Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM

BREAKING : 40,000 ಮೆಟ್ರಿಕ್ ಟನ್ ‘LPG’ ಹೊತ್ತ ಭಾರತದ ಹಡಗು ಹಾರ್ಮುಜ್ ಜಲಸಂಧಿಯಿಂದ ನಿರ್ಗಮನ, ಶೀಘ್ರ ಕರಾವಳಿಗೆ ಆಗಮನ

13/03/2026 9:45 PM

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದಲ್ಲಿ ‘FAR ನಿರ್ಬಂಧ’ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಸಚಿವ ಎಂ.ಬಿ.ಪಾಟೀಲ
KARNATAKA

GOOD NEWS: ರಾಜ್ಯದಲ್ಲಿ ‘FAR ನಿರ್ಬಂಧ’ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಸಚಿವ ಎಂ.ಬಿ.ಪಾಟೀಲ

By kannadanewsnow0912/02/2026 5:56 PM

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮಹತ್ತ್ವದ ಸುಧಾರಣಾ ಕ್ರಮದಲ್ಲಿ ಕೈಗಾರಿಕಾ ನಿವೇಶನಗಳಲ್ಲಿ ಮಹಡಿ ವಿಸ್ತೀರ್ಣ ಅನುಪಾತ (ಎಫ್ಎಆರ್= ಫ್ಲೋರ್ ಏರಿಯಾ ರೇಶಿಯೋ)ವನ್ನು ಕೈಗಾರಿಕಾ ಸ್ನೇಹಿಯಾಗಿ ಮಾರ್ಪಡಿಸಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ. ಸರಕಾರದ ಈ ಕ್ರಮದಿಂದ ಕೆಐಎಡಿಬಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶಗಳ ಪರಿಸರದಲ್ಲಿ ಉದ್ಯಮ ಮತ್ತು ವಸತಿ ಉದ್ದೇಶದ ರಿಯಲ್ ಎಸ್ಟೇಟ್ ಚಟುವಟಿಕೆಗಳು ಗರಿಗೆದರಲಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, `ಇದುವರೆಗೂ ಕೈಗಾರಿಕಾ ನಿವೇಶನಗಳಲ್ಲಿ ಶೇಕಡ 65ರಷ್ಟು ಭೂಮಿಯನ್ನು ಮಾತ್ರ ಉದ್ಯಮದ ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳಲು ಅವಕಾಶವಿತ್ತು. ಈಗ ಇದನ್ನು ಶೇಕಡ 75ಕ್ಕೆ ಹೆಚ್ಚಿಸಿದ್ದೇವೆ. ಸರಕಾರದ ಈ ಕ್ರಮ ಚಾರಿತ್ರಿಕವಾಗಿದ್ದು, ಕೈಗಾರಿಕೆಗಳಿಗೋಸ್ಕರ ಹೆಚ್ಚು ಹೆಚ್ಚು ಜಮೀನು/ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದು ತಪ್ಪಲಿದೆ. ಇದರ ಫಲವಾಗಿ, ಉದ್ಯಮಿಗಳು ತಮ್ಮ ಕೈಗಾರಿಕೆಗಳನ್ನು ಸ್ಥಾಪಿಸಲು ಬೇಕಾದ ಭೂಮಿಗೆಂದೇ ವಿಪರೀತ ಹಣ ಹಾಕಬೇಕಾಗಿದ್ದ ಹೊರೆ ಇಳಿಯಲಿದೆ. ಇನ್ನೊಂದೆಡೆಯಲ್ಲಿ ರೈತರ ಜಮೀನು ಕೂಡ ಹೆಚ್ಚಾಗಿ ಅವರಲ್ಲೇ ಉಳಿಯಲಿದೆ. ಇದು ಸುಲಲಿತ ವಹಿವಾಟು ಸಂಸ್ಕೃತಿಗೆ ನಿದರ್ಶನವಾಗಿದೆ’ ಎಂದಿದ್ದಾರೆ.

