ಬೆಂಗಳೂರು: ಭಾರತದ ಜನಗಣತಿ-2027ರ ಅಂಗವಾಗಿ ದಿ: 1-04-2026 ರಿಂದ 15-04-2026 ರವರೆಗೆ ‘ಸ್ವಯಂ ಗಣತಿ’ ಗೆ ಅವಕಾಶ ಕಲ್ಪಿಸಲಾಗಿದೆ. ಸ್ವಯಂ ಜನಗಣತಿ (Self-Enumeration) ಎಂಬುದು ಡಿಜಿಟಲ್ ಜನಗಣತಿಯ ಒಂದು ಪ್ರಮುಖ ಭಾಗವಾಗಿದೆ. ಹಾಗಾದ್ರೇ ನೀವು
ಏನಿದು ಸ್ವಯಂ ಜನಗಣತಿ?
ಹಿಂದೆ ಜನಗಣತಿ ಮಾಡುವವರು ಮನೆಗೆ ಬಂದು ಮಾಹಿತಿ ಪಡೆದು ಫಾರಂ ತುಂಬುತ್ತಿದ್ದರು. ಆದರೆ ಈಗ ನಾಗರಿಕರು ತಾವಾಗಿಯೇ ಆನ್ಲೈನ್ ಪೋರ್ಟಲ್ ಮೂಲಕ ತಮ್ಮ ಕುಟುಂಬದ ವಿವರಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇದನ್ನೇ ‘ಸ್ವಯಂ ಜನಗಣತಿ’ ಎಂದು ಕರೆಯಲಾಗುತ್ತದೆ.
ಇದು ಹೇಗೆ ಕೆಲಸ ಮಾಡುತ್ತದೆ?
ನೋಂದಣಿ: ನಾಗರಿಕರು ಜನಗಣತಿಯ ಅಧಿಕೃತ ಪೋರ್ಟಲ್ಗೆ ಭೇಟಿ ನೀಡಿ ತಮ್ಮ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಆಗಬೇಕು.
ಮಾಹಿತಿ ಸಲ್ಲಿಕೆ: ಕುಟುಂಬದ ಸದಸ್ಯರು, ಶಿಕ್ಷಣ, ಉದ್ಯೋಗ, ಮತ್ತು ಮನೆಯ ಸೌಲಭ್ಯಗಳ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ ಫಾರ್ಮ್ ಭರ್ತಿ ಮಾಡಬೇಕು.
ಕೋಡ್ ಸ್ವೀಕೃತಿ: ನೀವು ಮಾಹಿತಿಯನ್ನು ಸಲ್ಲಿಸಿದ ನಂತರ, ನಿಮ್ಮ ಮೊಬೈಲ್ಗೆ ಒಂದು ಉಲ್ಲೇಖ ಸಂಖ್ಯೆ (Reference Number) ಬರುತ್ತದೆ.
ಗಣತಿದಾರರಿಗೆ ಸಲ್ಲಿಕೆ: ಜನಗಣತಿ ಅಧಿಕಾರಿಗಳು (Enumerators) ನಿಮ್ಮ ಮನೆಗೆ ಬಂದಾಗ, ನೀವು ಈ ಉಲ್ಲೇಖ ಸಂಖ್ಯೆಯನ್ನು ಅವರಿಗೆ ನೀಡಿದರೆ ಸಾಕು. ಅವರು ಮತ್ತೆ ಎಲ್ಲ ಪ್ರಶ್ನೆಗಳನ್ನು ಕೇಳುವ ಅಗತ್ಯವಿರುವುದಿಲ್ಲ.
ಕರ್ನಾಟಕದಲ್ಲಿ ಮೊದಲ ಹಂತದ ‘ಮನೆಗಳ ಪಟ್ಟಿ ಮತ್ತು ಮನೆ ಗಣತಿ’ ಪ್ರಕ್ರಿಯೆಯು ದಿನಾಂಕ 16.04.2026 ರಿಂದ 15.05.2026 ರವೆರೆಗೆ ನಡೆಯಲಿದ್ದು
ಒಟ್ಟು 30 ದಿನಗಳ ಕಾಲ ನಡೆಯುವ ಈ ಗಣತಿಯಲ್ಲಿ ಮನೆಗಳ ಸ್ಥಿತಿಗತಿ, ಲಭ್ಯವಿರುವ ಸೌಲಭ್ಯಗಳು ಹಾಗೂ ಆಸ್ತಿಪಾಸ್ತಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.
ಸ್ವಯಂ ಗಣತಿ ಮಾಡುವ ವಿಧಾನ:
ಅಧಿಕೃತ ಪೋರ್ಟಲ್ನಲ್ಲಿ ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗುವುದು.
ನಿಮ್ಮ ಸ್ಥಳವನ್ನು ಆಯ್ಕೆ ಮಾಡಿ, ನಕ್ಷೆಯಲ್ಲಿ ಮನೆಯನ್ನು ಗುರುತಿಸುವುದು.
ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಸಬ್ಮಿಟ್ ಮಾಡುವುದು.
ಸಲ್ಲಿಕೆಯ ನಂತರ ಲಭಿಸುವ SE ID(ಎಸ್ಇ ಐಡಿ) ಅನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು. ಹಾಗೂ ಗಣತಿದಾರರು ಭೇಟಿ ನೀಡಿದಾಗ ಅವರಿಗೆ ತೋರಿಸಬೇಕು.
ಜನಗಣತಿ ಮಾಡೋದು ಹೇಗೆ ಅಂತ ಈ ಕೆಳಗಿನ ವೀಡಿಯೋ ನೋಡಿ…
ಗಣತಿದಾರರು ಮತ್ತು ಮೇಲ್ವಿಚಾರಕರ ಕ್ಷೇತ್ರ ಭೇಟಿ :
ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಸ್ವಯಂ ಗಣತಿ ಮಾಡಿಕೊಂಡವರು ತಮ್ಮಲ್ಲಿರುವ ಎಸ್ ಇ ಐಡಿ ಅನ್ನು ಗಣತಿದಾರರಿಗೆ ತೋರಿಸಿ ದತ್ತಾಂಶವನ್ನು ಪರಿಶೀಲಿಸಿಕೊಳ್ಳಬಹುದು. ಒಂದು ವೇಳೆ ಸ್ವಯಂ ಗಣತಿ ಮಾಡದಿದ್ದಲ್ಲಿ, ಗಣತಿದಾರರೇ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ.
ಸಾರ್ವಜನಿಕರು, ಅಧಿಕಾರಿಗಳು, ಮತ್ತು ಸಿಬ್ಬಂದಿಗಳು https://se.census.gov.in ವೆಬ್ಸೈಟ್ಗೆ ಭೇಟಿ ನೀಡಿ ಸ್ವಯಂ ಗಣತಿಯಲ್ಲಿ ಭಾಗವಹಿಸುಂತೆ ಜಿಲ್ಲಾಡಳಿತ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ತಾಲೂಕು ಆಡಳಿತ, ಸ್ಥಳೀಯ ಸಂಸ್ಥೆ ಅಥವಾ ಜಿಲ್ಲಾಡಳಿತದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
BREAKING: ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಆರೋಪ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ








