Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: BMTC ಬಸ್ಸಲ್ಲಿ ಪರೀಕ್ಷೆ-2ಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ

21/05/2025 4:41 PM

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

21/05/2025 4:31 PM

ಪಾಕಿಸ್ತಾನಿ ರಾಯಭಾರ ಕಚೇರಿ ಅಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದಾಗಿ ಜ್ಯೋತಿ ಮಲ್ಹೋತ್ರಾ ಒಪ್ಪಿಗೆ: ಪೊಲೀಸರು

21/05/2025 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
KARNATAKA

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

By kannadanewsnow0921/05/2025 4:31 PM

ನವದೆಹಲಿ: ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯ ಅನುಷ್ಠಾನವನ್ನು ಪರಿಶೀಲನೆ ಹಾಗೂ ಅದನ್ನು ಮತ್ತಷ್ಟು ವೇಗವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತರ ಸಚಿವಾಲಯ ಸಮನ್ವಯ ಸಭೆಯನ್ನು ನಡೆಸಿದರು.

ನವದೆಹಲಿಯ ತಮ್ಮ ಸಚಿವಾಲಯದಲ್ಲಿ ಸಚಿವರು ಕರೆದಿದ್ದ ಈ ಸಭೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಭೂಸಾರಿಗೆ ವಲಯದಲ್ಲಿ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಇ-ಡ್ರೈವ್ ಅನುಷ್ಠಾನಕ್ಕೆ ಬಂದಿದ್ದು, ಇದನ್ನು ರಾಷ್ಟ್ರೀಯ ಮಹತ್ವದ ಯೋಜನೆ ಎಂದು ಪರಿಗಣಿಸಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಕಟಿಬದ್ಧವಾಗಿ ಕೆಲಸ ಮಾಡಬೇಕು ಎಂದು ಸಚಿವರು ಒತ್ತಿ ಹೇಳಿದರು.

ಪ್ರಧಾನಿಗಳ ದೂರದೃಷ್ಟಿಯಂತೆ ಈ ಯೋಜನೆಯು ಮಾಲಿನ್ಯ ಮುಕ್ತ ಸಾರಿಗೆ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಸಾಂಪ್ರದಾಯಿಕ ಇಂಧನಗಳ ಮೇಲಿನ ಭಾರತದ ಅವಲಂಬನೆಯನ್ನು ಕಡಿಮೆ ಮಾಡಲು ರಾಷ್ಟ್ರವ್ಯಾಪಿ ವಿದ್ಯುತ್ ಚಾಲಿತ ವಾಹನ ಕ್ಷೇತ್ರಕ್ಕೆ ಅಗತ್ಯವಾದ ಪೂರಕ ವ್ಯವಸ್ಥೆಯನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಸಮನ್ವಯತೆ ಅತ್ಯಗತ್ಯ ಎಂದು ಸಚಿವರು ಪ್ರತಿಪಾದಿಸಿದರು.

₹2,000 ಕೋಟಿ ವೆಚ್ಚ:

ಪಿಎಂ ಇ- ಡ್ರೈವ್ ಯೋಜನೆ ಮೂಲಕ ₹2,000 ಕೋಟಿ ವೆಚ್ಚದಲ್ಲಿ ದೇಶಾದ್ಯಂತ ಸುಮಾರು 72,000 ಸಾರ್ವಜನಿಕ ಎಲೆಕ್ಟ್ರಿಕ್ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಬೆಂಬಲ ನೀಡುತ್ತದೆ. ಈ ಕೇಂದ್ರಗಳನ್ನು 50 ರಾಷ್ಟ್ರೀಯ ಹೆದ್ದಾರಿ ಕಾರಿಡಾರ್‌ಗಳಲ್ಲಿ, ಮೆಟ್ರೋ ನಗರಗಳು, ಟೋಲ್ ಪ್ಲಾಜಾಗಳು, ರೈಲ್ವೆ ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಇಂಧನ ಮಳಿಗೆಗಳು ಮತ್ತು ರಾಜ್ಯ ಹೆದ್ದಾರಿಗಳಂತಹ ಹೆಚ್ಚಿನ ದಟ್ಟಣೆಯ ತಾಣಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಭಾರತವು ಸುಸ್ಥಿರ ಸಾರಿಗೆಗೆ ಜಾಗತಿಕ ಮಟ್ಟದಲ್ಲಿ ಮಾದರಿಯಾಗುವ ಹಾದಿಯಲ್ಲಿದೆ. ಪಿಎಂ ಇ- ಡ್ರೈವ್ ಯೋಜನೆಯು ನಮ್ಮ ನಾಗರಿಕರಿಗೆ ಸ್ವಚ್ಛ, ಕೈಗೆಟುಕುವ ಮತ್ತು ಅನುಕೂಲಕರ ಸಾರಿಗೆ ಆಯ್ಕೆಗಳಿಗೆ ಅವಕಾಶ ನೀಡುವ ಗುರಿಯನ್ನು ಹೊಂದಿರುವ ಪರಿವರ್ತನಾತ್ಮಕ ಉಪಕ್ರಮವಾಗಿದೆ. ನಾವು ಕೇವಲ ಮೂಲಸೌಕರ್ಯವನ್ನು ನಿರ್ಮಿಸುತ್ತಿಲ್ಲ; ಇಂಧನ ಭದ್ರತೆ ಮತ್ತು ಹಸಿರು ಆರ್ಥಿಕ ಬೆಳವಣಿಗೆಗೆ ನಾವು ಅಡಿಪಾಯವನ್ನು ನಿರ್ಮಿಸುತ್ತಿದ್ದೇವೆ ಎಂದು ಅವರು ಹೇಳಿದರು.
ನೋಡೆಲ್ ಏಜೆನ್ಸಿಯಾಗಿ ಬಿಎಚ್‌ಇಎಲ್:

ಈ ಉಪಕ್ರಮದ ಅನುಷ್ಠಾನದಲ್ಲಿ ವಿವಿಧ ಪಾಲುದಾರರ ಸಮಗ್ರ ಪಾತ್ರವನ್ನು ಸಚಿವರು ಶ್ಲಾಘಿಸಿದರು. ಬಿಎಚ್‌ಇಎಲ್ (ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್) ಅನ್ನು ಬೇಡಿಕೆ ಒಟ್ಟುಗೂಡಿಸುವಿಕೆಗೆ ಮತ್ತು ಭಾರತದಾದ್ಯಂತ ಇವಿ ಬಳಕೆದಾರರಿಗೆ ಒಂದೇ ವೇದಿಕೆಯಾಗಿ ಕಾರ್ಯನಿರ್ವಹಿಸುವ ಏಕೀಕೃತ ಡಿಜಿಟಲ್ ಸೂಪರ್ ಅಪ್ಲಿಕೇಶನ್‌ನ ಅಭಿವೃದ್ಧಿಗಾಗಿ ನೋಡಲ್ ಏಜೆನ್ಸಿಯಾಗಿ ಪರಿಗಣಿಸಲಾಗುತ್ತಿದೆ ಎಂದ ಸಚಿವರು ಮಾಹಿತಿ ನೀಡಿದರು.

ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ರಾಷ್ಟ್ರೀಯ ನಿಯೋಜನೆಯನ್ನು ಪತ್ತೆಹಚ್ಚಲು ಈ ಅಪ್ಲಿಕೇಶನ್ ನೈಜ-ಸಮಯದ ಸ್ಲಾಟ್ ಬುಕಿಂಗ್, ಪಾವತಿ ವ್ಯವಸ್ಥೆ, ಚಾರ್ಜರ್ ಲಭ್ಯತೆಯ ಸ್ಥಿತಿ ಮತ್ತು ಪ್ರಗತಿ ಡ್ಯಾಶ್‌ಬೋರ್ಡ್‌ಗಳನ್ನು ಒಳಗೊಂಡಿರುತ್ತದೆ. ಚಾರ್ಜರ್ ಸ್ಥಾಪನೆಗಳಿಗೆ ಪ್ರಸ್ತಾವನೆಗಳನ್ನು ಸಂಗ್ರಹಿಸಲು ಮತ್ತು ಮೌಲ್ಯಮಾಪನ ಮಾಡಲು ಬಿಎಚ್‌ಇಎಲ್ ವತಿಯಿಂದ ರಾಜ್ಯಗಳು ಮತ್ತು ಸಚಿವಾಲಯಗಳೊಂದಿಗೆ ಸಮನ್ವಯ ಸಾಧಿಸಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದರು.

ಪಾಕಿಸ್ತಾನಿ ರಾಯಭಾರ ಕಚೇರಿ ಅಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದಾಗಿ ಜ್ಯೋತಿ ಮಲ್ಹೋತ್ರಾ ಒಪ್ಪಿಗೆ: ಪೊಲೀಸರು

BIG NEWS : ಬುಲೆಟ್ ರೈಲು ಯೋಜನೆಯಲ್ಲಿ ದೊಡ್ಡ ಯಶಸ್ಸು : 300 ಕಿ.ಮೀ ವಯಾಡಕ್ಟ್ ಕೆಲಸ ಪೂರ್ಣಗೊಂಡ ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್ | WATCH VIDEO

Share. Facebook Twitter LinkedIn WhatsApp Email

Related Posts

‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: BMTC ಬಸ್ಸಲ್ಲಿ ಪರೀಕ್ಷೆ-2ಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ

21/05/2025 4:41 PM1 Min Read

BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಮೂವರು ಬಚಾವ್

21/05/2025 4:20 PM1 Min Read

ಚಾಮರಾಜನಗರ : ಕೌಟುಂಬಿಕ ಕಲಹದ ವೇಳೆ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪತಿ : ಆರೋಪಿ ವಶಕ್ಕೆ

21/05/2025 3:56 PM1 Min Read
Recent News

‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: BMTC ಬಸ್ಸಲ್ಲಿ ಪರೀಕ್ಷೆ-2ಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ

21/05/2025 4:41 PM

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

21/05/2025 4:31 PM

ಪಾಕಿಸ್ತಾನಿ ರಾಯಭಾರ ಕಚೇರಿ ಅಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದಾಗಿ ಜ್ಯೋತಿ ಮಲ್ಹೋತ್ರಾ ಒಪ್ಪಿಗೆ: ಪೊಲೀಸರು

21/05/2025 4:20 PM

BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಮೂವರು ಬಚಾವ್

21/05/2025 4:20 PM
State News
KARNATAKA

‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: BMTC ಬಸ್ಸಲ್ಲಿ ಪರೀಕ್ಷೆ-2ಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ

By kannadanewsnow0921/05/2025 4:41 PM KARNATAKA 1 Min Read

ಬೆಂಗಳೂರು: ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ-02 ರ ವಿದ್ಯಾರ್ಥಿಗಳಿಗೆ ಪರೀಕ್ಷ-2ಗೆ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಬಿಎಂಟಿಸಿಯ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ…

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

21/05/2025 4:31 PM

BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಮೂವರು ಬಚಾವ್

21/05/2025 4:20 PM

ಚಾಮರಾಜನಗರ : ಕೌಟುಂಬಿಕ ಕಲಹದ ವೇಳೆ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪತಿ : ಆರೋಪಿ ವಶಕ್ಕೆ

21/05/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.