ನವದೆಹಲಿ : ಇದೀಗ ರದ್ದಾದ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಸುಮಾರು 35 ಸ್ಥಳಗಳಲ್ಲಿ ನಡೆಸಿದ ದಾಳಿಯ ನಂತರ ಜಾರಿ ನಿರ್ದೇಶನಾಲಯ (ಇಡಿ) ಸುಮಾರು 1 ಕೋಟಿ ನಗದನ್ನು ವಶಪಡಿಸಿಕೊಂಡಿದೆ.
COVID mRNA ಲಸಿಕೆಯಿಂದ 18-39 ವಯಸ್ಸಿನ ಪುರುಷರಲ್ಲಿ ಹೃದಯ ಸಂಬಂಧಿ ಸಾವಿನ ಅಪಾಯ ಹೆಚ್ಚಳ : ಅಧ್ಯಯನ ಬಹಿರಂಗ
ಇಡಿ ದೆಹಲಿ-ಎನ್ಸಿಆರ್, ಪಂಜಾಬ್ ಮತ್ತು ಹೈದರಾಬಾದಿನ ಸುಮಾರು 35 ಸ್ಥಳಗಳಲ್ಲಿ ಶುಕ್ರವಾರ (ನಿನ್ನೆ) ಶೋಧ ಕಾರ್ಯಾಚರಣೆ ನಡೆಸಿತ್ತು.
ಮದ್ಯದ ಉದ್ಯಮಿಗಳು, ವಿತರಣಾ ಕಂಪನಿಗಳು ಮತ್ತು ಸಂಬಂಧಿತ ಘಟಕಗಳ ವಿರುದ್ಧ ನಡೆಸಿದ ದಾಳಿಯಲ್ಲಿ ಒಂದು ಸ್ಥಳದಿಂದ ಸುಮಾರು ಒಂದು ಕೋಟಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ ಕೆಲವು ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಫೆಡರಲ್ ಏಜೆನ್ಸಿ ಈ ಪ್ರಕರಣದಲ್ಲಿ ಇಲ್ಲಿಯವರೆಗೆ 103 ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದೆ. ಕಳೆದ ತಿಂಗಳು ಮದ್ಯದ ಉದ್ಯಮಿ ಮತ್ತು ಮದ್ಯ ತಯಾರಿಕಾ ಕಂಪನಿ-ಇಂಡೋಸ್ಪಿರಿಟ್ನ ವ್ಯವಸ್ಥಾಪಕ ನಿರ್ದೇಶಕ ಸಮೀರ್ ಮಹಂದ್ರು ಅವರನ್ನು ಬಂಧಿಸಿದೆ.
ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ಸಿಬಿಐ ಎಫ್ಐಆರ್ ದಾಖಲಿಕೊಂಡಿದ್ದು, ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಿದೆ.