ಹುಬ್ಬಳ್ಳಿ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಗೋಡೆ ಬರಹದ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದೀಗ ಈ ಕುರಿತು ಮಾಜಿ ಸಚಿವ ಈಶ್ವರಪ್ಪ ಮಾತನಾಡಿದ್ದು, ಗೋಡೆ ಬರೆಯುವವರು ಹೇಡಿಗಳು, ಪಿಎಫ್ ಐ ನವರು ಕತ್ತಲಿನಲ್ಲಿ ಬಂದು ಕೊಲೆ ಮಾಡುವ ಕೆಲಸ ಮಾಡುತ್ತಾರೆ. ಅವರು ಎದುರುಗಡೆ ಬಂದು ಹೋರಾಟ ಮಾಡುವುದಿಲ್ಲ, ದೇಶದಲ್ಲಿ ಹಿಂದೂತ್ವ ಅಳಿಸಬೇಕು ಎನ್ನುವ ಉದ್ದೇಶದಿಂದ ಪಿಎಫ್ಐ ಸಂಘಟನೆ ಇಂತಹ ದೇಶದ್ರೋಹಿ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವು ಸಂಘಟನೆಗಳು ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದೆ, ಅಂತಹವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಿದೆ ಎಂದು ಆಗ್ರಹಿಸಿದರು.
ಈ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಶಿರಾಳಕೊಪ್ಪ ಪಟ್ಟಣದಲ್ಲಿ ಗೋಡೆ ಬರಹ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೀಘ್ರವೇ ಪೊಲೀಸರು ಕಿಡಿಗೇಡಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.ನವೆಂಬರ್ 28 ರಂದು ಶಿರಾಳಕೊಪ್ಪಳದ 9 ಕಡೆಗಳಲ್ಲಿ ಪುಂಡರು ಪಿಎಫ್ ಐಗೆ ಸೇರಿ ಎಂದು ಗೋಡೆಬರಹ ಬರೆಯಲಾಗಿದ್ದು, ಪೊಲೀಸರು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು. ಗೋಡೆ ಬರಹ ಬರೆದ ಕಿಡಿಗೇಡಿಗಳ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.
BREAKING NEWS : ಬೃಹತ್ ಹಿಜಾಬ್ ವಿರೋಧಿ ಪ್ರತಿಭಟನೆ ಬಳಿಕ ನೈತಿಕ ಪೊಲೀಸ್ ಗಿರಿ ರದ್ದುಗೊಳಿಸಿದ ಇರಾನ್
‘ಆರೋಗ್ಯ ಇಲಾಖೆ’ಯನ್ನು ಭ್ರಷ್ಟಾಚಾರದ ಕೊಂಪೆ ಮಾಡಿದ ಕೀರ್ತಿ ‘ಸುಧಾಕರ್’ ಅವರದ್ದು – ಕಾಂಗ್ರೆಸ್ ಕಿಡಿ