Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಳಿ ಕೂದಲು ಕಪ್ಪಾಗಿಸುವ ಮಾಂತ್ರಿಕ ಪರಿಹಾರ ; ಈ ಕಾಳುಗಳ ಬಗ್ಗೆ ನಿಮಗೆ ತಿಳಿದಿದ್ಯಾ.?

14/08/2025 10:11 PM

ಹೃದಯ ಕಾಯಿಲೆ ಬರದಂತೆ ತಡೆಯಲು ನೀವು ಈ 4 ಬಗೆಯ ಮೀನು ತಿನ್ಲೇಬೇಕು! ವಾರಕ್ಕೆ 2 ಬಾರಿ ತಿಂದ್ರು ಸಾಕು

14/08/2025 9:41 PM

ನಿಮ್ಮ ಮುಖದಲ್ಲಿ ಈ 6 ಚಿಹ್ನೆಗಳು ಕಾಣಿಸ್ತಿವ್ಯಾ.? ನಿಮ್ಮ ‘ಕಿಡ್ನಿ’ ಫೇಲ್ ಆಗ್ತಿರುವಂತೆ, ಹುಷಾರಾಗಿರಿ!

14/08/2025 9:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ‘ರೌಡಿ ಶೀಟರ್ ಬಿಕ್ಲು ಶಿವ ಕೊಲೆ’ ಪ್ರಕರಣಕ್ಕೆ ಸ್ಪೋಟಕ ತಿರುವು
KARNATAKA

ಬೆಂಗಳೂರಲ್ಲಿ ‘ರೌಡಿ ಶೀಟರ್ ಬಿಕ್ಲು ಶಿವ ಕೊಲೆ’ ಪ್ರಕರಣಕ್ಕೆ ಸ್ಪೋಟಕ ತಿರುವು

By kannadanewsnow0917/07/2025 6:00 PM

ಬೆಂಗಳೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ನಾನು ಯಾರ ವಿರುದ್ಧವೂ ದೂರು ಕೊಟ್ಟಿಲ್ಲ ಎಂದು ಅವರ ತಾಯಿಯೇ ಹೇಳಿಕೆ ನೀಡಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ ಕೆ.ಆರ್.ಪುರಂ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಬಿಕ್ಲು ಶಿವು ತಾಯಿ ನೀಡಿದ ದೂರಿನ ಮೇರೆಗೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಅವರ ತಾಯಿ ವಿಜಯಲಕ್ಷ್ಮೀ ಈ ಬಗ್ಗೆ ಸ್ಪಷ್ಟನೆ ನೀಡಿ, ನಾನು ಭೈರತಿ ಬಸವರಾಜ್ ಸೇರಿದಂತೆ ಯಾರ ವಿರುದ್ಧವೂ ದೂರು ಕೊಟ್ಟಿಲ್ಲ. ಪೊಲೀಸರು ಅವರ ವಿರುದ್ಧ ಏಕೆ ಎಫ್‍ಐಆರ್ ಹಾಕಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಮಗ ಕೊಲೆಯಾದ ದಿನ ಫೋನಲ್ಲಿ ಯಾರೊಂದಿಗೋ ಮಾತಾಡುತ್ತಿದ್ದವನು ಹಾಗೆಯೇ ಹೊರಗೆ ಹೋದ. ಸ್ವಲ್ಪ ಹೊತ್ತಿನ ಬಳಿಕ ಜನ ಕೂಗಾಡೋದು ಕೇಳಿಸಿತು. ತಾನು ಹೋಗಿ ನೋಡಿದಾಗ ತನ್ನ ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು ಗೊತ್ತಾಯಿತು ಎಂದು ಹೇಳಿದ್ದಾರೆ.

ನನ್ನ ಮಗನಿಗೆ ಕೆಲವರಿಂದ ಪ್ರಾಣಬೆದರಿಕೆ ಇತ್ತೆಂಬುದು ನಿಜ. ಆದರೆ ಈ ಪ್ರಕರಣಕ್ಕೂ, ಭೈರತಿ ಬಸವರಾಜ್ ಅವರಿಗೂ ಯಾವುದೇ ಸಂಬಂಧ ಇಲ್ಲ. ಪೊಲೀಸರೇ ಅವರ ಹೆಸರನ್ನು ಬರೆದುಕೊಂಡಿದ್ದಾರೆ. ನಾನು ಯಾರ ಮೇಲೂ ದೂರು ಕೊಟ್ಟಿಲ್ಲ ಎಂದ ಮೇಲೆ ಹೇಗೆ ಎಫ್‍ಐಆರ್ ದಾಖಲಿಸಲಾಗಿದೆ? ಎಂದು ಕೇಳಿದರು.

ನನ್ನ ಮಗ ಕೊಲೆಯಾದ ನಂತರ ನಾವು ಚಿಂತಾಕ್ರಾಂತರಾಗಿದ್ದೇವೆ. ಪತ್ನಿ ಹಾಗೂ ಮಕ್ಕಳ ಮುಂದಿನ ಭವಿಷ್ಯವೇನು ಎಂದು ಚಿಂತೆ ಮಾಡುತ್ತಿದ್ದೇವೆ. ಅಂತ್ಯಸಂಸ್ಕಾರ ಹೇಗೆ ನಡೆಸಬೇಕು ಎಂಬುದು ನಮಗೆ ತಿಳಿದಿರಲಿಲ್ಲ. ನಮ್ಮ ಕುಟುಂಬಕ್ಕೆ ಆಸರೆಯಾದ ಮಗ ಹೋದನೆಂಬ ಚಿಂತನೆ ಇರುವಾಗ ಬೇರೆಯವರ ವಿರುದ್ಧ ದೂರು ಕೊಡುವ ಅಗತ್ಯವಿಲ್ಲ ಎಂದು ತಾಯಿ ಸ್ಪಷ್ಟಪಡಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಮಾತನಾಡಿ, ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ರಾಜಕೀಯ ಷಡ್ಯಂತ್ರದಿಂದ ಈ ರೀತಿ ಏಕೆ ನಡೆದಿದೆ ಎಂಬುದು ತಮಗೂ ಆಶ್ಚರ್ಯವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನನಗೂ ಬಿಕ್ಲು ಶಿವ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ, ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ದೂರು ಕೊಟ್ಟ ತಕ್ಷಣ ಏಕಾಏಕಿ ನನ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಯಾರೇ ದೂರು ಕೊಟ್ಟರೂ ಎಫ್ ಐಆರ್ ದಾಖಲಿಸಬಹುದಾ? ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದರು.

ಈ ರೀತಿ ಒಬ್ಬರ ತೇಜೋವಧೆ ಮಾಡುವಂಥದ್ದು ಬಹಳ ನೋವಾಗುತ್ತದೆ. ನನ್ನ ಕುರಿತು ಈ ರೀತಿ ಅಪಪ್ರಚಾರ ಮಾಡುತ್ತಿರುವುದು ತುಂಬಾ ಬೇಸರ ತರಿಸಿದೆ. ಕ್ಷೇತ್ರದ ಕೆಲಸ ಜನರ ಕೆಲಸ ಬಿಟ್ಟರೆ ಬೇರೆ ಯಾವುದೇ ವ್ಯವಹಾರ ನನಗೆ ಗೊತ್ತಿಲ್ಲ. ಈ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಯಾವುದೇ ಮಾಹಿತಿ ನನ್ನನ್ನು ಕೇಳದೆ ನನ್ನ ಮೇಲೆ ಪೊಲೀಸರು ಎಫ್‍ಐಆರ್ ದಾಖಲೆ ಮಾಡುತ್ತಾರೆ. ಯಾರೋ ದೂರು ಕೊಟ್ಟ ತಕ್ಷಣ ನನ್ನ ಮೇಲೆ ಪೊಲೀಸರು ಕೇಸ್ ದಾಖಲಿಸುತ್ತಾರಾ? ನನ್ನ ವಿರುದ್ಧ ಯಾರು ಷಡ್ಯಂತ್ರ ಮಾಡಿದ್ದಾರೋ ಅವರ ವಿರುದ್ಧವಾಗಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ನಗರದ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಕಾಂಗ್ರೆಸ್ ಮಾಡೆಲ್‌ಗಳನ್ನು ಕಾಪಿ ಮಾಡುವುದೇ ಬಿಜೆಪಿ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!

