Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯ ‘ರಾಗ’ಗಳನ್ನ ಕೇಳುವುದ್ರಿಂದ ಗಮನ, ಭಾವನಾತ್ಮಕ ಸಮತೋಲನ ಸುಧಾರಣೆ : ಅಧ್ಯಯನ

30/06/2025 7:26 PM

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

30/06/2025 7:08 PM

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ
KARNATAKA

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

By kannadanewsnow0930/06/2025 7:08 PM

ಬೆಂಗಳೂರು: ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಜೀವಿ ಪ್ರದೇಶದಲ್ಲಿ ಐದು ಹುಲಿಗಳು ಸಾವನ್ನಪ್ಪಿದ್ದವು. ಈ ಪ್ರಕರಣ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೇ ತನಿಖೆಯ ವರದಿ ಬಂದ ನಂತ್ರ ಶಿಸ್ತು ಕ್ರಮ ಜರುಗಿಸುವುದಾಗಿ ತಿಳಿಸಿದೆ.

ಈ ಸಂಬಂಧ ಅರಣ್ಯ ಪಡೆ ಮುಖ್ಯಸ್ಥರು ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದು, ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು, ಕರ್ನಾಟಕ ಸರ್ಕಾರ ರವರ ಉಲ್ಲೇಖಿತ ಟಿಪ್ಪಣಿಯಲ್ಲಿ ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜ ಸಾವಿಗಾಡಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಈ ಐದು ಹುಲಿಗಳು ರಸ್ತೆಯಿಂದ ಕೇವಲ 100 ಮೀಟರ್ ದೂರದಲ್ಲಿ ಸತ್ತುಬಿದ್ದಿದ್ದರೂ ಎರಡು ದಿನಗಳವರೆಗೆ ಇಲಾಖೆಯ ಸಿಬ್ಬಂದಿಯ ಗಮನಕ್ಕೆ ಬಾರದಿರುವುದು ಅರಣ್ಯ, ವನ್ಯಜೀವಿ ಸಂರಕ್ಷಣೆಯಲ್ಲಿ ಲೋಪವಾಗಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಹಾಗೂ ಸಾವಿಗೀಡಾದ ಸ್ಥಳದಿಂದ ಕೇವಲ 800 ಮೀಟರ್ ದೂರದಲ್ಲಿ ಕಳ್ಳಬೇಟೆ ನಿಗ್ರಹ ಶಿಬಿರವಿದ್ದರೂ ವನ್ಯಜೀವಿ ರಕ್ಷಣೆಯಾಗದಿರುವುದು ಹಾಗೂ ಕಳೆದ ಮೂರು ತಿಂಗಳಿನಿಂದ ಮಾದ್ಯಮಗಳಲ್ಲಿ ಮುಂಚೂಣಿಯ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಭತ್ಯೆ ನೀಡದೇ ಇರುವುದು ಗಸ್ತು ಕಾರ್ಯಕ್ಕೆ ಅಡಚಣೆ ಉಂಟಾಗಿರುತ್ತದೆ.

ಇದಕ್ಕೆ ಮಲೈಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹಾಗೂ ಗಸ್ತು ಸಿಬ್ಬಂದಿಯ ಕರ್ತವ್ಯ ಲೋಪವೇ ಕಾರಣವೆಂಬುದು ಮೇಲ್ನೋಟಕ್ಕೆ ಕಂಡುಬಂದಿರುವ ಕಾರಣದಿಂದ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಶಾಖೆಯ ಉಪ ವಲಯ ಅರಣ್ಯಾಧಿಕಾರಿ-ಕಂ-ಮೋಜಣಿದಾರ ಮತ್ತು ಗಸ್ತು ಸಿಬ್ಬಂದಿಗಳ ಸಂಬಂಧ ಕ್ರಮವನ್ನು ಪ್ರತ್ಯೇಕವಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ವೃತ್ತ, ಚಾಮರಾಜನಗರ ರವರ ಹಂತದಲ್ಲಿ ಕ್ರಮಕೈಗೊಳ್ಳಲಾಗುತ್ತಿದ್ದು, ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹೂಗ್ಯಂ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಇವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕಡ್ಡಾಯ ರಜೆಯ ಮೇಲೆ ಕಳುಹಿಸಲು ನಿರ್ದೇಶಿಲಾಗಿದ್ದು, ಅದರಂತೆ ಈ ಕೆಳಕಂಡ ಆದೇಶಿಸಲಾಗಿದೆ.

ಪುಸ್ತಾವನೆಯಲ್ಲಿ’ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಹಿತದೃಷ್ಟಿಯಿಂದ ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ಈ ಕೆಳಗಿನ ವಿಭಾಗದ ಅಧಿಕಾರಿ/ಸಿಬ್ಬಂದಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕಡ್ಡಾಯ ರಜೆಯ ಮೇಲೆ ತೆರಳಲು ಈ ಮೂಲಕ ಆದೇಶಿಸುತ್ತಾ, ಸದರಿ ಹುದ್ದೆಗಳಿಗೆ ಈ ಕೆಳಕಂಡಂತೆ ಹೆಚ್ಚುವರಿ ಪ್ರಭಾರ ವ್ಯವಸ್ಥೆಯನ್ನು ಕಲ್ಪಿಸಿದೆ ಎಂದು ತಿಳಿಸಿದ್ದಾರೆ.

  1. ಚಕ್ರಪಾಣಿ ವೈ, ಭಾ.ಅ.ಸೇ. ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ, ಕೊಳ್ಳೇಗಾಲ,
  2. ಗಜಾನನ ಹೆಗಡೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ವನ್ಯಜೀವಿ ಉಪ ವಿಭಾಗ (ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ
  3. ಮಾದೇಶ, ಉಪ ವಲಯ ಅರಣ್ಯಾಧಿಕಾರಿ-ಕಂ- ಮೋಜಣಿದಾರರು

ಕೆ.ಸಿ.ಎಸ್.ಆರ್. ನಿಯಮ 32 ರಡಿ ಪ್ರಸ್ತುತ ಖಾಲಿ ಇರುವ ವಲಯ ಅರಣ್ಯಾಧಿಕಾರಿ ಹೂಗ್ಯಂ ವನ್ಯಜೀವಿ ವಲಯ ಹುದ್ದೆಯ ಸ್ವತಂತ್ರ ಪುಭಾರ ಸಂಬಂಧಿಸಿದ ಹುದ್ದೆಗೆ ಹೆಚ್ಚುವರಿ ಪ್ರಭಾರ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ಸಂತೋಷ್ ಕುಮಾರ್ ಜಿ., ಭಾ.ಅ.ಸೇ. ಉಪ ಅರಣ್ಯ ಸಂರಕ್ಷಣಾಧಿಕಾರಿ (ಕೇಂದ್ರಸ್ಥಾನ), ಬೆಂಗಳೂರು ಇವರು ಉಪ ಅರಣ್ಯ ಸಂರಕ್ಷಣಾಧಿಕಾರಿ, ಮ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ, ಕೊಳ್ಳೇಗಾಲ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡು ಮುಂದಿನ ಆದೇಶದವರೆಗೆ ಕರ್ತವ್ಯ ನಿರ್ವಹಿಸುವುದು.

ಸ್ಕೂಲ್ ಮನೋಹರ್ ಅಹಿರ, ಭಾ.ಅ.ಸೇ. (ಪರೀಕ್ಷಾರ್ಥಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಮ ಮಹದೇಶ್ವರ ಬೆಟ್ಟ ವನ್ಯಜೀವಿ ಉಪ ವಿಭಾಗ, ಕೊಳ್ಳೇಗಾಲ ಇವರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ವನ್ಯಜೀವಿ ಉಪ ವಿಭಾಗ (ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ] ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡು ಮುಂದಿನ ಆದೇಶದವರೆಗೆ ಕರ್ತವ್ಯ ನಿರ್ವಹಿಸುವುದು.

ಉಮಾಪತಿ ಕೆ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ರಾ.ಅ.ಸೇ. ಪರೀಕ್ಷಾರ್ಥಿ) (ಪುಸ್ತುತ ತರಬೇತಾರ್ಥಿಯಾಗಿ | ವಲಯ ಅರಣ್ಯಾಧಿಕಾರಿ, ಹನೂರು ಬಫ‌ ವಲಯದಲ್ಲಿ ಸೂಪರ್ ನ್ಯೂಮರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು] ಇವರು ವಲಯ ಅರಣ್ಯಾಧಿಕಾರಿ, ಹೂಗ್ಯಂ ವನ್ಯಜೀವಿ ವಲಯ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡು ಮುಂದಿನ ಆದೇಶದವರೆಗೆ ಕರ್ತವ್ಯ ನಿರ್ವಹಿಸುವುದು.

ಮಲೈಮಹದೇಶ್ವರ ಬೆಟ್ಟ, ವನ್ಯಜೀವಿ ವಿಭಾಗದಲ್ಲಿನ ಸಂಬಂಧಿಸಿದ ಶಾಖೆಯ ಉಪ ವಲಯ ಅರಣ್ಯಾಧಿಕಾರಿ-ಕಂ-ಮೋಜಣಿದಾರ ಮತ್ತು ಗಸ್ತು ಸಿಬ್ಬಂದಿಗಳ ಸಂಬಂಧ ಸೂಕ್ತ ಕ್ರಮವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ವೃತ್ತ, ಚಾಮರಾಜನಗರ ರವರ ಹಂತದಲ್ಲಿ ಪ್ರತ್ಯೇಕವಾಗಿ ಕ್ರಮಕೈಗೊಳ್ಳುವುದು ಎಂದು ತಿಳಿಸಿದ್ದಾರೆ.

BIG NEWS : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-3ಕ್ಕೆ ಉಚಿತವಾಗಿ ಬಿಎಂಟಿಸಿ ಬಸ್ಸಿನಲ್ಲಿ ತೆರಳಲು ಅವಕಾಶ

Share. Facebook Twitter LinkedIn WhatsApp Email

Related Posts

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM1 Min Read

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

30/06/2025 6:43 PM1 Min Read

ಶನಿಯ ಸ್ಥಾನ ಪಲ್ಲಟದಿಂದ ಈ ಮೂರು ರಾಶಿಯವರಿಗೆ ಶುಭ ಫಲ

30/06/2025 6:36 PM2 Mins Read
Recent News

ಭಾರತೀಯ ‘ರಾಗ’ಗಳನ್ನ ಕೇಳುವುದ್ರಿಂದ ಗಮನ, ಭಾವನಾತ್ಮಕ ಸಮತೋಲನ ಸುಧಾರಣೆ : ಅಧ್ಯಯನ

30/06/2025 7:26 PM

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

30/06/2025 7:08 PM

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM

BREAKING ; ‘BCCI’ನಿಂದ 10.65 ಕೋಟಿ ರೂ. ಪರಿಹಾರ ಕೋರಿ ‘ಲಲಿತ್ ಮೋದಿ’ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ‘ಸುಪ್ರೀಂ ಕೋರ್ಟ್’

30/06/2025 6:54 PM
State News
KARNATAKA

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

By kannadanewsnow0930/06/2025 7:08 PM KARNATAKA 3 Mins Read

ಬೆಂಗಳೂರು: ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಜೀವಿ ಪ್ರದೇಶದಲ್ಲಿ ಐದು ಹುಲಿಗಳು ಸಾವನ್ನಪ್ಪಿದ್ದವು. ಈ ಪ್ರಕರಣ ಸಂಬಂಧ ಉಪ ಅರಣ್ಯ…

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

30/06/2025 6:43 PM

ಶನಿಯ ಸ್ಥಾನ ಪಲ್ಲಟದಿಂದ ಈ ಮೂರು ರಾಶಿಯವರಿಗೆ ಶುಭ ಫಲ

30/06/2025 6:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.