ಚಿಕ್ಕಬಳ್ಳಾಪುರ : ಬಿಜೆಪಿ ಅಭ್ಯರ್ಥಿ ಸುಧಾಕರ್ ಜೈಲಿಗೆ ಹೋಗುವುದು ಗ್ಯಾರಂಟಿ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದಲ್ಲಿ ಡಾ. ಕೆ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು.

ವೈದಕೀಯ ಸಲಕರಣೆಗಳ ಖರೀದಿಯಲ್ಲಿ ಭಾರಿ ಲಂಚ ಹೊಡೆಯಲಾಗಿದೆ.ದುಬಾರಿ ಬೆಲೆಗೆ ಕೋವಿಡ್ ವೈದ್ಯಕೀಯ ಸಲಕರಣೆ ಖರೀದಿ ಮಾಡಿದ್ದಾರೆ. ಕೋವಿಡ ಹಗರಣದ ಸಾಕ್ಷ್ಯಾಧಾರ ಸಿಕ್ಕಿವೆ ಸುಧಾಕರ್ ಜೈಲಿಗೆ ಹೋಗುತ್ತಾರೆ ಮಾಜಿ ಸಚಿವರಕ್ಕೆ ಸುಧಾಕರ್ ಹೆಸರು ಹೇಳಲು ನನಗೆ ನಾಚಿಕೆ ಆಗುತ್ತದೆ ಯಾವುದೇ ಕಾರಣಕ್ಕೂ ಡಾಕ್ಟರ್ ಕೆ ಸುಧಾಕರಿಗೆ ಮತ ನೀಡಬೇಡಿ ಎಂದರು.

ಮಾಜಿ ಸಚಿವ ಡಾಕ್ಟರ್ ಸುಧಾಕರ್ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾಕ್ಟರ್ ಕೆ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಭ್ರಷ್ಟರು ಸಂಸತ್ತಿಗೆ ಹೋದರೆ ಭ್ರಷ್ಟಾಚಾರ ಮತ್ತಷ್ಟು ಹೆಚ್ಚಾಗುತ್ತದೆ, ಡಾಕ್ಟರ್ ಕೆ ಸುಧಾಕರ್ ಹಗರಣದ ತನಿಖೆಗೆ ಆಯೋಗ ರಚಿಸಿದ್ದೇವೆ ಎಂದರು.

ಮಾಹಿತಿ ಪ್ರಕಾರ ದಾಖಲೆಗಳು ಡಾಕ್ಟರ್ ಸುಧಾಕರ್ ವಿರುದ್ಧವೇ ಇದೆ.ಹಾಗಾಗಿ ಸುಧಾಕರ್ ನೂರಕ್ಕೆ ನೂರರಷ್ಟು ಜೈಲಿಗೆ ಹೋಗುತ್ತಾರೆ.ಸುಧಾಕರ್ ಸಚಿವರಾಗಿದ್ದಾಗ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಎಂದು ಬಿಜೆಪಿ ಅಭ್ಯರ್ಥಿ ಸುಧಾಕರ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Share.
Exit mobile version