Share. Facebook Twitter LinkedIn WhatsApp Email

Related Posts

ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ಧರಾಮಯ್ಯ

14/08/2025 8:40 PM1 Min Read

ಬೆಳಿಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಬೇಕು: ಆರೋಗ್ಯ ಇಲಾಖೆ ಸಿಬ್ಬಂದಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ

14/08/2025 7:33 PM1 Min Read

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ವಿಭಜನೆಯ ಕರಾಳತೆಯ ‘ಸ್ಮರಣಾರ್ಥ ದಿನ’ ಆಚರಣೆ

14/08/2025 6:55 PM1 Min Read
Recent News

ಬಿಳಿ ಕೂದಲು ಕಪ್ಪಾಗಿಸುವ ಮಾಂತ್ರಿಕ ಪರಿಹಾರ ; ಈ ಕಾಳುಗಳ ಬಗ್ಗೆ ನಿಮಗೆ ತಿಳಿದಿದ್ಯಾ.?

14/08/2025 10:11 PM

ಹೃದಯ ಕಾಯಿಲೆ ಬರದಂತೆ ತಡೆಯಲು ನೀವು ಈ 4 ಬಗೆಯ ಮೀನು ತಿನ್ಲೇಬೇಕು! ವಾರಕ್ಕೆ 2 ಬಾರಿ ತಿಂದ್ರು ಸಾಕು

14/08/2025 9:41 PM

ನಿಮ್ಮ ಮುಖದಲ್ಲಿ ಈ 6 ಚಿಹ್ನೆಗಳು ಕಾಣಿಸ್ತಿವ್ಯಾ.? ನಿಮ್ಮ ‘ಕಿಡ್ನಿ’ ಫೇಲ್ ಆಗ್ತಿರುವಂತೆ, ಹುಷಾರಾಗಿರಿ!

14/08/2025 9:31 PM

ಟ್ರಂಪ್- ಪುಟಿನ್ ‘ಅಲಾಸ್ಕಾ ಮಾತುಕತೆ’ ವಿಫಲವಾದ್ರೆ ಭಾರತಕ್ಕೆ ಹೆಚ್ಚಿನ ಸುಂಕ ವಿಧಿಸುವುದಾಗಿ ಅಮೆರಿಕಾ ಎಚ್ಚರಿಕೆ

14/08/2025 8:50 PM
State News
KARNATAKA

ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ಧರಾಮಯ್ಯ

By kannadanewsnow0914/08/2025 8:40 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಮೈಸೂರು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಮೈಸೂರಿನಲ್ಲಿ ಆ.28ರಂದು…

ಬೆಳಿಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಬೇಕು: ಆರೋಗ್ಯ ಇಲಾಖೆ ಸಿಬ್ಬಂದಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ

14/08/2025 7:33 PM

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ವಿಭಜನೆಯ ಕರಾಳತೆಯ ‘ಸ್ಮರಣಾರ್ಥ ದಿನ’ ಆಚರಣೆ

14/08/2025 6:55 PM

ರಾಜ್ಯದ ‘ಕಾರ್ಮಿಕ’ರಿಗೆ ಗುಡ್ ನ್ಯೂಸ್: 31 ಜಿಲ್ಲೆಗಳಲ್ಲಿ ‘ಶ್ರಮಿಕ ವಸತಿ ಶಾಲೆ’ಗಳು ಆರಂಭ

14/08/2025 6:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.