Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೀಗೆ ಮಾಡುವುದ್ರಿಂದ ‘ಮಲಬದ್ಧತೆ’ಯಿಂದ ಮುಕ್ತಿ ಸಿಗುತ್ತೆ ; ಬಾಬಾ ರಾಮದೇವ್ ನೀಡಿದ ಅದ್ಭುತ ಸಲಹೆಗಳಿವು!

09/10/2025 10:13 PM

‘ಶುಗರ್’ನಿಂದ ಹಿಡಿದು ತೂಕ ಇಳಿಕೆಯವರೆಗೆ.! ಇದನ್ನು ಕುಡಿಯಿರಿ, ಅದ್ಭುತ ಪ್ರಯೋಜನಗಳು!

09/10/2025 10:01 PM

“ನಾನು ಇಲ್ಲಿ ನೋಡಿದ್ದೆಲ್ಲವೂ…” ಟ್ರಂಪ್ ‘ಸತ್ತ ಆರ್ಥಿಕತೆ’ ಟೀಕೆಗೆ ಯುಕೆ ಪ್ರಧಾನಿ ತಿರುಗೇಟು

09/10/2025 9:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » FSL ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್
KARNATAKA

FSL ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್

By kannadanewsnow0918/08/2025 4:29 PM

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿಲ್ಲ. ಅನಾಲಿಸಿಸ್ ಬಂದ ಮೇಲೆ ತನಿಖೆ ಶುರು ಮಾಡಲಾಗುತ್ತದೆ. ನಿಯಮದಂತೆ ಅಪರಿಚಿತ ವ್ಯಕ್ತಿಗೆ ಪೊಲೀಸರು ರಕ್ಷಣೆ ನೀಡಲಾಗಿದೆ. ಸಾಕ್ಷಿದಾರನಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮದಂತೆ ರಕ್ಷಣೆ ನೀಡಲಾಗಿದೆ. ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೇ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್ಐಟಿಯವರೇ ನಿರ್ಧರಿಸಿದ್ದಾರೆ. ಎಫ್ಎಸ್ಎಲ್ ವರದಿ ಬರುವವರೆಗೆ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶವ ಶೋಧ ಸ್ಥಗಿತಗೊಳಿಸುವ ಬಗ್ಗೆ ನಾವು ತೀರ್ಮಾನ ಕೈಗೊಂಡಿಲ್ಲ. ಧರ್ಮಸ್ಥಳ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ಧರ್ಮಸ್ಥಳ ಪ್ರಕರಣದ ಬಗ್ಗೆ ಕ್ಷಣ ಕ್ಷಣವೂ ಒಂದೊಂದು ಹೇಳಿಕೆ ನೀಡಲಾಗುತ್ತಿದೆ. ಈಗ ಅನಗತ್ಯ ಚರ್ಚೆ ಬೇಡ, ತನಿಖೆ ಬಳಿಕ ಸತ್ಯಾಂಶ ಹೊರಬರುತ್ತೆ. ತನಿಖೆ ನಡೆಯುತ್ತಿರುವಾಗ ಏನೂ ಹೇಳಲು ಆಗಲ್ಲ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ವೇಳೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದಸ್ಯರು ಕೇಳಿದಂತ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಧರ್ಮಸ್ಥಳ ಪ್ರಕರಣದ ಬಗ್ಗೆ ಇಂದು ಇಡೀ ದೇಶ ಗಮನಿಸುತ್ತಿದೆ. ಧರ್ಮಸ್ಥಳ ಠಾಣೆಗೆ ಹೋಗಿ ಓರ್ವ ದೂರು ಕೊಟ್ಟಿದ್ದನು. ನನಗೆ ನಿರಂತರ ಜೀವ ಬೆದರಿಕೆವೊಡ್ಡಿ ಶವ ಹೂತಿದ್ದ ಬಗ್ಗೆ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಅಪರಿಚಿತ ದೂರು ಕೊಟ್ಟಿದ್ದನು. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಸಹ ಕೇಳಿದ್ದನು ಎಂದರು.