ಇದುವರೆಗೂ ಇದ್ದ ಹಳೆಯ ಎಫ್ಎಆರ್ ಪ್ರಮಾಣದಲ್ಲಿ ಹೂಡಿಕೆದಾರರಿಗೆ ಅನೇಕ ಅಡಚಣೆಗಳಿದ್ದವು. ಉದಾಹರಣೆಗೆ, ಒಂದು ಉದ್ಯಮಕ್ಕೆ 10 ಎಕರೆ ಜಾಗ ಕೊಟ್ಟರೆ ಅದರಲ್ಲಿ ಆರೂವರೆ ಎಕರೆಯನ್ನು ಮಾತ್ರ ಅವರು ಬಳಸಿಕೊಳ್ಳಬಹುದಿತ್ತು. ಉಳಿದ ಜಾಗವನ್ನು ಮೇಲ್ಮೈ ಪಾರ್ಕಿಂಗ್, ಕಟ್ಟಡದ ನಾಲ್ಕೂ ಬದಿಗಳಲ್ಲಿ ಸೆಟ್ ಬ್ಯಾಕ್ ಇತ್ಯಾದಿ ಉದ್ದೇಶಗಳಿಗೆಂದು ಸಾಕಷ್ಟು ಜಾಗ ಬಿಡಬೇಕಿತ್ತು. ಈಗ ಇದನ್ನು ಗಮನಾರ್ಹವಾಗಿ ತಗ್ಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದುವರೆಗೂ 7 ಮೀ. ಎತ್ತರದ ಕೈಗಾರಿಕಾ ಕಟ್ಟಡಗಳಲ್ಲಿ ಸೆಟ್-ಬ್ಯಾಕ್ ಉದ್ದೇಶಕ್ಕೆ ಮುಂಭಾಗದಲ್ಲಿ 1.5 ಮೀ, ಹಿಂಭಾಗ, ಎಡ ಮತ್ತು ಬಲ ಬದಿಗಳಲ್ಲಿ ತಲಾ 1 ಮೀ. ಜಾಗ ಬಿಡಬೇಕಿತ್ತು. ಇನ್ನು ಮುಂದೆ ಮುಂಭಾಗದಲ್ಲಿ 1.5 ಮೀ. ಮತ್ತು ಯಾವುದಾದರೂ ಒಂದು ಪಾರ್ಶ್ವದಲ್ಲಿ (ಎಡ/ಬಲ) 1 ಮೀ. ಬಿಟ್ಟರೆ ಸಾಕು. ಇದೇ ರೀತಿಯಲ್ಲಿ 15 ಮೀ. ಎತ್ತರದ ಕಟ್ಟಡಗಳಿಗೆ ಮುಂಬದಿಯಲ್ಲಿ ಇದುವರೆಗೆ 3ರಿಂದ 10 ಮೀ. ಮತ್ತು ಉಳಿದ ಮೂರು ಕಡೆಗಳಲ್ಲಿ 1.5 ಮೀ.ನಿಂದ 8 ಮೀ.ವರೆಗೆ ಜಾಗವನ್ನು ಖಾಲಿ ಬಿಡಬೇಕಿತ್ತು. ಈಗ ಇದನ್ನು ಕ್ರಮವಾಗಿ 2ರಿಂದ 6 ಮೀ. ಮತ್ತು 1.5 ಮೀ.ನಿಂದ 6 ಮೀ.ಗೆ ಇಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಳೆಯ ನಿಯಮಾವಳಿಗಳಲ್ಲಿ ಉದ್ಯೋಗಿಗಳ ವಸತಿ ಸೌಕರ್ಯ ಮತ್ತು ಕೈಗಾರಿಕಾ ಟೌನ್ ಶಿಪ್ ಅಭಿವೃದ್ಧಿಯನ್ನು ನಿರ್ಬಂಧಿಸಲಾಗಿತ್ತು. ಪರಿಷ್ಕೃತ ಎಫ್.ಎ.ಆರ್. ಅಡಿಯಲ್ಲಿ ಸಾಮಾನ್ಯ ಕೈಗಾರಿಕಾ ಪ್ಲಾಟ್ ಗಳಲ್ಲಿ ಶೇ.15ರಷ್ಟು ಪ್ರದೇಶದಲ್ಲಿ ವಸತಿ ಸೌಕರ್ಯ ಕಲ್ಪಿಸಲು ಮತ್ತು ಕನಿಷ್ಠ 50 ಎಕರೆ ವಿಸ್ತೀರ್ಣದ ಕೈಗಾರಿಕಾ ಪ್ಲಾಟ್ ಗಳಲ್ಲಿ ಶೇ.10ರಷ್ಟು ಪ್ರದೇಶದಲ್ಲಿ ವಸತಿ ಮತ್ತು ವಾಣಿಜ್ಯ ಉದ್ದೇಶದ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಕೊಡಲಾಗುವುದು. ಹಾಗೆಯೇ ವಾಹನಗಳ ನಿಲುಗಡೆಗೆ ಈಗ ಸಾಮಾನ್ಯ ಕೈಗಾರಿಕೆಗಳಿರುವ ನಿವೇಶನಗಳಲ್ಲಿ ಮತ್ತು ಡೇಟಾ ಸೆಂಟರುಗಳಲ್ಲಿ ಶೇ.2ರಷ್ಟು ಮತ್ತು ವೇರ್-ಹೌಸಿಂಗ್ ಹಾಗೂ ಲಾಜಿಸ್ಟಿಕ್ಸ್ ಉದ್ಯಮಗಳಲ್ಲಿ ಶೇ.3ರಷ್ಟು ಜಾಗವನ್ನು ಮಾತ್ರ ಮೀಸಲಿಟ್ಟರೆ ಸಾಕು ಎಂದು ಅವರು ವಿವರಿಸಿದ್ದಾರೆ.

ಕೈಗಾರಿಕೆಗಳಿಗೆ ಭೂಮಿ ಒದಗಿಸುವುದು ಸವಾಲಿನ ಕೆಲಸವಾಗಿದೆ. ಭೂಮಿಯ ಲಭ್ಯತೆ ಕಡಿಮೆ ಇರುವುದು ಇದಕ್ಕೆ ಮುಖ್ಯ ಕಾರಣವಾಗಿದೆ. ಈಗ ಎಫ್ಎಆರ್ ಅನ್ನು ಕೈಗಾರಿಕೆಗಳ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಬದಲಿಸಲಾಗಿದೆ. ಇದರಿಂದ ಕೈಗಾರಿಕಾ ಪ್ರದೇಶ ಪರಿಸರಗಳ ಲಂಬ ಬೆಳವಣಿಗೆಗೆ (ವರ್ಟಿಕಲ್ ಡೆವಲಪ್ಮೆಂಟ್) ಅವಕಾಶ ಸಿಗಲಿದೆ. ಜತೆಗೆ ಕಡಿಮೆ ಭೂಮಿಯಲ್ಲೇ ಉದ್ಯಮಗಳ ನಿರ್ಮಾಣ, ಆರ್ಥಿಕ ಪ್ರಗತಿ ಮತ್ತು ಗರಿಷ್ಠ ಉದ್ಯೋಗಸೃಷ್ಟಿಯ ಸಾಧನೆಗಳನ್ನು ಮಾಡಬಹುದು ಎಂದು ಅವರು ವಿವರಿಸಿದ್ದಾರೆ.

ಕೆಐಎಡಿಬಿ ರಾಜ್ಯದ ಹಲವೆಡೆಗಳಲ್ಲಿ ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಿದೆ. ಹೊಸ ನಿಯಮದ ಪ್ರಕಾರ, ಪ್ರೀಮಿಯಂ ದರ್ಜೆಯ ಕೈಗಾರಿಕಾ ನಿವೇಶನಗಳಲ್ಲಿ ಎಫ್ಎಆರ್ ಅನ್ನು 5.2ಕ್ಕೆ ಏರಿಸಲಾಗಿದೆ. ಈ ನಿಯಮಗಳು ಕೈಗಾರಿಕಾ ಪ್ರದೇಶಗಳು, ವಿಶೇಷ ಹೂಡಿಕೆ ವಲಯಗಳು (ಎಸ್ಇಆರ್), ಏಕಘಟಕ ಸಂಕೀರ್ಣಗಳು, ಕೈಗಾರಿಕಾ ಪ್ರದೇಶಗಳ ವ್ಯಾಪ್ತಿಯಲ್ಲಿನ ವಸತಿ ಮತ್ತು ವಾಣಿಜ್ಯ ಉದ್ದೇಶದ ಕಟ್ಟಡ ನಿರ್ಮಾಣ ಯೋಜನೆಗಳಿಗೆ ಅನ್ವಯಿಸಲಿವೆ ಎಂದು ಅವರು ತಿಳಿಸಿದ್ದಾರೆ.

ಕೈಗಾರಿಕಾ ಪ್ರದೇಶಗಳಲ್ಲಿರುವ ರಸ್ತೆಗಳ ಅಗಲವನ್ನು ಆಧರಿಸಿ ಎಫ್ಎಆರ್ ಪ್ರಮಾಣವನ್ನು ತೀರ್ಮಾನಿಸಲಾಗುತ್ತದೆ. 30 ಮೀ. ಅಗಲದ ರಸ್ತೆಯ ಆಚೀಚೆ ಇರುವ ಕೈಗಾರಿಕಾ ನಿವೇಶನಗಳಲ್ಲಿ ಈವರೆಗೂ 3.25ರಷ್ಟು ಎಫ್ಎಆರ್ ಗೆ ಮಾತ್ರ ಅವಕಾಶವಿತ್ತು. ಈಗ ಇದನ್ನು 5.2ಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿಯಲ್ಲಿ 24ರಿಂದ 30 ಮೀ. ಅಗಲದ ರಸ್ತೆ ಇರುವ ಕಡೆಗಳಲ್ಲಿ ಇದನ್ನು 4.8ಕ್ಕೆ, 18ರಿಂದ 24 ಮೀ. ಅಗಲದ ರಸ್ತೆ ಇರುವೆಡೆಗಳಲ್ಲಿ 4ಕ್ಕೆ ಮತ್ತು 12ರಿಂದ 18 ಮೀ. ಅಗಲದ ರಸ್ತೆ ಇರುವಂತಹ ಜಾಗಗಳಲ್ಲಿ 3.6ಕ್ಕೆ ಏರಿಸಲಾಗಿದೆ. 12 ಮೀ.ಗಿಂತ ಕಡಿಮೆ ಅಗಲವಿರುವ ರಸ್ತೆಗಳು ಇರುವಂತಹ ಕಡೆಗಳಲ್ಲಿ ಎಫ್ಎಆರ್ ಪ್ರಮಾಣವನ್ನು 2.45ರಿಂದ 2.8ರವರೆಗೆ ಪರಿಷ್ಕರಿಸಲಾಗಿದೆ ಎಂದು ಪಾಟೀಲ ನುಡಿದಿದ್ದಾರೆ.

