Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದ `ಪರಿಶಿಷ್ಟ ಜಾತಿ’ಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

19/11/2025 5:13 AM

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!

19/11/2025 5:10 AM

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : 2026 ರಲ್ಲಿ ನಿಮಗೆ ಸಿಗಲಿರುವ `ರಜಾ ದಿನ’ಗಳ ಪಟ್ಟಿ ಇಲ್ಲಿದೆ |Govt Holiday

19/11/2025 5:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ: ಹೆಚ್‌.ಡಿ.ಕುಮಾರಸ್ವಾಮಿ ಕಿಡಿ
KARNATAKA

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ: ಹೆಚ್‌.ಡಿ.ಕುಮಾರಸ್ವಾಮಿ ಕಿಡಿ

By kannadanewsnow0926/12/2024 4:22 PM

ಮಂಡ್ಯ: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ ಗುರುವಾರ ದಿಶಾ ಸಭೆಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಕೇಂದ್ರ ಸಚಿವರು.

ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ ವರ್ಷ ಗಾಂಧಿ ಹೆಸರಲ್ಲಿ ಕಾರ್ಯಕ್ರಮ ಮಾಡಲು ಸರಕಾರ ಹೊರಟಿದೆ. ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧೀಜಿ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದೆ ಸರಕಾರ. ಆದರೆ ಅಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋಗಳು ಇರುವ ಕಟೌಟ್‌ಗಳನ್ನು ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಅವರು ಪ್ರಹಾರ ನಡೆಸಿದರು.

ಈಗ ಇರುವುದು ಅಸಲಿ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಅದೇ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯ ಗಳಿಸಿದ ಮೇಲೆ ಕಾಂಗ್ರೆಸ್ ಅನ್ನು ವಿಸರ್ಜನೆ ಮಾಡಿ ಎಂದು ಸ್ವತಃ ಮಹಾತ್ಮ ಗಾಂಧೀಜಿ ಅವರು ಆಗಲೇ ಹೇಳಿದ್ದರು. ಅವರ ಕಾಂಗ್ರೆಸ್ ಈಗಿಲ್ಲ. ಈಗ ಇರುವುದು ಆಲಿಬಾಬ ಮತ್ತು 40 ಮಂದಿ ಕಳ್ಳರ ಕಾಂಗ್ರೆಸ್ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಗಾಂಧೀಜಿ ಅವರ ಹೆಸರಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಟ್ಟರು ಅವರು. ಗಾಂಧೀಜಿ ಅವರ ರಾಮರಾಜ್ಯದ ಪರಿಕಲ್ಪನೆ ಇವತ್ತು ರಾಜ್ಯದಲ್ಲಿ ಸಾಕಾರ ಆಗಿದೆಯಾ? ಅವರ ಗ್ರಾಮ ಸ್ವರಾಜ್ಯದ ಕನಸು ಈಡೇರಿದೆಯಾ? 15ನೇ ಹಣಕಾಸು ಆಯೋಗದ ಅನುದಾನದ ಮೂಲಕ ಗ್ರಾಮಗಳ ಅಭಿವೃದ್ಧಿಗಾಗಿ ಪಂಚಾಯಿತಿಗಳಿಗೆ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ₹448.29 ಕೋಟಿ ಬಳಕೆ ಮಾಡಿಲ್ಲ. ಈ ಹಣ ಬಿಡುಗಡೆಯಾಗಿ ಹಲವಾರು ತಿಂಗಳೇ ಕಳೆದಿದ್ದರೂ ಇನ್ನೂ ಪಂಚಾಯತಿಗಳಿಗೆ ಆ ಹಣ ಹೋಗಿಲ್ಲ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳ ಪರಿಸ್ಥಿತಿ ದಯನೀಯವಾಗಿದೆ. ಗುಣಮಟ್ಟದ ಚಿಕಿತ್ಸೆ ದೊರೆಯದೆ ಬಾಣಂತಿಯರು, ಮಕ್ಕಳ ಸರಣಿ ಸಾವುಗಳು ಸಂಭವಿಸುತ್ತಿವೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2.756 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಿದ್ದ ಮೇಲೆ ಆಡಳಿತ ಹೇಗೆ ಉತ್ತಮವಾಗಿರಲು ಸಾಧ್ಯ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸರಕಾರ ಪ್ರತಿದಿನವೂ ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದೆ. ಜನರಿಗೆ ಇನ್ನೂ ಎರಡು ಸಾವಿರ ರೂಪಾಯಿ ಕೊಡಲಿ, ನಮ್ಮ ಅಭ್ಯಂತವಿಲ್ಲ. ಆದರೆ, ಮಿತಿ ಮೀರಿದ ತೆರಿಗೆ ಹೇರಿಕೆ ಮಾಡುತ್ತಿದ್ದಾರೆ. ಎರಡು ಲಕ್ಷ ಕೋಟಿ ರೂಪಾಯಿ ಸಾಲ ಮಾಡಿ ಎರಡು ಸಾವಿರ ರೂಪಾಯಿ ಕೊಡಲಿಕ್ಕೆ ಇವರೇ ಬೇಕಾ? ಬೇಕಾಬಿಟ್ಟಿಯಾಗಿ ಆ ಸಾಲ ತೀರಿಸುವವರು ಯಾರು? ಜನ ಸಾಮಾನ್ಯರೇ ಆ ಸಾಲ ತೀರಿಸಬೇಕಲ್ವಾ? ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ಸಚಿವರು

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ರಾಜ್ಯದ ಮೂವರು ಯೋಧರು ಹುತಾತ್ಮರಾಗಿವುದಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಂಬಿನಿ ಮಿಡಿದಿದ್ದಾರೆ.

ಅಪಘಾತದಲ್ಲಿ ಯೋಧರು ಸಾವನ್ನಪ್ಪಿದ ವಿಚಾರ ತಿಳಿದು ನನಗೆ ಬಹಳ ದುಃಖವಾಯಿತು. ಮೃತ ಯೋಧರಲ್ಲಿ ಮೂವರು ಕನ್ನಡಿಗರು ಇದ್ದಾರೆ. ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ. ಆ ಅನಾಹುತ ಕರುಣಾಜನಕ ಘಟನೆ. ಕೇಂದ್ರ ಸರಕಾರ ಆ ಕುಟುಂಬಗಳ ನೆರವಿಗೆ ನಿಲ್ಲಲಿದೆ ಎಂದು ಸಚಿವರು ಹೇಳಿದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಹೆಚ್.ಟಿ.ಮಂಜುನಾಥ್, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ರಾಮಚಂದ್ರ ಮುಂತಾದವರು ಜತೆಯಲ್ಲಿ ಇದ್ದರು.

ರಾಜ್ಯದಲ್ಲಿ ಹೆಬ್ಬೆಟ್ಟು ಗೃಹ ಸಚಿವ ಇದ್ದಾರೆ: ಹೆಚ್‌.ಡಿ.ಕುಮಾರಸ್ವಾಮಿ ಕಿಡಿ

BREAKING : ಉದ್ಯೋಗಿಗಳಿಗೆ ಬಿಗ್ ರಿಲೀಫ್ ; ‘UAN’ ಜೊತೆಗೆ ‘ಆಧಾರ್’ ಲಿಂಕ್ ಗಡುವು ವಿಸ್ತರಣೆ |UAN-Aadhaar linking

Share. Facebook Twitter LinkedIn WhatsApp Email

Related Posts

ಕರ್ನಾಟಕದ `ಪರಿಶಿಷ್ಟ ಜಾತಿ’ಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

19/11/2025 5:13 AM3 Mins Read

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!

19/11/2025 5:10 AM1 Min Read

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : 2026 ರಲ್ಲಿ ನಿಮಗೆ ಸಿಗಲಿರುವ `ರಜಾ ದಿನ’ಗಳ ಪಟ್ಟಿ ಇಲ್ಲಿದೆ |Govt Holiday

19/11/2025 5:00 AM1 Min Read
Recent News

ಕರ್ನಾಟಕದ `ಪರಿಶಿಷ್ಟ ಜಾತಿ’ಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

19/11/2025 5:13 AM

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!

19/11/2025 5:10 AM

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : 2026 ರಲ್ಲಿ ನಿಮಗೆ ಸಿಗಲಿರುವ `ರಜಾ ದಿನ’ಗಳ ಪಟ್ಟಿ ಇಲ್ಲಿದೆ |Govt Holiday

19/11/2025 5:00 AM

BREAKING ; ‘ಅನ್ಮೋಲ್ ಬಿಷ್ಣೋಯ್, 197 ಅಕ್ರಮ ವಲಸಿಗರು ಸೇರಿ 200 ಭಾರತೀಯರು ಅಮೆರಿಕದಿಂದ ಗಡಿಪಾರು ; ನಾಳೆ ದೆಹಲಿಗೆ ವಾಪಸ್

18/11/2025 10:20 PM
State News
KARNATAKA

ಕರ್ನಾಟಕದ `ಪರಿಶಿಷ್ಟ ಜಾತಿ’ಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5719/11/2025 5:13 AM KARNATAKA 3 Mins Read

ಬೆಂಗಳೂರು : ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ (ವರ್ಗೀಕರಣ) ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರ…

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!

19/11/2025 5:10 AM

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : 2026 ರಲ್ಲಿ ನಿಮಗೆ ಸಿಗಲಿರುವ `ರಜಾ ದಿನ’ಗಳ ಪಟ್ಟಿ ಇಲ್ಲಿದೆ |Govt Holiday

19/11/2025 5:00 AM

BREAKING: ಪೋಕ್ಸೋ, ಭ್ರೂಣಹತ್ಯೆ ಕೇಸ್: ಸಾಗರ ಪೊಲೀಸರಿಂದ ‘ದೂಗೂರು ಪರಮೇಶ್ವರ್’ ಅರೆಸ್ಟ್!?

18/11/2025 9:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.