ಈ ಹಿನ್ನಲೆಯಲ್ಲಿ ಪೊಲೀಸರು ನ್ಯಾಯಾಧೀಶರ ಮುಂದೆ ಆತನನ್ನು ಹಾಜರುಪಡಿಸಿ 164ರಡಿ ಹೇಳಿಕೆ ದಾಖಲಿಸಿದ್ದರು. ಬಳಿಕ ನ್ಯಾಯಾಧೀಶರು ತನಿಖೆಗೆ ಸೂಚಿಸಿದ್ದರು. ನ್ಯಾಯಾಧೀಶರ ಸೂಚನೆಯಂತೆ ಪೊಲೀಸರು ತನಿಖೆ ಕೈಗೊಂಡಿದ್ದರು. ಆ ನಂತ್ರ ಎಸ್ಐಟಿ ರಚಿಸುವಂತೆ ಮಹಿಳಾ ಆಯೋಗ ಪತ್ರ ಬರೆದಿತ್ತು. ಎಸ್ಐಟಿ ಏಕೆ ರಚಿಸಬೇಕೆಂದೂ ಮಹಿಳಾ ಆಯೋಗ ಪತ್ರದಲ್ಲಿ ಉಲ್ಲೇಖಿಸಿತ್ತು ಎಂದರು.

ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ಬಗ್ಗೆ ಎಸ್ಐಟಿ ರಚಿಸಲು ಮಹಿಳಾ ಆಯೋಗ ಕೋರಿತ್ತು. ಇದಾದ ಬಳಿಕ ನಾನು, ಮುಖ್ಯಮಂತ್ರಿ ಸಿದ್ಧರಾಮಯ್ಯ ಎಸ್ಐಟಿ ರಚನೆಗೆ ಆದೇಶ ನೀಡಿದ್ದೆವು. ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿತ್ತು ಎಂಬುದಾಗಿ ಸದನಕ್ಕೆ ಗೃಹ ಸಚಿವ ಪರಮೇಶ್ವರ್ ಉತ್ತರಿಸಿದರು.

ಉತ್ಖನನಕ್ಕೂ ಮುನ್ನ ಅಪರಿಚಿತನಿಂದ ಎಸ್ಐಟಿ ಹೇಳಿಕೆ ಪಡೆದಿತ್ತು. ಅಪರಿಚಿತನಿಂದ ಹೇಳಿಕೆ ಪಡೆದ ಬಳಿಕ ಮ್ಯಾಪಿಂಗ್ ಮಾಡಲಾಗಿತ್ತು. ಉತ್ಖನನ ನಡೆಸಿದ ಪೈಕಿ ಎರಡು ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆಯಾಗಿದೆ. ಒಂದು ಜಾಗದಲ್ಲಿ ಅಸ್ಥಿಪಂಜರ ಸಿಗುತ್ತೆ, ಎಫ್ಎಸ್ಎಲ್ ಗೆ ಕಳುಹಿಸಲಾಗಿದೆ. ಮತ್ತೊಂದು ಜಾಗದಲ್ಲಿ ಮೂಳೆ, ಬುರುಡೆ ಪತ್ತೆಯಾಗಿದ್ದವು. ಮೂಳೆ ಹಾಗೂ ಬುರುಡೆಗಳನ್ನು ಎಫ್ಎಸ್ಎಲ್ ಗೆ ಕಳುಹಿಸಲಾಗಿದೆ. ಇನ್ನೂ ತನಿಖೆಯೇ ಆರಂಭವಾಗಿಲ್ಲ ಎಂದರು.

ಅಪರಿಚಿತ ಸೂಚಿಸಿದ ಜಾಗದಲ್ಲಿ ಉತ್ಖನನ ನಡೆಸಲಾಗಿದೆ. ಉತ್ಖನನ ನಡೆಸಿ ಸಿಕ್ಕ ಅಸ್ಥಿಪಂಜರ, ಮೂಳೆ, ಬುರುಡೆ, ಎಫ್ಎಸ್ಎಲ್ ಗೆ ರವಾನಿಸಿದ್ದೇವೆ. ಇನ್ನೂ ತನಿಖೆ ನಡೆಸಬೇಕಿದೆ. ಸಿಕ್ಕ ಮೂಳೆಗಳ ಬಗ್ಗೆ, ಸಾಯಿಲ್ ಬಗ್ಗೆ ತನಿಖೆ ನಡೆಸಬೇಕಿದೆ. ನಾವು ಯಾವುದೇ ಒತ್ತಡಕ್ಕೆ ಮಣಿದು ಎಸ್ಐಟಿ ರಚಿಸಿಲ್ಲ. ಯಾವುದೇ ಕಾರಣಕ್ಕೂ ನಾವು ಕಾಂಪ್ರಮೈಸ್ ಮಾಡಿಕೊಳ್ಳುವುದಿಲ್ಲ. ಸತ್ಯವನ್ನು ಹೊರ ತರುವುದೇ ನಮ್ಮ ಉದ್ದೇಶವಾಗಿದೆ. ಆತ ಹೇಳಿದಂತ ಪ್ರತಿಯೊಂದು ವಿಚಾರವನ್ನು ತನಿಖೆ ಮಾಡುವಂತ ಕೆಲಸ ಮಾಡಲಾಗುತ್ತಿದೆ ಎಂದರು.

