Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ: ಮಂಡ್ಯ ಮೂಲದ ಯುವತಿ ಸಜೀವ ದಹನ

25/12/2025 5:12 PM

ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

25/12/2025 5:06 PM

ಬೆಂಗಳೂರಲ್ಲಿ ವರದಕ್ಷಿಣೆ ಕಿರುಕುಳ : 2 ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಯತ್ನ!

25/12/2025 5:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು
KARNATAKA

ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

By kannadanewsnow0925/12/2025 5:06 PM

ಬೆಂಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.

ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ ಬೈಪಾಸ್ ಮೂಲಕವೇ ರೈಲು ಸಾಗುವಂತೆ ಮಾಡಬೇಕು ಎಂದು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಈ‌ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಹಲವು ಸಭೆಗಳನ್ನು ನಡೆಸಲಾಗಿದೆ. ನಮ್ಮ ಪ್ರಯತ್ನಕ್ಕೆ ವಿಶೇಷ ರೈಲಿನ ರೂಪದಲ್ಲಿ ಮೊದಲ ಯಶಸ್ಸು ಸಿಕ್ಕಿರುವುದು ಸಂತಸ ತಂದಿದೆ ಎಂದಿದ್ದಾರೆ.

ಬೈಪಾಸ್ ಮೂಲಕ ಚಲಿಸಿದ್ದ ಕಾರಣಕ್ಕೆ ಎರಡೂ ಕಡೆ ಎಂಜಿನ್ ಬದಲಿಸುವ ಪ್ರಮೇಯ ಬಂದಿಲ್ಲ. ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಎಲ್ಲ ರೈಲುಗಳನ್ನು ಇದೇ ರೀತಿ ಬೈಪಾಸ್ ಮೂಲಕ ಸಂಚರಿಸುವಂತೆ‌ ಮಾಡಿದರೆ ಪ್ರಯಾಣದ ಅವಧಿ ಕಡಿಮೆ‌ ಮಾಡಬಹುದು ಎಂಬುದು ನನ್ನ ನಿಲುವು. ಈ ನಿಟ್ಟಿನಲ್ಲಿ ರೈಲ್ವೆ ಅಧಿಕಾರಿಗಳ ಜತೆ ಸಭೆಗಳು ನಡೆದಿವೆ ಎಂದು ಹೇಳಿದರು.

ಈ ವಿಶೇಷ ರೈಲು ಕೇವಲ ಒಂಬತ್ತು ನಿಲುಗಡೆ ಹೊಂದಿತ್ತು. ಬುಧವಾರ ರಾತ್ರಿ ಯಶವಂತಪುರದಿಂದ ಹೊರಟ ರೈಲು ಗುರುವಾರ ಬೆಳಿಗ್ಗೆ 9 ಗಂಟೆ ಬದಲಿಗೆ 11 ಗಂಟೆಗೆ ತಲುಪಿದೆ. ವಿಶೇಷ ರೈಲಾಗಿದ್ದರಿಂದ ನಿಗದಿತ ಸಮಯಕ್ಕೆ ತಲುಪಲು ಆಗಿಲ್ಲವಷ್ಟೆ. ಈ ವಿಶೇಷ ರೈಲು ಸೇವೆಗೆ ವಿಜಯಪುರ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು-ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿನ 14 ಗಂಟೆಗಳಿಂದ 10 ಗಂಟೆಗಳಿಗೆ ಇಳಿಸಲು ಪ್ರಯತ್ನ ನಡೆದಿದೆ. ಹೀಗಾಗಿ, ಮೈಸೂರು- ಫಂಡರಪುರ ನಡುವಿನ ಗೋಲಗುಂಬಜ್ ಎಕ್ಸ್‌ಪ್ರೆಸ್‌ ರೈಲನ್ನು ಖಾಯಂ ಆಗಿ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ ಓಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಸಂಬಂಧವಾಗಿ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್, ಸೋಮಣ್ಣ ಅವರಿಗೆ ಪತ್ರ ಬರೆದು, ವ್ಯವಹರಿಸಲಾಗುವುದು. ಬೆಂಗಳೂರಿನಿಂದ ರಾತ್ರಿ ಹೊರಡುವ ರೈಲುಗಳು ವಿಜಯಪುರಕ್ಕೆ ಬೆಳಿಗ್ಗೆ 6-7 ಗಂಟೆಯ ಹೊತ್ತಿಗೆ ತಲುಪುವಂತೆ ವೇಳಾಪಟ್ಟಿ ಬದಲಿಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಪಾಟೀಲ ಪ್ರತಿಪಾದಿಸಿದ್ದಾರೆ.

ಇದಲ್ಲದೆ, ವಿಜಯಪುರಕ್ಕೆ ಒಂದು ಪ್ರತ್ಯೇಕ ವಿಶೇಷ ರೈಲನ್ನು ಕಾಯಂ ಆಗಿ ಓಡಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.

ಸಾಮಾನ್ಯವಾಗಿ ವಿಶೇಷ ರೈಲು ಗಳು ನಂತರದ ದಿನಗಳಲ್ಲಿ ಕಾಯಂ ಆಗುತ್ತವೆ ಎಂದೂ ಅವರು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ: ಮಂಡ್ಯ ಮೂಲದ ಯುವತಿ ಸಜೀವ ದಹನ

25/12/2025 5:12 PM1 Min Read

ಬೆಂಗಳೂರಲ್ಲಿ ವರದಕ್ಷಿಣೆ ಕಿರುಕುಳ : 2 ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಯತ್ನ!

25/12/2025 5:00 PM1 Min Read

ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕೂರಬಾರದು : ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್

25/12/2025 4:59 PM1 Min Read
Recent News

ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ: ಮಂಡ್ಯ ಮೂಲದ ಯುವತಿ ಸಜೀವ ದಹನ

25/12/2025 5:12 PM

ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

25/12/2025 5:06 PM

ಬೆಂಗಳೂರಲ್ಲಿ ವರದಕ್ಷಿಣೆ ಕಿರುಕುಳ : 2 ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಯತ್ನ!

25/12/2025 5:00 PM

ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕೂರಬಾರದು : ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್

25/12/2025 4:59 PM
State News
KARNATAKA

ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ: ಮಂಡ್ಯ ಮೂಲದ ಯುವತಿ ಸಜೀವ ದಹನ

By kannadanewsnow0925/12/2025 5:12 PM KARNATAKA 1 Min Read

ಮಂಡ್ಯ: ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ ಘೋರ ದುರಂತದಲ್ಲಿ ಮಂಡ್ಯ ಮೂಲದ ಯುವತಿ ಸಜೀವ ದಹನಗೊಂಡಿದ್ದಾಳೆ. ಕೆ.ಆರ್.ಪೇಟೆ ತಾಲೂಕಿನ ಅಂಕನಹಳ್ಳಿ…

ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

25/12/2025 5:06 PM

ಬೆಂಗಳೂರಲ್ಲಿ ವರದಕ್ಷಿಣೆ ಕಿರುಕುಳ : 2 ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಯತ್ನ!

25/12/2025 5:00 PM

ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕೂರಬಾರದು : ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್

25/12/2025 4:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.