ರೈತರಿಗೂ ಲಾಭ

ಪರಿಷ್ಕೃತ ನಿಯಮಗಳಿಂದಾಗಿ ಭೂ ಸ್ವಾಧೀನ ಕಡಿಮೆ ಮಾಡಬಹುದು. ಜತೆಗೆ ಭೂಮಿ ಕಳೆದುಕೊಳ್ಳುವ ಕೆಲವು ರೈತರು ನಗದು ಪರಿಹಾರಕ್ಕೆ ಪರ್ಯಾಯವಾಗಿ ಅಭಿವೃದ್ಧಿಪಡಿಸಿದ ಭೂಮಿಯನ್ನು ಪರಿಹಾರ ರೂಪದಲ್ಲಿ ಪಡೆಯಲಿದ್ದು, ಅಂತಹವರಿಗೂ ಇದರಿಂದ ಹೆಚ್ಚಿನ ಲಾಭವಾಗಲಿದೆ. ಹೆಚ್ಚು ವಿಸ್ತೀರ್ಣದ ಕಟ್ಟಡ ನಿರ್ಮಾಣಕ್ಕೆ ಅವಕಾಶ ಇರುವುದರಿಂದ ಸಹಜವಾಗಿ ರೈತರಿಗೂ ಅನುಕೂಲವಾಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ ವಿವರಿಸುತ್ತಾರೆ.

ವಾಹನ‌ ನಿಲುಗಡೆ ಮೀಸಲು ಜಾಗ ಇಳಿಕೆ

ವಾಹನ ನಿಲುಗಡೆಗೆ ಕಡ್ಡಾಯವಾಗಿ ಬಿಡಬೇಕಿದ್ದ ಜಾಗದ ಪ್ರಮಾಣವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದೆ. ಕೈಗಾರಿಕಾ ನಿವೇಶನದ ಒಟ್ಟು ಜಾಗದಲ್ಲಿ ಶೇ 5ರಷ್ಟು ಜಾಗವನ್ನು ಈ ಹಿಂದೆ ವಾಹನ ನಿಲುಗಡೆಗೆ ಮೀಸಲಿಡಬೇಕಿತ್ತು. ಅದರೆ ಈಗ ಅದನ್ನು ಶೇ 3ರಷ್ಟಕ್ಕೆ ಇಳಿಸಿದ್ದು, ಇದರಿಂದ ಉದ್ಯಮಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಪಾಟೀಲ ವಿವರಿಸುತ್ತಾರೆ.

SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ‘BMTC’ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!

Share. Facebook Twitter LinkedIn WhatsApp Email

Related Posts

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM1 Min Read

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM1 Min Read

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM1 Min Read
Recent News

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM

BREAKING : 40,000 ಮೆಟ್ರಿಕ್ ಟನ್ ‘LPG’ ಹೊತ್ತ ಭಾರತದ ಹಡಗು ಹಾರ್ಮುಜ್ ಜಲಸಂಧಿಯಿಂದ ನಿರ್ಗಮನ, ಶೀಘ್ರ ಕರಾವಳಿಗೆ ಆಗಮನ

13/03/2026 9:45 PM

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM

‘ನೆಹರು ಮಾತು ಕೇಳಿ’ : ಯುದ್ಧದ ಸಮಯದಲ್ಲಿ ಕಾಂಗ್ರೆಸ್ ತಪ್ಪು ಮಾಹಿತಿ ಹರಡುತ್ತಿದೆ ; ಪ್ರಧಾನಿ ಮೋದಿ

13/03/2026 9:30 PM
State News
KARNATAKA

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

By kannadanewsnow0913/03/2026 10:11 PM KARNATAKA 1 Min Read

ಮಂಡ್ಯ :- ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಸ್ಪೃಶ್ಯತೆ ಆಚರಣೆಯಂತಹ ಅನಿಷ್ಠ ಪದ್ಧತಿ ಮಾತ್ರ ತೊಲಗಿಲ್ಲ. ಮದ್ದೂರು ತಾಲೂಕಿನ ಹುಲಿಕೆರೆ…

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM

ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

13/03/2026 7:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.