ಸೆನ್ಸೆಕ್ಸ್ 676 ಅಂಕ ಏರಿಕೆ, ನಿಫ್ಟಿ 24,800ಕ್ಕಿಂತ ಮೇಲ್ಪಟ್ಟು ಮುಕ್ತಾಯ

BREAKING: ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವರು

Share. Facebook Twitter LinkedIn WhatsApp Email

Related Posts

BREAKING: ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಭೂಸ್ವಾಧೀನಕ್ಕೆ ಏಕರೂಪದ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

09/10/2025 9:36 PM1 Min Read

BREAKING: ಮತ್ತೆ ಇಡಿ ಅಧಿಕಾರಿಗಳಿಂದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 50 ಕೋಟಿ ಮೌಲ್ಯದ 44 ಕೆಜಿ ಚಿನ್ನ ಸೀಜ್

09/10/2025 9:03 PM1 Min Read

BIG NEWS: ರಾಜ್ಯದಲ್ಲೊಂದು ಧಾರುಣ ಘಟನೆ: ಕೃಷಿ ಹೊಂಡದಲ್ಲಿ ಮುಳುಗಿ ಅಕ್ಕ-ತಮ್ಮ ದುರ್ಮರಣ

09/10/2025 8:56 PM1 Min Read
Recent News

ಹೀಗೆ ಮಾಡುವುದ್ರಿಂದ ‘ಮಲಬದ್ಧತೆ’ಯಿಂದ ಮುಕ್ತಿ ಸಿಗುತ್ತೆ ; ಬಾಬಾ ರಾಮದೇವ್ ನೀಡಿದ ಅದ್ಭುತ ಸಲಹೆಗಳಿವು!

09/10/2025 10:13 PM

‘ಶುಗರ್’ನಿಂದ ಹಿಡಿದು ತೂಕ ಇಳಿಕೆಯವರೆಗೆ.! ಇದನ್ನು ಕುಡಿಯಿರಿ, ಅದ್ಭುತ ಪ್ರಯೋಜನಗಳು!

09/10/2025 10:01 PM

“ನಾನು ಇಲ್ಲಿ ನೋಡಿದ್ದೆಲ್ಲವೂ…” ಟ್ರಂಪ್ ‘ಸತ್ತ ಆರ್ಥಿಕತೆ’ ಟೀಕೆಗೆ ಯುಕೆ ಪ್ರಧಾನಿ ತಿರುಗೇಟು

09/10/2025 9:50 PM

BREAKING: ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಭೂಸ್ವಾಧೀನಕ್ಕೆ ಏಕರೂಪದ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

09/10/2025 9:36 PM
State News
KARNATAKA

BREAKING: ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಭೂಸ್ವಾಧೀನಕ್ಕೆ ಏಕರೂಪದ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

By kannadanewsnow0909/10/2025 9:36 PM KARNATAKA 1 Min Read

ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆಯ 3ನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳಲು ರಾಜ್ಯ ಸರ್ಕಾರ…

BREAKING: ಮತ್ತೆ ಇಡಿ ಅಧಿಕಾರಿಗಳಿಂದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 50 ಕೋಟಿ ಮೌಲ್ಯದ 44 ಕೆಜಿ ಚಿನ್ನ ಸೀಜ್

09/10/2025 9:03 PM

BIG NEWS: ರಾಜ್ಯದಲ್ಲೊಂದು ಧಾರುಣ ಘಟನೆ: ಕೃಷಿ ಹೊಂಡದಲ್ಲಿ ಮುಳುಗಿ ಅಕ್ಕ-ತಮ್ಮ ದುರ್ಮರಣ

09/10/2025 8:56 PM

BIG UPDATE: ಬೆಂಗಳೂರಿನ ರೆಸ್ಟೋರೆಂಟಿನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಾವು

09/10/2025 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.