Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾರ್ವೆಗೆ ತಲುಪಿದ ಪ್ರಧಾನಿ ನರೇಂದ್ರ ಮೋದಿ: ವ್ಯಾಪಾರ, ಹಸಿರು ತಂತ್ರಜ್ಞಾನ ವೃದ್ಧಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ!

ಉತ್ತರ ಭಾರತದಲ್ಲಿ ಧಗಧಗಿಸಲಿರುವ ಬಿಸಿಲು: ತಾಪಮಾನ 5°C ಏರಿಕೆ ಭೀತಿ! ಕರ್ನಾಟಕ ಸೇರಿದಂತೆ 17 ರಾಜ್ಯಗಳಲ್ಲಿ ಭಾರಿ ಮಳೆ, ಬಿರುಗಾಳಿಯ ಮುನ್ನೆಚ್ಚರಿಕೆ!

ಪೆಟ್ರೋಲ್ ಬಂಕ್‌ಗಳಲ್ಲಿ ಕಿಲೋಮೀಟರ್ ಗಟ್ಟಲೆ ಕ್ಯೂ: ಹಾರ್ಸ್ ರೈಡಿಂಗ್ ಮಾಡ್ತಾ ‘ಜನಗಣತಿ’ ಡ್ಯೂಟಿಗೆ ಹೊರಟ ಸರ್ಕಾರಿ ಶಿಕ್ಷಕ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಶಿನಾಥ್ ಪುತ್ರನ ಚಿತ್ರದ ಟ್ರೈಲರ್ ಬಿಡುಗಡೆಗೊಳಿಸಿದ ‘ಸುದೀಪ್’….!
FILM

ಕಾಶಿನಾಥ್ ಪುತ್ರನ ಚಿತ್ರದ ಟ್ರೈಲರ್ ಬಿಡುಗಡೆಗೊಳಿಸಿದ ‘ಸುದೀಪ್’….!

By ಅವಿನಾಶ್‌ ಆರ್‌ ಭೀಮಸಂದ್ರ

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಪುತ್ರ ಅಭಿಮನ್ಯು ನಟಿಸಿರುವ ಚಿತ್ರ `ಎಲ್ಲಿಗೆ ಪಯಣ ಯಾವುದೋ ದಾರಿ’. ಈ ಸಿನಿಮಾದ ಟ್ರೈಲರ್ ಅನ್ನು ಕಿಚ್ಚಾ ಸುದೀಪ್ ಪ್ರೀತಿಯಿಂದ ಬಿಡುಗಡೆಗೊಳಿಸಿದ್ದಾರೆ. ಅಚ್ಚುಕಟ್ಟಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಟ್ರೈಲರ್ ಲಾಂಚ್ ಆಗಿದೆ. ಬಿಗ್ ಬಾಸ್ ಶೋ ಹಾಗೂ ಸಿನಿಮಾ ಒತ್ತಡಗಳ ನಡುವೆಯೂ ಪ್ರೀತಿಯಿಂದ ಆಗಮಿಸಿದ ಸುದೀಪ್, ಕಾಶೀನಾಥ್ ಅವರು ಕನ್ನಡ ಚಿತ್ರರಂಗಕ್ಕೆ ಕೊಟ್ಟ ಕೊಡುಗೆಯನ್ನು ಸ್ಮರಿಸುತ್ತಾ, ಅವರ ಪುತ್ರ ಅಭಿಮನ್ಯು ಕಾಶೀನಾಥ್ ಅವರಿಗೆ ಶುಭ ಕೋರುತ್ತಾ, ಟ್ರೈಲರ್ ಅನ್ನು ಲೋಕಾರ್ಪಣೆಗೊಳಿಸಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಅಕ್ಟೋಬರ್ 25ರಂದು ತೆರೆಗಾಣಲಿದೆ. 

