ನವದೆಹಲಿ: ನರೇಲಾದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಈ ಪ್ರದೇಶದಲ್ಲಿ ಒಂದು ವಾರದಲ್ಲಿ ನಡೆದಿರುವ ಎರಡನೇ ಘಟನೆ ಇದಾಗಿದೆ.
BIGG NEWS : ಉಡುಪಿಯಲ್ಲಿ ಕುಡಿದ ಮತ್ತಿನಲ್ಲಿ ಯುವತಿಯ ಬೀದಿ ರಂಪಾಟ : ನಶೆರಾಣಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ
ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ಮತ್ತು ಇಪ್ಪತ್ತು ಅಗ್ನಿಶಾಮಕ ಟೆಂಡರ್ಗಳು ಧಾವಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ನರೇಲಾದಲ್ಲಿರುವ ಪ್ಲಾಸ್ಟಿಕ್ ಚಪ್ಪಲಿ ಮತ್ತು ಶೂ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಬಗ್ಗೆ ನಮಗೆ ಮಾಹಿತಿ ಲಭಿಸಿದೆ. ಹಲವು ಅಗ್ನಿಶಾಮಕ ಸಿಬ್ಬಂದಿ ಮತ್ತು 20 ಅಗ್ನಿಶಾಮಕ ಟೆಂಡರ್ಗಳು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದ ಎಚ್ ಬ್ಲಾಕ್ನಲ್ಲಿನ ಶೂ ತಯಾರಿಕೆ ಕಾರ್ಖಾನೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದ, ಇದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಡಿಎಫ್ಎಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 31 ರಂದು ಮಂಗಳವಾರ ಇದೇ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಆ ವೇಳೆ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದು, 22 ಮಂದಿಯನ್ನು ರಕ್ಷಿಸಲಾಗಿತ್ತು.