Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮಾರ್ಗಸೂಚಿ ಪ್ರಕಟ : ನೀತಿ ಸಂಹಿತೆ ಜಾರಿ.!

11/04/2026 9:08 AM

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM

​ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ‘ಕ್ಯಾಶ್’ ನಡೆಯಲ್ಲ! ಸಂಪೂರ್ಣ ಕ್ಯಾಶ್‌ಲೆಸ್ ಆಗಲಿವೆ ರಾಷ್ಟ್ರೀಯ ಹೆದ್ದಾರಿಗಳು: ಸವಾರರೇ ಎಚ್ಚರ!

11/04/2026 8:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಈ ಕೋರ್ಸುಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟ: ಕೆಇಎ
KARNATAKA

ನಾಳೆ ಈ ಕೋರ್ಸುಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟ: ಕೆಇಎ

By kannadanewsnow0922/09/2025 6:44 PM

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತು ಹಾಗೂ ಆಯುಷ್ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆ ಹಂಚಿಕೆಯ ಅಂತಿಮ ಫಲಿತಾಂಶ ಸೆ.23ರಂದು ಪ್ರಕಟವಾಗಲಿದ್ದು, ಆ ಬಳಿಕ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅಂತಿಮ ಸುತ್ತಿನ‌ ಫಲಿತಾಂಶ ಪ್ರಕಟಣೆ ನಂತರ ಸೆ.26ರೊಳಗೆ ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆ.28ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಖಿಲ ಭಾರತ ಕೋಟಾ (ಎಂಸಿಸಿ) ಹಾಗೂ ಕೆಇಎ ಎರಡೂ ಕಡೆ ವೈದ್ಯಕೀಯ ಸೀಟು ಹಂಚಿಕೆಯಾದ 774 ಅಭ್ಯರ್ಥಿಗಳ ಪೈಕಿ, ಎಂಸಿಸಿ ಸೀಟು ಉಳಿಸಿಕೊಳ್ಳಲು ಇಚ್ಚಿಸುವ ಅಭ್ಯರ್ಥಿಗಳಿಗೆ ಕೆಇಎ ಸೀಟು ಬಿಟ್ಟು ಹೊರ ಹೋಗಲು ಇಂದು ಇಡೀ ದಿನ ಅವಕಾಶ ನೀಡಲಾಗಿತ್ತು. ಈ ಪ್ರಕ್ರಿಯೆ ನಂತರ ರದ್ಧಾದ ಸೀಟುಗಳನ್ನು ಇದೇ ಸುತ್ತಿಗೆ ತೆಗೆದುಕೊಂಡು ಪುನಃ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕೆಇಎ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಕಾಲೇಜಿಗೆ ಸೇರಿದ್ದ ಅಭ್ಯರ್ಥಿಗಳಿಗೆ ಎಂಸಿಸಿ ಯಲ್ಲಿ ಸೀಟು ಸಿಕ್ಕಿದ್ದರೂ ರದ್ದುಪಡಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಆ ಸೀಟುಗಳನ್ನು ಕೂಡ ಇದೇ ಸುತ್ತಿಗೆ ಪರಿಗಣಿಸಲಾಗುವುದು ಎಂದರು.

ಹೊಸ ನೋಂದಣಿಗೆ ಅವಕಾಶ

ವಿವಿಧ ಕಾರಣಗಳಿಂದ ವೈದ್ಯಕೀಯ ಕೋರ್ಸ್ ಗಳಿಗೆ ಇದುವರೆಗೂ ಅರ್ಜಿಯನ್ನೇ ಸಲ್ಲಿಸದಿರುವವರಿಗೆ ಹೊಸದಾಗಿ ನೋಂದಣಿ‌ ಮಾಡಿಕೊಳ್ಳಲು ಸೆ.25ರಿಂದ 29ರವರೆಗೆ ಅವಕಾಶ ನೀಡಲಾಗುವುದು. ಅಲ್ಲದೆ, ಸಿಇಟಿಗೆ ಅರ್ಜಿ ಸಲ್ಲಿಸಿ, ಕೆಇಎ ಪೋರ್ಟಲ್ ನಲ್ಲಿ ಯುಜಿ ನೀಟ್ ರೋಲ್ ನಂಬರ್ ನಮೂದಿಸುವುದಕ್ಕೂ ಸೆ.29ರಿಂದ ಅಕ್ಟೋಬರ್ 3ರವರೆಗೆ ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ.

ಮಾಪ್ ಅಪ್ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಎಲ್ಲ ಅಭ್ಯರ್ಥಿಗಳು ಹೊಸದಾಗಿಯೇ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಲಭ್ಯ ಸೀಟುಗಳನ್ನು ಗಮನದಲ್ಲಿಟ್ಟುಕೊಂಡು ಆಪ್ಷನ್ಸ್ ದಾಖಲಿಸಲು ಇದು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

ರಾಜ್ಯಾಧ್ಯಂತ ಜಾತಿಗಣತಿ ಸಮೀಕ್ಷೆಗೆ 1.60 ಲಕ್ಷ ಶಿಕ್ಷಕರನ್ನು ನೇಮಕ: ಸಚಿವ ಮಧು ಬಂಗಾರಪ್ಪ

ರಾಜ್ಯದ 2ನೇ ದೊಡ್ಡ ದಸರಾ ಖ್ಯಾತಿಯ ಶಿವಮೊಗ್ಗ ದಸರಾಕ್ಕೆ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿಎಸ್ ರಾಜು ಚಾಲನೆ

Share. Facebook Twitter LinkedIn WhatsApp Email

Related Posts

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮಾರ್ಗಸೂಚಿ ಪ್ರಕಟ : ನೀತಿ ಸಂಹಿತೆ ಜಾರಿ.!

11/04/2026 9:08 AM2 Mins Read

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM2 Mins Read

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM1 Min Read
Recent News

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮಾರ್ಗಸೂಚಿ ಪ್ರಕಟ : ನೀತಿ ಸಂಹಿತೆ ಜಾರಿ.!

11/04/2026 9:08 AM

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM

​ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ‘ಕ್ಯಾಶ್’ ನಡೆಯಲ್ಲ! ಸಂಪೂರ್ಣ ಕ್ಯಾಶ್‌ಲೆಸ್ ಆಗಲಿವೆ ರಾಷ್ಟ್ರೀಯ ಹೆದ್ದಾರಿಗಳು: ಸವಾರರೇ ಎಚ್ಚರ!

11/04/2026 8:29 AM

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಇನ್ಮುಂದೆ 26 ದಿನಗಳ ಗ್ಯಾಪ್ ಕಡ್ಡಾಯ! ಯಾವಾಗ ಬುಕ್ ಮಾಡಬೇಕು? ಇಲ್ಲಿದೆ ಮಾಹಿತಿ

11/04/2026 8:20 AM
State News
KARNATAKA

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮಾರ್ಗಸೂಚಿ ಪ್ರಕಟ : ನೀತಿ ಸಂಹಿತೆ ಜಾರಿ.!

By kannadanewsnow5711/04/2026 9:08 AM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-31ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣಾ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ.…

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

11/04/2026 8:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.