್ಷಿತ ಅರಣ್ಯಕ್ಕೆ ಬಿಡಲು ಸೂಚನೆ ನೀಡಲಾಗಿತ್ತು.

BIGG NEW : ಬಂಗಾಳದಲ್ಲಿ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ; ಹೆಚ್ಚುವರಿ ಪೊಲೀಸ್ ನಿಯೋಜನೆ

BIGG NEWS : ಡಿ.18 ರ ಬಳಿಕ ಹಲವು ಹಾಲಿ, ಮಾಜಿ ಶಾಸಕರು ‘ಜೆಡಿಎಸ್’ ಸೇರ್ಪಡೆ : ಸಿಎಂ ಇಬ್ರಾಹಿಂ ಸ್ಪೋಟಕ ಹೇಳಿಕೆ

Share.
Exit mobile version