Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ: ನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಮರೆತುಬಿಟ್ಟಿರುವಿರಾ? ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ

03/10/2025 9:17 AM

ಈ ತಿಂಗಳಲ್ಲೇ ಭಾರತ – ಚೀನಾ ನಡುವೆ ನೇರ ವಿಮಾನ ಸಂಚಾರ ಆರಂಭ

03/10/2025 9:17 AM

‘ಬುಲೆಟ್‌ಪ್ರೂಫ್’ ಇಲ್ಲದ ಕಿಟಕಿ: ನ್ಯೂಯಾರ್ಕ್‌ನಲ್ಲಿ ಇಸ್ರೇಲಿ ಪಿಎಂ ನೆತನ್ಯಾಹು ಭದ್ರತೆಗೆ ಅಪಾಯ!

03/10/2025 9:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಣ್ಣ & ಸೂಕ್ಷ್ಮ ಕೈಗಾರಿಕೆ, ಸ್ಟಾರ್ಟಪ್ ಗೆ ಒತ್ತು: ಸಚಿವ ಎಂ ಬಿ ಪಾಟೀಲ್
KARNATAKA

ಸಣ್ಣ & ಸೂಕ್ಷ್ಮ ಕೈಗಾರಿಕೆ, ಸ್ಟಾರ್ಟಪ್ ಗೆ ಒತ್ತು: ಸಚಿವ ಎಂ ಬಿ ಪಾಟೀಲ್

By kannadanewsnow0919/06/2024 8:53 PM

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೂ ಆದ್ಯ ಗಮನ ಹರಿಸಲಾಗುತ್ತಿದೆ. ಜೊತೆಗೆ ಕಳೆದ ಬಾರಿಯಂತೆ ಈ ಸಲವೂ ನವೋದ್ಯಮಗಳಿಗೆ ಬಂಡವಾಳ ಸೆಳೆಯಲು ವಿಶೇಷ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ. ಇದರ ಭಾಗವಾಗಿ ‘ಎಸ್ಎಂಇ ಕನೆಕ್ಟ್- 25’ ಮತ್ತು ‘ವೆಂಚರೈಸ್- 24’ ಪರಿಕಲ್ಪನೆಗಳನ್ನು ರೂಪಿಸಲಾಗಿದೆ ಎಂಬುದಾಗಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಮುಂಬರುವ ಫೆಬ್ರವರಿ 12, 13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಜಾಗತಿಕ ಹೂಡಿಕೆದಾರರ ಸಮಾವೇಶ’ದ ಭಾಗವಾಗಿ ಬುಧವಾರ ಇಲ್ಲಿ ನಡೆದ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದ ಭಾಗವಾಗಿ ರಾಜ್ಯದ ತಯಾರಿಕಾ ವಲಯದ ಕಾರ್ಯ ಪರಿಸರವನ್ನು ಜಾಗತಿಕ ಮಟ್ಟದ ಉದ್ದಿಮೆಗಳಿಗೆ ತೋರಿಸಲು ನಾಲ್ಕು ರೋಡ್ ಶೋ ನಡೆಸಲಾಗುವುದು. ಅಲ್ಲದೆ, ಗಣ್ಯ ಉದ್ಯಮಿಗಳನ್ನು ಖುದ್ದಾಗಿ ಆಹ್ವಾನಿಸಲು ಜೂನ್ 24ರಿಂದ 28ರವರೆಗೆ ಜಪಾನಿನ ಟೋಕಿಯೋ, ನಗೋಯ ಮತ್ತು ಒಸಾಕ ನಗರಗಳಿಗೆ ಹಾಗೂ ಜುಲೈ ಮೊದಲ ವಾರದಲ್ಲಿ ದಕ್ಷಿಣ ಕೊರಿಯಾದ ಸಿಯೋಲ್, ಇಂಚೆಯಾನ್ ಮತ್ತು ಜಿಯಾಂಗಿ ನಗರಗಳಿಗೆ ಭೇಟಿ ಕೊಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ʼಬೆಳವಣಿಗೆಯ ಹೊಸಪರಿಕಲ್ಪನೆʼ (Reimagining Growth) ಧ್ಯೇಯದಡಿ ನಡೆಯಲಿರುವ ಸಮಾವೇಶದ ಮೂಲಕ ತಯಾರಿಕಾ ವಲಯ, ಮೂಲಸೌಕರ್ಯ ಅಭಿವೃದ್ಧಿ, ಐಟಿ, ಇಂಧನ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹೆಚ್ಚಿನ ಬಂಡವಾಳ ಬರುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ, ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಸಚಿವ ದಿನೇಶ ಗುಂಡೂರಾವ್, ವೈದ್ಯಕೀಯ ಮತ್ತು ಕೌಶಲ ಅಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ, ಜವಳಿ ಮತ್ತು ಎಪಿಎಂಸಿ ಖಾತೆ ಸಚಿವ ಶಿವಾನಂದ ಪಾಟೀಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಸ್ವಾಗತಿಸಿದರು. ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಅವರು ಹೂಡಿಕೆದಾರರ ಸಮಾವೇಶ ಹಾಗೂ ಉದ್ಯಮ ಬೆಳವಣಿಗೆ ಬಗ್ಗೆ ಪ್ರಾತ್ಯಕ್ಷೆ ಮೂಲಕ ವಿವರಿಸಿದರು ಹಲವು ಗಣ್ಯ ಉದ್ಯಮಿಗಳು ಉಪಸ್ಥಿತರಿದ್ದರು. ಸಣ್ಣ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ವಂದಿಸಿದರು.

Fact Check: ಜಮೀನಿನಲ್ಲಿ ‘ಕರೆಂಟ್ ಕಂಬ, ಟ್ರಾನ್ಸ್ ಫಾರ್ಮರ್’ ಹಾಕಿದ್ರೆ ರೈತರಿಗೆ ‘ಪರಿಹಾರ’ ಸಿಗುತ್ತಾ? ಇಲ್ಲಿದೆ ಅಸಲಿ ಸತ್ಯ

BREAKING: ICSE, ISC ಸುಧಾರಣಾ ಪರೀಕ್ಷೆ 2024ರ ವೇಳಾಪಟ್ಟಿ ಪ್ರಕಟ | ICSE, ISC improvement exam 2024

Share. Facebook Twitter LinkedIn WhatsApp Email

Related Posts

ಗಮನಿಸಿ: ನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಮರೆತುಬಿಟ್ಟಿರುವಿರಾ? ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ

03/10/2025 9:17 AM1 Min Read

`ಧರ್ಮ-ಅಧರ್ಮ ಸಂಕಷ್ಟವಾಯಿತು, ಸರ್ವರು ಎಚ್ಚರದಿಂದರಬೇಕು ಪರಾಕ್’ : ಮೈಲಾರ ಲಿಂಗೇಶ್ವರ ದೇವರ ಕಾರ್ಣಿಕ ನುಡಿ.!

03/10/2025 8:50 AM1 Min Read

ಗಮನಿಸಿ : ಜಸ್ಟ್ 2 ರೂ. ಖರ್ಚಿನಲ್ಲಿ ಮನೆಯಲ್ಲಿರುವ `ಸೀಲಿಂಗ್ ಫ್ಯಾನ್’ ಕ್ಲೀನ್ ಮಾಡಿ | WATCH VIDEO

03/10/2025 8:29 AM2 Mins Read
Recent News

ಗಮನಿಸಿ: ನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಮರೆತುಬಿಟ್ಟಿರುವಿರಾ? ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ

03/10/2025 9:17 AM

ಈ ತಿಂಗಳಲ್ಲೇ ಭಾರತ – ಚೀನಾ ನಡುವೆ ನೇರ ವಿಮಾನ ಸಂಚಾರ ಆರಂಭ

03/10/2025 9:17 AM

‘ಬುಲೆಟ್‌ಪ್ರೂಫ್’ ಇಲ್ಲದ ಕಿಟಕಿ: ನ್ಯೂಯಾರ್ಕ್‌ನಲ್ಲಿ ಇಸ್ರೇಲಿ ಪಿಎಂ ನೆತನ್ಯಾಹು ಭದ್ರತೆಗೆ ಅಪಾಯ!

03/10/2025 9:06 AM

SHOCKING : ಪೋಷಕರೇ ಎಚ್ಚರ : ಬಾಯಿಯಲ್ಲಿ `ಪಟಾಕಿ ಸ್ಪೋಟ’ಗೊಂಡು 8 ವರ್ಷದ ಬಾಲಕ ದುರಂತ ಸಾವು.!

03/10/2025 9:00 AM
State News
KARNATAKA

ಗಮನಿಸಿ: ನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಮರೆತುಬಿಟ್ಟಿರುವಿರಾ? ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ

By kannadanewsnow5703/10/2025 9:17 AM KARNATAKA 1 Min Read

ನಿಮ್ಮ ಬ್ಯಾಂಕಿನ ನಿಷ್ಕ್ರಿಯ ಖಾತೆಗಳಲ್ಲಿರುವ(2 ವರ್ಷಗಳಿಂದ 10 ವರ್ಷಗಳವರೆಗೂ ಚಲನೆ ಇಲ್ಲದವು) ಹಣ / ಕೇಂ ಮಾಡದ ಡೆಪಾಸಿಟ್ಗಳು (10…

`ಧರ್ಮ-ಅಧರ್ಮ ಸಂಕಷ್ಟವಾಯಿತು, ಸರ್ವರು ಎಚ್ಚರದಿಂದರಬೇಕು ಪರಾಕ್’ : ಮೈಲಾರ ಲಿಂಗೇಶ್ವರ ದೇವರ ಕಾರ್ಣಿಕ ನುಡಿ.!

03/10/2025 8:50 AM

ಗಮನಿಸಿ : ಜಸ್ಟ್ 2 ರೂ. ಖರ್ಚಿನಲ್ಲಿ ಮನೆಯಲ್ಲಿರುವ `ಸೀಲಿಂಗ್ ಫ್ಯಾನ್’ ಕ್ಲೀನ್ ಮಾಡಿ | WATCH VIDEO

03/10/2025 8:29 AM

ನಿಮ್ಮ ಮನೆಯಲ್ಲಿ ಈ 1 ವಸ್ತು ಇದ್ದರೆ ಅದೃಷ್ಟಕ್ಕೆ ಕೊರತೆ ಇರುವುದಿಲ್ಲ! ಕಮಲವು ಅದೃಷ್ಟ ತರುತ್ತದೆಯೇ?

03/10/2025 8:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.