ಕನ್ನಡ ಚಿತ್ರರಂಗ ಎಂದಿಗೂ ಕಾಶಿನಾಥ್ ಅವರ ಕೊಡುಗೆಗಳನ್ನು, ಅವರಿಂದಾದ ಒಳಿತುಗಳನ್ನು ಮರೆಯಲು ಸಾಧ್ಯವಿಲ್ಲ. ಅದರ ಮುಂದೆ ಅಭಿಮನ್ಯುಗೆ ನಾವು ಕೊಡುತ್ತಿರುವ ಬೆಂಬಲ ತೀರಾ ಚಿಕ್ಕದು’ ಎಂದಿರುವ ಸುದೀಪ್, ಈ ಟ್ರೈಲರಿನಲ್ಲಿ ಅಭಿಮನ್ಯು ಕಾಣಿಸಿಕೊಂಡಿರುವ ರೀತಿಯನ್ನೂ ಮೆಚ್ಚಿಕೊಂಡಿದ್ದಾರೆ. ಸದರಿ ಟ್ರೈಲರ್ ಭರವಸೆ ಮೂಡಿಸಿದೆ ಎನ್ನುತ್ತಲೇ ನಿರ್ದೇಶಕ ಕಿರಣ್ ಎಸ್ ಸೂರ್ಯ ಹಾಗೂ ತಂಡದ ಪರಿಶ್ರಮಕ್ಕೂ ಮೆಚ್ಚುಗೆ ಸೂಚಿಸಿದ್ದಾರೆ. ಜೊತೆಗೆ ಖುದ್ದು ತಾವೇ ಈ ಸಿನಿಮಾಕ್ಕಾಗಿ ಹಾಡಿರುವ ಹಾಡಿನ ಕುರಿತೂ ಮಾತಾಡಿದ್ದಾರೆ. ಒಟ್ಟಾರೆಯಾಗಿ ಈ ಟ್ರೈಲರ್ ಪ್ರಾಮಿಸಿಂಗ್ ಆಗಿ ಮೂಡಿ ಬಂದಿದೆ ಎಂದಿರುವ ಕಿಚ್ಚ, ಚಿತ್ರಕ್ಕೆ ಶುಭ ಕೋರಿದ್ದಾರೆ.

Sudeep releases the trailer of Kashinath’s son’s film

ನಂತರ ಮಾತಾಡಿದ ನಾಯಕನಟ ಅಭಿಮನ್ಯು ಆರಂಭಿಕವಾಗಿ ಈ ಸಿನಿಮಾ ಸಾಗಿ ಬಂದ ರೀತಿಯ ಬಗ್ಗೆ ಸವಿವರವಾಗಿ ಮಾತಾಡಿದ್ದಾರೆ. ನಿರ್ದೇಶಕರ ಸೂಕ್ಷ್ಮವಂತಿಕೆಯನ್ನು ಮೆಚ್ಚಿಕೊಳ್ಳುತ್ತಲೇ, ಆರಂಭದಲ್ಲಿ ಕಥಾ ಎಳೆ ಹೇಳಿದಂತೆಯೇ ಚೆಂದಗೆ ಈ ಸಿನಿಮಾವನ್ನು ರೂಪಿಸಿದ್ದಾರೆಂಬ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇದೇ ಹಂತದಲ್ಲಿ ಸಿನಿಮಾದ ಕೆಲ ಪಾತ್ರಗಳ ಚಹರೆಗಳನ್ನು ಪ್ರೇಕ್ಷಕರಿಗೆ ದಾಟಿಸಿದ್ದಾರೆ. ಸುದರ್ಶನ ಆರ್ಟ್ಸ್ ಬ್ಯಾನರಿನಡಿಯಲ್ಲಿ ಈ ಚಿತ್ರವನ್ನು ಜತಿನ್ ಪಟೇಲ್ ನಿರ್ಮಾಣ ಮಾಡಿದ್ದಾರೆ. ಆತಿನ್ ಅವರು ಈ ಸಿನಿಮಾ ನಿರ್ಮಾದ ಅನುಭವಗಳ ಬಗ್ಗೆ ಮಾತಾಡುತ್ತಲೇ, ಇಂಥಾ ಚೆಂದದ ಚಿತ್ರ ಮಾಡಲು ಸಾಥ್ ಕೊಟ್ಟವರನ್ನೆಲ್ಲ ಸ್ಮರಿಸಿದ್ದಾರೆ.

ನಾಯಕಿ ಸ್ಫೂರ್ತಿ ಉಡಿಮನೆ ಈ ಸಮಾರಂಭದಲ್ಲಿ ಹಾಜರಿದ್ದ, ತಾನು ನಾಯಕಿಯಾಗಿ ಆಯ್ಕೆಯಾದ ಕುರಿತಾಗಿ ಒಂದಷ್ಟು ಇಂಟರೆಸ್ಟಿಂಗ್ ವಿಚಾರಗಳನ್ನು ತೆರೆದಿಟ್ಟಿದ್ದಾರೆ. ತನ್ನ ಪಾತ್ರದ ಒಂದಷ್ಟು ಸುಳಿವುಗಳನ್ನೂ ಬಿಟ್ಟುಕೊಟ್ಟಿದ್ದಾರೆ. ಪ್ರಧಾನ ಪಾತ್ರದಲ್ಲಿ ನಟಿಸಿರುವ ವಿಜಯಶ್ರೀ ಕಲಬುರ್ಗಿ ಹಾಜರಿದ್ದು ಒಂದಷ್ಟು ವಿವರಗಳನ್ನು ಹಂಚಿಕೊಂಡಿದ್ದಾರೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯೊಂದಿಗೆ ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಫೂರ್ತಿ ಉಡಿಮನೆ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ವಿಜಯಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಮುಂತಾದವರ ತಾರಾಗಣವಿದೆ. ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ.

