Breaking News: ಎಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿ: ನ.30 ಕೊನೆ ದಿನ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶಾವಕಾಶದ ಕೊನೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ನವೆಂಬರ್ 30ರವರೆಗೆ ವಿಸ್ತರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಸೋಮವಾರ ತಿಳಿಸಿದ್ದಾರೆ. ಈ ಮುನ್ನ ಎಐಸಿಟಿಇ ನಿಗದಿ ಮಾಡಿದ್ದ ಪ್ರಕಾರ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಅಕ್ಟೋಬರ್ 25 ಕೊನೆಯ ದಿನವಾಗಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿ ಸುಪ್ರೀಂಕೋರ್ಟಿನ ಮೊರೆ ಹೋಗಿತ್ತು. ಈ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ ಎಂದು ಅವರು ಹೇಳಿದ್ದಾರೆ. ಹೀಗಾಗಿ ನಮಗೆ … Continue reading Breaking News: ಎಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿ: ನ.30 ಕೊನೆ ದಿನ – ಸಚಿವ ಅಶ್ವತ್ಥನಾರಾಯಣ