ಉತ್ತರ ಕನ್ನಡ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ದಿಢೀರ್ ಕುಸಿದು ಬಿದ್ದು ಅಬಕಾರಿ ಎಸ್ಐ ಸಾವನ್ನಪ್ಪಿರುವಂತ ಘಟನೆ ಅಂಕೋಲಾದಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಅಕೋಲಾದ ಅಬಕಾರಿ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಪುರುಷೋತ್ತಮ ಹಳದನ್ ಕರ್(59) ಎಂಬುವರೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವಂತ ಅಧಿಕಾರಿಯಾಗಿದ್ದಾರೆ.
ಇಂದು ತಮ್ಮ ಮನೆಯಲ್ಲಿ ಬಾತ್ ರೂಮ್ ಗೆ ತೆರಳಿದ್ದಂತ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾರೆ. ಅಲ್ಲದೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಎಷ್ಟು ಹೊತ್ತಾದರೂ ಬಾತ್ ರೂಮ್ ನಿಂದ ಬಾರದ ಕಾರಣ ಮನೆಯವರು ಹೋಗಿ ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಪುರುಷೋತ್ತಮ್ ಕಂಡು ಬಂದಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಪುರುಷೋತ್ತಮ್ ಅವರನ್ನು ಪರೀಕ್ಷಿಸಿದಂತ ವೈದ್ಯರು ಆಸ್ಪತ್ರೆಗೆ ತರುವ ಮೊದಲೇ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಕಾರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.