 

Sudeep releases the trailer of Kashinath's son's film
Share. Facebook Twitter LinkedIn WhatsApp Email

Related Posts

ಪತ್ನಿಯಿಂದ ಡಿವೋರ್ಸ್ ಸಿಗೋವರೆಗೂ ನಾನು ಯಾವುದೇ ಸಿನಿಮಾ ಮಾಡಲ್ಲ: ನಟ ಜಯಂ ರವಿ ಕಣ್ಣೀರು

2 Mins Read

BREAKING: ಮೌನಿ ರಾಯ್ – ಸೂರಜ್ ನಂಬಿಯಾರ್ ವಿಚ್ಛೇದನ ಖಚಿತ: ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ವಿದಾಯ | Actress Mouni Roy

1 Min Read

BIG NEWS : ಮಂದಿರ, ಮಸೀದಿಗಳಲ್ಲಿ ಜೋರಾಗಿ `ಧ್ವನಿವರ್ಧಕ ಬಳಸುವಂತಿಲ್ಲ’: ಸಿಎಂ ಸುವೇಂದು ಅಧಿಕಾರಿ ಕಟ್ಟುನಿಟ್ಟಿನ ಆದೇಶ

1 Min Read
Recent News

ನಾರ್ವೆಗೆ ತಲುಪಿದ ಪ್ರಧಾನಿ ನರೇಂದ್ರ ಮೋದಿ: ವ್ಯಾಪಾರ, ಹಸಿರು ತಂತ್ರಜ್ಞಾನ ವೃದ್ಧಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ!

ಉತ್ತರ ಭಾರತದಲ್ಲಿ ಧಗಧಗಿಸಲಿರುವ ಬಿಸಿಲು: ತಾಪಮಾನ 5°C ಏರಿಕೆ ಭೀತಿ! ಕರ್ನಾಟಕ ಸೇರಿದಂತೆ 17 ರಾಜ್ಯಗಳಲ್ಲಿ ಭಾರಿ ಮಳೆ, ಬಿರುಗಾಳಿಯ ಮುನ್ನೆಚ್ಚರಿಕೆ!

ಪೆಟ್ರೋಲ್ ಬಂಕ್‌ಗಳಲ್ಲಿ ಕಿಲೋಮೀಟರ್ ಗಟ್ಟಲೆ ಕ್ಯೂ: ಹಾರ್ಸ್ ರೈಡಿಂಗ್ ಮಾಡ್ತಾ ‘ಜನಗಣತಿ’ ಡ್ಯೂಟಿಗೆ ಹೊರಟ ಸರ್ಕಾರಿ ಶಿಕ್ಷಕ!

ಅನುಷ್ಕಾ ಪ್ರೀತಿಗಾಗಿ ‘ಸಸ್ಯಹಾರಿ’ಯಾದರೇ ಕಿಂಗ್ ಕೊಹ್ಲಿ?: ‘ನನ್ನನ್ನು ಒಬ್ಬ ಉತ್ತಮ ಮನುಷ್ಯನನ್ನಾಗಿ ಮಾಡಿದ್ದು ಅವಳೇ’ ಎಂದ ವಿರಾಟ್!

State News
KARNATAKA

RAIN ALEART : ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ, ಮೇ 21ರವರೆಗೆ ಭಾರೀ ಮಳೆ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 4 Mins Read

ಬೆಂಗಳೂರು: ಕರ್ನಾಟಕದ ಜನತೆಗೆ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟದಿಂದ ಮುಕ್ತಿ ಸಿಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಕರಾವಳಿ ಕರ್ನಾಟಕ…

BREAKING : ಕರ್ನಾಟಕ ಸೇರಿದಂತೆ ಮೇ 20ರಂದು ದೇಶವ್ಯಾಪಿ ಮೆಡಿಕಲ್‌ ಶಾಪ್‌ ಬಂದ್‌!

BIG NEWS : ಸುಳ್ಳು ಚುನಾವಣಾ ಅಫಿಡವಿಟ್ ಆರೋಪ : ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿರುದ್ಧ ದೂರು ಸಲ್ಲಿಕೆ

BREAKING : ಮೇ 20 ರಂದು ರಾಜ್ಯಾದ್ಯಂತ ಮುಷ್ಕರ ಹಿನ್ನೆಲೆ : ಸಾರಿಗೆ ನೌಕರರ ಜೊತೆ ಸರ್ಕಾರದ ಸಂಧಾನ ಸಭೆ ವಿಫಲ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.