ಬೆಂಗಳೂರು: ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆ ಮೂಲಕ ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.
ಮುಡಾ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ವಿಳಂಬ ಧೋರಣೆಯನ್ನು ತೋರಿದ್ದರು. ಈ ಹಿನ್ನಲೆಯಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಆರೋಪಪಟ್ಟಿ ಸಲ್ಲಿಸದ ಕಾರಣಕ್ಕೆ ಜಾಮೀನು ನೀಡಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಬಂಧನವಾಗಿ 90 ದಿನ ಕಳೆದರೂ ಆರೋಪಪಟ್ಟಿಯನ್ನು ಲೋಕಾಯುಕ್ತ ಪೊಲೀಸರು ಸಲ್ಲಿಸಿರಲಿಲ್ಲ. ಹೀಗಾಗಿ ಜಿ.ಟಿ ದಿನೇಶ್ ಕುಮಾರ್ ಗೆ ಡಿಫಾಲ್ಟ್ ಜಾಮೀನು ನೀಡಿ ಕೋರ್ಟ್ ಆದೇಶಿಸಿದೆ.
Health Tips: ಇವು ‘ದ್ರಾಕ್ಷಿ ಸೇವನೆ’ಯ ಅದ್ಭುತ ಆರೋಗ್ಯಕರ ಪ್ರಯೋಜನಗಳು
BREAKING: ಬಿಜೆಪಿಯಿಂದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ 144 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ








